Homeಕರ್ನಾಟಕತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ'

ತುಮಕೂರಿನ ಮೈತ್ರಿ ಪಕ್ಷಗಳ ಪಾಲಿಗೆ ಕೆ.ಎನ್.ರಾಜಣ್ಣ ಈಗ ‘ರೆಬಲ್ ರಾಜಣ್ಣ’

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ.

- Advertisement -
- Advertisement -

| ಕುಮಾರ್  |

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಬಂದರು ಸಹ ತುಮಕೂರಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ನಡುವಿನ ವೈಮನಸ್ಯ ಕಡಿಮೆಯಾಗಿಲ್ಲ. ಬದಲಿಗೆ ಬೀದಿಕಾಳಗದ ರೂಪ ಪಡೆಯುವ ಸಂಭವ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಡೆದು ನಿಲ್ಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಯಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೇ ಉಲ್ಟಾ ಹೊಡೆದಿರುವುದು ಎಲ್ಲರಿಗೂ ತಿಳಿದಿದೆ. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ವತಃ ಮಾಜಿ ಪ್ರಧಾನಿ ದೇವೆಗೌಡರೇ ಅಭ್ಯರ್ಥಿಯಾಗಿ ಸೋತಿದ್ದಾರೆ. ಮೂರು ಜನ ಜೆಡಿಎಸ್ ಶಾಸಕರು ಒಬ್ಬ ಕಾಂಗ್ರೆಸ್ ಶಾಸಕ ಇದ್ದರು ಸಹ ದೇವೇಗೌಡರು ಪರಾಭವಗೊಂಡಿರುವುದು ಎರಡು ಪಕ್ಷಗಳಿಗೂ ಮುಖಭಂಗವಾಗಿದೆ. ಆದರೆ ಇದರಿಂದ ಎರಡು ಪಕ್ಷಗಳ ಕೆಲವರಿಗೆ ಒಳಗೊಳಗೆ ಖುಷಿಯಾಗಿರುವಂತೆ ಕಾಣಿಸುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‍ನವರು ಕಣಕ್ಕಿಳಿಯುವುದನ್ನು ತೀವ್ರವಾಗಿ ವಿರೋಧಿಸಿದ್ದ ಕೆ.ಎನ್.ರಾಜಣ್ಣ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎಂಬ ಅಸಮಾಧಾನ ಎರಡು ಪಕ್ಷಗಳಲ್ಲಿದೆ. ಇದೇ ಕಾರಣಕ್ಕೆ ರಾಜಣ್ಣನ ವಿರುದ್ಧ ಅಭಿಪ್ರಾಯ ರೂಪಿಸಲು ಹೊರಟ ಕೆಲವು ಕಾಂಗ್ರೆಸ್ ಮುಖಂಡರು ಈಗ ರಾಜಣ್ಣನ ತಂಟೆಗೆ ಹೋಗಿದ್ದೆ ತಪ್ಪಾಯಿತು ಎನ್ನುವಂತೆ ಕಸಿವಿಸಿ ಅನುಭವಿಸುತ್ತಿದ್ದಾರೆ.

ದೇವೆಗೌಡ

ಚುನಾವಣೆಯ ಫಲಿತಾಂಶ ಬಂದನಂತರ ಕೆ.ಎನ್.ರಾಜಣ್ಣ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ‘ತುಮಕೂರಿನಲ್ಲಿ ದೇವೇಗೌಡರು ಸೋಲಲು ನಿಕಿಲ್ ಕುಮಾರಸ್ವಾಮಿ ಕಾರಣ. ಆತ ಕುಂಚಿಟಿಗ ಹೆಣ್ಣುಮಗಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ನಂತರ ಮದುವೆಯಾಗದೆ ಇದ್ದರಿಂದ ಮಧುಗಿರಿಯಲ್ಲಿರುವ ಕುಂಚಿಟಿಗರು ಮತನೀಡಿಲ್ಲ ಮತ್ತು ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡರು ಕೂಡ ಒಕ್ಕಲಿಗರಾಗಿದ್ದು ಅವರನ್ನು ಕಡೆಗಣಿಸಿದ್ದುಕಾರಣ ಎಂದು ಹೇಳಿದ್ದಾರೆ. ಡಾ.ಜಿ.ಪರಮೇಶ್ವರ್ ಅವರನ್ನ ನಾನು ಉಪಮುಖ್ಯಮಂತ್ರಿ ಎಂದು ಪರಿಗಣನೆಯೇ ಮಾಡೋದಿಲ್ಲ, ಅವರು ಜೀರೋ ಟ್ರಾಫಿಕ್‍ಗೆ ಮಾತ್ರ ಸೀಮಿತ ಎಂದು ಹೇಳಿದ್ದರು.

ಇದರಿಂದ ಅಸಮಾಧಾನ ಹೆಚ್ಚಾಗಿ ಜೆಡಿಎಸ್ ನಾಯಕರು ನೇರವಾಗಿ ಕೆ.ಎನ್.ರಾಜಣ್ಣನವರನ್ನು ಟಾರ್ಗೆಟ್ ಮಾಡಿ ಟೀಕೆ ಮಾಡಲು ಶುರು ಮಾಡಿದರು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತನ್ನ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ರಾಜಣ್ಣ ಬಿಜೆಪಿಗೆ ಬೆಂಬಲಿಸಿದ್ದರೆ ನೇರವಾಗಿ ಹೇಳಲಿ ಅತಿಯಾಗಿ ಮಾತಾನಾಡುವುದನ್ನ ನಿಲ್ಲಿಸಲಿ ಮತ್ತು ನೇರ ಯುದ್ಧಕ್ಕೆ ಬರಲಿ ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯಿಂದ ಅನಾನೂಕೂಲವೇ ಹೆಚ್ಚು ಇದರಿಂದ ಹೊರಬರಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎನ್.ಆರ್ ಕೇವಲ 500 ಮತಗಳ ಅಂತರದಿಂದ ಒಮ್ಮೆ ಮಧುಗಿರಿಯಿಂದ ಆರಿಸಿ ಬಂದ ಗೌರಿಶಂಕರ್ ಆಪರೇಷನ್ ಕಮಲದಲ್ಲಿ ಸೇಲಾಗಿದ್ದರು ಅವರ ಬಗ್ಗೆ ಮಾತನಾಡಲು ನನಗೆ ಹೇಸಿಗೆಯಾಗುತ್ತದೆ ಎಂದಿದ್ದಾರೆ.
ಡಾ.ಜಿ.ಪರಮೇಶ್ವರ್ ಹಠಾವೋ ಕಾಂಗ್ರೇಸ್ ಬಚಾವೋ

ಪರಮೇಶ್ವರ್

ತುಮಕೂರಿನ ವಾಲ್ಮೀಕಿ ನಗರದಲ್ಲಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಈ ಪೋಸ್ಟರ್‍ಗಳಲ್ಲಿ ಡಾ.ಜಿ.ಪರಮೇಶ್ವರ್ ಅವರ ಭಾವಚಿತ್ರಗಳನ್ನು ಹಾಕಿದ್ದರು ಮತ್ತು ಮಧ್ಯಾಹ್ನದ ನಂತರ ಇವನ್ನು ತೆರವುಗೊಳಿಸಿದ್ದಾರೆ. ಇದು ಕೂಡ ಕೆ.ಎನ್.ಆರ್ ಕೆಲಸವೇ ಎಂದು ಕಾಂಗ್ರೆಸ್‍ನ ಕೆಲವರ ಅನುಮಾನ.

ಈ ಬಗ್ಗೆ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷರಾದ ಕೆಂಚಮಾರಯ್ಯನವರು, ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ಪೋಸ್ಟರ್ ಅಂಟಿಸಿರುವುದನ್ನು ವಿರೋಧಿಸಿದ್ಧು, ಪರಮೇಶ್ವರರನ್ನ ಜೀರೋ ಟ್ರಾಪಿಕ್ ಎಂದು ಅವಹೇಳನ ಮಾಡುವುದು ಅಸ್ಪøಶ್ಯರ ಏಳಿಗೆಯನ್ನ ಸಹಿಸಿಕೊಳ್ಳದ ಕೆ.ಎನ್.ರಾಜಣ್ಣನ ಮನಸ್ಥಿತಿ ಎಂದು ಹೇಳಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಪಕ್ಷದಿಂದ ಹೊರಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ

ಕೆಂಚಮಾರಯ್ಯ

ಇತ್ತ ಕಾಂಗ್ರೆಸ್ ಬೆಂಬಲಿತ ದಲಿತ ಮುಖಂಡರಿಂದ ಕೆಂಚಮಾರಯ್ಯ ಹಠಾವೋ ಕಾಂಗ್ರೆಸ್ ಬಚಾವೋ ಎಂದು ಪ್ರೆಸ್ ಮೀಟ್ ಮಾಡಿಸುವ ಮೂಲಕ ಅವರನ್ನು ಹತ್ತಿಕ್ಕಲೂ ಕೆ.ಎನ್.ಆರ್ ಪಡೆ ಪ್ರಯತ್ನಿಸಿದೆ. ಇದರಿಂದ ಹಠವಾದಿ ರಾಜಣ್ಣ ತನ್ನ ಉಳಿವಿಗಾಗಿ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳಲು ಸಿದ್ಧ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.

ಕೆ.ಎನ್.ರಾಜಣ್ಣರ ಮಗ ಆರ್.ರಾಜೇಂದ್ರ ಸಹಾ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ಸೋಲಿಗೆ ಅವರ ಇಬ್ಬರು ಸೊಸೆಯಂದಿರೆ ಕಾರಣ. ಇಬ್ಬರು ಮಕ್ಕಳಿಗೆ ಟಿಕೆಟ್ ಬೇಕೆಂದು ಹಠ ಹಿಡಿದರು. ಒಲ್ಲದ ಮನಸ್ಸಿನಲ್ಲಿ ದೇವೆಗೌಡರು ತುಮಕೂರಿನಲ್ಲಿ ಸ್ಫರ್ಧಿಸಿದ್ದಾರೆ. ಇದು ಅವರ ಸೋಲಿಗೆ ಕಾರಣ ಎಂದಿದ್ದಾರೆ.

ರಾಜಣ್ಣನಿಗೆ ಹೆದರಿ ನಾಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತರು

ಗೌರಿಶಂಕರ

ಬಿಜೆಪಿ ಗೆಲ್ಲಲು ಕೆ.ಎನ್.ರಾಜಣ್ಣನೇ ಕಾರಣ ಎಂದು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಛೇರಿಯಲ್ಲಿ ಧಿಕ್ಕಾರ ಕೂಗಿದ್ದಾರೆ ಮತ್ತು ಟೌನ್‍ಹಾಲ್ ಹತ್ತಿರ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ತಿಳಿದ ರಾಜಣ್ಣ, ತಾನೇ ಪಕ್ಷದ ಕಛೇರಿಗೆ ಹೋದರು. ಅಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಅಲ್ಲಿಂದ ಸೀದಾ ಪ್ರತಿಭಟನೆ ಸ್ಥಳಕ್ಕೆ ಹೋದರು. ಅಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಸ್ಥಳಬಿಟ್ಟು ಒಬ್ಬೊಬ್ಬರೇ ಓಟ ಕಿತ್ತಿದ್ದಾರೆ. ಅಲ್ಲೇ ಪತ್ರಕರ್ತರ ಜೊತೆ ಮಾತನಾಡಿದ ಕೆ.ಎನ್.ಆರ್ ‘ತಾಕತ್ ಇದ್ದರೆ ನನ್ನ ಎದುರುಗಡೆ ಧಿಕ್ಕಾರ ಕೂಗಲಿ, ದೊಡ್ಡವರಾಗಲಿ ಚಿಕ್ಕವರಾಗಲಿ ನಾಲಿಗೆ ಸೀಳುತ್ತೇನೆ ಎಂದಿದ್ದಾರೆ . ದೇವೆಗೌಡರ ಸೋಲಿಗೆ ಜೀರೋ ಟ್ರಾಫಿಕ್ ಮಂತ್ರಿಯೇ ಕಾರಣ. ಅವರು ಒಮ್ಮೆ ತುಮಕೂರಿಗೆ ಬಂದರೆ 500 ಓಟುಗಳು ಹೋಗುತ್ತವೆ’ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವನ್ನು ನಾನು ಮತ್ತೆ ಕಟ್ಟುತ್ತೇನೆ ಎಲ್ಲಾ ಅತೃಪ್ತರನ್ನು ಒಂದುಗೂಡಿಸುತ್ತೇನೆ. ಬಸವರಾಜು ಅವರನ್ನು ಮತ್ತೆ ಕಾಂಗ್ರೆಸ್ ತರುತ್ತೇನೆ ಎಂದು ಹೇಳಿದ್ದಾರೆ. ‘ನನ್ನನ್ನು ಆಪೆಕ್ಸ್ ಬ್ಯಾಂಕಿಂದ ಕೆಳಗಿಳಿಸಲು ನೋಡುತ್ತಿದ್ದಾರೆ. ಐದು ವರ್ಷ ನಾನೇ ಮುಂದುವರೆಯುವುದು ಖಚಿತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೇಂದ್ರ ಪ್ರೆಸ್ ಮೀಟ್

ಈ ನಡುವೆ ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆಯುತ್ತಿದೆ. ಇದು ಬರಿ ಅಧಿಕಾರದ ಆಸೆಯಿಂದ ನಡೆಯುತ್ತಿದೆ’ ಎಂದು ಹೇಳಿದ್ದಾರೆ.

ರಾಮಕೃಷ್ಣ

ಈ ಮಧ್ಯೆ ಕಾಂಗ್ರೆಸ್‍ನ ತುಮಕೂರು ಜಿಲ್ಲಾಧ್ಯಾಕ್ಷ ರಾಮಕೃಷ್ಣ , ರಾಜ್ಯ ಕಾಂಗ್ರೇಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಕೆ.ಎನ್.ರಾಜಣ್ಣನ ವಿರುಧ್ಧ ದೂರು ನೀಡಿದ್ದಾರೆ. ಕೆ.ಎನ್.ಆರ್ ಮೈತ್ರಿ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ ಹಾಗೂ ಜಿಲ್ಲಾ ಕಛೇರಿಗೆ ಬಂದು ತನ್ನ ವಿರುಧ್ದ ಮಾತನಾಡದಂತೆ ಬೆದರಿಕೆ ಹಾಕಿದ್ದಾರೆ’ ಎಂದು ದೂರಿದ್ದಾರೆ . ಜಿಲ್ಲೆಯ ಮತ್ತೊಬ್ಬ ಮುಖಂಡ ಮುರುಳಿಧರ್ ಹಾಲಪ್ಪ ‘ಪಕ್ಷದ ವಿರುದ್ಧ ಮಾತಾನಾಡುವ ಕೆಲಸ ಮಾಡಿದ ಎಲ್ಲರನ್ನೂ ಪಕ್ಷದಿಂದ ಉಚ್ವಾಟಿಸಬೇಕು’ ಎಂದು ಹೇಳಿದ್ದಾರೆ.

ಚಲುವರಾಯಸ್ವಾಮಿ

ತುಮಕೂರು ಜಿಲ್ಲೆ ಮೈತ್ರಿ ಪಕ್ಷ ಸೋತಿದ್ದೇ ಇಲ್ಲಿನ ಮುಖಂಡರ ಒಣ ಪ್ರತಿಷ್ಟೆ ಮತ್ತು ಇಂತಹ ಹತ್ತು ಹಲವು ಅಹಂಗಳಿಂದ ಎಂಬುದು ಸೋಲಿನ ನಂತರದಲ್ಲಾದರೂ ಅರಿವಾಗಬೇಕಿತ್ತು. ಆದರೆ ಅದು ಆಗುತ್ತಿಲ್ಲ. ಬದಲಾಗಿ ವಾತಾವರಣ ಹದಗೆಡುತ್ತಿದೆ. ಸಹಜವಾಗಿ ಅದರ ಲಾಭ ಬಿಜೆಪಿಗೆ ಆಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....