Homeಅಂಕಣಗಳುಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

ಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

- Advertisement -
- Advertisement -

ಅಕ್ಟೋಬರ್ 2 ಎಂದಿನಂತೆ ಗಾಂಧೀ ಜಯಂತಿಯ ಸರಕಾರಿ ಸಂಭ್ರಮ, ಗಾಂಧೀಜಿಯ ಪರಂಪರಾಗತ ಅನುಯಾಯಿಗಳ ಅವಿಮರ್ಶಾತ್ಮಕ ಸ್ಮರಣೆಗಳು ನಡೆದು ಹೋಗುತ್ತವೆ. ಇದರ ಜೊತೆ ಗಾಂಧಿ ವಿರೋಧಿಗಳ ಅಬ್ಬರದ ಟೀಕೆಗಳು ಮುಗಿಲು ಮುಟ್ಟುತ್ತವೆ. ಸರಕಾರಿ ಸಂಭ್ರಮಗಳಿಗೆ ಈ ಹಿಂದೆಯೂ ಯಾವ ಅರ್ಥಗಳಿರಲಿಲ್ಲ, ಈಗಲೂ ಅವು ಹಾಗೆಯೇ ನಡೆದು ಮುಗಿದು ಹೋಗುತ್ತವೆ. ಇನ್ನು ಹಳಹಳಿಕೆಯ ಯಾಂತ್ರಿಕ ಗಾಂಧಿ ಸ್ಮರಣೆಗಳಿಗೆ ವರ್ತಮಾನ ಮುಖ್ಯವಾಗುವುದೇ ಇಲ್ಲ. ಸಾಮಾನ್ಯರಿಗೆ ಅನಾಯಾಸವಾಗಿ ನಿಲುಕಿಬಿಡುವ ಗಾಂಧೀಜಿಯ ಸರಳ ಬೌದ್ಧಿಕತೆಯನ್ನು ಇನ್ನೂ ಕಗ್ಗಂಟಾಗಿಸಿಬಿಡುವ ಕ್ಲೀಷೆಯ ಭಾಷಣಗಳನ್ನ ಈ ತಿಂಗಳಿಡೀ ಕೇಳಲೇಬೇಕು. ಇನ್ನು ಗಾಂಧಿಯನ್ನು ನಖಶಿಖ ದ್ವೇಷಿಸುವ ವರ್ಗದ ಬೈಗುಳಗಳೂ ಈ ಅಕ್ಟೋಬರ್ ಮಾಸದಲ್ಲಿ ಉತ್ತುಂಗಕ್ಕೇರಿಬಿಡುತ್ತವೆ. ಎಲ್ಲೋ ವಕೀಲಿಕಿ ಮಾಡಿಕೊಂಡಿದ್ದ ಕರಮಚಂದ ಗಾಂಧಿ ಆಕಸ್ಮಿಕವಾಗಿ ಸಾರ್ವಜನಿಕ ಬದುಕಿಗೆ ಬಂದು ಸ್ವಾತಂತ್ರ್ಯ ಹೋರಾಟದ ಮುಂದಾಳಾಗಿ ರೂಪಾಂತರಗೊಂಡದ್ದು ಈಗ ಚರಿತ್ರೆ. ಗಾಂಧೀಜಿ ಹೀಗೆ ಸಾರ್ವಜನಿಕ ಬದುಕಲ್ಲಿದ್ದದ್ದು ಕೆಲವು ದಶಕಗಳು ಮಾತ್ರ. ಈ ಕಾಲಘಟ್ಟದಲ್ಲಿ ಗಾಂಧೀಜಿ ಸಾವಿರಾರು ರಾಜಕೀಯ ಸಂದಿಗ್ಧಗಳನ್ನು ಎದುರಿಸಿದ್ದಾರೆ.
ಪ್ರಖರ ಸೂರ್ಯನÀ ತರ ಜ್ವಲಿಸುತ್ತಿದ್ದ ಅಂಬೇಡ್ಕರ್, ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಪೆರಿಯಾರ್‍ರಂತಹ ಜೊತೆಗಾರರ ಪ್ರಭಾವಲಯಗಳಲ್ಲಿ ಕೆಲವು ಸಲ ಗಾಂಧಿ ಪೇಲವವಾಗಿ ಕಂಡಿದ್ದಾರೆ. ಈ ಜೊತೆಗಾರರು ಮುಂದಿರಿಸುತ್ತಿದ್ದ ಚಾರಿತ್ರಿಕ ಪ್ರಶ್ನೆಗಳಿಗೆ ಗಾಂಧೀಜಿ ನಿರುತ್ತರರೂ ಆಗಿದ್ದಾರೆ. ಆದರೆ, ದೇಶದ ರಾಜಕೀಯ ಗುಲಾಮಗಿರಿ, ಅಸಮಾನ ವಿಷಮ ಸಾಮಾಜಿಕ ಸಂದರ್ಭ, ಕೋಮು ಅಸಹನೆಯ ತಲ್ಲಣಗಳಲ್ಲಿ ಗಾಂಧೀಜಿ ಕಳೆದು ಹೋಗಲಿಲ್ಲ. ಈ ಎಲ್ಲ ಸಂಗತಿಗಳಿಂದ ಗಾಂಧೀಜಿ ವಿದ್ಯಾರ್ಥಿಯಂತೆ ಕಲಿತರು, ಜೊತೆಗೆ ಕಲಿಸಲು ಮುಂದಾದರು. ಇದೆಲ್ಲಕ್ಕಿಂತ ಹೆಚ್ಚಾಗಿ ಗಾಂಧೀಜಿ ಜನರ ನಡುವೆ ಬದುಕಿದರು. ಅದು ಬಿರ್ಲಾನ ಅತಿಥಿಗೃಹವೇ ಇರಲಿ, ಚಂಪಾರಣ್ ಹೋರಾಟವೇ ಇರಲಿ, ಕೋಮು ಅಸಹನೆಯಿಂದ ಧಗಧಗ ಉರಿಯುತ್ತಿದ್ದ ಕಲ್ಕತ್ತಾದ ರಸ್ತೆಗಳೇ ಇರಲಿ, ಗಾಂಧೀಜಿ ತಾನು ಪ್ರೀತಿಸುತ್ತಿದ್ದ `ಜನಸಾಮಾನ್ಯ’ರ ಜೊತೆ ನಿಂತುಕೊಂಡರು. ಅಡುಗೆಗೆ ನಿತ್ಯ ಬಳಸುವ ಉಪ್ಪು, ಸಾಮಾನ್ಯರಿಗೆ ಸುಲಭವಾಗಿ ದಕ್ಕಬೇಕು ಎಂಬುದರಿಂದ ಹಿಡಿದು, ಇಂಗ್ಲೆಂಡಿನಿಂದ ಬರುತ್ತಿದ್ದ ಉನ್ನತ ಮಟ್ಟದ ನಿಯೋಗಗಳ ಮುಂದೆ ತಾನು ಪ್ರೀತಿಸುವ ದೇಶದ ವಿಮೋಚನೆಗೆ ವಾದ ಮಂಡಿಸುವವರೆಗೆ ಗಾಂಧೀಜಿಯ ರಾಜಕೀಯ ವ್ಯಕ್ತಿತ್ವದ ಹರವು ವಿಸ್ತರಿಸಿಕೊಂಡಿತ್ತು.
ವಸಾಹತು ಆಡಳಿತ ವಿಧಿಸಿದ್ದ ವಿಪರೀತ ಕಂದಾಯವನ್ನು ಕಟ್ಟದೆ ಭೂಮಿ ಕಳೆದುಕೊಂಡಿದ್ದ ರೈತರು, ಅಸ್ಪøಶ್ಯತೆಯ ಹೀನಾಯ ಆಚರಣೆಯಲ್ಲಿ ನಲುಗುತ್ತಿದ್ದ ದಲಿತ ಸಮುದಾಯಗಳು, ಕೈಗಾರಕೀರಣದಿಂದ ಕುಲಕಸಬುಗಳನ್ನು ಕಳೆದುಕೊಂಡು ದಿಕ್ಕೆಟ್ಟುಹೋಗಿದ್ದ ಕರಕುಶಲ ಕರ್ಮಿಗಳು, ಯಾವ ಹಕ್ಕುಗಳೂ ಇಲ್ಲದ ಮಹಿಳೆಯರು, ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದ ಅಲೆಮಾರಿ ಸಮುದಾಯಗಳು, ಎರಡನೇ ದರ್ಜೆಯ ಪ್ರಜೆಗಳೇ ಆಗಿ ಪರಿಗಣಿಸಲ್ಪಟ್ಟಿದ್ದ ಮುಸಲ್ಮಾನರು……. ಒಟ್ಟಾರೆ ಇಂಡಿಯಾದ ಬಹುಸಂಖ್ಯಾತ ದುಡಿವ ಸಮುದಾಯಗಳು ತಲ್ಲಣಗಳಲ್ಲಿಯೇ ಇದ್ದ ನಿಕೃಷ್ಟ ರಾಜಕೀಯ ಸಂದರ್ಭವದು. ಮೋಹನ ಕರಮಚಂದ ಗಾಂಧಿ ಎಂಬ ಗುಜರಾತಿ ಬನಿಯಾ ಸಮುದಾಯದ ವ್ಯಕ್ತಿಯ ಮುಂದೆ ಇದ್ದ ಸವಾಲುಗಳವು. ಇಂತಹ ಚಾರಿತ್ರಿಕ ಸಮಸ್ಯೆಗಳಿಗೆ ತಟ್ಟನೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ? ಶತಮಾನಗಳ ಕಾಲ ಆಚರಣೆಯಲ್ಲಿದ್ದ ಜ್ವಲಂತ ಪಿಡುಗುಗಳಿಂದ ಶೋಷಿತರನ್ನು ವಿಮೋಚನೆಗೊಳಿಸಲು ಸಾಧ್ಯವೇ? ದುರಾಶೆಯ ಊಳಿಗಮಾನ್ಯ ವ್ಯವಸ್ಥೆ, ಅಮಾನವೀಯವಾಗಿ ಬೆಳೆದು ನಿಂತಿದ್ದ ಜಾತಿ ಅಸಹನೆ, ವಿಷಾನಿಲದಂತೆ ಪಸರಿಸುತ್ತಿದ್ದ ಕೋಮುವಾದಗಳ ನಡುವೆ ದೇಶಕ್ಕೆ ಮತ್ತು ಶೋಷಿತ ಸಮುದಾಯಗಳೆರಡಕ್ಕೂ ವಿಮೋಚನೆಯ ಅಗತ್ಯವಿತ್ತು. ಇಂತಹ ತಲ್ಲಣದ ಸಂದರ್ಭದಲ್ಲಿ ಗಾಂಧಿಯ ಮೇಲೆ ನಿರೀಕ್ಷೆಗಳ ಭಾರಜಲವೂ ಸುರಿಯುತ್ತಿತ್ತು. ಇಂತಹ ಸಂದರ್ಭದಲ್ಲಿ ಅಂದಿನ ನಲವತ್ತು ಕೋಟಿ ಜನರ ಮುಂದಾಳು ಎಂದೇ ಪರಿಗಣಿಸಲ್ಪಟ್ಟಿದ್ದ ಗಾಂಧೀಜಿ ಎಂತಹ ಸಂದಿಗ್ಧಗಳನ್ನು ಎದುರಿಸಿರಬಹುದು? ಗಾಂಧಿ ಎಂಬ ಮನುಷ್ಯನನ್ನು ಆತನ ಕಾಲಘಟ್ಟದ ಈ ಎಲ್ಲ ರಾಜಕೀಯ ಸಂದಿಗ್ಧಗಳ ಮೂಲಕವೇ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಆದರೆ, ಈಗ ನಡೆಯುತ್ತಿರುವ ಗಾಂಧೀಜಿಯ ನಿಂದನೆ ಮತ್ತು ಭಜನೆಗಳಿಗೆ ಇಂತಹ ಸೂಕ್ಷ್ಮಗಳಿಲ್ಲ. ಕಪ್ಪು ಬಿಳುಪಿನ ಲೆಕ್ಕಾಚಾರಗಳಿಗೆ ಚರಿತ್ರೆಯ ಹಂಗುಗಳಿರುವುದಿಲ್ಲ. ಗಾಂಧೀಜಿಯ ಒಟ್ಟಾರೆಯ ಬೌದ್ಧಿಕ ನಿಲುವುಗಳು ಅವರ ಎಣೆ ಇಲ್ಲದ ಆಕ್ಟಿವಿಸಮ್‍ನಿಂದ ರೂಪುಗೊಳ್ಳುತ್ತಾ ಬಂದಿವೆ. ಗಾಂಧೀಜಿಯ ಬೌದ್ಧಿಕತೆಯನ್ನು ಅವರ ಶ್ರಮದಾಯಕ ಆಕ್ಟಿವಿಸಮ್‍ನ ಮೂಲಕ ಅರ್ಥಮಾಡಿಕೊಳ್ಳಬೇಕು. ಹಾಗೆಂದು ಗಾಂಧೀಜಿಯ ನಿಲುವುಗಳೆಲ್ಲ ಪರಿಪೂರ್ಣವಾಗಿವೆ ಎಂದೇನಲ್ಲ, ಅವಕ್ಕೆ ಹಲವು ಮಿತಿಗಳಿವೆ, ಕೆಲವೊಮ್ಮೆ ಅವು ಫಾಶ್ರ್ವಿಕವೂ (ಸೆಕ್ಟೇರಿಯನ್) ಸಹ ಆಗಿವೆ. ಆದರೆ ಆ ನಿಲುವುಗಳು ಜನಸಮುದಾಯಗಳ ಜೊತೆಗಿನ ಸಾವಯವ ಸಂಬಂಧಗಳಿಂದ ಅಸ್ತಿತ್ವಕ್ಕೆ ಬಂದಂತವುಗಳೇ ಆಗಿವೆ. ಒಂದು ಅರ್ಥದಲ್ಲಿ ಗಾಂಧೀಜಿಯ ರಾಜಕೀಯ ನಿಲುವುಗಳನ್ನು ಅವರ ಸಾರ್ವಜನಿಕ ಬದುಕನ್ನು ಹೊರತಾಗಿಸಿ ನೋಡಲು ಸಾಧ್ಯವಿಲ್ಲ. ಈ ದೇಶದ ಸಾಮಾನ್ಯ ಜನರ ನಡುವೆ ಬೇರೆಯದೇ ಇದ್ದರೆ ಗಾಂಧೀಜಿ ಎಂಬ ವ್ಯಕ್ತಿತ್ವವಾಗಲಿ, ಗಾಂಧಿಯ ಚಿಂತನೆಗಳಾಗಲಿ ಅಸ್ತಿತ್ವಕ್ಕೇ ಬರುತ್ತಿರಲಿಲ್ಲ.
ಒಂದು ಸಾಮಾಜಿಕ ಅಸಮಾನತೆಯನ್ನು ಪ್ರತಿರೋಧಿಸುವ ಮೂಲಕ ಬ್ಯಾರಿಸ್ಟರ್ ಆಗಿದ್ದ ಕರಮಚಂದರು, ಗಾಂಧೀಜಿಯಾಗಿ ರೂಪಾಂತರಗೊಂಡರು. ಈ ದೇಶದ ಅಸಹನೀಯ ರಾಜಕೀಯ ಸನ್ನಿವೇಶದಲ್ಲಿ, ಇಂತಹ ಸಾಮಾಜಿಕ ವಿಷಮತೆಯ ವಿರುದ್ಧ ಹೋರಾಡುತ್ತಲೇ ಗಾಂಧೀಜಿ ಮತ್ತೆಮತ್ತೆ ರೂಪುಗೊಳ್ಳುತ್ತಾ ಹೋದರು. ದೇಶದ ಎಲ್ಲ ಜನರ ನಡುವೆ ಸಂಪರ್ಕ ಸೇತುವನ್ನು ನಿರ್ಮಾಣ ಮಾಡುವ ಪ್ರಯತ್ನದಲ್ಲಿರುವಾಗ, ನಿರ್ಮಾಣಗಳನ್ನು ಸ್ಪೋಟಿಸುವ ನಿಕೃಷ್ಟರ ಪ್ರತಿನಿಧಿಯೊಬ್ಬನಿಂದ ಗಾಂಧಿ ಕೊಲ್ಲಲ್ಪಟ್ಟರು. ಗಾಂಧೀಜಿ ಹೇಗೆ ಬದುಕಿದ್ದರು, ಏನು ಚಿಂತಿಸಿದರು ಎಂಬುದರ ಜೊತೆಗೆ, `ನಮ್ಮ’ ವೈರಿಯೊಬ್ಬನಿಂದ ಗಾಂಧಿ ಹತರಾದರು ಎಂಬುದೂ ನಮಗೆ ಮುಖ್ಯವಾಗಬೇಕು. ಗಾಂಧಿಯ ಚಿಂತನೆಗಳು ತನ್ನೆಲ್ಲ ಮಿತಿಗಳ ನಡುವೆ ಬಹುಸಂಖ್ಯಾತ ದುಡಿವ ಸಮುದಾಯಗಳ ವೈರಿಗಳಿಗೆ ಬಳಕೆಯಾಗಲಿಲ್ಲ. ಗಾಂಧಿ ತತ್ವಗಳು ಪ್ರಭುತ್ವಕ್ಕೆ ಬಂಡವಾಳವಾಗಲಿಲ್ಲ. (ಆದರೆ, ಗಾಂಧಿಯ ಫೋಟೋ, ಆತನ ಕನ್ನಡಕ, ಚರಕ ಮತ್ತು ಚರಿಷ್ಮಾಗಳು ಆಳುವ ವರ್ಗಗಳಿಗೆ ಬಂಡವಾಳವಾದವು) ಗಾಂಧಿಯನ್ನು ಕೊಂದ `ಆ ಜನ’ ಗೋಡ್ಸೆಗೆ ದೇವಾಲಯ ಕಟ್ಟುತ್ತಿದ್ದಾರೆ, ಗಾಂಧೀಜಿಯ ಚಿಂತನೆಗಳನ್ನು ಆತ ಹುಟ್ಟಿದ ನೆಲದಿಂದಲೇ ಮೂಲೋತ್ಪಾಟನೆ ಮಾಡಿದವರು ದೇಶವನ್ನು ಫ್ಯಾಸಿಸಮ್ ಕಡೆಗೆ ಕೊಂಡೊಯ್ಯುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಗಾಂಧೀಜಿಯನ್ನು ಅವರ ಎಲ್ಲ ಮಿತಿಗಳ ನಡುವೆ ನಾವು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ಹಾಗೆಂದು ನಾವು ಭಾವುಕವಾಗಿ ಗಾಂಧಿಯನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಶೋಷಿತ ಸಮುದಾಯಗಳ ಕುರಿತು ಭಾವುಕವಾಗಿ ಯೋಚಿಸುತ್ತಲೇ ಅವರು ನಮ್ಮ ಮೇಲೆ ಹೇರಿದ ಪೂನಾ ಒಪ್ಪಂದವನ್ನು ಖಾರವಾಗಿಯೇ ಪ್ರಶ್ನಿಸೋಣ. ಗಾಂಧಿಯ ಟ್ರಸ್ಟಿಷಿಪ್ ಚಿಂತನೆಗಳನ್ನು, ಅವರು ತಮ್ಮ ಸೈದ್ಧಾಂತಿಕ ವಿರೋಧಿಗಳನ್ನು (ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಅಂಬೇಡ್ಕರ್ ಮುಂತಾದವರನ್ನು) ನಡೆಸಿಕೊಂಡ ರೀತಿಯನ್ನು ನಾವು ವಿರೋಧಿಸೋಣ. ಆದರೆ ಇಡಿಯಾಗಿ ಗಾಂಧಿಯನ್ನಲ್ಲ.
ಪೂನಾ ಒಪ್ಪಂದದ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಮೀಸಲಿಡುವುದನ್ನು ವಿರೋಧಿಸಿ ಗಾಂಧಿ ಉಪವಾಸ ಕೂಡುತ್ತಾರೆ. ದಿನಕಳೆದಂತೆ ಗಾಂಧೀಜಿಯ ಆರೋಗ್ಯ ಕ್ಷೀಣಿಸುವುದನ್ನು ನೋಡಿದ ಬಾಬಾ ಸಾಹೇಬರು ವಿಧಿ ಇಲ್ಲದೆ ಪೂನಾ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ತಾವು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರಗಳ ನಿಲುವುನ್ನು ಬಾಬಾ ಸಾಹೇಬರು ಗಾಂಧೀಜಿಯನ್ನು ಉಳಿಸಿಕೊಳ್ಳುವ ಕಾರಣಕ್ಕಾಗಿ ಸಡಿಲಿಸುತ್ತಾರೆ. ಹಾಗೆಂದು ನಮ್ಮ ಹಕ್ಕುಗಳನ್ನು ಬಲಿಗೊಡಬೇಕೆಂದೇನೂ ಇಲ್ಲ. ಹಕ್ಕುಗಳಿಗೆ ಹೋರಾಡುವ ನಮಗೆÉ ಬಾಬಾ ಸಾಹೇಬರ ಅಂತರ್ಸತ್ವ, ಅವರ ತಾಯ್ತನದ ಅಂತಃಕರಣ ಮತ್ತು ರಚನಾತ್ಮಕ ಪ್ರತಿಚಿಂತನೆಗಳೇ ಮಾದರಿ. ನಿಷ್ಪ್ರಯೋಜಕ ಮೂರ್ತಿಭಂಜಕ ಪ್ರವೃತ್ತಿ ಮತ್ತು ಅಂತಃಕರಣದ ಸ್ಪರ್ಶವಿಲ್ಲದ ಟೀಕೆಗಳು ನಮ್ಮನ್ನು ರಾಜಕೀಯ ಅಸೂಕ್ಷ್ಮರನ್ನಾಗಿಸುವ ಜೊತೆಗೆ ನಮ್ಮಲ್ಲಿನ ಮನುಷ್ಯನನ್ನೂ ಕೊಲ್ಲುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...