Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...