Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...