Homeಮುಖಪುಟಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

ಗಾಸಿಪ್ ಲವ್ ಅಂಡ್ ಬ್ರೇಕ್ ಅಪ್ ಮೀಡಿಯಾ ಮಧ್ಯಸ್ಥಿಕೆ

- Advertisement -
- Advertisement -

ಒಬ್ಬ ಗಂಡು ಮತ್ತು ಹೆಣ್ಣು ಜೊತೆಯಾಗಿ ಓಡಾಡ್ತಿದ್ದಾರೆ, ಹೆಚ್ಚು ಸಮಯ ಮಾತಾಡ್ತಿದ್ದಾರೆ ಅಂತ ನೋಡಿದ ತಕ್ಷಣ ಅವರಿಬ್ಬರು ಪ್ರೇಮಿಗಳೆಂದು ನಿರ್ಧಾರಕ್ಕೆ ಬಂದುಬಿಡುವುದು ನಮ್ಮ ಸಮಾಜದೊಳಗೆ ಹಳ್ಳಿಯಿಂದ ದಿಲ್ಲಿ(ನಗರ)ಯವರೆಗೆ ಸಾಮಾನ್ಯವೆಂಬಂತೆ ಬೆಳೆದುಹೋಗಿದೆ. ಹಳ್ಳಿಗಳಲ್ಲಿ ಇಂಥ ವಿಷಯಗಳು ಸಿಕ್ಕಿಬಿಟ್ಟರೆ ಆ ಇಬ್ಬರು ಮಾತನಾಡಿದ್ದೇ ಘನ ಘೋರ ಅಪರಾಧವೆಂಬಷ್ಟರ ಮಟ್ಟಕ್ಕೆ ಬಾಯಿಗೆ ತಾಂಬೂಲವಾಗಿ ಪರಿಣಮಿಸುತ್ತವೆ. ಇನ್ನು ಸಿಟಿಗಳಲ್ಲೋ ಹೈ-ಫೈ ಲೈಫ್‍ನ ಡೇಟಿಂಗ್, ಸಂಥಿಂಗ್-ಸಂಥಿಂಗ್‍ಗಳಾಗಿ ಕಾಡುತ್ತವೆ. ಇಂತಹ ವಿಚಾರಗಳಲ್ಲಿ ಸಿನಿಮಾ ಸ್ಟಾರ್‍ಗಳು ಸಿಕ್ಕಿಕೊಂಡರಂತೂ ಮಾಧ್ಯಮದವರಿಗೆ ಅಂದು ಬಾಡೂಟ ಸಿಕ್ಕಂತೆ. ಟಿಆರ್‍ಪಿ ಗೀಳಿನಲ್ಲಿ ಸರಣಿ ಕಾರ್ಯಕ್ರಮಗಳು ನಡೆದೋಗುತ್ತವೆ. ಇತ್ತೀಚೆಗೆ ಕಲ್ಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ಸ್ಪರ್ಧಿಗಳ ನಡುವಿನ ತಮಾಷೆಗಳೂ ಅವರ ನಡುವೆ ಇರುವವರಿಗೇ ಅನುಮಾನವಾಗಿ ಕಾಡಲಾರಂಭಿಸಿದ್ದವು. ಅಲ್ಲದೆ, ಬುಲ್‍ಬುಲ್ ಬೆಡಗಿ ಎಂದೇ ಖ್ಯಾತಿ ಪಡೆದಿರುವ ರಚಿತಾ ರಾಮ್ ಸೀತಾರಾಮ ಕಲ್ಯಾಣ ಸಿನಿಮಾ ಮಾಡಿದ ನಂತರ ಕುಮಾರಸ್ವಾಮಿ ಕುಟುಂಬದೊಂದಿಗೆ ಒಂದು ಹಂತದ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ. ರಚಿತಾರಾಮ್ ಅಕ್ಕನ ಮದುವೆಯಲ್ಲಿ ನಿಖಿಲ್ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಶೃಂಗೇರಿಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಲ್ಲಿಸಿದ ಪೂಜೆಯಲ್ಲಿ ರಚಿತಾ ಭಾಗಿಯಾಗಿದ್ದರು ಅದಾದ ಕೆಲವೇ ದಿನಗಳ ನಂತರ ನಿಖಿಲ್ ಹುಟ್ಟಿದ ಹಬ್ಬಕ್ಕೆ ಶುಭಾಷಯವನ್ನು ಕೋರಿದ್ದರು. ಇಷ್ಟು ನಡೆದದ್ದೇ ತಡ ಮಾಂಸದಂಗಡಿ ಮುಂದೆ ಮೂಳೆ ತುಂಡಿಗಾಗಿ ಕಾದು ಕುಳಿತಿದ್ದ ನಾಯಿಯ ರೀತಿಯಲ್ಲಿ ರಚಿತಾ-ನಿಖಿಲ್ ಲವ್ವಿ-ಡವ್ವಿ, ನಿಖಿಲ್-ರಚಿತಾ ಮದುವೆ ಫಿಕ್ಸ್ ಎಂಬಂತ ಸುದ್ದಿಗಳನ್ನು ಬಿತ್ತರಿಸಲಾರಂಭಿಸಿದ್ದವು. ಪದೇ ಪದೇ ಇಂಥ ಗಾಸಿಪ್‍ಗಳನ್ನು ಕೇಳಿದ್ದ ರಚಿತಾ ಮತ್ತು ನಿಖಿಲ್ ನಾವಿಬ್ಬರು ಫ್ರೆಂಡ್ಸ್ ಅಷ್ಟೇ ಬೇರೇನೂ ಇಲ್ಲ ಎಂದು ಇಬ್ಬರೂ ಹೇಳಿದ್ದರು. ಅದಾದ ಕೆಲವೇ ದಿನಗಳಲ್ಲಿ ನಿಖಿಲ್‍ಗೆ ಬೇರೊಂದು ಹುಡುಗಿಯೊಂದಿಗೆ ಜೊತೆ ಮದುವೆ ಫಿಕ್ಸ್ ಆಗಿದೆ. ಸದ್ಯಕ್ಕೆ ಇಬ್ಬರ ಸ್ಟೋರಿಗೆ ಬ್ರೇಕ್ ಬಿದ್ದಿದ್ದು, ಮಾಧ್ಯಮಗಳು ಇಂಥದ್ದೇ ಸುದ್ದಿಯ ಹುಡುಕಾಟದಲ್ಲಿ ನಿರತವಾಗಿವೆ. ಅಂದಹಾಗೇ ಈ ರೀತಿಯ ಗಾಸಿಪ್ ಸುದ್ದಿಗಳು ಇದೇ ಮೊದಲೇನೂ ಅಲ್ಲ ಎಂಬುದು ಸಮಾಧಾನಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...