Homeಅಂಕಣಗಳುಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

ಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

- Advertisement -
- Advertisement -

ಅಕ್ಟೋಬರ್ 2 ಎಂದಿನಂತೆ ಗಾಂಧೀ ಜಯಂತಿಯ ಸರಕಾರಿ ಸಂಭ್ರಮ, ಗಾಂಧೀಜಿಯ ಪರಂಪರಾಗತ ಅನುಯಾಯಿಗಳ ಅವಿಮರ್ಶಾತ್ಮಕ ಸ್ಮರಣೆಗಳು ನಡೆದು ಹೋಗುತ್ತವೆ. ಇದರ ಜೊತೆ ಗಾಂಧಿ ವಿರೋಧಿಗಳ ಅಬ್ಬರದ ಟೀಕೆಗಳು ಮುಗಿಲು ಮುಟ್ಟುತ್ತವೆ. ಸರಕಾರಿ ಸಂಭ್ರಮಗಳಿಗೆ ಈ ಹಿಂದೆಯೂ ಯಾವ ಅರ್ಥಗಳಿರಲಿಲ್ಲ, ಈಗಲೂ ಅವು ಹಾಗೆಯೇ ನಡೆದು ಮುಗಿದು ಹೋಗುತ್ತವೆ. ಇನ್ನು ಹಳಹಳಿಕೆಯ ಯಾಂತ್ರಿಕ ಗಾಂಧಿ ಸ್ಮರಣೆಗಳಿಗೆ ವರ್ತಮಾನ ಮುಖ್ಯವಾಗುವುದೇ ಇಲ್ಲ. ಸಾಮಾನ್ಯರಿಗೆ ಅನಾಯಾಸವಾಗಿ ನಿಲುಕಿಬಿಡುವ ಗಾಂಧೀಜಿಯ ಸರಳ ಬೌದ್ಧಿಕತೆಯನ್ನು ಇನ್ನೂ ಕಗ್ಗಂಟಾಗಿಸಿಬಿಡುವ ಕ್ಲೀಷೆಯ ಭಾಷಣಗಳನ್ನ ಈ ತಿಂಗಳಿಡೀ ಕೇಳಲೇಬೇಕು. ಇನ್ನು ಗಾಂಧಿಯನ್ನು ನಖಶಿಖ ದ್ವೇಷಿಸುವ ವರ್ಗದ ಬೈಗುಳಗಳೂ ಈ ಅಕ್ಟೋಬರ್ ಮಾಸದಲ್ಲಿ ಉತ್ತುಂಗಕ್ಕೇರಿಬಿಡುತ್ತವೆ. ಎಲ್ಲೋ ವಕೀಲಿಕಿ ಮಾಡಿಕೊಂಡಿದ್ದ ಕರಮಚಂದ ಗಾಂಧಿ ಆಕಸ್ಮಿಕವಾಗಿ ಸಾರ್ವಜನಿಕ ಬದುಕಿಗೆ ಬಂದು ಸ್ವಾತಂತ್ರ್ಯ ಹೋರಾಟದ ಮುಂದಾಳಾಗಿ ರೂಪಾಂತರಗೊಂಡದ್ದು ಈಗ ಚರಿತ್ರೆ. ಗಾಂಧೀಜಿ ಹೀಗೆ ಸಾರ್ವಜನಿಕ ಬದುಕಲ್ಲಿದ್ದದ್ದು ಕೆಲವು ದಶಕಗಳು ಮಾತ್ರ. ಈ ಕಾಲಘಟ್ಟದಲ್ಲಿ ಗಾಂಧೀಜಿ ಸಾವಿರಾರು ರಾಜಕೀಯ ಸಂದಿಗ್ಧಗಳನ್ನು ಎದುರಿಸಿದ್ದಾರೆ.
ಪ್ರಖರ ಸೂರ್ಯನÀ ತರ ಜ್ವಲಿಸುತ್ತಿದ್ದ ಅಂಬೇಡ್ಕರ್, ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಪೆರಿಯಾರ್‍ರಂತಹ ಜೊತೆಗಾರರ ಪ್ರಭಾವಲಯಗಳಲ್ಲಿ ಕೆಲವು ಸಲ ಗಾಂಧಿ ಪೇಲವವಾಗಿ ಕಂಡಿದ್ದಾರೆ. ಈ ಜೊತೆಗಾರರು ಮುಂದಿರಿಸುತ್ತಿದ್ದ ಚಾರಿತ್ರಿಕ ಪ್ರಶ್ನೆಗಳಿಗೆ ಗಾಂಧೀಜಿ ನಿರುತ್ತರರೂ ಆಗಿದ್ದಾರೆ. ಆದರೆ, ದೇಶದ ರಾಜಕೀಯ ಗುಲಾಮಗಿರಿ, ಅಸಮಾನ ವಿಷಮ ಸಾಮಾಜಿಕ ಸಂದರ್ಭ, ಕೋಮು ಅಸಹನೆಯ ತಲ್ಲಣಗಳಲ್ಲಿ ಗಾಂಧೀಜಿ ಕಳೆದು ಹೋಗಲಿಲ್ಲ. ಈ ಎಲ್ಲ ಸಂಗತಿಗಳಿಂದ ಗಾಂಧೀಜಿ ವಿದ್ಯಾರ್ಥಿಯಂತೆ ಕಲಿತರು, ಜೊತೆಗೆ ಕಲಿಸಲು ಮುಂದಾದರು. ಇದೆಲ್ಲಕ್ಕಿಂತ ಹೆಚ್ಚಾಗಿ ಗಾಂಧೀಜಿ ಜನರ ನಡುವೆ ಬದುಕಿದರು. ಅದು ಬಿರ್ಲಾನ ಅತಿಥಿಗೃಹವೇ ಇರಲಿ, ಚಂಪಾರಣ್ ಹೋರಾಟವೇ ಇರಲಿ, ಕೋಮು ಅಸಹನೆಯಿಂದ ಧಗಧಗ ಉರಿಯುತ್ತಿದ್ದ ಕಲ್ಕತ್ತಾದ ರಸ್ತೆಗಳೇ ಇರಲಿ, ಗಾಂಧೀಜಿ ತಾನು ಪ್ರೀತಿಸುತ್ತಿದ್ದ `ಜನಸಾಮಾನ್ಯ’ರ ಜೊತೆ ನಿಂತುಕೊಂಡರು. ಅಡುಗೆಗೆ ನಿತ್ಯ ಬಳಸುವ ಉಪ್ಪು, ಸಾಮಾನ್ಯರಿಗೆ ಸುಲಭವಾಗಿ ದಕ್ಕಬೇಕು ಎಂಬುದರಿಂದ ಹಿಡಿದು, ಇಂಗ್ಲೆಂಡಿನಿಂದ ಬರುತ್ತಿದ್ದ ಉನ್ನತ ಮಟ್ಟದ ನಿಯೋಗಗಳ ಮುಂದೆ ತಾನು ಪ್ರೀತಿಸುವ ದೇಶದ ವಿಮೋಚನೆಗೆ ವಾದ ಮಂಡಿಸುವವರೆಗೆ ಗಾಂಧೀಜಿಯ ರಾಜಕೀಯ ವ್ಯಕ್ತಿತ್ವದ ಹರವು ವಿಸ್ತರಿಸಿಕೊಂಡಿತ್ತು.
ವಸಾಹತು ಆಡಳಿತ ವಿಧಿಸಿದ್ದ ವಿಪರೀತ ಕಂದಾಯವನ್ನು ಕಟ್ಟದೆ ಭೂಮಿ ಕಳೆದುಕೊಂಡಿದ್ದ ರೈತರು, ಅಸ್ಪøಶ್ಯತೆಯ ಹೀನಾಯ ಆಚರಣೆಯಲ್ಲಿ ನಲುಗುತ್ತಿದ್ದ ದಲಿತ ಸಮುದಾಯಗಳು, ಕೈಗಾರಕೀರಣದಿಂದ ಕುಲಕಸಬುಗಳನ್ನು ಕಳೆದುಕೊಂಡು ದಿಕ್ಕೆಟ್ಟುಹೋಗಿದ್ದ ಕರಕುಶಲ ಕರ್ಮಿಗಳು, ಯಾವ ಹಕ್ಕುಗಳೂ ಇಲ್ಲದ ಮಹಿಳೆಯರು, ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದ ಅಲೆಮಾರಿ ಸಮುದಾಯಗಳು, ಎರಡನೇ ದರ್ಜೆಯ ಪ್ರಜೆಗಳೇ ಆಗಿ ಪರಿಗಣಿಸಲ್ಪಟ್ಟಿದ್ದ ಮುಸಲ್ಮಾನರು……. ಒಟ್ಟಾರೆ ಇಂಡಿಯಾದ ಬಹುಸಂಖ್ಯಾತ ದುಡಿವ ಸಮುದಾಯಗಳು ತಲ್ಲಣಗಳಲ್ಲಿಯೇ ಇದ್ದ ನಿಕೃಷ್ಟ ರಾಜಕೀಯ ಸಂದರ್ಭವದು. ಮೋಹನ ಕರಮಚಂದ ಗಾಂಧಿ ಎಂಬ ಗುಜರಾತಿ ಬನಿಯಾ ಸಮುದಾಯದ ವ್ಯಕ್ತಿಯ ಮುಂದೆ ಇದ್ದ ಸವಾಲುಗಳವು. ಇಂತಹ ಚಾರಿತ್ರಿಕ ಸಮಸ್ಯೆಗಳಿಗೆ ತಟ್ಟನೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ? ಶತಮಾನಗಳ ಕಾಲ ಆಚರಣೆಯಲ್ಲಿದ್ದ ಜ್ವಲಂತ ಪಿಡುಗುಗಳಿಂದ ಶೋಷಿತರನ್ನು ವಿಮೋಚನೆಗೊಳಿಸಲು ಸಾಧ್ಯವೇ? ದುರಾಶೆಯ ಊಳಿಗಮಾನ್ಯ ವ್ಯವಸ್ಥೆ, ಅಮಾನವೀಯವಾಗಿ ಬೆಳೆದು ನಿಂತಿದ್ದ ಜಾತಿ ಅಸಹನೆ, ವಿಷಾನಿಲದಂತೆ ಪಸರಿಸುತ್ತಿದ್ದ ಕೋಮುವಾದಗಳ ನಡುವೆ ದೇಶಕ್ಕೆ ಮತ್ತು ಶೋಷಿತ ಸಮುದಾಯಗಳೆರಡಕ್ಕೂ ವಿಮೋಚನೆಯ ಅಗತ್ಯವಿತ್ತು. ಇಂತಹ ತಲ್ಲಣದ ಸಂದರ್ಭದಲ್ಲಿ ಗಾಂಧಿಯ ಮೇಲೆ ನಿರೀಕ್ಷೆಗಳ ಭಾರಜಲವೂ ಸುರಿಯುತ್ತಿತ್ತು. ಇಂತಹ ಸಂದರ್ಭದಲ್ಲಿ ಅಂದಿನ ನಲವತ್ತು ಕೋಟಿ ಜನರ ಮುಂದಾಳು ಎಂದೇ ಪರಿಗಣಿಸಲ್ಪಟ್ಟಿದ್ದ ಗಾಂಧೀಜಿ ಎಂತಹ ಸಂದಿಗ್ಧಗಳನ್ನು ಎದುರಿಸಿರಬಹುದು? ಗಾಂಧಿ ಎಂಬ ಮನುಷ್ಯನನ್ನು ಆತನ ಕಾಲಘಟ್ಟದ ಈ ಎಲ್ಲ ರಾಜಕೀಯ ಸಂದಿಗ್ಧಗಳ ಮೂಲಕವೇ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಆದರೆ, ಈಗ ನಡೆಯುತ್ತಿರುವ ಗಾಂಧೀಜಿಯ ನಿಂದನೆ ಮತ್ತು ಭಜನೆಗಳಿಗೆ ಇಂತಹ ಸೂಕ್ಷ್ಮಗಳಿಲ್ಲ. ಕಪ್ಪು ಬಿಳುಪಿನ ಲೆಕ್ಕಾಚಾರಗಳಿಗೆ ಚರಿತ್ರೆಯ ಹಂಗುಗಳಿರುವುದಿಲ್ಲ. ಗಾಂಧೀಜಿಯ ಒಟ್ಟಾರೆಯ ಬೌದ್ಧಿಕ ನಿಲುವುಗಳು ಅವರ ಎಣೆ ಇಲ್ಲದ ಆಕ್ಟಿವಿಸಮ್‍ನಿಂದ ರೂಪುಗೊಳ್ಳುತ್ತಾ ಬಂದಿವೆ. ಗಾಂಧೀಜಿಯ ಬೌದ್ಧಿಕತೆಯನ್ನು ಅವರ ಶ್ರಮದಾಯಕ ಆಕ್ಟಿವಿಸಮ್‍ನ ಮೂಲಕ ಅರ್ಥಮಾಡಿಕೊಳ್ಳಬೇಕು. ಹಾಗೆಂದು ಗಾಂಧೀಜಿಯ ನಿಲುವುಗಳೆಲ್ಲ ಪರಿಪೂರ್ಣವಾಗಿವೆ ಎಂದೇನಲ್ಲ, ಅವಕ್ಕೆ ಹಲವು ಮಿತಿಗಳಿವೆ, ಕೆಲವೊಮ್ಮೆ ಅವು ಫಾಶ್ರ್ವಿಕವೂ (ಸೆಕ್ಟೇರಿಯನ್) ಸಹ ಆಗಿವೆ. ಆದರೆ ಆ ನಿಲುವುಗಳು ಜನಸಮುದಾಯಗಳ ಜೊತೆಗಿನ ಸಾವಯವ ಸಂಬಂಧಗಳಿಂದ ಅಸ್ತಿತ್ವಕ್ಕೆ ಬಂದಂತವುಗಳೇ ಆಗಿವೆ. ಒಂದು ಅರ್ಥದಲ್ಲಿ ಗಾಂಧೀಜಿಯ ರಾಜಕೀಯ ನಿಲುವುಗಳನ್ನು ಅವರ ಸಾರ್ವಜನಿಕ ಬದುಕನ್ನು ಹೊರತಾಗಿಸಿ ನೋಡಲು ಸಾಧ್ಯವಿಲ್ಲ. ಈ ದೇಶದ ಸಾಮಾನ್ಯ ಜನರ ನಡುವೆ ಬೇರೆಯದೇ ಇದ್ದರೆ ಗಾಂಧೀಜಿ ಎಂಬ ವ್ಯಕ್ತಿತ್ವವಾಗಲಿ, ಗಾಂಧಿಯ ಚಿಂತನೆಗಳಾಗಲಿ ಅಸ್ತಿತ್ವಕ್ಕೇ ಬರುತ್ತಿರಲಿಲ್ಲ.
ಒಂದು ಸಾಮಾಜಿಕ ಅಸಮಾನತೆಯನ್ನು ಪ್ರತಿರೋಧಿಸುವ ಮೂಲಕ ಬ್ಯಾರಿಸ್ಟರ್ ಆಗಿದ್ದ ಕರಮಚಂದರು, ಗಾಂಧೀಜಿಯಾಗಿ ರೂಪಾಂತರಗೊಂಡರು. ಈ ದೇಶದ ಅಸಹನೀಯ ರಾಜಕೀಯ ಸನ್ನಿವೇಶದಲ್ಲಿ, ಇಂತಹ ಸಾಮಾಜಿಕ ವಿಷಮತೆಯ ವಿರುದ್ಧ ಹೋರಾಡುತ್ತಲೇ ಗಾಂಧೀಜಿ ಮತ್ತೆಮತ್ತೆ ರೂಪುಗೊಳ್ಳುತ್ತಾ ಹೋದರು. ದೇಶದ ಎಲ್ಲ ಜನರ ನಡುವೆ ಸಂಪರ್ಕ ಸೇತುವನ್ನು ನಿರ್ಮಾಣ ಮಾಡುವ ಪ್ರಯತ್ನದಲ್ಲಿರುವಾಗ, ನಿರ್ಮಾಣಗಳನ್ನು ಸ್ಪೋಟಿಸುವ ನಿಕೃಷ್ಟರ ಪ್ರತಿನಿಧಿಯೊಬ್ಬನಿಂದ ಗಾಂಧಿ ಕೊಲ್ಲಲ್ಪಟ್ಟರು. ಗಾಂಧೀಜಿ ಹೇಗೆ ಬದುಕಿದ್ದರು, ಏನು ಚಿಂತಿಸಿದರು ಎಂಬುದರ ಜೊತೆಗೆ, `ನಮ್ಮ’ ವೈರಿಯೊಬ್ಬನಿಂದ ಗಾಂಧಿ ಹತರಾದರು ಎಂಬುದೂ ನಮಗೆ ಮುಖ್ಯವಾಗಬೇಕು. ಗಾಂಧಿಯ ಚಿಂತನೆಗಳು ತನ್ನೆಲ್ಲ ಮಿತಿಗಳ ನಡುವೆ ಬಹುಸಂಖ್ಯಾತ ದುಡಿವ ಸಮುದಾಯಗಳ ವೈರಿಗಳಿಗೆ ಬಳಕೆಯಾಗಲಿಲ್ಲ. ಗಾಂಧಿ ತತ್ವಗಳು ಪ್ರಭುತ್ವಕ್ಕೆ ಬಂಡವಾಳವಾಗಲಿಲ್ಲ. (ಆದರೆ, ಗಾಂಧಿಯ ಫೋಟೋ, ಆತನ ಕನ್ನಡಕ, ಚರಕ ಮತ್ತು ಚರಿಷ್ಮಾಗಳು ಆಳುವ ವರ್ಗಗಳಿಗೆ ಬಂಡವಾಳವಾದವು) ಗಾಂಧಿಯನ್ನು ಕೊಂದ `ಆ ಜನ’ ಗೋಡ್ಸೆಗೆ ದೇವಾಲಯ ಕಟ್ಟುತ್ತಿದ್ದಾರೆ, ಗಾಂಧೀಜಿಯ ಚಿಂತನೆಗಳನ್ನು ಆತ ಹುಟ್ಟಿದ ನೆಲದಿಂದಲೇ ಮೂಲೋತ್ಪಾಟನೆ ಮಾಡಿದವರು ದೇಶವನ್ನು ಫ್ಯಾಸಿಸಮ್ ಕಡೆಗೆ ಕೊಂಡೊಯ್ಯುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಗಾಂಧೀಜಿಯನ್ನು ಅವರ ಎಲ್ಲ ಮಿತಿಗಳ ನಡುವೆ ನಾವು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ಹಾಗೆಂದು ನಾವು ಭಾವುಕವಾಗಿ ಗಾಂಧಿಯನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಶೋಷಿತ ಸಮುದಾಯಗಳ ಕುರಿತು ಭಾವುಕವಾಗಿ ಯೋಚಿಸುತ್ತಲೇ ಅವರು ನಮ್ಮ ಮೇಲೆ ಹೇರಿದ ಪೂನಾ ಒಪ್ಪಂದವನ್ನು ಖಾರವಾಗಿಯೇ ಪ್ರಶ್ನಿಸೋಣ. ಗಾಂಧಿಯ ಟ್ರಸ್ಟಿಷಿಪ್ ಚಿಂತನೆಗಳನ್ನು, ಅವರು ತಮ್ಮ ಸೈದ್ಧಾಂತಿಕ ವಿರೋಧಿಗಳನ್ನು (ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಅಂಬೇಡ್ಕರ್ ಮುಂತಾದವರನ್ನು) ನಡೆಸಿಕೊಂಡ ರೀತಿಯನ್ನು ನಾವು ವಿರೋಧಿಸೋಣ. ಆದರೆ ಇಡಿಯಾಗಿ ಗಾಂಧಿಯನ್ನಲ್ಲ.
ಪೂನಾ ಒಪ್ಪಂದದ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಮೀಸಲಿಡುವುದನ್ನು ವಿರೋಧಿಸಿ ಗಾಂಧಿ ಉಪವಾಸ ಕೂಡುತ್ತಾರೆ. ದಿನಕಳೆದಂತೆ ಗಾಂಧೀಜಿಯ ಆರೋಗ್ಯ ಕ್ಷೀಣಿಸುವುದನ್ನು ನೋಡಿದ ಬಾಬಾ ಸಾಹೇಬರು ವಿಧಿ ಇಲ್ಲದೆ ಪೂನಾ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ತಾವು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರಗಳ ನಿಲುವುನ್ನು ಬಾಬಾ ಸಾಹೇಬರು ಗಾಂಧೀಜಿಯನ್ನು ಉಳಿಸಿಕೊಳ್ಳುವ ಕಾರಣಕ್ಕಾಗಿ ಸಡಿಲಿಸುತ್ತಾರೆ. ಹಾಗೆಂದು ನಮ್ಮ ಹಕ್ಕುಗಳನ್ನು ಬಲಿಗೊಡಬೇಕೆಂದೇನೂ ಇಲ್ಲ. ಹಕ್ಕುಗಳಿಗೆ ಹೋರಾಡುವ ನಮಗೆÉ ಬಾಬಾ ಸಾಹೇಬರ ಅಂತರ್ಸತ್ವ, ಅವರ ತಾಯ್ತನದ ಅಂತಃಕರಣ ಮತ್ತು ರಚನಾತ್ಮಕ ಪ್ರತಿಚಿಂತನೆಗಳೇ ಮಾದರಿ. ನಿಷ್ಪ್ರಯೋಜಕ ಮೂರ್ತಿಭಂಜಕ ಪ್ರವೃತ್ತಿ ಮತ್ತು ಅಂತಃಕರಣದ ಸ್ಪರ್ಶವಿಲ್ಲದ ಟೀಕೆಗಳು ನಮ್ಮನ್ನು ರಾಜಕೀಯ ಅಸೂಕ್ಷ್ಮರನ್ನಾಗಿಸುವ ಜೊತೆಗೆ ನಮ್ಮಲ್ಲಿನ ಮನುಷ್ಯನನ್ನೂ ಕೊಲ್ಲುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...