Homeಅಂಕಣಗಳುಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ...

ಗೌರಿ ಕಣ್ಣೋಟ | ಮಹಿಳೆಯರ ಪಾಲಿಗೆ ಆಧುನಿಕತೆ ಎಂದರೆ…

- Advertisement -
- Advertisement -

ನಮ್ಮ ಆಫೀಸಿನ ಹತ್ತಿರವೇ ಇರುವ ಮಹಿಳಾ ಕಾಲೇಜಿಗೆ ಬರುವ ಹುಡುಗಿಯರನ್ನು ಪ್ರತಿ ದಿನ ನೋಡುತ್ತಿರುತ್ತೇನೆ. ಬಣ್ಣಬಣ್ಣದ ಚೂಡಿದಾರಗಳು, ಜೀನ್ಸ್ ಮತ್ತು ಟೀ ಶರ್ಟ್ಗಳು, ಹಲವೊಮ್ಮೆ ಮೈ ತುಂಬ ದೊಗಲಾದ ಬಟ್ಟೆ ಧರಿಸಿ ತಲೆ ಕೂದಲನ್ನು ಮಾತ್ರ ಮುಚ್ಚಿರುವ ಉಡುಪುಗಳು, ಅಪರೂಪಕ್ಕೊಮ್ಮೆ ನವಿರಾದ ಸೀರೆ…. ಹೀಗೆ ವಿವಿಧ ಉಡುಪುಗಳನ್ನು ತೊಟ್ಟು ಗೆಳತಿಯರೊಂದಿಗೆ ಚರ್ಚಿಸುತ್ತಾ, ತಮ್ಮ ಸ್ಕೂಟಿಗಳನ್ನು ವೇಗವಾಗಿ ಓಡಿಸುತ್ತಾ, ಬದುಕಿನ ಬಗ್ಗೆ ಕನಸುಗಳನ್ನೂ, ಆಸೆಗಳನ್ನೂ ಹೊತ್ತಿರುವ ಆ ಹುಡುಗಿಯರ ಮುಖಗಳು ಅದೆಷ್ಟು ಲವಲವಿಕೆಯಿಂದ ಕೂಡಿರುತ್ತದೆ ಎಂದರೆ ಅವರನ್ನು ನೋಡುವುದೇ ನೂರಾರು ಬಣ್ಣಬಣ್ಣದ ಚಿಟ್ಟೆಗಳನ್ನು ಒಮ್ಮೆಗೆ ನೋಡಿದಷ್ಟು ಸಂತೋಷ ಕೊಡುತ್ತದೆ. ಆದರೆ ಈ ಸಂತೋಷದ ನಡುವೆಯೇ ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಓದಿದೆ.

ಅದರಲ್ಲಿ ಭಾರತೀಯ ಮಹಿಳೆಯರು ಹೇಗಿರಬೇಕು ಎಂದು ವಿವರಿಸಲಾಗಿತ್ತು. “ಭಾರತೀಯ ಹುಡುಗಿಯರು ಪ್ರತ್ಯೇಕ ಶಾಲೆ ಮತ್ತು ಕಾಲೇಜುಗಳಿಗೆ ಹೋಗಬೇಕು. ಇಲ್ಲಿ ಕೋ-ಎಜುಕೇಷನ್ ಪದ್ಧತಿ ಇರಕೂಡದು. ಹುಡುಗರು ಮತ್ತು ಹುಡುಗಿಯರು ಪರಸ್ಪರ ಭೇಟಿ ಯಾಗುವಂತಹ ವ್ಯವಸ್ಥೆ ಇರಬಾರದು. ಮಹಿಳೆಯರಿಗೆ ನೀಡುವ ವಿದ್ಯೆ ಕೂಡ ಅವರು ಮುಂದೆ ಹೆಂಡತಿಯರಾಗಿ, ಗೃಹಸ್ಥೆಯರಾಗಿ ಬಾಳು ನಡೆಸುವುದಕ್ಕೆ ಅನುಗುಣವಾಗಿರಬೇಕು. ಮನೆಯ ನಾಲ್ಕು ಗೋಡೆಗಳೊಳಗೇ ಅವರು ತಮ್ಮ ಬದುಕಿನ ಸಾರ್ಥಕತೆಯನ್ನು ಕಾಣಬೇಕಿರುವುದರಿಂದ ಅವರಿಗೆ ಇತರ ರೀತಿಯ ವಿದ್ಯೆ ಅನಗತ್ಯ’ ಇದಿಷ್ಟು ಆ ವರದಿಯ ಸಾರಾಂಶ. ಇದನ್ನು ಹೇಳಿದ್ದು ರಾಷ್ಟ್ರೀಯ ಸ್ವಯಂ ಸೇವಕರ ಸರಸಂಚಾಲಕ ಕೆ.ಎಸ್. ಸುದರ್ಶನ್.

ನಿಜ, ಇವತ್ತು ಭಾರತದ ಎಲ್ಲಾ ಮಹಿಳೆಯರಿಗೆ ಎಲ್ಲಾ ಹಕ್ಕುಗಳೂ ಸಿಕ್ಕಿಲ್ಲ. ಇವತ್ತಿಗೂ ಸಮಾನತೆಗಾಗಿ, ಸಮಾನ ವೇತನಕ್ಕಾಗಿ, ಸ್ವಾಭಿಮಾನಕ್ಕಾಗಿ, ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮುಂದುವರೆಯುತ್ತಿದೆ. ಆದರೆ, ಅದೇ ಸಮಯದಲ್ಲಿ ಸತಿ ಪದ್ಧತಿಗೆ ಬಲಿಯಾದ ರೂಪಾ ಕನ್ವರ್‌ಳ ಸಹಗಮನವನ್ನು ವೈಭವೀಕರಿಸುವವರನ್ನು ಅಧಿಕಾರಕ್ಕೆ ತರಲಾಗಿದೆ. ಅಷ್ಟೇ ಅಲ್ಲ, ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷದವರೂ ಬಹಳ ವರ್ಷದಿಂದ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರೂ ಇಲ್ಲಿಯವರೆಗೂ ಯಾವ ಮಸೂದೆಯೂ ಪಾಸಾಗಿಲ್ಲ. ಇದೆಲ್ಲದರ ಮಧ್ಯೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಲೇ ಇವೆ. ಹೊರಗೆ ಬಂದರೆ ಆಸಿಡ್ ದಾಳಿಯ ಹೆದರಿಕೆ, ಮನೆಯೊಳಗಿದ್ದರೆ ಕೌಟುಂಬಿಕ ಹಿಂಸೆ …….ಇವೆರಡೂ ಅದೆಷ್ಟೋ ಮಹಿಳೆಯರ ದಿನನಿತ್ಯದ ಬದುಕಿನ ಅಂಗಗಳಾಗಿ ಹೋಗಿವೆ. ಇವುಗಳೊಂದಿಗೆ ಈಗ ಧರ್ಮದ ನೆಪದಲ್ಲಿ ಸುದರ್ಶನ್‌ರಂತವರು ಮಹಿಳೆಯನ್ನು ಮತ್ತೊಮ್ಮೆ ಮೌಢ್ಯ, ಫ್ಯೂಡಲ್ ಪದ್ಧತಿ, ಅಸಮಾನತೆಗಳಿಗೆ ಗುರಿಪಡಿಸಲು ಹವಣಿಸುತ್ತಿದ್ದಾರೆ.

ಇಪ್ಪತ್ತೊಂದನೆ ಶತಮಾನದಲ್ಲಿ ನಿಂತಿರುವ ಭಾರತದ ಮಹಿಳೆ ಈಗ ಒಂದು ರೀತಿಯ ಕ್ರಾಸ್ ರೋಡ್ಸ್ನಲ್ಲಿ ಸಾಗುತ್ತಿದ್ದಾಳೆ. ನಮ್ಮ ಸಮಾಜದ ಮಾನಸಿಕ ಸ್ಥಿತಿ ಇನ್ನೂ ಮಧ್ಯ ಯುಗದಲ್ಲಿದ್ದರೆ, ಅದರ ಆರ್ಥಿಕ ಸ್ಥಿತಿ ಆಧುನಿಕ ಯುಗದಲ್ಲಿದೆ. ಆದ್ದರಿಂದಲೇ ಇವತ್ತು ಆಧುನಿಕತೆ ಎಂದರೇನೇ ಸರಕು, ಸುಖ, ತಂತ್ರಜ್ಞಾನ, ಉಪಭೋಗ ವೆಚ್ಚ ಎಂದು ಪರಿಗಣಿಸಲಾಗುತ್ತಿದೆ. ಆದರೆ ಮಹಿಳೆಯರ ಪಾಲಿಗೆ ಆಧುನಿಕತೆ ಎಂಬುದೇ ವೈಯಕ್ತಿಕ ಘನತೆ, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ವಾತಂತ್ರ‍್ಯಗಳು…..

– ಗೌರಿ ಲಂಕೇಶ್,
ಏಪ್ರಿಲ್ 6, 2005 (`ಕಂಡಹಾಗೆ; ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...