Homeರಾಜಕೀಯಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

ಕೈ ಪ್ರಾಬಲ್ಯದ ಕೋಟೆ ನಾಡಿನಲ್ಲಿ ಕಮಲದ ಕಸರತ್ತು

- Advertisement -
- Advertisement -

ಟಿ.ಎನ್ ಷಣ್ಮುಖ |

ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ತನ್ನ ಪಾರಂಪರಿಕ `ಕೈ’ ಪ್ರಾಬಲ್ಯವನ್ನೇ ಈ ಸಲವೂ ಮುಂದುವರೆಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಎಲೆಕ್ಷನ್‍ನಲ್ಲಿ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರೆ ತಲಾ ಒಂದರಲ್ಲಿ ಬಿಜೆಪಿ ಮತ್ತು ಬಿಎಸ್‍ಆರ್ ಕಾಂಗ್ರೆಸ್ ಹುರಿಯಾಳುಗಳು ವಿಜಯಪತಾಕೆ ಹಾರಿಸಿದ್ದರು.

ಬಳ್ಳಾರಿ ಗಣಿ ಮಾಫಿಯಾದ ಶ್ರೀರಾಮುಲು ಮೊಳಕಾಲ್ಮೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದು ಕುತೂಹಲದ ಸಂಗತಿ. ಆತನಿಗೆ ಎದುರಾಗಿ ಕಾಂಗ್ರೆಸ್‍ನಿಂದ ಯೋಗೀಶ್ ಬಾಬು, ಜೆಡಿಎಸ್‍ನಿಂದ ಸತತ ನಾಲ್ಕು ಬಾರಿ ಸೋತಿರುವ ಯತ್ನಟ್ಟಿ ಗೌಡ ಕಣದಲ್ಲಿದ್ದಾರೆ. ಇಲ್ಲಿ ರಾಮುಲು ಸ್ಪರ್ಧೆ ಸಂಚಲನ ಮೂಡಿಸಿದ್ದರೂ ಗೆಲುವು ಅಷ್ಟು ಸುಲಭದ ತುತ್ತಲ್ಲ. ಬಿಜೆಪಿ ಟಿಕೇಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದಿರುವ ತಿಪ್ಪೇಸ್ವಾಮಿಯ ಬಂಡಾಯ ಶ್ರೀರಾಮುಲುಗೆ ಬಿಸಿ ತುಪ್ಪವಾಗುವ ಸಾಧ್ಯತೆಯಿದೆ. ಯಾವ ನಾಯಕರ ಸ್ವಜಾತಿ ಮತಗಳನ್ನು ನಂಬಿ ರಾಮುಲು ಇಲ್ಲಿಗೆ ಕಾಲಿಟ್ಟಿದ್ದಾನೊ ಆ ಸಮುದಾಯದ ಒಳಜಾತಿ ಬೇಗುದಿಗೆ ತಿಪ್ಪೇಸ್ವಾಮಿ ಒಳಗಿಂದೊಳಗೇ ತುಪ್ಪ ಸುರಿಯುವ ಯತ್ನ ನಡೆಸಿದ್ದಾನೆ. ಜಾತ್ಯಸ್ಥ ಚಿತ್ರನಟ ಸುದೀಪ್‍ನನ್ನು ಕರೆಸಿ ಒಂದುಸುತ್ತು ಪ್ರಚಾರ ನಡೆಸಿರುವ ರಾಮುಲು ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವಂತೆ ಕಂಡುಬಂದರೂ ಕಾಂಗ್ರೆಸ್‍ನ ಬಾಬು ಟಫ್ ಕಾಂಪಿಟೇಶನ್ ಕೊಡುತ್ತಿದ್ದಾನೆ.

ಚಳ್ಳಕೆರೆಯಲ್ಲಿ ಖುದ್ದು ಅಮಿತ್ ಶಾನೇ ಸ್ಪರ್ಧಿಸಿದರೂ ಕಾಂಗ್ರೆಸಿನ ರಘುಮೂರ್ತಿಯೆದುರು ಗೆಲ್ಲುವುದು ಕಷ್ಟ ಅಂತ ಅಲ್ಲಿನ ಜನ ಮಾತಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ತಿಪ್ಪೇಸ್ವಾಮಿ ಮಗ ಕೆಟಿ ಕುಮಾರಸ್ವಾಮಿ ಹಾಗೂ ಜೆಡಿಎಸ್‍ನಿಂದ ರವೀಶ್ ಕುಮಾರ್‍ರ ಸ್ಪರ್ಧೆ, ಶಾಸಕನಾಗಿ ರಘುಮೂರ್ತಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮುಂದೆ ಸಪ್ಪೆ ಎನಿಸುವಂತಿದೆ.

ಹಿರಿಯೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಕಾಂಗ್ರೆಸಿನ ಸುಧಾಕರ್‍ಗೆ ಎದುರಾಗಿ ಬಿಜೆಪಿಯಿಂದ ಪೂರ್ಣಿಮಾ ಶ್ರೀನಿವಾಸ್, ಜೆಡಿಎಸ್‍ನಿಂದ ಯಶೋಧರ ಕಣದಲ್ಲಿದ್ದಾರೆ. ತನ್ನ ತಂದೆ ಕೃಷ್ಣಪ್ಪನ ನಾಮಬಲದ ಮೇಲೆ ಸ್ಪರ್ಧಿಸಿರುವ ಪೂರ್ಣಿಮ ಸ್ವಜಾತಿ ಯಾದವರ ಮತವನ್ನು ನಂಬಿಕೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‍ನ ಯಶೋಧರ ಒಕ್ಕಲಿಗ ಮತ ನಂಬಿ ಕಣದಲ್ಲಿದ್ದಾರೆ. ಜನ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸೈ ಎನಿಸಿಕೊಂಡಿರುವ ಕೈ ಪಾರ್ಟಿಯ ಸುಧಾಕರನದ್ದೇ ಇಲ್ಲಿ ಹವಾ ಜೋರಾಗಿದೆ.

ಹೊಸದುರ್ಗದಲ್ಲಿ ಕಾಂಗ್ರೆಸ್‍ನಿಂದ ಹಾಲಿ ಶಾಸಕ ಗೋವಿಂದಪ್ಪ, ಬಿಜೆಪಿಯಿಂದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಜೆಡಿಎಸ್‍ನಿಂದ ಚಿತ್ರನಟ ಶಶಿಕುಮಾರ್ ಕಣದಲ್ಲಿದ್ದಾರೆ. ಶಶಿಕುಮಾರ್ ಒಂದಷ್ಟು ಕಾಂಗ್ರೆಸ್‍ನ ಮತಗಳಿಗೇ ಲಗ್ಗೆ ಹಾಕುವ ಸಾಧ್ಯತೆ ಇರೋದರಿಂದ ಈ ಬಾರಿ ಗೋವಿಂದಪ್ಪನಿಗೆ ಗೂಳಿ ಗುಮ್ಮುವ ಲಕ್ಷಣಗಳು ದಟ್ಟವಾಗಿವೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್‍ನ ಹನುಮಲಿ ಷಣ್ಮುಖಪ್ಪ, ಜೆಡಿಎಸ್‍ನ ವಿರೇಂದ್ರ ಬಿಜೆಪಿಯ ಹಾಲಿ ಶಾಸಕ ತಿಪ್ಪಾರೆಡ್ಡಿಯ ಬೆವರಿಳಿಸುತ್ತಿದ್ದಾರೆ. ಷಣ್ಮುಖಪ್ಪ ಮತ್ತು ವೀರೇಂದ್ರ ಕುಮಾರ ಅಲಿಯಾಸ್ ಪಪ್ಪಿ,ಇಬ್ಬರೂ ಲಿಂಗಾಯತರಾದ್ದರಿಂದ ಲಿಂಗಾಯತ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಆದಾಗ್ಯೂ ಕ್ಷೇತ್ರದಲ್ಲಿ ದಟ್ಟವಾಗಿರುವ ಮುಸ್ಲಿಂ, ನಾಯಕರು, ಕುರುಬರು, ದಲಿತರು ಮೊದಲಾದ ಅಹಿಂದ ಮತಗಳು ಷಣ್ಮುಖಪ್ಪನತ್ತ ದೃಷ್ಟಿ ಹರಿಸುತ್ತಿವೆ. ತ್ರಿಕೋನ ಸ್ಪರ್ಧೆಯಂತೆ ಕಂಡುಬಂದರೂ ಗೆಲುವು ಬಿಜೆಪಿ, ಕಾಂಗ್ರೆಸ್ ನಡುವೆ ತೂಗಾಡುತ್ತಿದೆ.

ಹೊಳಲ್ಕೆರೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಆಂಜನೇಯ ಮತ್ತು ಬಿಜೆಪಿಯ ಮಾಜಿ ಶಾಸಕ ಚಂದ್ರಪ್ಪನ ನಡುವೆಯೇ ನೇರ ಹಣಾಹಣಿ. ಜೆಡಿಎಸ್‍ನ ಶ್ರೀನಿವಾಸ್ ಗದ್ದಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ. ಸದ್ಯದ ಮಟ್ಟಿಗೆ ಆಂಜನೇಯರ ಗೆಲುವೇ ಎದ್ದು ಕಾಣುತ್ತಿದೆ. ಬಿಜೆಪಿ ಟಿಕೇಟ್ ಸಿಗದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹನುಮಕ್ಕನಿಗೆ ಬಿಜೆಪಿಯವರೇ ಸಾಥ್ ನೀಡುತ್ತಿರೋದು ಚಂದ್ರಪ್ಪನನ್ನು ಗೆಲುವಿನಿಂದ ದೂರಾಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...