Homeಕರ್ನಾಟಕ`ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು' - ಸಿಎಂಗೆ ಶಾಸಕ ಎಚ್. ಕೆ. ಪಾಟೀಲ್ ಮುಖಾಮುಖಿ ಕ್ಲಾಸ್!

`ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ – ಸಿಎಂಗೆ ಶಾಸಕ ಎಚ್. ಕೆ. ಪಾಟೀಲ್ ಮುಖಾಮುಖಿ ಕ್ಲಾಸ್!

- Advertisement -
- Advertisement -

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್‌ನ ಕುಮಾರಸ್ವಾಮಿ ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ದಿನವೂ ರಾಜ್ಯ ಸರ್ಕಾರವನ್ನು ಎಚ್ಚರಿಸುತ್ತ ಬಂದಿದ್ದಾರೆ. ಇನ್ನೊಂದು ಕಡೆ ಅಸಂಖ್ಯಾತ ಸಾಮಾಜಿಕ ಸಂಘಟನೆಗಳು ಪ್ರತಿನಿತ್ಯ ಕೋವಿಡ್ ಸಂತ್ರಸ್ತರು ಮತ್ತು ಕುಟುಂಬಗಳಿಗೆ ನೆರವು ನೀಡುತ್ತಿವೆ. ಜೊತೆಗೇ ಪ್ರತಿದಿನ ಹಲವು ನಿರ್ಣಾಯಕ ಪ್ರಶ್ನೆಗಳನ್ನು ಕೇಳುತ್ತಿವೆ. ಆದರೆ, ದುರುದ್ದೇಶದಲ್ಲಿ ಬಿಬಿಎಂಪಿ ಕೋವಿಡ್ ರೂಮ್ ಹೊಕ್ಕ ಸಂಸದ ತೇಜಸ್ವಿ ಸೂರ್ಯ ಮತ್ತು ಪಟಾಲಂನ ಮಾತು ಕೇಳಿ ಸರ್ಕಾರ ಕ್ರಮ ಜರುಗಿಸಿದೆ.

ಆದರೆ ಯಾವುದೋ ಗೊಂದಲದಲ್ಲಿರುವ, ಅಸಹಾಯಕತೆಯಲ್ಲಿರುವಂತೆ ಕಾಣುವ ಸಿಎಂ ಯಡಿಯೂರಪ್ಪ ಏನನ್ನೂ ಸ್ಪಷ್ಟವಾಗಿ ಹೇಳುತ್ತಿಲ್ಲ.

ನಿನ್ನೆ ಬುಧವಾರ, ಆಕ್ಸಿಜನ್ ಪಡೆದುಕೊಳ್ಳುವ ಬಗೆಯನ್ನು ನೇರ ಯಡಿಯೂರಪ್ಪರಿಗೆ ವಿವರಿಸಿರುವ, ಅದಕ್ಕೆ ಅಗತ್ಯವಾದ ವೈಜ್ಞಾನಿಕ ಮತ್ತು ಕಾರ್ಯಸಾಧ್ಯವಾದ ವಿವರಗಳನ್ನು ನೀಡಿ ಬಂದಿರುವ ಮಾಜಿ ಸಚಿವ, ಗದಗಿನ ಹಾಲಿ ಶಾಸಕ ಎಚ್.ಕೆ ಪಾಟೀಲರಿಗೆ, ‘ನೀವು ಆಕ್ಸಿಜನ್ ಕುರಿತು ವಿವರಿಸುವಾಗ ಸಿಎಂ ಸಾಹೇಬರ ಭಾವ, ಮನಸ್ಥಿತಿ ಹೇಗಿತ್ತು?’ ಎಂದು ನಾನುಗೌರಿ.ಕಾಂ ಪ್ರಶ್ನೆ ಮಾಡಿತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಒಂಥರಾ ಅಸಹಾಕತೆಯಿದೆ, ಇನ್ನೊಂದು ಕಡೆ ಒಳ ರಾಜಕಾರಣದ ಒತ್ತಡವಿದೆ. ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಬಗ್ಗೆ ಅವರಲ್ಲಿ ವಿವರವಾದ ಮಾಹಿತಿ ಇಲ್ಲ’ ಎಂದು ಪಾಟೀಲ್ ಹೇಳಿದರು.

‘ಸಂಗ್ರಹಣೆ ಸಮಸ್ಯೆ ಇದೆ, ಸಾಗಾಣಿಕೆ ಸಮಸ್ಯೆ ಇದೆ ಎಂದು ಮುಖ್ಯಮಂತ್ರಿ ಹೇಳುತ್ತ ಹೋದರು. ಇದು ಅವರ ಅಜ್ಞಾನವೋ ಅಥವಾ ಟೆನ್ಸನ್ನೋ? ಇಲ್ಲಾ ಈ ತಜ್ಞರ ಸಮಿತಿ ಆಕ್ಸಿಜನ್ ಕುರಿತ ವಾಸ್ತವವನ್ನು ಅವರಿಗೆ ತಿಳಿಸಲಿಲ್ಲವೋ? ’ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ ಎಂಬುದನ್ನು ಅವರಿಗೆ ಹೇಳಿದೆ. ವಿಧಾನಸೌಧದ ಮೂರನೇ ಮಹಡಿ ಮೇಲೆ ನಿಂತು ನೋಡಿದರೆ ಅಲ್ಲಿಂದಲೇ ಆಕ್ಸಿಜನ್ ಸಂಗ್ರಹಿಸಬಹುದಾದ ಮೂರು ಸ್ಥಳಗಳು ಗೋಚರಿಸುತ್ತವೆ ಎಂಬುದನ್ನೂ ಸಿಎಂ ಅವರಿಗೆ ಹೇಳಿದ್ದೇನೆ.

ಆದರೆ, ಒಟ್ಟಿನಲ್ಲಿ ಈ ಸರ್ಕಾರಕ್ಕೆ ಮೊದಲನೆದಾಗಿ, ರಾಜಕೀಯ ಇಚ್ಛಾಶಕ್ತಿಯಿಲ್ಲ. ಎರಡನೇದಾಗಿ, ಈ ಸರ್ಕಾರದ ಬಳಿ ಸುಸೂತ್ರ ಯೋಜನೆಗಳಿಲ್ಲ, ಸಚಿವರ ನಡುವೆ ಸಮನ್ವತೆಯೇ ಇಲ್ಲ. ಮೂರನೇದಾಗಿ, ಅವರ ಪಕ್ಷದ ಆಂತರಿಕ ಭಿನ್ನಮತವನ್ನು ಈ ಬಿಕ್ಕಟ್ಟಿನ ಸಮಯದಲ್ಲೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಹೀನ ಕೆಲಸ ನಡೆದಿದೆ’ ಎಂದರು

ಯಡಿಯೂರಪ್ಪನವರಿಗೆ ಹೇಳಿದ್ದನ್ನು ಅವರು ಲಿಖಿತ ರೂಪದ ಮನವಿಯಲ್ಲೂ ಹೇಳಿದರು. ಯಡಿಯೂರಪ್ಪ ಮನೆಯ ಹೊರಗಡೆ ಮಾಧ್ಯಮಗಳ ಮುಂದೆ ಎಲ್ಲವನ್ನೂ ತಿಳಿಸಿದರು. ’ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ ಎಂದೂ ಹೇಳಿದರು. ಆದರೆ ತೇಜಸ್ವಿ ಸೂರ್ಯ ಎಂಬ ಪಲಾಯನವಾದಿ, ಕುತಂತ್ರಿ ಸಂಸದನ ಹಿಂದೆ ಸುತ್ತುತ್ತಿದ್ದ ಮಾಧ್ಯಮಗಳಿಗೆ ಎಚ್. ಕೆ. ಪಾಟೀಲ್ ಹೇಳಿದ್ದು ಮುಖ್ಯ ಅನಿಸಲೇ ಇಲ್ಲ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯನಂತೆ ಎಲ್ಲಿಗೋ ಎಚ್. ಕೆ. ಪಾಟೀಲ್ ನುಗ್ಗಲಿಲ್ಲ, ಅವರು ದೇಶದ ಹಲವು ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ಗಳು ಮತ್ತು ನೀತಿ ನಿರೂಪಕರನ್ನು ಮಾತನಾಡಿಸಿ ಈ ಮನವಿ ತಯಾರಿಸಿದರು.
ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊ. ಭ್ರಮರ್ ಮುಖರ್ಜಿಯನ್ನು ಉಲ್ಲೇಖಿಸಿದ ಅವರು, ಮೇ ಮಧ್ಯದ ಹೊತ್ತಿಗೆ, 8-15 ಲಕ್ಷ ದೈನಿಕ ಪಾಸಿಟಿವ್ ಪ್ರಕರಣಗಳು ಮತ್ತು ಸುಮಾರು 4,500 ಸಾವುಗಳು ಸಂಭವಿಸಬಹುದು ಎಂದು ಯಡಿಯೂರಪ್ಪನವರಿಗೆ ಹೇಳಿದ್ದಾರೆ.

ಬಳ್ಳಾರಿ, ಕೊಪ್ಪಳ ಮತ್ತು ರಾಜ್ಯಗಳ ವಿವಿಧ ಭಾಗಗಳಲ್ಲಿ ದಿನವೂ ಉತ್ಪಾದನೆಯಾಗುವ ಆಮ್ಲಜನಕ ಪ್ರಮಾಣವನ್ನು ಮತ್ತು ಆ ಸ್ಥಾವರಗಳ ಒಟ್ಟು ಸಾಮರ್ಥ್ಯದ ಮಾಹಿತಿಯನ್ನು ಕೆಮಿಕಲ್ ಇಂಜಿನಿಯರ್ ಡಾ. ಅರುಣ್ ಪಾಟೀಲ್ ಮತ್ತು ಕೆಲವು ಸಣ್ಣ ಉದ್ಯಮಿಗಳ ಮೂಲಕ ಪಡೆದು, ನಿಖರ ಮಾಹಿತಿ ಒದಗಿಸಿರುವ ಎಚ್.ಕೆ.ಪಾಟೀಲರು, ಈ ಸ್ಥಾವರಗಳಿಂದ ಗರಿಷ್ಠ ಉತ್ಪಾದನೆ ಹೇಗೆ ಮಾಡಬಹುದು ಎಂಬುದನ್ನು ವಿಜ್ಞಾನಿಗಳು, ಇಂಜಿನಿಯರ್‌ಗಳ ಉಲ್ಲೇಖಗಳೊಂದಿಗೆ ವಿವರಿಸಿದ್ದಾರೆ.

’ಸಂಗ್ರಹಣೆ ಮತ್ತು ಸಾಗಾಣಿಕೆ ಕಷ್ಟವಾಗಿದೆ’ ಎಂಬ ಯಡಿಯೂರಪ್ಪನವರ ಅಪ್ರಬುದ್ಧ ಅಸಹಾಯಕತೆಗೂ, ಶಾಸಕ ಪಾಟೀಲ್ ಪರಿಹಾರ ಸೂಚಿಸಿದ್ದಾರೆ. ರಾಜ್ಯದಲ್ಲಿ 17 ಲಕ್ಷ ಲೀಟರ್ ದ್ರವ ಆಮ್ಲಜನಕ ಶೇಖರಿಸುವ ಸಾಮರ್ಥ್ಯವಿದೆ ಎಂಬುದನ್ನು ಸಿಎಂಗೆ ವಿವರಿಸಿದ ಅವರು, ಯಾವ ಯಾವ ಪಾಯಿಂಟ್‌ಗಳಲ್ಲಿ ಶೇಖರಣೆ ಮಾಡಬಹುದೆಂಬ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ಸರಕಾರಾತ್ಮಕವಾಗಿಯಲ್ಲ

ಸಾಗಾಣಿಕೆ ಸಮಸ್ಯೆ ಕುರಿತು ತಜ್ಞರೊಂದಿಗೆ ಮಾತನಾಡಿರುವ ಅವರು, ನೈಟ್ರೋಜನ್ ಟ್ಯಾಂಕರುಗಳ ವಾಲ್ವ್ ಚೇಂಜ್ ಮಾಡಿ, ಅದಕ್ಕೆ ಕಾಪರ್ (ಸತುವಿನ) ವಾಲ್ವ್ ಹಾಕಿದರೆ ಸಮಸ್ಯೆ ಬಗೆಹರಿದಂತೆ. ಇದು ಎರಡು ದಿನದ ಕೆಲಸ ಎಂದಿದ್ದಾರೆ.

ನಾನುಗೌರಿ.ಕಾಂ ಜೊತೆ ಈ ವಿಷಯವಾಗಿ ಮಾತನಾಡಿದ ಅವರು, “ನಮ್ಮ ವಾಯುಸೇನೆಯ ವಿಮಾನಗಳನ್ಮು ಯಾವುದೋ ಕಾರಣಕ್ಕೆ ಮನರಂಜನೆಗೆ ಹಾರಿಸುತ್ತದೆ ಕೇಂದ್ರ ಸರ್ಕಾರ. ಈಗ ರಾಜ್ಯ ಸರ್ಕಾರವು, ಕೇಂದ್ರ ಮತ್ತು ಮೋದಿಯವರಿಗೆ ವಾಯುದಳದ ವಿಮಾನ ಒದಗಿಸಲು ಒತ್ತಡ ಹಾಕಬೇಕು. ದುಬಾರಿ ಸೇನಾ ವಿಮಾನಗಳು ಮೇಲಿನಿಂದ ಹೂ ಚೆಲ್ಲುವುದಕ್ಕಲ್ಲ, ಜನರು ಸಾಯುತ್ತಿರುವಾಗ ಅವನ್ನು ಆಕ್ಸಿಜನ್ ಪೂರೈಕೆಗೆ ಬಳಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ತೋರಣಘಟ್ಟ ವಿಮಾನ ನಿಲ್ದಾಣದಿಂದ ದ್ರವ ಆಮ್ಲಜನಕದ ಟ್ಯಾಂಕರ್‌ಗಳನ್ನು ಏರ್ ಕಾರ್ಗೊದಲ್ಲಿ ಕಳಿಸಿದರೆ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲು ಒಂದು ತಾಸೂ ಹಿಡಿಯುವುದಿಲ್ಲ. ನಂತರ ಮಾರತ್‌ಹಳ್ಳಿಯ ಸಂಗ್ರಾಹಾರ ಮತ್ತು ಐಐಎಸ್‌ಸಿಯ ಯು. ಅರ್. ರಾವ್ ಸಂಗ್ರಹಾರಕ್ಕೆ ಕಳಿಸುವುದೇನೂ ಸಮಸ್ಯೆ ಅಲ್ಲ ಎಂದರು.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

’ಆದರೆ ರಾಜಕೀಯ ಇಚ್ಛಾಶಕ್ತಿಯೇ ಇಲ್ಲದ, ಇಂತಹ ದುರಂತದ ಸಮಯದಲ್ಲೂ ಕೇಂದ್ರ ಸರ್ಕಾರದ ಮುಂದೆ ಹಕ್ಕು ಮಂಡಿಸದ ರಾಜ್ಯ ಸರ್ಕಾರ ನಿರ್ಜೀವವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

`ನೀವು ವಿರೋಧ ಪಕ್ಷದವರಾಗಿ ಇಂತಹ ಪಾಸಿಟಿವ್ ಸಲಹೆ ನೀಡ್ತಾ ಇದ್ದೀರಾ…ಹೈಕೋರ್ಟ್ ಕೂಡ ಕೇಂದ್ರಕ್ಕೆ ರಾಜ್ಯದ ಪಾಲಿನ ಆಕ್ಸಿಜನ್ ಒದಗಿಸಿ ಎಂದು ತರಾಟೆಗೆ ತೆಗೆದುಕೊಂಡಿದೆ.. ಆದರೆ ನಮ್ಮ 25 ಬಿಜೆಪಿ ಸಂಸದರು ಧ್ವನಿ ಎತ್ತಾನೇ ಇಲ್ವಲ್ಲ?’ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್ ಕೆ ಪಾಟೀಲ್, `ಈ ಬಗ್ಗೆ ಏನು ಹೇಳಬೇಕೋ ತಿಳಿಯದಾಗಿದೆ. ಅವರ (ಬಿಜೆಪಿ) ಭಾಷೆಯಲ್ಲಿ ಬಯ್ಯೋದೊಂದೇ ಬಾಕಿ ಉಳಿದಿದೆ’ ಎಂದರು.

ದಿಢೀರನೆ ಬಂದು ಕಲ್ಲು ತೂರಿ ಪರಾರಿ ಆಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಕೇಳಿದಾಗ, “ಇಂತಹ ನೀಚರನ್ನು ಇಟ್ಟುಕೊಂಡು ಕೋವಿಡ್ ನಿಯಂತ್ರಣ ಸಾಧ್ಯವೇ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅವರ ಮನವಿಯನ್ನು ಅಂದರೆ ಯಡಿಯೂರಪ್ಪನವರಿಗೆ ಅವರು ಹೇಳಿದ್ದನ್ನು ಇಲ್ಲಿ ಹಾಕಿದ್ದೇವೆ, ಓದಿ..

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...