Homeಮುಖಪುಟಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

ಕ್ರಾಂತಿಕಾರಿ ತುಕಾರಾಮ ಡಾ ಆ ಹ ಸಾಳುಂಖೆ

- Advertisement -
- Advertisement -

ಸಂತ ತುಕಾರಾಂ ಎಂದರೆ ನಮಗೆ ಡಾ ರಾಜ್ ಅಭಿನಯದ “ಜಯತು ಜಯ ವಿಠಲ” ಎಂದು ಹಾಡಿಕೊಂಡು, ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ, ಸದಾ ಸಾಧು ಸ್ವಭಾವದ ಆಕಳಂತೆ ಇದ್ದು, ಪಡಬಾರದ ಪಾಡನ್ನೆಲ್ಲಾ ಪಟ್ಟ ಭಕ್ತನ ಕಾಪಾಡದ ದೇವರು ಕೊನೆಗೆ ನನ್ನ ಹತ್ತಿರ ನೆಮ್ಮದಿಯಾಗಿರು ಎಂದು ಪುಷ್ಪಕವಿಮಾನದಲ್ಲಿ ಬಂದು ಕರೆದುಕೊಂಡು ಹೋಗುವ ಚಿತ್ರವು ಮನಸ್ಸಿನಲ್ಲಿ ಬಂದರೆ ಅದು ನಮ್ಮ ತಪ್ಪಲ್ಲ. ಪೌರಾಣಿಕದ ಬೂದಿಯಲ್ಲಿ ಇತಿಹಾಸದ ಕೆಂಡವನ್ನು ಮರೆಮಾಡುತ್ತಾ ಒಂದು ನಿರ್ದಿಷ್ಟ ಮನಸ್ಥಿತಿಯಿಂದ ಬರಹಗಾರರು ಸಾಮಾಜಿಕ ಸಾಮರಸ್ಯದಲ್ಲಿ, ಧಾರ್ಮಿಕ ಸಮಾನತೆಯಲ್ಲಿ, ಆಧ್ಯಾತ್ಮಿಕ ಔನ್ನತ್ಯದಲ್ಲಿ ಕ್ರಾಂತಿಕಾರಿ ಸಿಂಹಗಳಾಗಿದ್ದವರನ್ನೂ ಮುಂದೆ ಕುರಿಗಳಂತೆ ತೋರಿಬಿಡುತ್ತಾರೆ ಎಂದು ಸಾಳುಂಖೆ ಎಚ್ಚರಿಸುತ್ತಾರೆ.

ಕಳೆದ ಮೂರು ಶತಮಾನಗಳಿಂದ ತುಕಾರಾಮ ಮಹಾರಾಷ್ಟ್ರದ ಜನರ ಹೃದಯದಲ್ಲಿ ಸಂವೇದನೆಯಾದ. ಅವನ ಅಭಂಗಗಳು ಮರಾಠ ಸಂಸ್ಕೃತಿಯ ಭಾಗವಾಗುವಷ್ಟು ನಾಡು ಅವನನ್ನು ಪ್ರೀತಿಸಿತು. ಅದಕ್ಕೆ ಕಾರಣವನ್ನು ಅರ್ಥಮಾಡಿಕೊಳ್ಳಬೇಕಾದರೆ ಮನಸ್ಸಿನಲ್ಲಿರುವ ಹಳೆಯ ಸಂತ ತುಕಾರಾಮನ ಪ್ರತಿಮೆಯನ್ನು ದೂರ ಮಾಡಬೇಕಾಗುತ್ತದೆ ಎನ್ನುವರು ಸಾಳುಂಖೆ. ಏಕೆಂದರೆ ಅದು ಅವನ ಮೂಲ ವ್ಯಕ್ತಿತ್ವಕ್ಕೆ ಹೋಲುವುದಿಲ್ಲ. ದಿವಾಳಿಯಾಗಿ, ಅಸಹಾಯಕನಾಗಿ ದೇವರ ಭಕ್ತನಾಗಿ, ಸರಿಯಾಗಿ ಸಂಸಾರ ತೂಗಿಸಲಾಗದೇ, ಸದಾ ತಾಳ ಕುಟ್ಟುತ್ತಾ ಕುಳಿತುಕೊಂಡು, ವ್ಯವಹಾರ ಶೂನ್ಯ, ಮುಗ್ಧ ಭೋಳೆ ಸಂತನಂತೆ (ಅದೇ ಸಂತ ತುಕಾರಾಂ ಚಿತ್ರದಲ್ಲಿ ತೋರಿಸುವಂತೆ) ಇರಿಸಲಾಗಿದೆ. ಆದರೆ ಧರ್ಮದ ಹೆಸರಿನಲ್ಲಿ ಅನೀತಿಯ ವ್ಯಾಪಾರ ನಡೆಸುತ್ತಿದ್ದ ಧಾರ್ಮಿಕಸತ್ತೆಯ ವಿರುದ್ಧವಾಗಿ ಇವನು ಮಹಾನ್ ಯೋಧನಂತೆ ಹೋರಾಡಿದ್ದ. ಅತ್ಯಂತ ಪ್ರಬಲ ಮತ್ತು ಮಜಬೂತಾಗಿರುವ ಸಮಾಜ ವ್ಯವಸ್ಥೆಯ ಮೂಲಕ್ಕೆ ಸಿಡಿಮದ್ದು ಇರಿಸುವ ಕಾರ್ಯವನ್ನು ಅವನು ಬದುಕಿನ ಉದ್ದಕ್ಕೂ ಮಾಡುತ್ತಲೇ ಬಂದಿದ್ದ.

ತುಕಾರಾಮನ ಜೀವನದ ಕ್ರಾಂತಿಕಾರಕ ಅನೇಕ ಘಟನೆಗಳನ್ನು ನಿರ್ಲಕ್ಷಿಸಿ, ಅವನನ್ನು ಸಂತನಾಗಿ ತೋರುವ ಧಾವಂತದಲ್ಲಿ ಮರೆಮಾಚಲಾಗಿರುವ ಸಂಗತಿಗಳ ಮೇಲೆ ಸಾಳುಂಖೆ ಬೆಳಕು ಚೆಲ್ಲುತ್ತಾರೆ.

ತನ್ನ ಅಭಂಗಗಳಲ್ಲಿ ತುಕಾರಾಮ ಬುವಾ ಡಾಂಭಿಕ ವ್ಯವಸ್ಥೆಯ ಮೇಲೆ ನೇರಾನೇರ ಪ್ರಹಾರ ಮಾಡುತ್ತಾರೆ. ಧಾರ್ಮಿಕತೆಯು ಮಾಡುವ ಅನ್ಯಾಯಗಳನ್ನು ಖಂಡಿಸಿ ಬರೆಯುತ್ತಿದ್ದ ಅವನ ಅಭಂಗಗಳನ್ನು ಇಂದ್ರಾಣಿ ನದಿಯಲ್ಲಿ ಮುಳುಗಿಸಿಬಿಡುವ ಶಿಕ್ಷೆ ಕೊಡುವುದು ತಿಳಿದಿರುವುದೇ. ಆದರೆ ಹೊಡೆದು, ಬಡಿದು, ನಿಂದಿಸಿ ನಾನಾ ರೀತಿಯಲ್ಲಿ ಹಿಂಸೆಗಳನ್ನು ಕೊಟ್ಟರೂ, “ತುಂಡು ಮಾಡಿ ಕೊಚ್ಚಿ ಹಾಕಿದರೂ ಹೆದರಲಾರೆ” ಎನ್ನುವ ತುಕಾರಾಮ ಅಭಂಗಗಳನ್ನು ಬರೆಯುತ್ತಾನೆ.

ಧಾರ್ಮಿಕನಾಗಿಯೇ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ತುಕಾರಾಮ ಸತ್ತದ್ದೂ ನಿಗೂಢವೇ. ಇಂದ್ರಾಣಿ ನದಿಯ ತೀರದಲ್ಲಿ ಕೀರ್ತನೆ ಹಾಡುತ್ತಿದ್ದಾಗ ಅದೃಶ್ಯನಾದ ಎಂಬ ಐತಿಹ್ಯವನ್ನು ಬೇಧಿಸಿದರೆ ರಾಮೇಶ್ವರ ಭಟ್ಟ ತುಕಾರಾಮನ ಮೇಲೆ ಖಟ್ಲೆ ಹೂಡಿದವನು, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡವನು, ಬಹಿಷ್ಕಾರ ಹಾಕಿಸಿದವನು, ಗಡಿಪಾರಿನ ಆಜ್ಞೆ ಮಾಡಿಸಿದವನು, ಅಭಂಗಗಳನ್ನು ಇಂದ್ರಾಯಣಿ ನದಿಯಲ್ಲಿ ಮುಳುಗಿಸಿದವನು, ಅಂತವನು ಸಾರುವುದೇನೆಂದರೆ, ತುಕಾರಾಮನು ಸದೇಹಿಯಾಗಿ ವೈಕುಂಠಕ್ಕೆ ಹೋದನೆಂದು. ಅಂದರೆ ಹೆಣವೂ ಕೂಡ ಸಿಗದಂತೆ ಮುಗಿಸಿದರೇ?

ತುಕಾರಾಮನ ವೈಕುಂಠಯಾನ ಹೇಗೆ ಹತ್ಯೆಯಾಗಿದ್ದಿರಬಹುದೆಂದು ಸಾಳುಂಖೆ ಎಳೆ ಎಳೆಯಾಗಿ ಬಿಡಿಸುತ್ತಾ ಹೋಗುತ್ತಾರೆ.

ಒಟ್ಟಾರೆ ತುಕಾರಾಮನೆಂಬ ಕ್ರಾಂತಿಕಾರಿಯನ್ನು ಅವನ ಸಾಮಾಜಿಕ ಹೋರಾಟದ ಮತ್ತು ಆಧ್ಯಾತ್ಮಿಕತೆಯ ಮೌಲ್ಯದ ಸಮೇತ ಪರಿಚಯಿಸಿ ಕೊಡುವ ಸಾಳುಂಖೆಯವರ ಕೃತಿಯನ್ನು ಚಂದ್ರಕಾಂತ ಪೋಕಳೆ ಕನ್ನಡಕ್ಕೆ ತಂದಿದ್ದಾರೆ. ಪುಟಪುಟದಲ್ಲೂ ನಮ್ಮ ಭಾರತದ ಧಾರ್ಮಿಕತೆಯಲ್ಲಿ ತನ್ನ ಕ್ರೌರ್ಯ ಮತ್ತು ಅಸಹನೆಯನ್ನು ಮೆರೆದ ಧಾರ್ಮಿಕಸತ್ತೆಯ ದೌರ್ಜನ್ಯದ ಅನಾವರಣವಾಗುತ್ತದೆ. ಜೊತೆಗೆ ತುಕಾರಾಮನ ಹೋರಾಟದ ಘನತೆ ಮತ್ತು ತಾತ್ವಿಕತೆಯು ಪುಟಕ್ಕಿಟ್ಟಂತೆ ಹೊಳೆಯುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗವು ಇದನ್ನು ಪ್ರಕಟಿಸಿ ಸಂತ ಯೋಧನ ಅರಿಯುವಲ್ಲಿ ಉಪಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಂತ ತುಕಾರಾಮನ ನಿಜ ಚರಿತ್ರೆಯನ್ನು ತಿಳಿಸಿರುವ ಡಾ.ಸಾಳುಂಕೆ ಮತ್ತು ಚಂದ್ರಕಾಂತ ಪೋಕಳೆಯವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...