Homeಅಂಕಣಗಳುಗೌರಿ ಆಶಯಗಳ ಜೊತೆಗೆ.....

ಗೌರಿ ಆಶಯಗಳ ಜೊತೆಗೆ…..

- Advertisement -
- Advertisement -

ಬಂಧುಗಳೇ,

ಗೌರಿ ಲಂಕೇಶ್‌ರ ಹತ್ಯೆ ಮಾಡುವ ಮೂಲಕ ತಮ್ಮ ವಿರುದ್ಧದ ಗಟ್ಟಿದನಿಯನ್ನು ಇಲ್ಲವಾಗಿಸುವುದು ಆ ಸಂಚುಕೂಟದ ಲೆಕ್ಕಾಚಾರವಾಗಿತ್ತು. ಆದರೆ ಈ ನಾಡಿನ ಜನತೆ ‘ನಾನೂ ಗೌರಿ! ನಾವೆಲ್ಲಾ ಗೌರಿ!!’ ಎಂದು ಒಕ್ಕೊರಲಿನಿಂದ ಕೂಗಿ ಹೇಳಿ ಈ ಸಂಚುಕೂಟಕ್ಕೆ ಬೇರೆಯದೇ ಸಂದೇಶವನ್ನು ರವಾನಿಸಿದ್ದಾರೆ. ”ವ್ಯಕ್ತಿಗಳಿಗೆ ಗುಂಡಿಕ್ಕಬಹುದೇ ಹೊರತು ವಿಚಾರಗಳಿಗೆ ಗುಂಡಿಕ್ಕಲು ನಿಮ್ಮಿಂದ ಎಂದಿಗೂ ಸಾಧ್ಯವಿಲ್ಲ” ಎಂದು ಸಾರಿ ಹೇಳಿದ್ದಾರೆ. ‘ಒಬ್ಬ ಗೌರಿಯ ವಿಚಾರವನ್ನು ಸಾವಿರಾರು ಗೌರಿಯರಾಗಿ ನಾವು ಮುಂದುವರೆಸುತ್ತೇವೆ’ ಎಂಬ ಪಣ ತೊಟ್ಟಿದ್ದಾರೆ.

ಇಂಥ ಒಂದು ಸಾಮೂಹಿಕ ದೃಢ ಸಂಕಲ್ಪದ ಫಲವಾಗಿ ‘ನಾನು ಗೌರಿ’ ಪತ್ರಿಕೆ ಆರಂಭವಾಗಿದೆ. ಪತ್ರಿಕೆಯ ಆರಂಭದೊಂದಿಗೆ ನಮ್ಮ ಗೌರಿ ಲಂಕೇಶ್ ಮರುಹುಟ್ಟು ಪಡೆದಿದ್ದಾರೆ. ಗೌರಿ ಇಲ್ಲದ ಈ ಸಂಕಟಮಯ ಸನ್ನಿವೇಶದಲ್ಲಿ ಗೌರಿ ಪತ್ರಿಕೆಯನ್ನು ಹೊರತರಲು ಕೈಜೋಡಿಸಿದ ಎಲ್ಲರಿಗೂ ‘ಗೌರಿ ಮೀಡಿಯಾ’ ತಂಡದ ಹೃದಯಪೂರ್ವಕ ಕೃತಜ್ಞತೆಗಳು.

ಲಂಕೇಶ್‌ರು ಹುಟ್ಟುಹಾಕಿದ ಜನಪರ, ನಿರ್ಭೀತ ಪತ್ರಿಕೋದ್ಯಮದ ಮಾದರಿಯನ್ನು ಮುಂದುವರೆಸಿದ ಗೌರಿ ಲಂಕೇಶ್ ಆಕ್ಟಿವಿಸ್ಟ್ ಆಗಿ, ಪತ್ರಕರ್ತೆಯಾಗಿ ಹಾಕಿಕೊಟ್ಟ ಮಾದರಿ ನಮಗೆ ಸದಾ ಸ್ಫೂರ್ತಿ. ಈ ಎರಡೂ ಲೆಗಸಿಗಳನ್ನು ಮುಂದುವರೆಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜೊತೆಗೆ ಈ ಕಾಲಘಟ್ಟದ ಹೊಸ ಸಂಕೀರ್ಣತೆಗಳಿಗೆ ಮುಖಾಮುಖಿಯಾಗಬೇಕಿರುವ ಸವಾಲು ನಮ್ಮ ಮುಂದಿದೆಯೆಂಬುದನ್ನೂ ಅರಿತು ಮುಂದಡಿ ಇಡುತ್ತಿದ್ದೇವೆ.

ಕಲ್ಬುರ್ಗಿ ಹತ್ಯೆ ಖಂಡಿಸಿ ಗೌರಿ ಹಾಗೂ ಇನ್ನಿತರೆ ಪ್ರಗತಿಪರರ ಪ್ರತಿಭಟನೆ

ಇಂದು ನಮ್ಮ ಪ್ರಜಾತಂತ್ರ ಬಿಕ್ಕಟ್ಟಿನಲ್ಲಿದೆ. ನಮ್ಮ ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಬುನಾದಿಯನ್ನೇ ಅಲುಗಾಡಿಸುವ ಮಟ್ಟಕ್ಕೆ ಇಂದು ಫ್ಯಾಸಿಸ್ಟ್ ಶಕ್ತಿಗಳು ಬೆಳೆದು ನಿಂತಿವೆ. ಸ್ವತಂತ್ರ, ನಿರ್ಭೀತ ಪತ್ರಿಕೆಗಳ ಹಾಗೂ ಪತ್ರಕರ್ತರ ದನಿ ಅಡಗಿಸಲು ಈ ಹಿಟ್ಲರ್‌ಶಾಹಿಗಳು ದೇಶಾದ್ಯಂತ ಸೃಷ್ಟಿಸುತ್ತಿರುವ ಭೀಭತ್ಸಕ್ಕೆ ಗೌರಿಯವರ ಹತ್ಯೆಯೇ ಸಾಕ್ಷಿ. ದೀನ ದಲಿತರ, ದುರ್ಬಲರ ದನಿಯಾಗಬೇಕಿದ್ದ ಮಾಧ್ಯಮ ಕ್ಷೇತ್ರವನ್ನು ಇಡಿಯಾಗಿ ಕಾರ್ಪೊರೇಟ್ ಶಕ್ತಿಗಳು ಆವರಿಸಿಕೊಳ್ಳುತ್ತಿವೆ. ಸಾಮಾಜಿಕ ಮಾಧ್ಯಮದಲ್ಲೂ ಫ್ಯಾಸಿಸ್ಟ್‌ಗಳದೇ ಕಾರುಬಾರು.

ಹಿಟ್ಲರ್‌ಶಾಹಿಗಳು ಸೃಷ್ಟಿಸಿರುವ ಇಂಥ ವಿಷಮ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸದೆ ಹೋದರೆ ಈ ದೇಶದ ಪ್ರಜಾತಂತ್ರದ ಅಸ್ತಿತ್ವಕ್ಕೇ ಸಂಚಕಾರ ಒದಗುವ ಅಪಾಯವಿದೆ. ಈ ಕಾಲದ ಕರೆಗೆ ಓಗೊಡಬೇಕಾದ್ದು ಜನಪರ ಪತ್ರಿಕೆಯೊಂದರ ಆದ್ಯ ಕರ್ತವ್ಯ. ‘ನಾನು ಗೌರಿ’ ಪತ್ರಿಕೆ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧವಾಗಿದೆ. ಹಾಗೆಯೇ ಗದ್ದುಗೆಯಲ್ಲಿರುವವರ ಜನವಿರೋಧಿತನವನ್ನು ಎದುರಿಸಿ ನಿರಂತರ ವಿರೋಧ ಪಕ್ಷವಾಗಿ ನಿಲ್ಲುವ ಆಶಯ ನಮ್ಮದು. ಯಾವುದೇ ರಾಜಕೀಯ ಪಕ್ಷದ, ರಾಜಕಾರಣಿಗಳ ಮರ್ಜಿಗೆ ಒಳಗಾಗದೆ ಅಥವ ಜಾಹಿರಾತುಗಳ ಹಂಗಿಗೆ ಸಿಲುಕದೆ ಪತ್ರಿಕಾ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ‘ನಾನು ಗೌರಿ’ ಬದ್ಧವಾಗಿರುತ್ತದೆ.

ಪತ್ರಿಕೆಯ ಸ್ವಭಾವ ಮತ್ತು ಗುಣಮಟ್ಟಗಳನ್ನು ಉತ್ತಮಪಡಿಸುವ ನಿರಂತರ ಪ್ರಕ್ರಿಯೆಯ ಭಾಗವಾಗಿ ಹೊಸದಾರಿಯಲ್ಲಿ ಸಾಗುತ್ತೇವೆ. ಇದರ ಭಾಗವಾಗಿ ಹೊಸ ತಲೆಮಾರಿನ ಬರಹಗಾರರನ್ನು ಒಳಗೊಳ್ಳುವುದು ಮಾತ್ರವಲ್ಲದೆ, ವಿವಿಧ ಜನಪರ ಚಳವಳಿಗಳ ನಮ್ಮ ನಡುವಿನ ಭಿನ್ನ ವಿಚಾರ ಧಾರೆಗಳ ನಡುವೆ ರಚನಾತ್ಮಕ ಸಂವಾದಕ್ಕೆ ‘ಪತ್ರಿಕೆ’ ವೇದಿಕೆಯಾಗಲಿದೆ. ವರ್ತಮಾನಕ್ಕೆ ಸಂವಾದಿಯಾಗಿ ಬರಹದಲ್ಲಿ ತೊಡಗಿಸಿಕೊಂಡಿರುವ ಹಲವು ಗಣ್ಯರ ಅಂಕಣಗಳೂ ಇರುತ್ತವೆ. ದಿಕ್ಕೆಟ್ಟ ರಾಜಕಾರಣ, ಆರ್ಥಿಕ ಕ್ಷೇತ್ರದ ಕಾರ್ಪೊರೇಟ್ ಹಿಡಿತ, ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು, ಸಾಹಿತ್ಯ, ಸಿನಿಮಾ, ವಿಮರ್ಶೆ ಇತ್ಯಾದಿ ಹತ್ತು ಹಲವು ಬಗೆಯ ಬರಹಗಳನ್ನು ಪತ್ರಿಕೆ ಒಳಗೊಳ್ಳಲಿದೆ. ಕನ್ನಡದ ಜಾಣ, ಜಾಣೆಯರು ಇಷ್ಟಪಡುವ ರಂಜನೆ, ಬೋಧನೆ, ಪ್ರಚೋದನೆಗೆ ಪೂರಕವಾದ ಬರಹಗಳೂ ಇರುತ್ತವೆ.

ಗೌರಿ ಹತ್ಯೆಯನ್ನು ಖಂಡಿಸಿ, ಈ ಹಿಂದೆ ಗೌರಿ ಪ್ರತಿಭಟಿಸಿದ್ದ ಜಾಗದಲ್ಲೇ ಪ್ರಗತಿಪರರ ಪ್ರತಿಭಟನೆ!

ಗೌರಿ ಲಂಕೇಶ್‌ರ ಸಹೋದ್ಯೋಗಿಗಳಾಗಿದ್ದ ಬಹುತೇಕ ಲೇಖಕ, ಲೇಖಕಿಯರು ಹಾಗೂ ಇಡೀ ಕಚೇರಿ ಸಿಬ್ಬಂದಿ ಈ ಹೊಸ ಪ್ರಯತ್ನದಲ್ಲಿ ಹೃತ್ಪೂರ್ವಕವಾಗಿ ತೊಡಗಿಸಿಕೊಂಡಿರುವುದು ನಮ್ಮ ಶಕ್ತಿಯನ್ನು ಇಮ್ಮಡಿಸಿದೆ. ಎಲ್ಲಕ್ಕಿಂತ ಮುಖ್ಯವಾದ ಸಂಗತಿಯೆಂದರೆ ‘ನಾನು ಗೌರಿ’ ಪತ್ರಿಕೆ ಯಾರೊಬ್ಬರ ಖಾಸಗಿ ಸ್ವತ್ತಲ್ಲ. ಗೌರಿಯವರ ಆಶಯದೊಂದಿಗೆ ಏಕೀಭವಿಸುವ ಲಕ್ಷಾಂತರ ಜನರು ಪತ್ರಿಕೆ ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗೆ ಹೇಳಬೇಕೆಂದರೆ ಈ ಪತ್ರಿಕೆ ಗೌರಿ ಆಶಯವನ್ನು ಪ್ರತಿನಿಧಿಸುವ ಎಲ್ಲರಿಗೂ ಸೇರಿದ್ದು.

ಈ ಡಿಜಿಟಲ್ ಮಾಧ್ಯಮದ ಯುಗದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೆಗಳು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಅದೆಷ್ಟೋ ಹಿರಿಯರು, ಹಿತೈಷಿಗಳು ಕಿವಿ ಮಾತು ಹೇಳಿದ್ದಾರೆ. ಇದು ಸುಗಮವಾದ ಹಾದಿಯಲ್ಲ ಎಂಬುದು ನಿಜ. ಆದರೆ ನಾಡಿನಾದ್ಯಂತ ‘ಪತ್ರಿಕೆ’ಗಾಗಿ ಆಗ್ರಹಿಸುತ್ತಿರುವವರ ಸಂಖ್ಯೆಯೂ ದೊಡ್ಡದಿದೆ ಎಂಬುದೂ ನಿಜ. ಆದರೆ ಗೌರಿ ಪತ್ರಿಕೆಯನ್ನು ಮುಂದುವರೆಸುವುದು ಭಾವನಾತ್ಮಕ ವಿಷಯ ಎಂಬುದಕ್ಕಿಂತಲೂ ಹೆಚ್ಚಾಗಿ ನಮ್ಮ ಬದ್ಧತೆಗೆ ಸಂಬಂಧಿಸಿದ್ದು. ನಿಮ್ಮಲ್ಲರ ಬೆಂಬಲ, ಪ್ರೋತ್ಸಾಹಗಳ ಬಲದಿಂದ ಪತ್ರಿಕೆ ನಡೆಸುವ ಸಂಕಷ್ಟವನ್ನು ದಾಟಬಹುದೆಂಬ ವಿಶ್ವಾಸ ನಮ್ಮದು.

ಪ್ರತಿರೋಧ ಸಮಾವೇಶದಲ್ಲಿ ಗೌರಿ ಹತ್ಯಗೆ ಮಿಡಿದ ಜನಸಾಗರ

ನಮ್ಮೆಲ್ಲರ ಹೃದಯದಾಳದಲ್ಲಿ ಮಡುಗಟ್ಟಿದ ನೋವು, ಆಕ್ರೋಶಗಳು ನಮ್ಮ ಈ ಬದ್ಧತೆಯನ್ನು ಗಟ್ಟಿಗೊಳಿಸಿ, ಪತ್ರಿಕೆಯ ಮರುಹುಟ್ಟಿಗೆ ಭದ್ರ ಬುನಾದಿ ಹಾಕಿಕೊಟ್ಟಿವೆ. ಈ ಸವಾಲಿನ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸದಿಂದ ನಮ್ಮ ತಂಡ ಕಾರ್ಯೋನ್ಮುಖವಾಗಿದೆ. ಹಾಗೆಂದು ಸಮಸ್ಯೆಗಳೇ ಇರುವುದಿಲ್ಲ, ತಪ್ಪುಗಳೇ ಆಗುವುದಿಲ್ಲ ಎಂದರ್ಥವಲ್ಲ. ನಾವು ಎಡವಿದಾಗ ನೀವು ನಮ್ಮ ಕೈಹಿಡಿಯುತ್ತೀರಿ, ತಪ್ಪು ಮಾಡಿದಾಗ ಕಿವಿ ಹಿಂಡುತ್ತೀರಿ, ಪತ್ರಿಕೆಯ ನೋವು-ನಲಿವುಗಳಲ್ಲಿ ನಮ್ಮೊಂದಿಗಿರುತ್ತೀರಿ ಎಂಬ ತುಂಬು ವಿಶ್ವಾಸ ನಮ್ಮದು.

ಕೊನೆಯದಾಗಿ, ಈಜಿಪ್ಟ್ ಬಂಡಾಯದ ಸಂದರ್ಭದಲ್ಲಿ ಹುಟ್ಟಿಕೊಂಡ ಒಂದು ಮಾತು ನೆನಪಿಸುತ್ತೇನೆ. “The power of the people is stronger than the people in power”. ಅಂದರೆ ಅಧಿಕಾರದಲ್ಲಿರುವವರ ಬಲಕ್ಕಿಂತ ಜನಶಕ್ತಿಯ ಬಲ ಹೆಚ್ಚು ಬಲಿಷ್ಠವಾದುದು. ಅಂಥಾ ಜನಶಕ್ತಿಯ ಬಲವನ್ನು ನಿರೂಪಿಸಲು ನಾವೆಲ್ಲರೂ ಒಗ್ಗೂಡೋಣ. ಗೆಲುವಿನ ಹಾದಿ ನಮ್ಮದು.
ನಾನು ಗೌರಿ! ನಾವೆಲ್ಲಾ ಗೌರಿ!!

ಗೌರಿ ಮೀಡಿಯಾ ಟ್ರಸ್ಟ್ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...