Homeಮುಖಪುಟಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

ಕೇಂದ್ರ ಸರ್ಕಾರ ನಿರುದ್ಯೋಗದ ಬಗೆಗಿನ ದತ್ತಾಂಶ ಮುಚ್ಚಿಡಬಹುದೇ ವಿನಃ ಸತ್ಯವನ್ನಲ್ಲ-  ಕೌಶಿಕ್ ಬಸು, ಅರ್ಥಶಾಶ್ತ್ರಜ್ಞ

- Advertisement -
- Advertisement -

| ರಮಾನಂದ ಅಂಕೋಲ |

ವಿಶ್ವಬ್ಯಾಂಕ್‌ನ ಮುಖ್ಯ ಆರ್ಥಿಕ ತಜ್ಞ ಮತ್ತು ಭಾರತ ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರ ಕೌಶಿಕ್ ಬಸುರವರು ನಿರುದ್ಯೋಗದ ಸಮಸ್ಯೆಯ ಬಗ್ಗೆ ಭಾರತದ ಕೇಂದ್ರ ಸರ್ಕಾರ ಸಮರ್ಪಕವಾಗಿ ಗಮನ ನೀಡಿಲ್ಲದಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ ಎಂದು ತಮ್ಮ ನ್ಯೂಯಾರ್ಕ ಟೈಮ್ಸ್ ಪತ್ರಿಕೆಗೆ ಬರೆದ ಅಂಕಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನರೆಂದ್ರ ಮೋದಿ ಸರ್ಕಾರವು ಕೆಲವೇ ಜನರ ಬೃಹತ್ ಉದ್ಯಮದತ್ತ ಗಮನ ಹರಿಸಿದೆಯೇ ಹೊರತು ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಹಾಗೂ ಕೃಷಿ ಕ್ಷೇತ್ರದಲ್ಲಿ ಸೃಷ್ಟಿಸಬಹುದಾಗಿದ್ದ ಉದ್ಯೋಗಗಳ ಬಗ್ಗೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ನರೆಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರವು ಅಧಿಕೃತವಾದ ಸರ್ಕಾರಿ ಅಂಕಿ-ಅಂಶಗಳನ್ನು ಮುಚ್ಚಿಟ್ಟ ಕಾರಣ ಭಾರತದಲ್ಲಿ ನಿರುದ್ಯೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಆರ್ಥಿಕ ತಜ್ಞರು ಖಾಸಗಿ ಮತ್ತು ಪರೋಕ್ಷ ಮೂಲಗಳನ್ನು ಅವಲಂಬಿಸಬೇಕಾಗಿದೆ ಎಂದು ತಮ್ಮ ಅಂಕಣದಲ್ಲಿ ದೂರಿದ್ದಾರೆ.

ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಹೇಳಿದಂತೆ ನೋಟು ನಿಷೇಧದ ನಂತರ ಒಂದು ವರ್ಷದ ಅವಧಿಯಲ್ಲಿ (2017-2018) ದಾಖಲಾದ 6.1% ರಷ್ಟು ನಿರುದ್ಯೋಗ ದರದ ಪ್ರಮಾಣ ಕಳೆದ ೪೫ ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ನಿರುದ್ಯೋಗಕ್ಕೆ ಸಂಬಂಧಿಸಿದ ವರದಿಯನ್ನು ಸಿದ್ದಪಡಿಸಿದ್ದ ಕೇಂದ್ರ ಸಾಂಖ್ಯಿಕ ಆಯೋಗದ ಇಬ್ಬರು ಸ್ವತಂತ್ರ ಸದಸ್ಯರು ಸಕಾರ ಈ ಮಾಹಿತಿಯನ್ನು ಪ್ರಕಟಿಸಲು ತಡೆಹಿಡಿದ ಕಾರಣಕ್ಕೆ ರಾಜೀನಾಮೆ ನೀಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಸಾಂಖ್ಯಿಕವಾದ ದತ್ತಾಂಶ ಸಂಗ್ರಹಣೆಯಲ್ಲಿ ಜಾಗತಿಕವಾಗಿ ಪ್ರಶಂಸೆಗೆ ಪಾತ್ರವಾಗಿದ್ದ ಸಂಸ್ಥೆಯೊಂದು ಸಿದ್ದಪಡಿಸಿದ್ದ ವರದಿಯನ್ನು ಮುಚ್ಚಿಟ್ಟಿರುವುದು ಭಾರತದ ಮಟಿಗೆ ಅಸಾಧರಣವಾದುದು. ಸರ್ಕಾರಿ ದತ್ತಾಂಶದ ಅನುಪಸ್ಥಿತಿಯಲ್ಲಿ ಸೆಂಟರ್ ಫಾರ್ ಮಾನಿಟರಿಂಗ್ ಆಫ್ ಇಂಡಿಯನ್ ಎಕಾನಮಿ ಮತ್ತು ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯ ಸಂಶೋಧನಾ ವರದಿಗಳು ಭಾರತದಲ್ಲಿನ ನಿರುದ್ಯೋಗದ ಭೀಕರತೆಯ ಬಗ್ಗೆ ಮಾಹಿತಿ ಚೆಲ್ಲುತ್ತಿವೆ ಎಂದಿದ್ದಾರೆ.

ಈ ನಿರುದ್ಯೋಗದ ಭೀಕರತೆ ಆಕಸ್ಮಿಕವೇನಲ್ಲ. ದೇಶದ ಆರ್ಥಿಕತೆಯ ಹಳಿ ತಪ್ಪಿಸಿದ ನೋಟು ನಿಷೇಧ ಮತ್ತು ಜಿ.ಎಸ್.ಟಿ ಯ ಅಸಮರ್ಪಕ ಜಾರಿಯ ಉತ್ಪನ್ನ ಇದು ಕೌಶಿಕ್ ಬಸು ತಮ್ಮ ಲೇಖನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೃಪೆ: ಸ್ಕ್ರೋಲ್.ಇನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...