Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...