Homeಸಾಮಾಜಿಕಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ಕೆಆರ್‍ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

- Advertisement -
- Advertisement -

ಸೋಮಶೇಖರ್ ಚಲ್ಯ |

ಸ್ವಾತಂತ್ರ್ಯಾ ನಂತರದಲ್ಲಿ ಕಾವೇರಿ ಸಮಸ್ಯೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಬಿಕ್ಕಟ್ಟಾಗಿಯೇ ಉಳಿದಿರುವುದರಿಂದ ಮೈಸೂರು-ಮಂಡ್ಯ ಭಾಗದ ಜನರ ಮನದಲ್ಲಿ ಕೃಷ್ಣರಾಜಸಾಗರವು ಭಾವನಾತ್ಮಕವಾಗಿ ಉಳಿದಿರುವುದು ವಿಶೇಷವೇನೂ ಅಲ್ಲ. ಅದರೆ ಈ ಸೆಂಟಿಮೆಂಟು ಕಾವೇರಿ ನದಿ ತೀರದ ಮರಳು ಗಣಿಗಾರಿಕೆಗೇನೂ ಕಡಿವಾಣ ಹಾಕಲಿಲ್ಲ. ಮರಳು ಮಾಫಿಯಾವನ್ನು ತಡೆಗಟ್ಟುವ ಹೋರಾಟಗಳು ಎಂದೂ ಈ ಭಾಗದಲ್ಲಿ ಭುಗಿಲೇಳಲಿಲ್ಲ.ಕೆಲವೇ ಕೆಲವರು ನಡೆಸಿದ ಪ್ರಯತ್ನದಿಂದಾಗಿ ಮರಳು ದಂದೆಕೋರರನ್ನು ನಿಗ್ರಹಿಸುವ ಸಾಹಸ ನಡೆದಿತ್ತು. ಆದರೆ ಇಂದಿಗೂ ಮರಳಿನ ದಂಧೆಗೆ ಸಂಪೂರ್ಣವಾಗಿ ಫುಲ್‍ಸ್ಟಾಪ್ ಇಟ್ಟಿಲ್ಲವೆಂಬ ಅಸಮಾಧಾನ ಇರುವ ಬೆನ್ನಲ್ಲೇ ಮತ್ತೊಂದು ಕಲ್ಲುಗಣಿಗಾರಿಕೆಯ ಭೂತ ಬೆನ್ನತ್ತಿದೆ.

ದಕ್ಷಿಣ ಕರ್ನಾಟಕದಲ್ಲಿ ಸೈಲೆಂಟಾಗಿಯೇ ಮರಳು ಮತ್ತು ಕಲ್ಲು ಗಣಿಗಾರಿಕೆಯ ಮಾಫಿಯಾ ಗುದ್ದು ಕೊಡುತ್ತಿದೆ. ಈ ಮೈನಿಂಗ್ ಮಾಫಿಯಾದಲ್ಲಿ ಕಳೆದೆರಡು ದಶಕಗಳಿಂದ ಮಂಡ್ಯ ಸುದ್ದಿಯಾಗುತ್ತಲೇ ಇದೆ.

ಇದೀಗ ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ ಕೆಆರ್‍ಎಸ್ ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‍ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಲ್ಲಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು ಇದೇ ಸೆಪ್ಟೆಂಬರ್ 25ರಂದು ಕೆಆರ್‍ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ. ಕೆಆರ್‍ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಕೆಆರ್‍ಎಸ್ ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ.ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಆದರೆ ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‍ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‍ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ.

ಈಗಾಗಲೇ 20 ವರ್ಷಗಳಿಂದ ನಡೆದು ಬಂದಿರುವ ಮೈನಿಂಗ್ ಮಾಫಿಯಾದಿಂದಾಗಿ ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿವಿದ್ದ ಪ್ರಾಣಿಸಂಕುಲ ಕ್ಷೀಣಿಸುತ್ತಾ ಬಂದಿದ್ದು ಪಕ್ಷಿಗಳ ತವರು ಮನೆಯಂತಿದ್ದ ಬೆಟ್ಟಗಳಿದ್ದ ಪ್ರದೇಶದಲ್ಲಿ ಅಂತರ್ಜಲವು ನೂರಾರು ಅಡಿಗಳ ಆಳಕ್ಕೆ ಇಳಿದುಹೋಗಿವೆ. ಪ್ರಾಣಿ-ಪಕ್ಷಿಗಳು ನೆಲೆಗಾಗಿ ಈ ಪ್ರದೇಶವನ್ನೇ ಬಿಟ್ಟುಹೋಗಿದ್ದು, ಅವುಗಳ ಅವಶೇಷಗಳನ್ನು ಕಾಣಲಾಗದ ಸ್ಥಿತಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿದೆ. ಅದಷ್ಟೇ ಅಲ್ಲದೆ ಕೃಷಿಯನ್ನು ನಂಬಿದ್ದ ಜನಕ್ಕೆ ಪ್ರತಿನಿತ್ಯ ಧೂಳಿನ ಗಾಳಿಯೇ ಉಸಿರಾಟಕ್ಕೆ ಎನ್ನುವಂತಾಗಿದ್ದು, ಮೈನಿಂಗ್ ಏರಿಯಾದಲ್ಲಿ ಜನವಸತಿಯೂ ಕಷ್ಟವೆಂಬಂತಾಗಿದೆ. ಸಾವಿರಾರು ಜನ ಕೃಷಿ ತೊರೆದು ನಗರಗಳತ್ತ ಮುಖಮಾಡಲೂ ಕೂಡ ಕಾರಣವಾಗಿದೆ.

ಬೆರಳೆಣಿಕೆಯಷ್ಟು ಜನ ಲೈಸೆನ್ಸ್ ಪಡೆದು ಮಾಡುತ್ತಿರುವ ಮೈನಿಂಗ್ ಇದಾಗಿಲ್ಲ. ಕೆಆರ್‍ಎಸ್‍ನಿಂದ 20 ಕಿ.ಮೀ ದೂರದಲ್ಲಿ ಎರಡು ಮೂರು ಎಕರೆಗಳಲ್ಲಿ ಗಣಿಗಾರಿಕೆಗೆ ಪರ್ಮಿಷನ್ ಪಡೆದುಕೊಂಡಿದ್ದರೂ ಈಗ ಕೆಆರ್‍ಎಸ್ ಬುಡಕ್ಕೆ ಬಂದು ನಿಂತಿದೆ. ಅಷ್ಟೇ ಅಲ್ಲದೆ 170ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಈ ಭಾಗದಲ್ಲಿ ನಡೆಯುತ್ತಿವೆ. ಬೇಬಿಬೆಟ್ಟವೊಂದರಲ್ಲೇ 44 ಜೆಲ್ಲಿ ಕ್ರಶರ್‍ಗಳು ನಿಂತಿವೆ. ಇವಾವೂ ಹೊಟ್ಟೆ ಪಾಡಿಗಾಗಿ ಬೇರಾವುದೇ ಆಧಾರವಿಲ್ಲ ಎಂದು ಜೀವನಾಧಾರಕ್ಕಾಗಿ ಮಾಡುತ್ತಿರುವ ಗಣಿಗಾರಿಕೆಗಳಲ್ಲ. ಕೆಲವು ವ್ಯಕ್ತಿಗಳ ಸಂಪತ್ತಿನ ಕೇಂದ್ರೀಕರಣದ ದುರಾಸೆಯಿಂದ ಮಾಡಲಾಗುತ್ತಿರುವ ಲೂಟಿ.

ಇಂತಹ ಲೂಟಿಯಿಂದಾಗಿ ಸಾವಿರಾರು ಜನರ ಬದುಕು ಬೀದಿಪಾಲಾಗುವ ದಿನಗಳು ಕಣ್ಣೆದುರು ನಿಂತಿವೆ. ಹೀಗಾಗಿಯೇ ಕಳೆದ 15 ವರ್ಷಗಳಿಂದ ರೈತ ಹೋರಾಟಗಾರ ಮತ್ತು ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ, ರೈತ ಸಂಘಗಳು ಕೆಆರ್‍ಎಸ್ ಉಳಿಸಿ-ಅಕ್ರಮಗಣಿಗಾರಿಕೆ ನಿಲ್ಲಿಸಿ ಎಂದು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅಕ್ರಮ ಗಣಿಗಾರಿಕೆ ಮಾತ್ರವಲ್ಲ ಸಕ್ರಮ ಗಣಿಗಾರಿಕೆಯನ್ನೂ ನಿಲ್ಲಿಸಿ ಎಂಬ ಕೂಗು ಭುಗಿಲೇಳುತ್ತಿದೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 86 ವರ್ಷ ಹಳೆಯದಾದ ಕೆಆರ್‍ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ. ಹಾಗಾಗಿ ಕೆಆರ್‍ಎಸ್ ಉಳಿವಿಗಾಗಿ 20ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಯನ್ನು ನಡೆಸಲು ಬಿಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಭೂವಿಜ್ಞಾನಿಗಳು ನೀಡಿರುವ ವರದಿಯನ್ನೇ ಆಧಾರವಾಗಿಟ್ಟುಕೊಂಡು ಮೈನಿಂಗ್ ಮಾಫಿಯಾದ ಪರವಾಗಿ ನಿಂತಿರುವುದು ಸಾಕ್ಷಾತ್ ಉಸ್ತುವಾರಿ ಸಚಿವರು. ಮೇಲುಕೋಟೆ ಕ್ಷೇತ್ರದ ಶಾಸಕರೂ ಆದ ಸಿ.ಎಸ್.ಪುಟ್ಟರಾಜು ಇದಕ್ಕಾಗಿ ಟೊಂಕಕಟ್ಟಿ ನಿಂತಿದ್ದಾರೆ. ಅದರಲ್ಲೂ ಅವರ ಅಣ್ಣನ ಮಗ ಅಶೋಕ್ ಹೆಸರಿನಲ್ಲಿ ಮೈನಿಂಗ್ ಲೈಸೆನ್ಸ್ ಪಡೆದು ನಡೆಸುತ್ತಿರುವ ಗಣಿಗಾರಿಕೆಯು ಎಲ್ಲರಿಗೂ ತಿಳಿದಿರುವ ಸಂಗತಿ. ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆಗಳಲ್ಲಿ ಅತ್ಯುತ್ತಮ ಆಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಿರುವ ಕ್ರಶರ್ ಪುಟ್ಟರಾಜುನ ಅಣ್ಣನ ಮಗನದ್ದೇ ಆಗಿದೆ. 10 ಕ್ರಶರ್‍ಗಳಿಂದಾಗುವಷ್ಟು ಕೆಲಸ ಈತನ ಒಂದೇ ಕ್ರಶರ್‍ನಲ್ಲಿ ನಡೆಯುತ್ತಿದೆ. ಹಾಗಾಗಿಯೇ ಮೈನಿಂಗ್ ಉಳಿಸಿಕೊಳ್ಳುವ ವಾದವನ್ನ ಮಣ್ಣಿನ ಮಕ್ಕಳ ಪಕ್ಷದಲ್ಲಿರುವ ಪ್ರಜಾಪ್ರತಿನಿಧಿ ಪುಟ್ಟರಾಜು ಮಾಡುತ್ತಿದ್ದಾರೆ.

ಇಷ್ಟೆಲ್ಲ ಅವಾಂತರಗಳಿಂದ ಕೆಆರ್‍ಎಸ್ ಉಳಿವಿಗೇ ಕುತ್ತು ಬಂದಿದ್ದರೆ, ಮೈನಿಂಗ್ ಮಾಫಿಯಾಕ್ಕೆ ಫುಲ್‍ಸ್ಟಾಪ್ ಇಡುವಂತಹ ಕೆಲಸಕ್ಕೆ ಯೋಜನೆ ಮಾಡಬೇಕಾದ ರಾಜ್ಯ ಸರ್ಕಾರ ಕೆಆರ್‍ಎಸ್ ಎದುರು ಕಾವೇರಿ ಪ್ರತಿಮೆ ನಿಲ್ಲಿಸುವ ತರಾತುರಿಯಲ್ಲಿದೆ. ಇದು ಸರ್ಕಾರದ ಬೊಕ್ಕಸದಿಂದ ದುಡ್ಡು ಬಾಚುವ ಹುನ್ನಾರವೇ ಹೊರತು ಮತ್ತೇನು ಅಲ್ಲ. ಮಣ್ಣಿನ ಮಕ್ಕಳೆಂದು ಹಣೆಪಟ್ಟಿ ಕಟ್ಟಿಕೊಂಡಿರುವ, ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್ ನಾಯಕರು ಕೆಆರ್‍ಎಸ್ ಉಳಿವಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಅಣೆಕಟ್ಟೆಯ ಸುತ್ತಲಿನ 20 ಕಿ.ಮೀ ವ್ಯಾಪ್ತಿಯ ಗಣಿಗಾರಿಕೆಗೆ ಇತಿಶ್ರೀ ಹಾಕುವ ಕೆಲಸಕ್ಕೆ ಮುಂದಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...