Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...