Homeಅಂಕಣಗಳುಗಾಂಧಿ, ನೆಹರೂ, ಪಟೇಲ್ ಬಾಂಧವ್ಯದ ಬಗ್ಗೆ ಮೋದಿಗೇನು ಗೊತ್ತು....

ಗಾಂಧಿ, ನೆಹರೂ, ಪಟೇಲ್ ಬಾಂಧವ್ಯದ ಬಗ್ಗೆ ಮೋದಿಗೇನು ಗೊತ್ತು….

- Advertisement -
- Advertisement -

ಎಸ್.ಎಸ್.ದೊರೆಸ್ವಾಮಿ |

ಪ್ರಧಾನಿ ಮೋದಿ ಗುಜರಾತಿನ ನಾಯಕರತ್ನಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಾಯಿ ಪಟೇಲ್ ಇಬ್ಬರಲ್ಲಿ ಒಬ್ಬರನ್ನು ಮರೆಸುವ ಕುತಂತ್ರ ಮಾಡುತ್ತಿರುವುದು ಮತ್ತು ಮತ್ತೊಬ್ಬರನ್ನು ತಮ್ಮ ಪ್ರತಿಷ್ಠೆ ಬೆಳೆಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳುತ್ತಿರುವುದು ನಿಜಕ್ಕೂ ಹೇಯವಾದ ಕೆಲಸ.

ಮಹಾತ್ಮ ಗಾಂಧಿಯವರು ಜವಹರಲಾಲ್‌ರನ್ನು ಬೆಳೆಯಲು ಅವಕಾಶ ಮಾಡಿಕೊಟ್ಟು ಸರ್ದಾರ್ ಪಟೇಲರನ್ನು ಕಡೆಗಣಿಸಿದರು ಎಂಬ ಸುಳ್ಳು ಆಪಾದನೆ ಮೂಲಕ ಜನತೆಯ ಮೆಚ್ಚುಗೆ ಗಳಿಸಲು ಹಾಗೂ ಮತಗಳನ್ನು ಕಸಿಯಲು ಸಂಚು ಮಾಡಿದ್ದಾರೆ. ಗುಜರಾತ್‌ನಲ್ಲಿ ಪಟೇಲರ ಎತ್ತರ ಪ್ರತಿಮೆ ಸ್ಥಾಪಿಸಿದ್ದು ಕೂಡಾ ಇದರದೇ ಒಂದು ಭಾಗ.

ಇತಿಹಾಸದ ಕುರಿತು ಮೋದಿಯ ಹುಸಿಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ನಾವು ಮೊದಲು ಗಾಂಧೀಜಿ, ನೆಹರು, ಪಟೇಲರ ಸಂಬಂಧ ಹೇಗಿತ್ತು ಎಂಬುದನ್ನು ಅರಿಯಬೇಕು. ಗಾಂಧೀಜಿ ಸೆರೆಮನೆಗೆ ಹೋದಾಗಲೆಲ್ಲ ವಲ್ಲಭಭಾಯಿ ಅವರ ಜೊತೆಗೇ ಇರುತ್ತಿದ್ದರು. ಸೆರೆಮನೆಯಲ್ಲಿ ಗಾಂಧೀಜಿಯವರ ನೆರವಿಗೆಂದು ಹಾಗೆ ಮಾಡುತ್ತಿದ್ದರು. ಹೀಗಾಗಿ ಅವರಿಬ್ಬರ ಸ್ನೇಹ-ಸಂಬಂಧ ಗಾಢವಾಗಿತ್ತು. ಸರ್ದಾರ್ ಪಟೇಲರ ಧೈರ್ಯ, ಸಾಹಸ, ರಾಜಕೀಯ ಚಾಣಾಕ್ಷತನ, ಹಿಡಿದ ಕೆಲಸ ಮುಗಿಸುವ ಛಲ ಎಲ್ಲದರ ಬಗ್ಗೆ ಗಾಂಧೀಜಿಗೆ ಅಪಾರ ಮೆಚ್ಚುಗೆಯಿತ್ತು.

ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಸ್ವತಂತ್ರ ಭಾರತದ ಆಡಳಿತ ನಡೆಸಲು ದಕ್ಷರಾದ ನಾಯಕರನ್ನು ಗಾಂಧೀಜಿಯವರು ಹುಡುಕಿಕೊಳ್ಳಬೇಕಾಗಿತ್ತು. ಜವಾಹರ್‌ಲಾಲ್ ನೆಹರು ಸ್ವಾತಂತ್ರ್ಯ ಪೂರ್ವದಲ್ಲೇ ಪಾಶ್ಚಿಮಾತ್ಯ ದೇಶಗಳಲ್ಲಿ ನಡೆಯುತ್ತಿದ್ದ ಅಂತರರಾಷ್ಟ್ರೀಯ ಸಮಾರಂಭಗಳಲ್ಲಿ, ಸೆಮಿನಾರ್‌ಗಳಲ್ಲಿ ಭಾಗವಹಿಸುತ್ತಿದ್ದರು. ಅಂದಿನ ವಿಶ್ವದ ಅನೇಕ ರಾಷ್ಟ್ರಗಳ ನಾಯಕರ ಸ್ನೇಹವನ್ನು ಬೆಳೆಸಿಕೊಂಡಿದ್ದರು. ಅಲ್ಲದೆ ನೆಹರು ಅಂತರಾಷ್ಟ್ರೀಯ ಸಮಸ್ಯೆಗಳ ಅಧ್ಯಯನ ಮಾಡಿದ್ದರು. ಇದೆಲ್ಲವನ್ನೂ ತಿಳಿದ ಗಾಂಧೀಜಿ ನೆಹರು ಅವರನ್ನು ಪ್ರಧಾನಿಯನ್ನಾಗಿ ಮಾಡಲು ಬಯಸಿದರು. ಬಿಗಿಯಾಗಿ ಆಡಳಿತ ನಡೆಸುವ ಸರ್ದಾರ್ ಪಟೇಲರ ದಕ್ಷತೆಯು ಹೊಸದಾಗಿ ರೂಪುಗೊಳ್ಳುತ್ತಿರುವ ಸ್ವದೇಶಿ ಸರ್ಕಾರದ ಕೈಬಲಗೊಳಿಸಲು ಅನಿವಾರ್ಯ ಎಂಬುದನ್ನರಿತೇ ಪಟೇಲರನ್ನು ಗೃಹಮಂತ್ರಿಯಾಗಿಸಬೇಕೆಂದು ಇಚ್ಛಿಸಿದರು.

ಅದಕ್ಕೆ ಕಾರಣವೂ ಇತ್ತು. ಭಾರತದಿಂದ ಟಿಸಿಲೊಡೆದು ಪಾಕಿಸ್ತಾನ ಎಂಬ ಹೊಸ ದೇಶ ಅಸ್ತಿತ್ವಕ್ಕೆ ಬಂದೊಡನೆ ಅಲ್ಲಿದ್ದ ಮುಸ್ಲಿಮೇತರರನ್ನು ಹೊರಗಟ್ಟುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯಿತು. ಹಿಂದೂಗಳು, ಸಿಖ್ಖರು ಮುಂತಾದವರ ಆಸ್ತಿಗಳನ್ನು ವಶಪಡಿಸಿಕೊಳ್ಳುವುದು ಅವರ ಮೇಲೆ ದೌರ್ಜನ್ಯ ಮಾಡುವುದು, ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡುವುದು ಕ್ರೂರವಾಗಿ ನಡೆದುಕೊಳ್ಳುವುದು ಒಂದೇ ಸಮನೆ ನಡೆಯಿತು. ಇತ್ತ ಭಾರತದಲ್ಲೂ ಅಂತದ್ದೇ ಸನ್ನಿವೇಶಗಳು ಪ್ರತಿಫಲನಗೊಂಡವು. ದೌರ್ಜನ್ಯಕ್ಕೊಳಗಾದ ಈ ಜನ ಸಹಸ್ರಾರು ಸಂಖ್ಯೆಯಲ್ಲಿ ಜೀವ ಉಳಿಸಿಕೊಳ್ಳುವ ಏಕೈಕ ಕಾರಣಕ್ಕಾಗಿ ಪಾಕಿಸ್ತಾನದಿಂದ ಭಾರತದ ಕಡೆಗೆ, ಭಾರತದಿಂದ ಪಾಕಿಸ್ತಾನದ ಕಡೆಗೆ ಹರಿದಾಡಿದರು. ಹೀಗೆ ಭಾರತಕ್ಕೆ ಪ್ರವಾಹದೋಪಾದಿಯಲ್ಲಿ ಧಾವಿಸಿ ಬಂದ ಈ ನತದೃಷ್ಟರನ್ನು ಸಾಂತ್ವನಗೊಳಿಸುವುದು ಅವರಿಗೆ ನಿಲ್ಲಲು ನೆಲೆ ಕಲ್ಪಿಸುವುದು, ಊಟ ಉಪಚಾರಗಳ ಏರ್ಪಾಟು ಮಾಡುವುದು ಒಂದುಕಡೆಗಾದರೆ, ಭಾರತದಲ್ಲಿ ಹೊತ್ತಿ ಉರಿಯುತ್ತಿದ್ದ ಕೋಮುದಳ್ಳುರಿ ನಂದಿಸುವ ಕೆಲಸ ಮತ್ತೊಂದು ಕಡೆ ಏಕಕಾಲದಲ್ಲಿ ನಡೆಯಬೇಕಿತ್ತು. ನಿರಾಶ್ರಿತರೆಲ್ಲ ಬೆಂದು ಬೆಂಡಾದ ಜ್ವಾಲೆಯ ತುಣುಕುಗಳಂತೆ ಕಾಣುತ್ತಿದ್ದರು. ಅವರಲ್ಲಿ ಶಾಂತಿ ಮೂಡಿಸಿ ಅವರ ಉದ್ರೇಕ, ಉನ್ಮಾದಗಳನ್ನು ಸಹಿಸಿಕೊಂಡು ಅವರಿಗೆ ಸಾಂತ್ವನ ಹೇಳಿ ನಿಜ ಜೀವನಕ್ಕೆ ಅವರನ್ನು ತೊಡಗಿಸುವ ಮಹತ್ಕಾರ್ಯವನ್ನು ಜವಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲರು ಬಹಳ ಯಶಸ್ವಿಯಾಗಿ ನಿರ್ವಹಿಸಿದರು. ಕುರುಕ್ಷೇತ್ರದಲ್ಲಿ ಈ ನಿರಾಶ್ರಿತರಿಗೆಲ್ಲ ಊಟ, ವಸತಿ, ವೈದ್ಯಕೀಯ ಸಹಾಯ, ರಕ್ಷಣೆ ಎಲ್ಲವನ್ನೂ ಒದಗಿಸಿಕೊಟ್ಟ ಕೀರ್ತಿ ಇವರಿಬ್ಬರು ಮಹಾನುಭಾವರಿಗೆ ಸಂದಾಯವಾಗಬೇಕು.

ಇಂಗ್ಲಿಷರು ಸ್ವಾತಂತ್ರ್ಯ ಘೋಷಿಸಿ ಹೋಗುವ ಮುನ್ನ ಭಾರತದಲ್ಲಿರುವ 562 ರಾಜ ಮಹಾರಾಜರು, ನವಾಬರು ಸ್ವತಂತ್ರ ರಾಜ್ಯಗಳನ್ನು ರಚಿಸಿಕೊಂಡು ಇರಬಹುದು ಎಂದು ಘೋಷಿಸಿ ಹೋಗಿದ್ದರು. ಸರ್ದಾರ್ ಪಟೇಲರು ಗೃಹ ಸಚಿವರಾಗಿ ಮಾಡಿದ ಮಹತ್ತರವಾದ ಕೆಲಸ ಎಂದರೆ ಈ ೫೬೨ ಸಂಸ್ಥಾನಗಳನ್ನೂ ಸ್ವತಂತ್ರ ಭಾರತದೊಳಗೆ ವಿಲೀನಮಾಡಿದ್ದು. ಆ ಮೂಲಕ ಸಾವಿರಾರು ವರ್ಷಗಳಿಂದ ಹೋಳುಹೋಳಾಗಿದ್ದ ಭಾರತವನ್ನು ಒಂದು ಆಡಳಿತ ಘಟಕವನ್ನಾಗಿ ರೂಪಿಸಿದರು. ಪ್ರಧಾನಿ ಜೊತೆ ಅವರಿಗೆ ಸಮನ್ವಯ ಇರದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿತ್ತೇ?

ಜವಹರ್‌ಲಾಲ್ ನೆಹರು ವಿಶ್ವಶಾಂತಿ ಹಾಗೂ ನಿರ್ಲಿಪ್ತ ನೀತಿಗಳಿಗೆ ಹೆಸರಾದವರು. ವಿಶ್ವಶಾಂತಿ ನೆಲೆಸಬೇಕಾದರೆ ಎಲ್ಲ ರಾಷ್ಟ್ರಗಳೂ ಯುದ್ಧಗಳನ್ನು ನಿಷೇಧಿಸಬೇಕು, ರಾಷ್ಟ್ರರಾಷ್ಟ್ರಗಳಲ್ಲಿ ಸಖ್ಯ ಬೆಳೆಯಬೇಕು, ಒಂದು ರಾಷ್ಟ್ರದ ಕೊರತೆಯನ್ನು ಮತ್ತೊಂದು ರಾಷ್ಟ್ರ ನೀಗಬೇಕು ಎಂಬುದು ಜವಹರಲಾಲ್‌ರ ಧ್ಯೇಯವಾಗಿತ್ತು. ಅಮೆರಿಕ ಮುಂತಾದ ಎಲ್ಲ ಪ್ರಬಲ ರಾಷ್ಟ್ರಗಳೂ ಬಾಂಬುಗಳನ್ನು ತಯಾರಿಸಿ ಪೇರಿಸಿಡುವ ಕೆಲಸದಲ್ಲಿ ತೊಡಗಿದ್ದಾಗ ಭಾರತ ಬಾಂಬು ತಯಾರಿಕೆಗೆ ವಿರೋಧ ವ್ಯಕ್ತಪಡಿಸಿದ ಏಕೈಕ ರಾಷ್ಟ್ರ. Bomb is no detterant ಎಂದು ನೆಹರು ಘೋಷಣೆ ಮಾಡಿದರು.

ಜವಾಹರಲಾಲ್ ನೆಹರೂರವರ ಅಲಿಪ್ತ ನೀತಿ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮನ್ನಣೆ ತಂದುಕೊಟ್ಟಿತು. ಅವರ ಆಡಳಿತ ಕಾಲದಲ್ಲಿ ಅಮೆರಿಕ ಮತ್ತು ರಷ್ಯ ಎರಡು ಪ್ರತ್ಯೇಕ ಶಕ್ತಿ ಕೇಂದ್ರಗಳಾಗಿದ್ದವು. ಯಾವುದೇ ರಾಷ್ಟ್ರದ ನೆರವಿಗೆ ಯುದ್ಧದಲ್ಲಿ ಅಮೆರಿಕ ಕೈ ಜೋಡಿಸಿದರೆ ಅದರ ವಿರುದ್ಧ ಹೋರಾಡುವ ರಾಷ್ಟ್ರದ ನೆರೆವಿಗೆ ರಷ್ಯಾ ಧಾವಿಸುತ್ತಿತ್ತು. ಯುದ್ಧದಾಹಿ ರಾಷ್ಟ್ರಗಳು ಈ ಬಲಿಷ್ಠ ರಾಷ್ಟ್ರಗಳ ಬೆಂಬಲ ಕೋರುತ್ತಿದ್ದವು. ಜವಹರ್‌ಲಾಲ್ ನೆಹರೂರವರು ಈ ಸಂದರ್ಭದಲ್ಲಿ ಭಾರತ, ಅಮೆರಿಕ ಅಥವಾ ರಷ್ಯಾದ ಜೊತೆಗೆ ಸೇರಿಕೊಳ್ಳದೆ ತಟಸ್ಥ ರಾಷ್ಟ್ರವಾಗಿ ಉಳಿಯುವಂತೆ ನೋಡಿಕೊಂಡರು.

ಮೋದಿಯವರು ನೆಹರು, ಪಟೇಲರ ಅಧಿಕಾರದ ಅವಧಿಯ ಇತಿಹಾಸವನ್ನು ಓದಿಲ್ಲ. ಮನಸೋ ಇಚ್ಛೆ ಮಾತನಾಡಿ ನೆಹರು-ಪಟೇಲ್ ಇಬ್ಬರೂ ಶತ್ರುಗಳು; ಗಾಂಧೀಜಿಯವರು ಪಟೇಲರನ್ನು ಕಡೆಗಣಿಸಿದರು ಎನ್ನುವ ಸುಳ್ಳು ಆಪಾದನೆ ಮೂಲಕ ಈಗ ತಾವು ಸರ್ದಾರ್ ಪಟೇಲರಿಗೆ ಸಲ್ಲಬೇಕಾದ ಸ್ಥಾನವನ್ನು ಕೊಡಿಸಲು ಹೊರಟವರಂತೆ ನಡೆದುಕೊಳ್ಳುತ್ತಿದ್ದಾರೆ.

ಪ್ರಧಾನಿ ಮತ್ತು ಗೃಹಮಂತ್ರಿಯ ನಡುವೆ ತಾಳಮೇಳ ಇಲ್ಲದೇ ಹೋಗಿದ್ದರೆ, ವೈರತ್ವ ಮನೆ ಮಾಡಿಕೊಂಡಿದ್ದರೆ ಬ್ರಿಟೀಷರು ಕೋಮು ಬಾಣಲೆಯಲ್ಲಿ ಎಸೆದುಹೋಗಿದ್ದ ಭಾರತವನ್ನು ಮೇಲಕ್ಕೆತ್ತಿ ಪರಿಸ್ಥಿತಿಯನ್ನು ನಿಭಾಯಿಸಲು ಒಂದು ಅನನುಭವಿ ಸರ್ಕಾರಕ್ಕೆ ಸಾಧ್ಯವಾಗುತ್ತಿತ್ತೇ? ಸರ್ಕಾರದ ಒಳಗೇ ಆಂತರಿಕ ಸಂಘರ್ಷವಿದ್ದಿದ್ದರೆ ೫೨೬ ಪ್ರಾಂತ್ಯಗಳ ಮೇಲೆ ಹಿಡಿತ ಸಾಧಿಸಿ, ಭಾರತದಲ್ಲಿ ವಿಲೀನ ಮಾಡಿಸಲು ಸಾಧ್ಯವಿತ್ತೆ? ಇಂಥಾ ಸಾಮಾನ್ಯ ಜ್ಞಾನವೂ ಪ್ರಧಾನಿ ಮೋದಿಗಿಲ್ಲವೇ ಅಥವಾ ಇದ್ದೂ ಇಲ್ಲದಂತೆ ವರ್ತಿಸುತ್ತಿದ್ದಾರೆಯೇ..

ಈ ಎಲ್ಲ ಕಿತಾಪತಿಯ ಉದ್ದೇಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಹುದ್ದೆಯನ್ನು ಉಳಿಸಿಕೊಳ್ಳುವುದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...