Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...