Homeಮುಖಪುಟಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

- Advertisement -
- Advertisement -

ಖಲೀಲ್ ಗಿಬ್ರಾನ್ ಅವರ ಪ್ರಾಫೆಟ್ ಎನ್ನುವ ಪುಸ್ತಕದಲ್ಲಿ ಒಂದು ಪ್ರಸಂಗ ಬರುತ್ತೆ. ಒಬ್ಬ ತಪ್ಪಿತಸ್ಥನಿಗೆ ಕಲ್ಲುಹೊಡೆದು ಶಿಕ್ಸಿಸುವ ಪ್ರಸಂಗ. ‘ನಿಮ್ಮಲ್ಲಿ ಯಾರಾದರೂ ಇವನು ಮಾಡಿದ ಅಪರಾಧವನ್ನು ನೀವು ನಿಮ್ಮ ಕಲ್ಪನೆಯಲ್ಲಿ ಮಾಡಲು ಸಾಧ್ಯವಾಗದೇ ಇರುವವರು ಮಾತ್ರ ಖಂಡಿತ ಮುಂದೆ ಬನ್ನಿ, ಕಲ್ಲೆಸೆಯಿರಿ’ ಎಂದು ಜನರನ್ನುದ್ದೇಶಿಸಿ ಹೇಳಿದಾಗ ಯಾರೊಬ್ಬರೂ ಕಲ್ಲೆಸೆಯಲು ಮುಂದಾಗುವುದಿಲ್ಲ.
ಒಬ್ಬ ಸಿನೆಮಾದವನಾಗಿ-2010 ರಲ್ಲಿ ದಿಬಾಕರ್ ಬ್ಯಾನರ್ಜೀ ನಿರ್ದೇಶಿಸಿದ ಲವ್ ಸೆಕ್ಸ್ ಔರ್ ಧೋಕಾ ಎನ್ನುವ ಚಿತ್ರ ಬಿಡುಗಡೆಯಾಯಿತು. ಅದರಲ್ಲಿ ದಿಬಾಕರ್ ಬ್ಯಾನರ್ಜೀ ಊಹಿಸಲೂ ಕಷ್ಟವಾಗುವಂತಹ, ಅರ್ಥಮಾಡಿಕೊಳ್ಳಲು ಸಾಧ್ಯವೇ ಆಗದಂಥ ಕೆಲವು ಘಟನೆ, ಪಾತ್ರಗಳನ್ನು ಎತ್ತಿಕೊಂಡು ಆ ಸಿನೆಮಾ ಮಾಡಿದರು. ಎಮ್‍ಎಮ್‍ಎಸ್ ಹಗರಣದ ವಿಷಯವನ್ನು ಇಟ್ಟುಕೊಂಡು ಒಂದು ಕತೆಯ ಜೊತೆಗೆ ಮರ್ಯಾದೆ ಹತ್ಯೆ ಮತ್ತು ಸ್ಟಿಂಗ್ ಆಪರೇಷನ್ ವಿಷಯ ಇಟ್ಟುಕೊಂಡು ಇನ್ನೆರಡು ಕತೆಗಳನ್ನು ಸೇರಿಸಿ ಮಾಡಿದ ಆ ಸಿನೆಮಾ ನೋಡುಗರಿಗೆ ಆಘಾತ ನೀಡುವ ಶಕ್ತಿಯನ್ನೊಳಗೊಂಡಿತ್ತು.
ಅದರಲ್ಲಿಯ ಒಂದು ಕತೆ ಎಮ್‍ಎಮ್‍ಎಸ್ ಹಗರಣದ ಕುರಿತಾಗಿತ್ತು, ಬರೀ ದ್ವೇಷ ಮತ್ತು ಹೇವರಿಕೆಗೆ ಮಾತ್ರ ಪಾತ್ರನಾಗಬಲ್ಲ ಒಬ್ಬ ಯುವಕ ಅದರ ಪ್ರಮುಖ ಪಾತ್ರಧಾರಿ. ಆತನ ಪಾತ್ರವನ್ನು ಒಬ್ಬ ದುರ್ಬಲ ಮನುಷ್ಯ ಎನ್ನುವ ಹಾಗೆ ಒಂದಿಷ್ಟು ಸಹಾನುಭೂತಿಯಿಂದ, ‘there are no negative characters’ ಎನ್ನುವ ನಿಯಮವನ್ನನುಸರಿಸಿ ಸೃಷ್ಟಿಸಲಾಗಿತ್ತು. ಸಿನೆಮಾ ಎನ್ನುವ ಕಥೆಯನ್ನು ಹೇಳುವ ಕಲೆಯ ಅತ್ಯದ್ಭುತ ಪ್ರದರ್ಶನವನ್ನು ಆ ಸಿನೆಮಾದಲ್ಲಿ ಸಾಧಿಸಲಾಗಿತ್ತು. ಆ ಚಿತ್ರದ ಮೊದಲ ಕತೆ ‘ಮರ್ಯಾದೆ ಹತ್ಯೆ’ ಯ ಕುರಿತದ್ದಾಗಿತ್ತು. ಆದರೆ ಅಲ್ಲಿ ಯುವಕರ ಪ್ರೀತಿ, ರೋಮಾನ್ಸ್ ಮತ್ತು ಸಡನ್ನಾಗಿ ಬರುವ ಘೋರ ಹತ್ಯೆಗೆ ಆ ಕತೆ ಸೀಮಿತಗೊಂಡಿತು. ಎಮ್‍ಎಮ್‍ಎಸ್ ಹಗರಣದ ಕಥೆಯ ಹಾಗೆ ಆ ಯುವಕನನ್ನು ಅರ್ಥ ಮಾಡಿಕೊಂಡು ಚಿತ್ರಿಸುವುದನ್ನು ಬಿಡಿ, ಈ ಕತೆಯಲ್ಲಿ ಹುಡುಗಿಯ ಅಪ್ಪ, ಸಹೋದರರನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ಏಕೆ? ಅದು ನಿರ್ದೇಶಕ ದಿಬಾಕರ್ ಬ್ಯಾನರ್ಜೀಯ ಲಿಮಿಟೇಷನ್ ಆಗಿರಬಹುದು. ನಾವ್ಹೇಗೆ ಅರ್ಥೈಸಬೇಕು? ಸಮಾಜದಲ್ಲಿ ತನ್ನ ಪ್ರತಿಷ್ಠೆಯೇ ಜೀವನದ ಸರ್ವಸ್ವ ಎಂದು ಬದುಕುವ ವ್ಯಕ್ತಿಗಳಿಗೇನು ಕಡಿಮೆಯಿಲ್ಲ. ತನ್ನ ಮಗಳ ಮದುವೆ ಸಮಾರಂಭಕ್ಕಾಗಿಯೇ ವರ್ಷಗಟ್ಟಲೇ ಕನಸು ಕಾಣುತ್ತಿರುವ ಕುಟುಂಬಗಳಿಗೆ ತನ್ನ ಗರ್ಭಿಣಿ ಮಗಳ ಗಂಡನನ್ನು ಕೊಂದವನು ಅರ್ಥವಾಗುತ್ತಿರಬಹುದು. ಏನಿದು ಈ ಮರ್ಯಾದೆ, ಪ್ರತಿಷ್ಠೆ? ತನ್ನ ಒಡಲ ಕುಡಿಯನ್ನೇ ಹೊಸಕಿಹಾಕುವ ಹೃದಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? ಅರ್ಥ ಮಾಡಿಕೊಳ್ಳಬೇಕೆ? ಅರ್ಥ ಮಾಡಿಕೊಳ್ಳದೇ ಕತೆ ಬರೆಯಬಹುದೇ? ಅರ್ಥ ಮಾಡಿಕೊಳ್ಳದೇ ಅದರ ಪರಿಹಾರ ಕಂಡುಹಿಡಿಯಬಲ್ಲೆವೆ? ತನ್ನ ಗರ್ಭಿಣಿ ಮಗಳ ಗಂಡನನ್ನು ಕೊಲ್ಲಿಸಿದವನ್ನು ಕಲ್ಲೆಸೆದು ಶಿಕ್ಷಿಸುವ ಪ್ರಸಂಗ ಬಂದರೆ ಎಷ್ಟು ಜನ ಕಲ್ಲೆಸೆಯಲು ಹಿಂದೇಟುಹಾಕಬಹುದು? ಒಬ್ಬ ಸಿನೆಮಾದವನಾಗಿ ಈ ಪ್ರಶ್ನೆ ನನಗೆ ಕಾಡುತ್ತಿದೆ.
ಈ ಕೊಲೆ ಮತ್ತು ಕೊಲೆಯ ಹಿಂದಿನ ಸತ್ಯ ನಮ್ಮ ಸಮಾಜದ ವಾಸ್ತವ ಎನ್ನುವುದನ್ನು ಮೊದಲು ನಾವು ಒಪ್ಪಿಕೊಳ್ಳುವ. ಏಕೆಂದರೆ, ತಂದೆಯೇ ಮಗಳನ್ನು ಅಥವಾ ಆಕೆಯ ಗಂಡನನ್ನು ಕೊಲ್ಲಿಸುವುದನ್ನು ಯಾವುದೇ ಸಮಾಜದ ಮನುಷ್ಯರು ಒಪ್ಪುವುದಿಲ್ಲವೆಂದು, ಅವರು ಬಹಳ ಅಲ್ಪಸಂಖ್ಯಾತರೆಂದು ಹೆಚ್ಚಿನವರು ಭಾವಿಸಿದಂತಿದೆ. ಇಲ್ಲವೇ, ‘ನೋಡಿ ನಿಮ್ಮ ದುಷ್ಟ ಜಾತಿವ್ಯವಸ್ಥೆ; ಅದು ಎಷ್ಟು ಕ್ರೂರಿ. ಇದನ್ನು ನೀವೂ ಸಮರ್ಥಿಸಲಾರಿರಿ’ ಎಂಬ ಧ್ವನಿಯೊಂದಿಗೆ ಹಲವರು ಫೇಸ್‍ಬುಕ್‍ನಲ್ಲಿ ಬರೆಯುತ್ತಿದ್ದಾರೆ. ಇದು ನಿಜವೇ. ಇಂತಹ ಕ್ರೌರ್ಯದ ವಿರುದ್ಧ ಮಾತನಾಡದೇ ಸುಮ್ಮನಿರುವವರು ಯಾರ್ಯಾರಿದ್ದಾರೆ ನೋಡೋಣ. ಸುಮ್ಮನಿರುವ ಎಲ್ಲರೂ ಸಮರ್ಥಿಸುತ್ತಿದ್ದಾರೆ ಎಂದು ಹೇಳಲಾಗದು ಎಂಬುದೇನೋ ನಿಜ. ಅದೇ ಸಂದರ್ಭದಲ್ಲಿ ಅವರೆಲ್ಲರೂ ಈ ಹತ್ಯೆಯನ್ನು ಖಂಡಿಸುತ್ತಿದ್ದಾರೆ ಎಂದುಕೊಳ್ಳುವುದೂ ವಾಸ್ತವವಲ್ಲ.
ಸಾಮಾನ್ಯವಾಗಿ ಬಹಳ ಆರ್ಟಿಕ್ಯುಲೇಟ್ ಆಗಿರುವ ಬಲಪಂಥೀಯ ಅಜೆಂಡಾದ ಮಂದಿ ಇಂತಹ ಪ್ರಕರಣಗಳು ನಡೆದಾಗ ಏನು ಮಾಡುತ್ತಾರೆ. ಅದರಲ್ಲಿ ಹಿಂದೂ-ಮುಸ್ಲಿಂ ವಿಚಾರ ಇದ್ದರೆ ಬಹಳ ಸಕ್ರಿಯವಾಗಿಬಿಡುತ್ತಾರೆ. ಇಲ್ಲದಿದ್ದರೆ ದಿವ್ಯ ಮೌನ. ಹಿಂದೂ ನಾವೆಲ್ಲಾ ಒಂದು ಮಾಡಲು ಹೊರಟಿರುವವರು ಪ್ರತಿಕ್ರಿಯಿಸಲೇಬೇಕಲ್ಲವೇ? ಇಲ್ಲ. ಏಕೆಂದರೆ ಅವರು ಮೆಜಾರಿಟಿಯ ಭಾಷೆಯನ್ನು, ಭಾವನೆಯನ್ನು ಮಾತನಾಡಲು ಮತ್ತು ರೂಪಿಸಲು ಪ್ರಯತ್ನಿಸುತ್ತಾರೆ. ಬಹುಶಃ ಅವರಿಗೆ ಗೊತ್ತು ಮೆಜಾರಿಟಿ ಈ ಮದುವೆಯ ಪರವಾಗಿಲ್ಲ ಎಂಬುದನ್ನು. ಸಾಧ್ಯವಾದರೆ, ಈ ಹತ್ಯೆಯ ಪರವಾಗಿಯೂ ಮೆಜಾರಿಟಿಯ ಒಪೀನಿಯನ್ ಅನ್ನು ಮೊಬಿಲೈಸ್ ಮಾಡಲು ಅವರು ಪರೋಕ್ಷವಾಗಿ ಯತ್ನಿಸುತ್ತಾರೆ. ಕೆಲವು ಸಾರಿ ಸಕ್ರಿಯವಾಗಿ; ಕೆಲವು ಸಾರಿ ಮೌನವಾಗಿ.
ಇದು ಸಾಧ್ಯವಾಗುವುದು ಹೇಗೆ? ಮೆಜಾರಿಟಿ ಜನರು ನಿಜಕ್ಕೂ ತಮಗಿಂತ ‘ಕೆಳ’ ಜಾತಿಯ ಹುಡುಗನೊಂದಿಗೆ ತಮ್ಮ ಮಗಳು ಮದುವೆಯಾಗುವುದು ಪ್ರತಿಷ್ಠೆಗೆ ಕುಂದು ಎಂದು ಭಾವಿಸುವುದರಿಂದ. ಹಾಗಾಗಿಯೇ ಅವರು ಅಮೃತಾಳ ತಂದೆಗೆ ಕಲ್ಲೆಸೆಯಲು ಬರಲಾರರು. ಆ ದೃಷ್ಟಿಯಲ್ಲಿ ಅಮೃತಾಳ ತಂದೆ ಎನ್ನುವುದು ಆತನೊಬ್ಬನೇ ಅಲ್ಲ. ಈ ಸಮಾಜದ ಮೆಜಾರಿಟಿ. ಇದನ್ನು ಸರಿಪಡಿಸದ ಜಾತಿವಿನಾಶದ ಪ್ರಯತ್ನವು ಅದರಲ್ಲಿ ಯಶಸ್ವಿಯಾಗುವುದಿಲ್ಲ.
ಜಾತಿ ಪ್ರತಿಷ್ಠೆಯು ಮಕ್ಕಳ ಮೇಲಿನ ಮಮತೆಗಿಂತ ದೊಡ್ಡದು ಎಂಬುದು ಎಂದೋ ಸಾಬೀತಾಗಿ ಹೋಗಿದೆ. ಅದು ವರ್ಗಕ್ಕಿಂತಲೂ ದೊಡ್ಡದು ಎಂತಲೂ ಹಲವು ಪ್ರಕರಣಗಳು ತೋರಿವೆ. ಉದಾಹರಣೆಗೆ ಈ ಉದಾಹರಣೆಯಲ್ಲೇ ಪ್ರಣಯ್ ಬಡವನಿದ್ದಂತೆ ತೋರುವುದಿಲ್ಲ. ಹಾಗಾದರೆ ಜಾತಿ ಪ್ರತಿಷ್ಠೆಯನ್ನು ಕಡಿಮೆ ಮಾಡುವ ಬಗೆ ಹೇಗೆ? ಉತ್ತರ ಸುಲಭವಿಲ್ಲ. ಜಾತಿ ಪ್ರತಿಷ್ಠೆಯು ತನಗೆ ಅಷ್ಟು ದೊಡ್ಡದು ಎಂದು ಮಾರುತಿರಾವ್‍ಗೆ ಅನಿಸಲು ಕಾರಣ ಆತನ ಕುಟುಂಬ ಮಾತ್ರ ಕಾರಣವಲ್ಲ; ಇಂದು ಈ ಪ್ರಕರಣದಲ್ಲಿ ಕರುಳು ಚುರುಕ್ ಅನ್ನಿಸದೇ ಹೋದ ಎಲ್ಲಾ ಜಾತಿವಂತರೂ ಕಾರಣವಾಗಿದ್ದಾರೆ. ಅವರೇ ಈ ಜಾತಿ ಪ್ರತಿಷ್ಠೆಯನ್ನು ಕಾಪಾಡಿಕೊಂಡು ಬರಲು ಕಾರಣರಾಗಿದ್ದಾರೆ. ಅವರೆಲ್ಲರಲ್ಲೂ ಕ್ರೌರ್ಯಕ್ಕೆ ಮತ್ತು ಅಮಾನವೀಯತೆಗೆ ಕಲ್ಲು ಹೊಡೆಯಲು ಬೇಕಾದ ನೈತಿಕತೆಯನ್ನು ತುಂಬಿಸಲು ಬೇಕಾದ ಸುದೀರ್ಘ ಪ್ರಯತ್ನ ಇನ್ನಾದರೂ ಆರಂಭಿಸೋಣ.

– ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...