Homeಅಂಕಣಗಳುಗೆದ್ದ ನಂತರವೇ ಗಡ್ಡಮೀಸೆ ಬೋಳಿಸೋದಾಗಿ ಟೋಫನ್‍ತಲೆ ಮೇಲೆ ಆಣೆ

ಗೆದ್ದ ನಂತರವೇ ಗಡ್ಡಮೀಸೆ ಬೋಳಿಸೋದಾಗಿ ಟೋಫನ್‍ತಲೆ ಮೇಲೆ ಆಣೆ

- Advertisement -
- Advertisement -

ಆಘಾತವಾಣಿ |

ನಮಸ್ಕಾರ, ಆಘಾತವಾಣಿಗೆ ಸ್ವಾಗತ, ಇದೀಗ ಮುಖ್ಯಾಂಶಗಳು. ಓದುತ್ತಿರೋರು ಅಟ್ಯಾಕ್ ಹನ್ಮಂತು

ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಳೆದ ಒಂದು ತಿಂಗಳಿನಿಂದ ಉರಿಬಿಸಿಲಿನಲ್ಲಿ ಓತ್ಲಾ ಹೊಡೆಯುತ್ತಿದ್ದ ‘ವಿಜೇಂದ್ರ ಸನ್ನಾಫ್ ಯಡ್ರಪ್ಪ’ನವರಿಗೆ ಚಾಮರಾಜಪೇಟೆಯ ‘ಹೇ ಶವ ಕೃಪ’ದ ವಯೋವೃದ್ಧರು ಟಿಕೆಟ್ ನಿರಾಕರಿಸಿದ್ದಾರೆ. ತನ್ನ ‘ಅಧಿಕೃತ’ ಮಗನಿಗೇ ಟಿಕೆಟ್ ಢಮಾರ್ ಅನ್ನಿಸಿದ ಈ ಬೆಳವಣಿಗೆಯಿಂದ ನೊಂದ ಯಡೂರಪ್ಪನವರು ಸೋಪಕ್ಕನ ಹಳೇ ಸೀರೆಯೊಂದನ್ನು ಎತ್ತಿಕೊಂಡು ಫ್ಯಾನಿಗೆಸೆದು ನೇಣು ಹಾಕಿಕೊಳ್ಳಲು ಇನ್ನೂ ಯತ್ನಿಸಿಲ್ಲ ಎಂಬ ಸಾಕಿಂಗ್ ನ್ಯೂಸ್ ಹೊರಬಿದ್ದಿದೆ.
< < < <
ಸಂವಿಧಾನ ಬದಲಿಸೋಕೇ ನಾವು ಅಲ್ಲಾಡಿಸಿಕೊಂಡು ಇಲ್ಲೀತನಕ ಬಂದಿದ್ದೇವೆ ಎಂದು ಮಿಯಾಂವ್ ಎಂದಿದ್ದ ಬಿಜೆಪಿಯ ‘ಅನಾಥಕುಮಾರ್ ಹೆಗಡೆ’ಯವರು ಇದ್ದಕ್ಕಿದ್ದಂತೆ ಮಂಗಮಾಯವಾಗಿ ಹೋಗಿದ್ದಾರೆ. ಮೊನ್ನೆ ತಾನೇ ಬಿಜೆಪಿ ನಾಯಕನ ಲಾರಿಯೊಂದು ತಮ್ಮ ಬೆಂಗಾವಲು ವಾಹನಕ್ಕೆ ಗುದ್ದಿದ್ದರಿಂದ ಆಮಶಂಕೆ ಬೇಧಿಯಾಗಿ ಸುಸ್ತಾಗಿದ್ದ ಅನಾಥಕುಮಾರ್.. ಹೋದಲ್ಲಿ ಬಂದಲ್ಲಿ ಕಯ ಕಯ ಎಂದು ನರಳಾಡುತ್ತ ಜನರಿಂದ ಕಪುಕ್ ತುಪುಕ್ ಎಂದು ಉಗಿಸಿಕೊಂಡು ಚರ್ಮದ ಅಲರ್ಜಿಯಿಂದಲೂ ಬಳಲುತ್ತಿದ್ದರು. ಜನರ ಉಗುಳಿನಿಂದ ಇನ್ಫೆಕ್ಷನ್ ಆಗಿರಬಹುದಾದ ಸಾಧ್ಯತೆಯಿದ್ದುದರಿಂದ ಇದಕ್ಕೆ ಚಿಕಿತ್ಸೆ ಪಡೆಯಲು ಅನಾಥಕುಮಾರ್, ನೈಜೀರಿಯಾ ದೇಶಕ್ಕೆ ಅಳುತ್ತ ನಡೆದುಕೊಂಡೇ ಹೋಗಿದ್ದಾರೆ ಎಂಬ ಗುಮಾನಿಗಳು ವ್ಯಕ್ತವಾಗಿವೆ.
< < < <
ಈಗಾಗಲೇ ತಮ್ಮ ಎರಡೂ ಕಾಲನ್ನು ಸ್ಮಶಾನದ ಗುಂಡಿಗೆ ಇಳಿಬಿಟ್ಟಿರುವ ಬೊಚ್ಚುಬಾಯಿ ತಾತ ‘ಅಸಾರಾಂ ಬಾಪು’ ಅವರು ಅಪ್ರಾಪ್ತ ಬಾಲಕಿಯ ಮೇಲೆ ನಡೆಸಿದ ಅತ್ಯಾಚಾರದ ಕೇಸಿನಲ್ಲಿ ಕಳೆದ 5 ವರ್ಷಗಳಿಂದ ಜೈಲಿನಲ್ಲಿ ಶೌಚಾಲಯ ಸ್ವಚ್ಛ ಮಾಡುತ್ತ ಸಜೆಬಂಧಿಯಾಗಿದ್ದುದು ತಮಗೆಲ್ಲರಿಗೂ ತಿಳಿದಿದೆ. ಇದೀಗ ಈ ಅತ್ಯಾಚಾರದ ಕುರಿತಂತೆ ಕೋರ್ಟ್ ತೀರ್ಪು ಪ್ರಕಟವಾಗಿದ್ದು, ತಾತ ಅಸಾರಾಂ ಬಾಪು ತಪ್ಪಿತಸ್ಥ ಎಂದು ಸಾಬೀತಾಗಿದೆ. ಈ ಬಗ್ಗೆ ತೀರ್ಪು ಕೊಡುವಾಗ ರೊಚ್ಚಿಗೆದ್ದ ತೀರ್ಪುಗಾರರು.. ಈ ರೇಪಿಸ್ಟ್ ಮುದುಕನಿಗೆ ಸಾಯುವತನಕ ಪಕೋಡಮ್ಯಾನ್ ಫ್ರಾಡೇಂದ್ರನ ಎಲ್ಲ ಭಾಷಣಗಳನ್ನೂ ಕೇಳುವ ಮತ್ತು ನೋಡುವ ಭಯಾನಕ ಶಿಕ್ಷೆಯನ್ನು ಇನ್ನೂ ವಿಧಿಸಿಲ್ಲ ಎಂದು ವರದಿಯಾಗಿದೆ.
< < < <
ಈ ನಡುವೆ ಗುಜರಾತಿನ ತಮ್ಮ ಅಧಿಕೃತ ಹೆಂಡಿರು ಮಕ್ಕಳನ್ನು ಮರೆತು ಕರ್ನಾಟಕದ ತುಂಬೆಲ್ಲ ಅಂಡಲೆಯುತ್ತಿರುವ ಅಮಿತ್ ಬೋಡಪ್ಪನವರು ಬಿಜೆಪಿ ಪಾರ್ಟಿಗೂ ಮತ್ತು ಗಣಿರೆಡ್ಡಿಗೂ ಯಾವುದೇ ‘ವಿವಾಹೇತರ ಅಕ್ರಮ ಸಂಬಂಧ’ವಿಲ್ಲ ಎಂದು ಹೇಳಿದ್ದರು. ಆದರೂ ಸಹ ಬೋಡಪ್ಪನ ಮಾತಿಗೆ ಹಳೇಮೆಟ್ಟಿನಷ್ಟೂ ಬೆಲೆ ಕೊಡದ ಯಡೂರಪ್ಪನವರು ಗಣಿರೆಡ್ಡಿಯನ್ನು ಕಂಕುಳಲ್ಲಿ ಎತ್ತಿಕೊಂಡು ಕರ್ನಾಟಕದ ಮನೆಮನೆಯಲ್ಲಿ ಓಟಿನ ತಿರುಪೆ ಎತ್ತಲು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿ ತಿಳಿದ ಅಮಿತ್ ಬೋಡಪ್ಪನವರು ಸಿಟ್ಟಿಗೆದ್ದು ಯಡೂರಪ್ಪನ ಮಗನ ಎಲೆಕ್ಷನ್ ಟಿಕೇಟಿಗೆ ಬಗನಿಗೂಟ ಹೆಟ್ಟಿದ್ದಾರೆಂದು ಬಲ್ಲ ಮೂಲಗಳಿಂದ ಇನ್ನೂ ತಿಳಿದು ಬಂದಿಲ್ಲ.
< < < <
ಇದೀಗ ಬಂದ ಸುದ್ದಿ. ಈ ಚುನಾವಣೆಯಲ್ಲಿ ಗೆದ್ದ ನಂತರವೇ ಗಡ್ಡಮೀಸೆ ಬೋಳಿಸುತ್ತೇನೆಂದು ಗಣಿರೆಡ್ಡಿಯ ಟೋಫನ್‍ತಲೆ ಮೇಲೆ ಆಣೆ ಮಡಗಿರುವ ‘ಸ್ತ್ರೀರಾಮುಲು’ ಇದ್ದಕ್ಕಿದ್ದಂತೆ ದೈವಭಕ್ತರಾಗಿದ್ದಾರೆ. ತಮ್ಮ ಮನೆಗೇ ಪೂಜಾರಿಗಳನ್ನು ಕರೆಸಿಕೊಂಡು ಗೋಪೂಜೆಯನ್ನು ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಹಸುವಿಗೆ ಅರಿಶಿಣ ಕುಂಕುಮ ಹಚ್ಚಲು ಹೇಳಿದ ಪೂಜಾರಿಯ ಮಾತು ಮುಗಿಯುವ ಮೊದಲೇ ಅರಿಶಿಣ ಕುಂಕುಮದ ಪಾತ್ರೆಯೆತ್ತಿಕೊಂಡ ಸ್ತ್ರೀರಾಮುಲು ಗೋಡೆಗೆ ಎನಾಮೆಲ್ ಪೇಂಟ್ ಬಳಿದಂತೆ ಹಸುವಿಗೆ ಬಳಿದಿದ್ದಾರೆ. ಪೂಜೆಯ ನಂತರ ಈ ಅನಿರೀಕ್ಷಿತ ಕುಂಕುಮದ ದಾಳಿಯಿಂದ ಬೆಚ್ಚಿಬಿದ್ದ ಹಸುವು ಸ್ತ್ರೀರಾಮುಲು ಮನೆಯಿದ್ದ ವಿರುದ್ಧ ದಿಕ್ಕಿಗೆ ಓಡಿಹೋಗಿದ್ದು ಇಷ್ಟೊತ್ತಿಗೆ ಬಹುಶಃ ರಾಜಸ್ಥಾನ ತಲುಪಿರಬಹುದೆಂದು ತಜ್ಞರು ಅಂದಾಜಿಸಿದ್ದಾರೆ.
< < < <
ಬಿಜೆಪಿ ಪಕ್ಷದ ಅನಧಿಕೃತ ಕಾನ್ಸ್‍ಟೇಬಲ್‍ಗಳಂತೆ ಕೋಮುಗಲಭೆಗಳು, ಬಂದ್, ಪ್ರತಿಭಟನೆಗಳಲ್ಲಿ ಗುಂಪುಗುಂಪಾಗಿ ಧುಮುಕಿ ಜೈಲುಪಾಲಾಗುತ್ತಿದ್ದ ‘ಪಿಲ್ಲವ ಸಮುದಾಯದ’ ವೀರಸೈನಿಕರಿಗೆ ಈ ಬಾರಿ ಬಿಜೆಪಿ ಪಂಗನಾಮ ಎಳೆದಿದೆ. ‘ಪಿಲ್ಲವ ಸಮುದಾಯದ’ ಯಾವೊಬ್ಬ ಗಂಡಸೂ ಮನೆಯಲ್ಲಿ ಇರಲು ಬಿಡದೆ, ಎಲ್ಲರನ್ನೂ ಸಾಮೂಹಿಕವಾಗಿ ಜೈಲಿಗೆ ಸೇರಿಸಿ ಗಿನ್ನೆಸ್ ದಾಖಲೆ ಬರೆಯಲು ಯತ್ನಿಸುತ್ತಿರುವ ಬಿಜೆಪಿಯ ಕೃಶಕಾಯ ಎದೆಯ ಮೇಲೆ ‘ಪಿಲ್ಲವರು’ ಕಾಲೆತ್ತಿ ಮಡಗಿದ್ದಾರೆ. ಯೂಸ್ ಮಾಡಿ ಬಿಸಾಕಲು ನಮ್ಮನ್ನೇನು ಕಾಂಡೋಮ್ ಎಂದುಕೊಂಡಿದ್ದೀರ ಎಂದು ರೊಚ್ಚಿಗೆದ್ದಿರುವ ‘ಪಿಲ್ಲವರ’ ಆಕ್ರೋಶದ ಹಿಂದೆ ಸಮುದಾಯಕ್ಕೆ ಟಿಕೆಟ್ ನಿರಾಕರಿಸಿದ ಬಿಜೆಪಿಯ ದೌಲತ್ತಿದೆ ಎಂಬುದು ತಿಳಿದುಬಂದಿದೆ.
< < < <
ಅತ್ತಾಗೂ ಇಲ್ಲ, ಇತ್ತಾಗೂ ಇಲ್ಲದ ಉಪರಾಷ್ಟ್ರಪತಿ ‘ಪೆಂಕಯ್ಯ ನಾಯ್ಡು’ ಅವರು ‘ಭಾರತದಲ್ಲಿ ಮಹಿಳೆಯರ ಮೇಲೆ ಗೌರವ ಕಡಿಮೆಯಾಗಲು ಬ್ರಿಟಿಷರೇ ಕಾರಣ’ ಎಂದು ಹೇಳಿದ್ದಾರೆ. ಬ್ರಿಟಿಷರು ಬರುವುದಕ್ಕೂ ಮೊದಲು ಭಾರತ ದೇಶದಲ್ಲಿ ವಿಧವೆಯರನ್ನು ಗಂಡನ ಚಿತೆಯೊಳಗೆ ತಳ್ಳಿ ಸುಟ್ಟುಹಾಕುವ ಅದ್ಭುತ ಸತಿಸಹಗಮನ ಪದ್ಧತಿ, ದೇವರ ಹೆಸರಿನಲ್ಲಿ ದಲಿತ ಮಹಿಳೆಯರನ್ನು ವೇಶ್ಯಾವಾಟಿಕೆಗೆ ನೂಕುತ್ತಿದ್ದ ದೇವದಾಸಿ ಪದ್ಧತಿಯಂತಹ ಅತ್ಯದ್ಭುತ ಪದ್ಧತಿಗಳಿದ್ದವು. ಬ್ರಿಟಿಷರು ಬಂದು ಇವೆಲ್ಲ ಅತ್ಯುತ್ತಮ ಪದ್ಧತಿಗಳನ್ನು ನಿಲ್ಲಿಸಿ ಮಹಿಳೆಯರಿಗೆ ಅಗೌರವ ಉಂಟು ಮಾಡಿದರೆಂದು ಪೆಂಕಯ್ಯನವರು ಇನ್ನೂ ಹೇಳಿಲ್ಲವೆಂದು ಬಲ್ಲ ಮೂಲಗಳು ಹೇಳಿವೆ.
< < < <
ನೋಟ್ ಬ್ಯಾನ್ ಮೂಲಕ ಲಕ್ಷಾಂತರ ಕೋಟಿ ಕಪ್ಪುಹಣವನ್ನು ಹೊರತೆಗೆಯಲು ಯತ್ನಿಸಿ ಅಂಡುಸುಟ್ಟ ಬೆಕ್ಕಿನಂತಾಗಿರುವ ಪಕೋಡೇಂದ್ರರ ಅಧ್ವಾನಗಳಿಗೆ ಇಂದಿಗೂ ಸಹ ಭಾರತದ ಎಟಿಎಂಗಳಲ್ಲಿ ಹಣವಿಲ್ಲದಂತಾಗಿದೆ. ಇದನ್ನು ಸರಿಪಡಿಸಲು ಎಟಿಎಂಗಳಲ್ಲಿ ಖೋಟಾನೋಟುಗಳನ್ನು ತುಂಬಿ ಜನರ ಹಣೆಗೆ ಪಂಗನಾಮ ಎಳೆಯುವ ಪ್ರಯತ್ನ ಉತ್ತರ ಭಾರತದಿಂದ ವರದಿಯಾಗಿದೆ. ಬರೇಲಿಯ ಎಟಿಎಂಗಳಲ್ಲಿ ಹಣ ಪಡೆಯಲು ಹೋದ ಜನರ ಕೈಗೆ ಖೋಟಾನೋಟುಗಳು ತುಪತುಪನೆ ಉದುರಿದ್ದು, ಜನರು ಪಕೋಡೇಂದ್ರನ ನೋಟ್‍ಬ್ಯಾನ್ ಸಾಹಸವೇ ಇವೆಲ್ಲ ಕಾಮಿಡಿಗಳಿಗೆ ಕಾರಣವೆಂದು ಪಕೋಡೇಂದ್ರನ ಮೇಲೆ ಮಾಟಮಂತ್ರ ಮಾಡಿಸಿಯಾದರೂ ಸರಿ ದೇಶದಿಂದ ಓಡಿಸಬೇಕೆಂದು ಕೇರಳದ ಮಾಂತ್ರಿಕರನ್ನು ಹುಡುಕುತ್ತಿದ್ದಾರೆ ಎಂಬ ಘನಘೋರ ಸತ್ಯ ಇನ್ನೂ ಬಯಲಾಗಿಲ್ಲ.
< < < <
ಇದೆಲ್ಲದರ ನಡುವೆ ಕುಖ್ಯಾತ ನಟ ‘ಸಾಯಿಗುಮಾರ್’ ಅವರಿಗೆ ಬಿಜೆಪಿ ಪಕ್ಷವು ಟಿಕೇಟನ್ನು ಕೊಟ್ಟಿದ್ದು, ಇದಕ್ಕೆ ಕಾರಣವೇನೆಂದು ಕೆದಕಿದಾಗ ಆಘಾತಕಾರಿ ವಿಷಯಗಳು ಹೊರಬಂದಿವೆ. ಟಿಕೇಟ್ ಕೇಳಲು ಕೈಯಲ್ಲಿ ಲಾಂಗ್ ಹಿಡಿದು ಸೀದ ‘ಹಾರೆಸ್ಸೆಸ್’ ಮುದುಕರ ಕೊಂಪೆಗೆ ನುಗ್ಗಿದ್ದ ಸಾಯಿಗುಮಾರ್ ಅವರು ಅಲ್ಲಿದ್ದ ಮಿಟುಕಲಾಡಿ ಮುದುಕರ ಸೊಂಟದ ಮೇಲೆ ಲಾಂಗ್ ಇಟ್ಟು, ಟಿಕೇಟ್ ಕೊಡ್ತೀರೋ, ಇಲ್ಲಾ ಸೊಂಟ ಕುಯ್ಯಲೋ ಎಂದು ಆವಾಜ್ ಹಾಕಿದ್ದರಂತೆ. ಐಟಂ ಉಳಿದರೆ ಸಾಕೆಂದು ಹಾರೆಸ್ಸೆಸ್ ಮುದುಕರು ಸಾಯಿಗುಮಾರ್‍ಗೆ ಟಿಕೇಟ್ ಕೊಟ್ಟು, ‘ವದಲೇರಾ ದೊಂಗ ನಾ ಕೊಡಕಾ’ ಎಂದು ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆಂದು ಇನ್ನೂ ತಿಳಿದುಬಂದಿಲ್ಲ.
< < < <
ಭಾರತೀಯ ಜನ ಪಕ್ಷದ ಒನ್ ಅಂಡ್ ಓನ್ಲಿ ಗಂಡಸಾಗಿರುವ ಸೋಪಕ್ಕನವರು ಈ ಸಲ ಟಿಕೇಟ್ ಸಿಗದೆ ಅಬ್ಬೇಪಾರಿಯಂತಾಗಿ ಮಾನಸಿಕ ಕ್ಷೋಭೆಗೆ ಒಳಗಾಗಿದ್ದಾರೆಂದು ತಿಳಿದುಬಂದಿದೆ. ‘ಯಾಕೆ ಸೋಪ, ಏನಾಯ್ತು ನಿಂಗೆ, ಯಾಕೆ ಹೀಗೆ ತಲೆಕೆದರಿಕೊಂಡು ಕುಂತಿದ್ದೀಯ’ ಎಂದು ಸಮಾಧಾನಪಡಿಸಲು ಹೋದ ಯಡ್ರಪ್ಪನವರ ತೊಡೆಗೆ ಸೋಪಕ್ಕನವರು ಬಲವಾಗಿ ಅಗಿದಿರುವ ಸಿಸಿಟಿವಿ ದೃಶ್ಯಗಳು ನಮಗೆ ಲಭ್ಯವಾಗಿವೆ. ಕನಿಷ್ಟ ಪಕ್ಷ 250 ಗ್ರಾಂನಷ್ಟು ಮಾಂಸವನ್ನು ಕಿತ್ತಿರುವ ಸೋಪಕ್ಕನವರು ನಂತರ ಯಡ್ರಪ್ಪನವರ ಕುತ್ತಿಗೆಗೆ ಬಾಯಿ ಹಾಕಲು ಯತ್ನಿಸಿದ್ದಾರೆ. ಆಗ ಅಲ್ಲೇ ಇದ್ದ ಸೆಕ್ಯೂರಿಟಿ ಗಾರ್ಡ್‍ಗಳು ಸೋಪನ ಕಪ್ಪಾಳಕ್ಕೆ ಚಟೇರ್-ಪಟೇರ್ ಎಂದು ಬಡಿದು ಯಡ್ರಪ್ಪನವರ ಪ್ರಾಣವನ್ನು ಕಾಪಾಡಿದ್ದಾರೆಂದು ಇನ್ನೇನು ನಮಗೆ ಸುದ್ದಿ ಲಭಿಸಲಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮುಂದಿನ ವಾರ ಸಿಗೋಣ. ಟೇಕ್ ಕೇರ್ ಬೈ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...