Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...