Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...