Homeಅಂಕಣಗಳುಅಪ್ಪನ ವಿದಾಯ ಮತ್ತು ವೈಚಾರಿಕತೆ

ಅಪ್ಪನ ವಿದಾಯ ಮತ್ತು ವೈಚಾರಿಕತೆ

- Advertisement -
- Advertisement -

| ಗೌರಿ ಲಂಕೇಶ್ |
ಜುಲೈ 29, 2009 (ಸಂಪಾದಕೀಯದಿಂದ)

ಅವತ್ತು ದೆಹಲಿಯಿಂದ ಬಂದು ಅಪ್ಪನನ್ನು ನೋಡಿದಾಗ ಅವರು ಟಾಟಾ ಹೇಳುತ್ತಿರುವಂತೆ ಒಂದು ಕೈ ಮೇಲಕ್ಕೆ ಚಾಚಿತ್ತು. ಅವರು ತಮ್ಮ ಫೇವರೇಟ್ ಆದ ನೀಲಿ ಬಣ್ಣದ ಸ್ವೆಟರ್ ಧರಿಸಿದ್ದರು. ಕಣ್ಣೀರು ತುಂಬಿದ್ದ ನನ್ನ ಕಣ್ಣುಗಳಿಗೆ ಏನೋ ಸರಿ ಇಲ್ಲ ಅನಿಸುತ್ತಿತ್ತು. ಮರುಕ್ಷಣವೇ ಅದೇನೆಂದು ಗೊತ್ತಾಯಿತು. ಅದೇ ಕ್ಷಣ ನನ್ನ ತಂಗಿ ಬೇಬಿ ಕೂಡ “ವಿಭೂತಿಯನ್ನು ಅಳಿಸು ಗೌರು” ಅಂದಳು. ಅವತ್ತು ನಮ್ಮ ಮನೆಗೆ ಬಂದಿದ್ದ ಅದ್ಯಾರೋ ಅಪ್ಪನ ಹಣೆಗೆ ವಿಭೂತಿ ಬಳಿದಿದ್ದರು. ತಣ್ಣಗಾಗಿದ್ದ ಅಪ್ಪನನ್ನು ಮುಟ್ಟಲಾಗದೇ ಬೇಬಿ ನನಗಾಗಿ ಕಾದಿದ್ದು ನಾನು ಬಂದಕೂಡಲೇ ಹಾಗೆ ಹೇಳಿದ್ದಳು. ದುಃಖದ ಜೊತೆಗೆ ಕೋಪವೂ ಬಂತು. ನನ್ನಪ್ಪ ಎಂದೂ ವಿಭೂತಿ(ಚಿಕ್ಕವರಿದ್ದಾಗ ಹೊರತುಪಡಿಸಿ) ಧರಿಸಿದವರಲ್ಲ, ಪೂಜೆ ಮಾಡಿದವರಲ್ಲ, ಲಿಂಗ ಕಟ್ಟಕೊಂಡವರಲ್ಲ, ಅಂತಹ ನನ್ನ ಅಪ್ಪ ಅಸಹಾಯಕರಾಗಿದ್ದಾಗ, ಪ್ರತಿಭಟಿಸದಂತಾಗಿದ್ದಾಗ ಅವರ ಹಣೆಗೆ ವಿಭೂತಿ ಹಚ್ಚಿದರು. ಅದನ್ನು ಕೂಡಲೇ ಒರೆಸಿದ ನಾನು “ನನ್ನಪ್ಪನನ್ನು ಯಾರೂ ಮುಟ್ಟಬೇಡಿ, ಇಂತಹದ್ದನ್ನೆಲ್ಲ ಮಾಡಬೇಡಿ” ಎಂದು ಆರ್ಭಟಿಸಿದ್ದೆ.

ಆದರೂ ಅದೆಲ್ಲ ಅಲ್ಲಿಗೇ ನಿಲ್ಲಲಿಲ್ಲ. ಮರುದಿನ ಆಗಮಿಸಿದ ಅಪ್ಪನ ಅಣ್ಣ ಶಿವರುದ್ರಪ್ಪ ಮತ್ತು ಇತರೆ ಸಂಬಂಧಿಗಳು ಅಪ್ಪನಿಗೆ ಅವಮಾನ ಮಾಡದಂತೆ ತಡೆಯುವುದೇ ಒಂದು ಕೆಲಸವಾಗಿ ಹೋಯಿತು. ಅವರ್ಯಾರೂ ಅಪ್ಪನಿಗೆ ಪೂಜೆ ಮಾಡದಂತೆ, ಕುಂಕುಮ ವಿಭೂತಿ ಹಚ್ಚದಂತೆ ನಾವೆಲ್ಲರೂ ಕಟ್ಟೆಚ್ಚರ ವಹಿಸಿದೆವು. ಅಪ್ಪನನ್ನು ತೋಟಕ್ಕೆ ಕರೆದುಕೊಂಡು ಹೋದಾಗ ನೋಡುತ್ತೇವೆ, ಅಲ್ಲಿ ಯಾರೋ ಆಗಲೇ ಚಟ್ಟವನ್ನು ಕಟ್ಟಿದ್ದರು. ವಾಹನದಿಂದ ಅಪ್ಪನನ್ನು ಇಳಿಸಿ ಆ ಚಟ್ಟದಲ್ಲಿ ಎತ್ತಿಕೊಂಡು ಹೋಗುವ ಉದ್ದೇಶ ಅವರದ್ದಾಗಿತ್ತು. ಕೂಡಲೇ ಆ ಚಟ್ಟವನ್ನು ನನ್ನ ಅಪ್ಪನ ಹತ್ತಿರ ತರಕೂಡದು ಎಂದು ನಾನು ಮತ್ತು ಬೇಬಿ ಹೇಳಿದೆವು.

ಆದರೆ ನಾನು ಹೇಳಿದಷ್ಟು ಅವತ್ತಿನ ಪರಿಸ್ಥಿತಿ ಸರಳವಾಗಿರಲಿಲ್ಲ. ನನ್ನ ದೊಡ್ಡಪ್ಪ ಮತ್ತು ಅವರ ಮಗ ನಾಗರಾಜು “ ಇದೇನಿದು, ಲಿಂಗಾಯತರು ತೋಡುವಂತೆ ಗುಂಡಿಯನ್ನು ತೋಡಿಲ್ಲ” ಎಂದು ತಕರಾರು ಎತ್ತಿದರು. ಅದೆಲ್ಲ ಬೇಡ ಅಂದರೆ ಅವರು ಸಿದ್ಧರಾಗಿರಲಿಲ್ಲ. ಅದರಲ್ಲೂ ದೊಡ್ಡಪ್ಪ ಇದ್ದವರು ಇನ್ನೊಂದು ವಿಚಾರ ಕೈಗೆತ್ತಿಕೊಂಡರು. “ ಹೀಗೆ ಅಂಗಾತ ಮಲಗಿಸುವುದು ಸರಿಯಲ್ಲ ಕಾಲುಗಳನ್ನು ಮಡಚಿ ನಮ್ಮ ಸಂಪ್ರದಾಯದಂತೆ ಕೂರಿಸಿರಬೇಕು” ಎಂದರು. ಅಷ್ಟೊತ್ತಿಗಾಗಲೇ ಅಪ್ಪ ಹೋಗಿ 36 ಗಂಟೆಗಳಾಗಿದ್ದವು. ಆದ್ದರಿಂದ ಏನು? ಅಪ್ಪನ ಕೈಕಾಲು ಮುರಿತೀರಾ? ಅಂತ ನಾನು ಕೇಳಿದರೆ ದೊಡ್ಡಪ್ಪ ಏನಂದಿದ್ದರು ಗೊತ್ತಾ “ಮುರುದ್ರೆ ನೋವಾಗಲ್ಲ”. ಅದನ್ನು ಕೇಳಿ ನನಗೆ ಅಳಬೇಕೋ, ಕೋಪಗೊಳ್ಳಬೇಕೋ, ಗೊತ್ತಾಗಲಿಲ್ಲ. ‘ಅದೆಲ್ಲ ಗೊತ್ತಿಲ್ಲ. ಅಪ್ಪನ ನಂಬಿಕೆಗೆ ವಿದುದ್ಧವಾಗಿ ಯಾರೂ ಏನನ್ನು ಮಾಡುವಂತಿಲ್ಲ. ಆ ಜಾಗಕ್ಕೆ ನೀವೆಲ್ಲ ಪೂಜೆ ಮಾಡಿಸಲು ಬಿಟ್ಟಿದೇ ಹೆಚ್ಚು” ಎಂದು ಹೇಳಿ ಕೊನೆಗೂ ಅವರ ಬಾಯಿ ಮುಚ್ಚಿಸಿದ್ದೆ.

ಇನ್ನೇನು ಎಲ್ಲ ಮುಗಿಯಿತು. ಗುಂಡಿಗೆ ಮಣ್ಣು ಹಾಕಬೇಕು. ಆಗ ಗುಂಡಿಯಲ್ಲಿ ಅಪ್ಪನ ಪಕ್ಕ ನಿಂತಿದ್ದ ಒಬ್ಬ ಅದೆಲ್ಲಿಂದಲೋ ಲಿಂಗವೊಂದನ್ನು ಅಪ್ಪನ ಕತ್ತಿಗೆ ಕಟ್ಟಿದ. ಅದನ್ನು ನೋಡಿ ನನಗೆ ರೇಗಿತು. “ಅದನ್ನು ಬಿಚ್ಟು ಈಗಲೇ ಬಿಚ್ಚು’ ಎಂದು ಅರಚಿದೆ. ಅದೇ ಹೊತ್ತಿಗೆ ದೊಡ್ಡಪ್ಪ ಕರೆದುಕೊಂಡು ಬಂದಿದ್ದ ತಮಟೆಯವರು ಜೋರಾಗಿ ಬಾರಿಸಲಾರಂಭಿಸಿದರು. ಸುತ್ತಮುತ್ತಲಿದ್ದವರೆಲ್ಲಾ ಜೋರಾಗಿ ಅಳುತ್ತಿದ್ದರು. ಆ ಗದ್ದಲದಲ್ಲಿ ನನ್ನ ಮಾತು ಕೇಳಿಸುವಂತಿರಲಿಲ್ಲ ಬೇಬಿಗೆ ರೇಗಿ ಹೋಯಿತು. “ತಮಟೆಯವರಿಗೆ ನಿಲ್ಲಿಸಲು ಹೇಳಿ” ಎಂದು ಚೀರಿದಳು. ಅವಳೊಂದಿಗೆ ಪ್ರಕಾಶ್ ರೈ ಕೂಡ ದನಿಗೂಡಿಸಿದ್ದರಿಂದ ತಕ್ಷಣವೇ ಅವರು ತಮ್ಮ ಅಬ್ಬರವನ್ನು ನಿಲ್ಲಿಸಿದರು. ಗುಂಡಿಯಲ್ಲಿದ್ದವ ಅಪ್ಪನಿಗೆ ತೊಡಿಸಿದ್ದ ಲಿಂಗವನ್ನು ತೆಗೆಯಲು ಮತ್ತೆ ಹೇಳಿದಾಗ ಆತನಿಗೆ ಕೇಳಿಸಿತು. ಬೇರೆ ದಾರಿ ಇಲ್ಲದೆ ಅದನ್ನವನು ಬಿಚ್ಚಿದ. ಜಾತಿ ಸಂಪ್ರದಾಯದ ಮಾತು ಬದಿಗಿರಲಿ, ಅಪ್ಪನ ಸಂಪ್ರದಾಯವನ್ನಂತು ನಾವು ಪಾಲಿಸಿದೆವು. ಅದು ಹೇಗೆಂದರೆ ಅಪ್ಪನ ಸಂಪ್ರದಾಯದಲ್ಲಿ ಅತ್ಯಗತ್ಯವಾಗಿದ್ದ ಪೇಪರ್ ಮತ್ತು ಪೆನ್, ಸಿಗರೇಟ್ ಪ್ಯಾಕ್ ಮತ್ತು ಬೆಂಕಿಪೊಟ್ಟಣ , ಒಂದು ಬ್ಲಾಕ್ ಲೇಬಲ್ ವಿಸ್ಕಿ ಬಾಟಲ್ ,ಕುದುರೆ ರೇಸ್ ಪುಸ್ತಕ, ಇಸ್ಪೀಟು ಕಾರ್ಡ್‍ಗಳು, ಕಾದಂಬರಿ ಇತ್ಯಾದಿಗಳನ್ನೆಲ್ಲ ಅವರೊಂದಿಗೆ ಬೀಳ್ಕೊಟ್ಟೆವು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...