Homeಅಂಕಣಗಳುಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

ಗಾಂಧೀ ಸ್ಮರಣೆ ಮತ್ತು ವರ್ತಮಾನದ ಬಿಡಿ ಚಿತ್ರಗಳು

- Advertisement -
- Advertisement -

ಅಕ್ಟೋಬರ್ 2 ಎಂದಿನಂತೆ ಗಾಂಧೀ ಜಯಂತಿಯ ಸರಕಾರಿ ಸಂಭ್ರಮ, ಗಾಂಧೀಜಿಯ ಪರಂಪರಾಗತ ಅನುಯಾಯಿಗಳ ಅವಿಮರ್ಶಾತ್ಮಕ ಸ್ಮರಣೆಗಳು ನಡೆದು ಹೋಗುತ್ತವೆ. ಇದರ ಜೊತೆ ಗಾಂಧಿ ವಿರೋಧಿಗಳ ಅಬ್ಬರದ ಟೀಕೆಗಳು ಮುಗಿಲು ಮುಟ್ಟುತ್ತವೆ. ಸರಕಾರಿ ಸಂಭ್ರಮಗಳಿಗೆ ಈ ಹಿಂದೆಯೂ ಯಾವ ಅರ್ಥಗಳಿರಲಿಲ್ಲ, ಈಗಲೂ ಅವು ಹಾಗೆಯೇ ನಡೆದು ಮುಗಿದು ಹೋಗುತ್ತವೆ. ಇನ್ನು ಹಳಹಳಿಕೆಯ ಯಾಂತ್ರಿಕ ಗಾಂಧಿ ಸ್ಮರಣೆಗಳಿಗೆ ವರ್ತಮಾನ ಮುಖ್ಯವಾಗುವುದೇ ಇಲ್ಲ. ಸಾಮಾನ್ಯರಿಗೆ ಅನಾಯಾಸವಾಗಿ ನಿಲುಕಿಬಿಡುವ ಗಾಂಧೀಜಿಯ ಸರಳ ಬೌದ್ಧಿಕತೆಯನ್ನು ಇನ್ನೂ ಕಗ್ಗಂಟಾಗಿಸಿಬಿಡುವ ಕ್ಲೀಷೆಯ ಭಾಷಣಗಳನ್ನ ಈ ತಿಂಗಳಿಡೀ ಕೇಳಲೇಬೇಕು. ಇನ್ನು ಗಾಂಧಿಯನ್ನು ನಖಶಿಖ ದ್ವೇಷಿಸುವ ವರ್ಗದ ಬೈಗುಳಗಳೂ ಈ ಅಕ್ಟೋಬರ್ ಮಾಸದಲ್ಲಿ ಉತ್ತುಂಗಕ್ಕೇರಿಬಿಡುತ್ತವೆ. ಎಲ್ಲೋ ವಕೀಲಿಕಿ ಮಾಡಿಕೊಂಡಿದ್ದ ಕರಮಚಂದ ಗಾಂಧಿ ಆಕಸ್ಮಿಕವಾಗಿ ಸಾರ್ವಜನಿಕ ಬದುಕಿಗೆ ಬಂದು ಸ್ವಾತಂತ್ರ್ಯ ಹೋರಾಟದ ಮುಂದಾಳಾಗಿ ರೂಪಾಂತರಗೊಂಡದ್ದು ಈಗ ಚರಿತ್ರೆ. ಗಾಂಧೀಜಿ ಹೀಗೆ ಸಾರ್ವಜನಿಕ ಬದುಕಲ್ಲಿದ್ದದ್ದು ಕೆಲವು ದಶಕಗಳು ಮಾತ್ರ. ಈ ಕಾಲಘಟ್ಟದಲ್ಲಿ ಗಾಂಧೀಜಿ ಸಾವಿರಾರು ರಾಜಕೀಯ ಸಂದಿಗ್ಧಗಳನ್ನು ಎದುರಿಸಿದ್ದಾರೆ.
ಪ್ರಖರ ಸೂರ್ಯನÀ ತರ ಜ್ವಲಿಸುತ್ತಿದ್ದ ಅಂಬೇಡ್ಕರ್, ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಪೆರಿಯಾರ್‍ರಂತಹ ಜೊತೆಗಾರರ ಪ್ರಭಾವಲಯಗಳಲ್ಲಿ ಕೆಲವು ಸಲ ಗಾಂಧಿ ಪೇಲವವಾಗಿ ಕಂಡಿದ್ದಾರೆ. ಈ ಜೊತೆಗಾರರು ಮುಂದಿರಿಸುತ್ತಿದ್ದ ಚಾರಿತ್ರಿಕ ಪ್ರಶ್ನೆಗಳಿಗೆ ಗಾಂಧೀಜಿ ನಿರುತ್ತರರೂ ಆಗಿದ್ದಾರೆ. ಆದರೆ, ದೇಶದ ರಾಜಕೀಯ ಗುಲಾಮಗಿರಿ, ಅಸಮಾನ ವಿಷಮ ಸಾಮಾಜಿಕ ಸಂದರ್ಭ, ಕೋಮು ಅಸಹನೆಯ ತಲ್ಲಣಗಳಲ್ಲಿ ಗಾಂಧೀಜಿ ಕಳೆದು ಹೋಗಲಿಲ್ಲ. ಈ ಎಲ್ಲ ಸಂಗತಿಗಳಿಂದ ಗಾಂಧೀಜಿ ವಿದ್ಯಾರ್ಥಿಯಂತೆ ಕಲಿತರು, ಜೊತೆಗೆ ಕಲಿಸಲು ಮುಂದಾದರು. ಇದೆಲ್ಲಕ್ಕಿಂತ ಹೆಚ್ಚಾಗಿ ಗಾಂಧೀಜಿ ಜನರ ನಡುವೆ ಬದುಕಿದರು. ಅದು ಬಿರ್ಲಾನ ಅತಿಥಿಗೃಹವೇ ಇರಲಿ, ಚಂಪಾರಣ್ ಹೋರಾಟವೇ ಇರಲಿ, ಕೋಮು ಅಸಹನೆಯಿಂದ ಧಗಧಗ ಉರಿಯುತ್ತಿದ್ದ ಕಲ್ಕತ್ತಾದ ರಸ್ತೆಗಳೇ ಇರಲಿ, ಗಾಂಧೀಜಿ ತಾನು ಪ್ರೀತಿಸುತ್ತಿದ್ದ `ಜನಸಾಮಾನ್ಯ’ರ ಜೊತೆ ನಿಂತುಕೊಂಡರು. ಅಡುಗೆಗೆ ನಿತ್ಯ ಬಳಸುವ ಉಪ್ಪು, ಸಾಮಾನ್ಯರಿಗೆ ಸುಲಭವಾಗಿ ದಕ್ಕಬೇಕು ಎಂಬುದರಿಂದ ಹಿಡಿದು, ಇಂಗ್ಲೆಂಡಿನಿಂದ ಬರುತ್ತಿದ್ದ ಉನ್ನತ ಮಟ್ಟದ ನಿಯೋಗಗಳ ಮುಂದೆ ತಾನು ಪ್ರೀತಿಸುವ ದೇಶದ ವಿಮೋಚನೆಗೆ ವಾದ ಮಂಡಿಸುವವರೆಗೆ ಗಾಂಧೀಜಿಯ ರಾಜಕೀಯ ವ್ಯಕ್ತಿತ್ವದ ಹರವು ವಿಸ್ತರಿಸಿಕೊಂಡಿತ್ತು.
ವಸಾಹತು ಆಡಳಿತ ವಿಧಿಸಿದ್ದ ವಿಪರೀತ ಕಂದಾಯವನ್ನು ಕಟ್ಟದೆ ಭೂಮಿ ಕಳೆದುಕೊಂಡಿದ್ದ ರೈತರು, ಅಸ್ಪøಶ್ಯತೆಯ ಹೀನಾಯ ಆಚರಣೆಯಲ್ಲಿ ನಲುಗುತ್ತಿದ್ದ ದಲಿತ ಸಮುದಾಯಗಳು, ಕೈಗಾರಕೀರಣದಿಂದ ಕುಲಕಸಬುಗಳನ್ನು ಕಳೆದುಕೊಂಡು ದಿಕ್ಕೆಟ್ಟುಹೋಗಿದ್ದ ಕರಕುಶಲ ಕರ್ಮಿಗಳು, ಯಾವ ಹಕ್ಕುಗಳೂ ಇಲ್ಲದ ಮಹಿಳೆಯರು, ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದ ಅಲೆಮಾರಿ ಸಮುದಾಯಗಳು, ಎರಡನೇ ದರ್ಜೆಯ ಪ್ರಜೆಗಳೇ ಆಗಿ ಪರಿಗಣಿಸಲ್ಪಟ್ಟಿದ್ದ ಮುಸಲ್ಮಾನರು……. ಒಟ್ಟಾರೆ ಇಂಡಿಯಾದ ಬಹುಸಂಖ್ಯಾತ ದುಡಿವ ಸಮುದಾಯಗಳು ತಲ್ಲಣಗಳಲ್ಲಿಯೇ ಇದ್ದ ನಿಕೃಷ್ಟ ರಾಜಕೀಯ ಸಂದರ್ಭವದು. ಮೋಹನ ಕರಮಚಂದ ಗಾಂಧಿ ಎಂಬ ಗುಜರಾತಿ ಬನಿಯಾ ಸಮುದಾಯದ ವ್ಯಕ್ತಿಯ ಮುಂದೆ ಇದ್ದ ಸವಾಲುಗಳವು. ಇಂತಹ ಚಾರಿತ್ರಿಕ ಸಮಸ್ಯೆಗಳಿಗೆ ತಟ್ಟನೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ? ಶತಮಾನಗಳ ಕಾಲ ಆಚರಣೆಯಲ್ಲಿದ್ದ ಜ್ವಲಂತ ಪಿಡುಗುಗಳಿಂದ ಶೋಷಿತರನ್ನು ವಿಮೋಚನೆಗೊಳಿಸಲು ಸಾಧ್ಯವೇ? ದುರಾಶೆಯ ಊಳಿಗಮಾನ್ಯ ವ್ಯವಸ್ಥೆ, ಅಮಾನವೀಯವಾಗಿ ಬೆಳೆದು ನಿಂತಿದ್ದ ಜಾತಿ ಅಸಹನೆ, ವಿಷಾನಿಲದಂತೆ ಪಸರಿಸುತ್ತಿದ್ದ ಕೋಮುವಾದಗಳ ನಡುವೆ ದೇಶಕ್ಕೆ ಮತ್ತು ಶೋಷಿತ ಸಮುದಾಯಗಳೆರಡಕ್ಕೂ ವಿಮೋಚನೆಯ ಅಗತ್ಯವಿತ್ತು. ಇಂತಹ ತಲ್ಲಣದ ಸಂದರ್ಭದಲ್ಲಿ ಗಾಂಧಿಯ ಮೇಲೆ ನಿರೀಕ್ಷೆಗಳ ಭಾರಜಲವೂ ಸುರಿಯುತ್ತಿತ್ತು. ಇಂತಹ ಸಂದರ್ಭದಲ್ಲಿ ಅಂದಿನ ನಲವತ್ತು ಕೋಟಿ ಜನರ ಮುಂದಾಳು ಎಂದೇ ಪರಿಗಣಿಸಲ್ಪಟ್ಟಿದ್ದ ಗಾಂಧೀಜಿ ಎಂತಹ ಸಂದಿಗ್ಧಗಳನ್ನು ಎದುರಿಸಿರಬಹುದು? ಗಾಂಧಿ ಎಂಬ ಮನುಷ್ಯನನ್ನು ಆತನ ಕಾಲಘಟ್ಟದ ಈ ಎಲ್ಲ ರಾಜಕೀಯ ಸಂದಿಗ್ಧಗಳ ಮೂಲಕವೇ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಆದರೆ, ಈಗ ನಡೆಯುತ್ತಿರುವ ಗಾಂಧೀಜಿಯ ನಿಂದನೆ ಮತ್ತು ಭಜನೆಗಳಿಗೆ ಇಂತಹ ಸೂಕ್ಷ್ಮಗಳಿಲ್ಲ. ಕಪ್ಪು ಬಿಳುಪಿನ ಲೆಕ್ಕಾಚಾರಗಳಿಗೆ ಚರಿತ್ರೆಯ ಹಂಗುಗಳಿರುವುದಿಲ್ಲ. ಗಾಂಧೀಜಿಯ ಒಟ್ಟಾರೆಯ ಬೌದ್ಧಿಕ ನಿಲುವುಗಳು ಅವರ ಎಣೆ ಇಲ್ಲದ ಆಕ್ಟಿವಿಸಮ್‍ನಿಂದ ರೂಪುಗೊಳ್ಳುತ್ತಾ ಬಂದಿವೆ. ಗಾಂಧೀಜಿಯ ಬೌದ್ಧಿಕತೆಯನ್ನು ಅವರ ಶ್ರಮದಾಯಕ ಆಕ್ಟಿವಿಸಮ್‍ನ ಮೂಲಕ ಅರ್ಥಮಾಡಿಕೊಳ್ಳಬೇಕು. ಹಾಗೆಂದು ಗಾಂಧೀಜಿಯ ನಿಲುವುಗಳೆಲ್ಲ ಪರಿಪೂರ್ಣವಾಗಿವೆ ಎಂದೇನಲ್ಲ, ಅವಕ್ಕೆ ಹಲವು ಮಿತಿಗಳಿವೆ, ಕೆಲವೊಮ್ಮೆ ಅವು ಫಾಶ್ರ್ವಿಕವೂ (ಸೆಕ್ಟೇರಿಯನ್) ಸಹ ಆಗಿವೆ. ಆದರೆ ಆ ನಿಲುವುಗಳು ಜನಸಮುದಾಯಗಳ ಜೊತೆಗಿನ ಸಾವಯವ ಸಂಬಂಧಗಳಿಂದ ಅಸ್ತಿತ್ವಕ್ಕೆ ಬಂದಂತವುಗಳೇ ಆಗಿವೆ. ಒಂದು ಅರ್ಥದಲ್ಲಿ ಗಾಂಧೀಜಿಯ ರಾಜಕೀಯ ನಿಲುವುಗಳನ್ನು ಅವರ ಸಾರ್ವಜನಿಕ ಬದುಕನ್ನು ಹೊರತಾಗಿಸಿ ನೋಡಲು ಸಾಧ್ಯವಿಲ್ಲ. ಈ ದೇಶದ ಸಾಮಾನ್ಯ ಜನರ ನಡುವೆ ಬೇರೆಯದೇ ಇದ್ದರೆ ಗಾಂಧೀಜಿ ಎಂಬ ವ್ಯಕ್ತಿತ್ವವಾಗಲಿ, ಗಾಂಧಿಯ ಚಿಂತನೆಗಳಾಗಲಿ ಅಸ್ತಿತ್ವಕ್ಕೇ ಬರುತ್ತಿರಲಿಲ್ಲ.
ಒಂದು ಸಾಮಾಜಿಕ ಅಸಮಾನತೆಯನ್ನು ಪ್ರತಿರೋಧಿಸುವ ಮೂಲಕ ಬ್ಯಾರಿಸ್ಟರ್ ಆಗಿದ್ದ ಕರಮಚಂದರು, ಗಾಂಧೀಜಿಯಾಗಿ ರೂಪಾಂತರಗೊಂಡರು. ಈ ದೇಶದ ಅಸಹನೀಯ ರಾಜಕೀಯ ಸನ್ನಿವೇಶದಲ್ಲಿ, ಇಂತಹ ಸಾಮಾಜಿಕ ವಿಷಮತೆಯ ವಿರುದ್ಧ ಹೋರಾಡುತ್ತಲೇ ಗಾಂಧೀಜಿ ಮತ್ತೆಮತ್ತೆ ರೂಪುಗೊಳ್ಳುತ್ತಾ ಹೋದರು. ದೇಶದ ಎಲ್ಲ ಜನರ ನಡುವೆ ಸಂಪರ್ಕ ಸೇತುವನ್ನು ನಿರ್ಮಾಣ ಮಾಡುವ ಪ್ರಯತ್ನದಲ್ಲಿರುವಾಗ, ನಿರ್ಮಾಣಗಳನ್ನು ಸ್ಪೋಟಿಸುವ ನಿಕೃಷ್ಟರ ಪ್ರತಿನಿಧಿಯೊಬ್ಬನಿಂದ ಗಾಂಧಿ ಕೊಲ್ಲಲ್ಪಟ್ಟರು. ಗಾಂಧೀಜಿ ಹೇಗೆ ಬದುಕಿದ್ದರು, ಏನು ಚಿಂತಿಸಿದರು ಎಂಬುದರ ಜೊತೆಗೆ, `ನಮ್ಮ’ ವೈರಿಯೊಬ್ಬನಿಂದ ಗಾಂಧಿ ಹತರಾದರು ಎಂಬುದೂ ನಮಗೆ ಮುಖ್ಯವಾಗಬೇಕು. ಗಾಂಧಿಯ ಚಿಂತನೆಗಳು ತನ್ನೆಲ್ಲ ಮಿತಿಗಳ ನಡುವೆ ಬಹುಸಂಖ್ಯಾತ ದುಡಿವ ಸಮುದಾಯಗಳ ವೈರಿಗಳಿಗೆ ಬಳಕೆಯಾಗಲಿಲ್ಲ. ಗಾಂಧಿ ತತ್ವಗಳು ಪ್ರಭುತ್ವಕ್ಕೆ ಬಂಡವಾಳವಾಗಲಿಲ್ಲ. (ಆದರೆ, ಗಾಂಧಿಯ ಫೋಟೋ, ಆತನ ಕನ್ನಡಕ, ಚರಕ ಮತ್ತು ಚರಿಷ್ಮಾಗಳು ಆಳುವ ವರ್ಗಗಳಿಗೆ ಬಂಡವಾಳವಾದವು) ಗಾಂಧಿಯನ್ನು ಕೊಂದ `ಆ ಜನ’ ಗೋಡ್ಸೆಗೆ ದೇವಾಲಯ ಕಟ್ಟುತ್ತಿದ್ದಾರೆ, ಗಾಂಧೀಜಿಯ ಚಿಂತನೆಗಳನ್ನು ಆತ ಹುಟ್ಟಿದ ನೆಲದಿಂದಲೇ ಮೂಲೋತ್ಪಾಟನೆ ಮಾಡಿದವರು ದೇಶವನ್ನು ಫ್ಯಾಸಿಸಮ್ ಕಡೆಗೆ ಕೊಂಡೊಯ್ಯುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಗಾಂಧೀಜಿಯನ್ನು ಅವರ ಎಲ್ಲ ಮಿತಿಗಳ ನಡುವೆ ನಾವು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ಹಾಗೆಂದು ನಾವು ಭಾವುಕವಾಗಿ ಗಾಂಧಿಯನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಶೋಷಿತ ಸಮುದಾಯಗಳ ಕುರಿತು ಭಾವುಕವಾಗಿ ಯೋಚಿಸುತ್ತಲೇ ಅವರು ನಮ್ಮ ಮೇಲೆ ಹೇರಿದ ಪೂನಾ ಒಪ್ಪಂದವನ್ನು ಖಾರವಾಗಿಯೇ ಪ್ರಶ್ನಿಸೋಣ. ಗಾಂಧಿಯ ಟ್ರಸ್ಟಿಷಿಪ್ ಚಿಂತನೆಗಳನ್ನು, ಅವರು ತಮ್ಮ ಸೈದ್ಧಾಂತಿಕ ವಿರೋಧಿಗಳನ್ನು (ಸುಭಾಷ್ ಚಂದ್ರ ಭೋಸ್, ಭಗತ್ ಸಿಂಗ್, ಅಂಬೇಡ್ಕರ್ ಮುಂತಾದವರನ್ನು) ನಡೆಸಿಕೊಂಡ ರೀತಿಯನ್ನು ನಾವು ವಿರೋಧಿಸೋಣ. ಆದರೆ ಇಡಿಯಾಗಿ ಗಾಂಧಿಯನ್ನಲ್ಲ.
ಪೂನಾ ಒಪ್ಪಂದದ ಸಂದರ್ಭದಲ್ಲಿ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರಗಳನ್ನು ಮೀಸಲಿಡುವುದನ್ನು ವಿರೋಧಿಸಿ ಗಾಂಧಿ ಉಪವಾಸ ಕೂಡುತ್ತಾರೆ. ದಿನಕಳೆದಂತೆ ಗಾಂಧೀಜಿಯ ಆರೋಗ್ಯ ಕ್ಷೀಣಿಸುವುದನ್ನು ನೋಡಿದ ಬಾಬಾ ಸಾಹೇಬರು ವಿಧಿ ಇಲ್ಲದೆ ಪೂನಾ ಒಪ್ಪಂದಕ್ಕೆ ಸಹಿ ಹಾಕುತ್ತಾರೆ. ತಾವು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದ ದಲಿತರಿಗೆ ಪ್ರತ್ಯೇಕ ಮತ ಕ್ಷೇತ್ರಗಳ ನಿಲುವುನ್ನು ಬಾಬಾ ಸಾಹೇಬರು ಗಾಂಧೀಜಿಯನ್ನು ಉಳಿಸಿಕೊಳ್ಳುವ ಕಾರಣಕ್ಕಾಗಿ ಸಡಿಲಿಸುತ್ತಾರೆ. ಹಾಗೆಂದು ನಮ್ಮ ಹಕ್ಕುಗಳನ್ನು ಬಲಿಗೊಡಬೇಕೆಂದೇನೂ ಇಲ್ಲ. ಹಕ್ಕುಗಳಿಗೆ ಹೋರಾಡುವ ನಮಗೆÉ ಬಾಬಾ ಸಾಹೇಬರ ಅಂತರ್ಸತ್ವ, ಅವರ ತಾಯ್ತನದ ಅಂತಃಕರಣ ಮತ್ತು ರಚನಾತ್ಮಕ ಪ್ರತಿಚಿಂತನೆಗಳೇ ಮಾದರಿ. ನಿಷ್ಪ್ರಯೋಜಕ ಮೂರ್ತಿಭಂಜಕ ಪ್ರವೃತ್ತಿ ಮತ್ತು ಅಂತಃಕರಣದ ಸ್ಪರ್ಶವಿಲ್ಲದ ಟೀಕೆಗಳು ನಮ್ಮನ್ನು ರಾಜಕೀಯ ಅಸೂಕ್ಷ್ಮರನ್ನಾಗಿಸುವ ಜೊತೆಗೆ ನಮ್ಮಲ್ಲಿನ ಮನುಷ್ಯನನ್ನೂ ಕೊಲ್ಲುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...