Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು...

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....