Homeಮುಖಪುಟಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

- Advertisement -
- Advertisement -

ಖಲೀಲ್ ಗಿಬ್ರಾನ್ ಅವರ ಪ್ರಾಫೆಟ್ ಎನ್ನುವ ಪುಸ್ತಕದಲ್ಲಿ ಒಂದು ಪ್ರಸಂಗ ಬರುತ್ತೆ. ಒಬ್ಬ ತಪ್ಪಿತಸ್ಥನಿಗೆ ಕಲ್ಲುಹೊಡೆದು ಶಿಕ್ಸಿಸುವ ಪ್ರಸಂಗ. ‘ನಿಮ್ಮಲ್ಲಿ ಯಾರಾದರೂ ಇವನು ಮಾಡಿದ ಅಪರಾಧವನ್ನು ನೀವು ನಿಮ್ಮ ಕಲ್ಪನೆಯಲ್ಲಿ ಮಾಡಲು ಸಾಧ್ಯವಾಗದೇ ಇರುವವರು ಮಾತ್ರ ಖಂಡಿತ ಮುಂದೆ ಬನ್ನಿ, ಕಲ್ಲೆಸೆಯಿರಿ’ ಎಂದು ಜನರನ್ನುದ್ದೇಶಿಸಿ ಹೇಳಿದಾಗ ಯಾರೊಬ್ಬರೂ ಕಲ್ಲೆಸೆಯಲು ಮುಂದಾಗುವುದಿಲ್ಲ.
ಒಬ್ಬ ಸಿನೆಮಾದವನಾಗಿ-2010 ರಲ್ಲಿ ದಿಬಾಕರ್ ಬ್ಯಾನರ್ಜೀ ನಿರ್ದೇಶಿಸಿದ ಲವ್ ಸೆಕ್ಸ್ ಔರ್ ಧೋಕಾ ಎನ್ನುವ ಚಿತ್ರ ಬಿಡುಗಡೆಯಾಯಿತು. ಅದರಲ್ಲಿ ದಿಬಾಕರ್ ಬ್ಯಾನರ್ಜೀ ಊಹಿಸಲೂ ಕಷ್ಟವಾಗುವಂತಹ, ಅರ್ಥಮಾಡಿಕೊಳ್ಳಲು ಸಾಧ್ಯವೇ ಆಗದಂಥ ಕೆಲವು ಘಟನೆ, ಪಾತ್ರಗಳನ್ನು ಎತ್ತಿಕೊಂಡು ಆ ಸಿನೆಮಾ ಮಾಡಿದರು. ಎಮ್‍ಎಮ್‍ಎಸ್ ಹಗರಣದ ವಿಷಯವನ್ನು ಇಟ್ಟುಕೊಂಡು ಒಂದು ಕತೆಯ ಜೊತೆಗೆ ಮರ್ಯಾದೆ ಹತ್ಯೆ ಮತ್ತು ಸ್ಟಿಂಗ್ ಆಪರೇಷನ್ ವಿಷಯ ಇಟ್ಟುಕೊಂಡು ಇನ್ನೆರಡು ಕತೆಗಳನ್ನು ಸೇರಿಸಿ ಮಾಡಿದ ಆ ಸಿನೆಮಾ ನೋಡುಗರಿಗೆ ಆಘಾತ ನೀಡುವ ಶಕ್ತಿಯನ್ನೊಳಗೊಂಡಿತ್ತು.
ಅದರಲ್ಲಿಯ ಒಂದು ಕತೆ ಎಮ್‍ಎಮ್‍ಎಸ್ ಹಗರಣದ ಕುರಿತಾಗಿತ್ತು, ಬರೀ ದ್ವೇಷ ಮತ್ತು ಹೇವರಿಕೆಗೆ ಮಾತ್ರ ಪಾತ್ರನಾಗಬಲ್ಲ ಒಬ್ಬ ಯುವಕ ಅದರ ಪ್ರಮುಖ ಪಾತ್ರಧಾರಿ. ಆತನ ಪಾತ್ರವನ್ನು ಒಬ್ಬ ದುರ್ಬಲ ಮನುಷ್ಯ ಎನ್ನುವ ಹಾಗೆ ಒಂದಿಷ್ಟು ಸಹಾನುಭೂತಿಯಿಂದ, ‘there are no negative characters’ ಎನ್ನುವ ನಿಯಮವನ್ನನುಸರಿಸಿ ಸೃಷ್ಟಿಸಲಾಗಿತ್ತು. ಸಿನೆಮಾ ಎನ್ನುವ ಕಥೆಯನ್ನು ಹೇಳುವ ಕಲೆಯ ಅತ್ಯದ್ಭುತ ಪ್ರದರ್ಶನವನ್ನು ಆ ಸಿನೆಮಾದಲ್ಲಿ ಸಾಧಿಸಲಾಗಿತ್ತು. ಆ ಚಿತ್ರದ ಮೊದಲ ಕತೆ ‘ಮರ್ಯಾದೆ ಹತ್ಯೆ’ ಯ ಕುರಿತದ್ದಾಗಿತ್ತು. ಆದರೆ ಅಲ್ಲಿ ಯುವಕರ ಪ್ರೀತಿ, ರೋಮಾನ್ಸ್ ಮತ್ತು ಸಡನ್ನಾಗಿ ಬರುವ ಘೋರ ಹತ್ಯೆಗೆ ಆ ಕತೆ ಸೀಮಿತಗೊಂಡಿತು. ಎಮ್‍ಎಮ್‍ಎಸ್ ಹಗರಣದ ಕಥೆಯ ಹಾಗೆ ಆ ಯುವಕನನ್ನು ಅರ್ಥ ಮಾಡಿಕೊಂಡು ಚಿತ್ರಿಸುವುದನ್ನು ಬಿಡಿ, ಈ ಕತೆಯಲ್ಲಿ ಹುಡುಗಿಯ ಅಪ್ಪ, ಸಹೋದರರನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ಏಕೆ? ಅದು ನಿರ್ದೇಶಕ ದಿಬಾಕರ್ ಬ್ಯಾನರ್ಜೀಯ ಲಿಮಿಟೇಷನ್ ಆಗಿರಬಹುದು. ನಾವ್ಹೇಗೆ ಅರ್ಥೈಸಬೇಕು? ಸಮಾಜದಲ್ಲಿ ತನ್ನ ಪ್ರತಿಷ್ಠೆಯೇ ಜೀವನದ ಸರ್ವಸ್ವ ಎಂದು ಬದುಕುವ ವ್ಯಕ್ತಿಗಳಿಗೇನು ಕಡಿಮೆಯಿಲ್ಲ. ತನ್ನ ಮಗಳ ಮದುವೆ ಸಮಾರಂಭಕ್ಕಾಗಿಯೇ ವರ್ಷಗಟ್ಟಲೇ ಕನಸು ಕಾಣುತ್ತಿರುವ ಕುಟುಂಬಗಳಿಗೆ ತನ್ನ ಗರ್ಭಿಣಿ ಮಗಳ ಗಂಡನನ್ನು ಕೊಂದವನು ಅರ್ಥವಾಗುತ್ತಿರಬಹುದು. ಏನಿದು ಈ ಮರ್ಯಾದೆ, ಪ್ರತಿಷ್ಠೆ? ತನ್ನ ಒಡಲ ಕುಡಿಯನ್ನೇ ಹೊಸಕಿಹಾಕುವ ಹೃದಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ? ಅರ್ಥ ಮಾಡಿಕೊಳ್ಳಬೇಕೆ? ಅರ್ಥ ಮಾಡಿಕೊಳ್ಳದೇ ಕತೆ ಬರೆಯಬಹುದೇ? ಅರ್ಥ ಮಾಡಿಕೊಳ್ಳದೇ ಅದರ ಪರಿಹಾರ ಕಂಡುಹಿಡಿಯಬಲ್ಲೆವೆ? ತನ್ನ ಗರ್ಭಿಣಿ ಮಗಳ ಗಂಡನನ್ನು ಕೊಲ್ಲಿಸಿದವನ್ನು ಕಲ್ಲೆಸೆದು ಶಿಕ್ಷಿಸುವ ಪ್ರಸಂಗ ಬಂದರೆ ಎಷ್ಟು ಜನ ಕಲ್ಲೆಸೆಯಲು ಹಿಂದೇಟುಹಾಕಬಹುದು? ಒಬ್ಬ ಸಿನೆಮಾದವನಾಗಿ ಈ ಪ್ರಶ್ನೆ ನನಗೆ ಕಾಡುತ್ತಿದೆ.
ಈ ಕೊಲೆ ಮತ್ತು ಕೊಲೆಯ ಹಿಂದಿನ ಸತ್ಯ ನಮ್ಮ ಸಮಾಜದ ವಾಸ್ತವ ಎನ್ನುವುದನ್ನು ಮೊದಲು ನಾವು ಒಪ್ಪಿಕೊಳ್ಳುವ. ಏಕೆಂದರೆ, ತಂದೆಯೇ ಮಗಳನ್ನು ಅಥವಾ ಆಕೆಯ ಗಂಡನನ್ನು ಕೊಲ್ಲಿಸುವುದನ್ನು ಯಾವುದೇ ಸಮಾಜದ ಮನುಷ್ಯರು ಒಪ್ಪುವುದಿಲ್ಲವೆಂದು, ಅವರು ಬಹಳ ಅಲ್ಪಸಂಖ್ಯಾತರೆಂದು ಹೆಚ್ಚಿನವರು ಭಾವಿಸಿದಂತಿದೆ. ಇಲ್ಲವೇ, ‘ನೋಡಿ ನಿಮ್ಮ ದುಷ್ಟ ಜಾತಿವ್ಯವಸ್ಥೆ; ಅದು ಎಷ್ಟು ಕ್ರೂರಿ. ಇದನ್ನು ನೀವೂ ಸಮರ್ಥಿಸಲಾರಿರಿ’ ಎಂಬ ಧ್ವನಿಯೊಂದಿಗೆ ಹಲವರು ಫೇಸ್‍ಬುಕ್‍ನಲ್ಲಿ ಬರೆಯುತ್ತಿದ್ದಾರೆ. ಇದು ನಿಜವೇ. ಇಂತಹ ಕ್ರೌರ್ಯದ ವಿರುದ್ಧ ಮಾತನಾಡದೇ ಸುಮ್ಮನಿರುವವರು ಯಾರ್ಯಾರಿದ್ದಾರೆ ನೋಡೋಣ. ಸುಮ್ಮನಿರುವ ಎಲ್ಲರೂ ಸಮರ್ಥಿಸುತ್ತಿದ್ದಾರೆ ಎಂದು ಹೇಳಲಾಗದು ಎಂಬುದೇನೋ ನಿಜ. ಅದೇ ಸಂದರ್ಭದಲ್ಲಿ ಅವರೆಲ್ಲರೂ ಈ ಹತ್ಯೆಯನ್ನು ಖಂಡಿಸುತ್ತಿದ್ದಾರೆ ಎಂದುಕೊಳ್ಳುವುದೂ ವಾಸ್ತವವಲ್ಲ.
ಸಾಮಾನ್ಯವಾಗಿ ಬಹಳ ಆರ್ಟಿಕ್ಯುಲೇಟ್ ಆಗಿರುವ ಬಲಪಂಥೀಯ ಅಜೆಂಡಾದ ಮಂದಿ ಇಂತಹ ಪ್ರಕರಣಗಳು ನಡೆದಾಗ ಏನು ಮಾಡುತ್ತಾರೆ. ಅದರಲ್ಲಿ ಹಿಂದೂ-ಮುಸ್ಲಿಂ ವಿಚಾರ ಇದ್ದರೆ ಬಹಳ ಸಕ್ರಿಯವಾಗಿಬಿಡುತ್ತಾರೆ. ಇಲ್ಲದಿದ್ದರೆ ದಿವ್ಯ ಮೌನ. ಹಿಂದೂ ನಾವೆಲ್ಲಾ ಒಂದು ಮಾಡಲು ಹೊರಟಿರುವವರು ಪ್ರತಿಕ್ರಿಯಿಸಲೇಬೇಕಲ್ಲವೇ? ಇಲ್ಲ. ಏಕೆಂದರೆ ಅವರು ಮೆಜಾರಿಟಿಯ ಭಾಷೆಯನ್ನು, ಭಾವನೆಯನ್ನು ಮಾತನಾಡಲು ಮತ್ತು ರೂಪಿಸಲು ಪ್ರಯತ್ನಿಸುತ್ತಾರೆ. ಬಹುಶಃ ಅವರಿಗೆ ಗೊತ್ತು ಮೆಜಾರಿಟಿ ಈ ಮದುವೆಯ ಪರವಾಗಿಲ್ಲ ಎಂಬುದನ್ನು. ಸಾಧ್ಯವಾದರೆ, ಈ ಹತ್ಯೆಯ ಪರವಾಗಿಯೂ ಮೆಜಾರಿಟಿಯ ಒಪೀನಿಯನ್ ಅನ್ನು ಮೊಬಿಲೈಸ್ ಮಾಡಲು ಅವರು ಪರೋಕ್ಷವಾಗಿ ಯತ್ನಿಸುತ್ತಾರೆ. ಕೆಲವು ಸಾರಿ ಸಕ್ರಿಯವಾಗಿ; ಕೆಲವು ಸಾರಿ ಮೌನವಾಗಿ.
ಇದು ಸಾಧ್ಯವಾಗುವುದು ಹೇಗೆ? ಮೆಜಾರಿಟಿ ಜನರು ನಿಜಕ್ಕೂ ತಮಗಿಂತ ‘ಕೆಳ’ ಜಾತಿಯ ಹುಡುಗನೊಂದಿಗೆ ತಮ್ಮ ಮಗಳು ಮದುವೆಯಾಗುವುದು ಪ್ರತಿಷ್ಠೆಗೆ ಕುಂದು ಎಂದು ಭಾವಿಸುವುದರಿಂದ. ಹಾಗಾಗಿಯೇ ಅವರು ಅಮೃತಾಳ ತಂದೆಗೆ ಕಲ್ಲೆಸೆಯಲು ಬರಲಾರರು. ಆ ದೃಷ್ಟಿಯಲ್ಲಿ ಅಮೃತಾಳ ತಂದೆ ಎನ್ನುವುದು ಆತನೊಬ್ಬನೇ ಅಲ್ಲ. ಈ ಸಮಾಜದ ಮೆಜಾರಿಟಿ. ಇದನ್ನು ಸರಿಪಡಿಸದ ಜಾತಿವಿನಾಶದ ಪ್ರಯತ್ನವು ಅದರಲ್ಲಿ ಯಶಸ್ವಿಯಾಗುವುದಿಲ್ಲ.
ಜಾತಿ ಪ್ರತಿಷ್ಠೆಯು ಮಕ್ಕಳ ಮೇಲಿನ ಮಮತೆಗಿಂತ ದೊಡ್ಡದು ಎಂಬುದು ಎಂದೋ ಸಾಬೀತಾಗಿ ಹೋಗಿದೆ. ಅದು ವರ್ಗಕ್ಕಿಂತಲೂ ದೊಡ್ಡದು ಎಂತಲೂ ಹಲವು ಪ್ರಕರಣಗಳು ತೋರಿವೆ. ಉದಾಹರಣೆಗೆ ಈ ಉದಾಹರಣೆಯಲ್ಲೇ ಪ್ರಣಯ್ ಬಡವನಿದ್ದಂತೆ ತೋರುವುದಿಲ್ಲ. ಹಾಗಾದರೆ ಜಾತಿ ಪ್ರತಿಷ್ಠೆಯನ್ನು ಕಡಿಮೆ ಮಾಡುವ ಬಗೆ ಹೇಗೆ? ಉತ್ತರ ಸುಲಭವಿಲ್ಲ. ಜಾತಿ ಪ್ರತಿಷ್ಠೆಯು ತನಗೆ ಅಷ್ಟು ದೊಡ್ಡದು ಎಂದು ಮಾರುತಿರಾವ್‍ಗೆ ಅನಿಸಲು ಕಾರಣ ಆತನ ಕುಟುಂಬ ಮಾತ್ರ ಕಾರಣವಲ್ಲ; ಇಂದು ಈ ಪ್ರಕರಣದಲ್ಲಿ ಕರುಳು ಚುರುಕ್ ಅನ್ನಿಸದೇ ಹೋದ ಎಲ್ಲಾ ಜಾತಿವಂತರೂ ಕಾರಣವಾಗಿದ್ದಾರೆ. ಅವರೇ ಈ ಜಾತಿ ಪ್ರತಿಷ್ಠೆಯನ್ನು ಕಾಪಾಡಿಕೊಂಡು ಬರಲು ಕಾರಣರಾಗಿದ್ದಾರೆ. ಅವರೆಲ್ಲರಲ್ಲೂ ಕ್ರೌರ್ಯಕ್ಕೆ ಮತ್ತು ಅಮಾನವೀಯತೆಗೆ ಕಲ್ಲು ಹೊಡೆಯಲು ಬೇಕಾದ ನೈತಿಕತೆಯನ್ನು ತುಂಬಿಸಲು ಬೇಕಾದ ಸುದೀರ್ಘ ಪ್ರಯತ್ನ ಇನ್ನಾದರೂ ಆರಂಭಿಸೋಣ.

– ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...