Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...