Homeಅಂಕಣಗಳುಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

- Advertisement -
- Advertisement -

| ವಾಸು.ಎಚ್.ವಿ |

ಒಂದುವೇಳೆ ಅಂದು ಪತ್ರಿಕೆಯ ತಯಾರಿಯ ಕೆಲಸ ಇರದೇ ಇದ್ದಿದ್ದರೆ, ನೋಟು ರದ್ದತಿಯ ಒಂದು ವರ್ಷದ ಪರಿಣಾಮಗಳ ಕುರಿತಂತೆ ಕಾರ್ಯಕ್ರಮ ರೂಪಿಸಲು ನಾವು ಬಸವನಗುಡಿಯ ಕಚೇರಿಯಲ್ಲೇ ಸಭೆ ಸೇರಬೇಕಾಗಿತ್ತು. ಮೇಡಂ (ಗೌರಿ ಲಂಕೇಶ್) ಹಿಂದಿನ ದಿನವೇ ‘ಮರೀ, ನಾಳೆ ಆಫೀಸಿನಲ್ಲಿ ಆಗಲ್ಲ, ಗುರುವಾರದ ನಂತರವಾದರೆ ಇಲ್ಲೇ ಮಾಡಿಕೊಳ್ಳಬಹುದು’ ಎಂದಿದ್ದರು. ಅಂದಿನ ಸಭೆಯಲ್ಲಿ ದಕ್ಷಿಣ ಬೆಂಗಳೂರಿನ ಕೆಲವರು ಇರಲೇಬೇಕಿದ್ದುದರಿಂದ, ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ಸೇರಿಕೊಂಡಿದ್ದೆವು. ಸಭೆ ಮುಗಿಸಿ ಹೊರಡುವ ಹೊತ್ತಿಗೆ ಮೇಡಂ ಹತ್ಯೆಯ ಷಾಕಿಂಗ್ ಸುದ್ದಿ ಗೊತ್ತಾಯಿತು.

ಭಾರೀ ದುಃಖ ಹಾಗೂ ಆತಂಕದಿಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತು ನಾನು ಮೇಡಂ ಮನೆಯ ಕಡೆಗೆ ಹೊರಟೆವು. ನಮ್ಮ ಮುಂದಿನ ಸಾರ್ವಜನಿಕ ಕೆಲಸದ ಜವಾಬ್ದಾರಿಯ ಪ್ರಯಾಣವೂ ಇನ್ನು ಮುಂದೆ ಬೇರೆಯಾಗುತ್ತದೆಂಬ ಕಲ್ಪನೆ ಆಗ ನಮ್ಮಿಬ್ಬರಿಗೂ ಇರಲಿಲ್ಲ. ರಾಜರಾಜೇಶ್ವರಿ ನಗರದ ಮನೆಯ ಮುಂದೆ ಕಳೆದ ಕೆಲವು ಗಂಟೆಗಳಲ್ಲೇ ಮುಂದಿನ ಜವಾಬ್ದಾರಿ ಅರ್ಥವಾಗತೊಡಗಿತು. ಕಚೇರಿಯ ಸಿಬ್ಬಂದಿ ಅಲ್ಲಿಗೆ ಬಂದು ತಲುಪಿದಾಗ ಮರುದಿನ ಪತ್ರಿಕೆ ಮುದ್ರಣಕ್ಕೆ ಹೋಗಬೇಕೆಂಬುದು ನೆನಪಾಯಿತು.

ಅಲ್ಲಿಂದ ಆಚೆಗೆ ಹಲವು ಬೆಳವಣಿಗೆಗಳು ನಡೆದವು. ಅದುವರೆಗಿನ ನಮ್ಮ ಇತರ ಜವಾಬ್ದಾರಿಗಳಿಂದ ಸ್ವಲ್ಪ ಸ್ವಲ್ಪ ಬಿಡಿಸಿಕೊಂಡು, ಇದೀಗ ಪತ್ರಿಕೆಯ ನೊಗಕ್ಕೆ ಹೆಗಲು ಕೊಡುವ ಕೆಲಸವನ್ನು ಪತ್ರಿಕೆಯ ಹಿಂದಿನ ಸಿಬ್ಬಂದಿಯ ಜೊತೆಗೆ ನಾವೂ ಮಾಡುತ್ತಿದ್ದೇವೆ.

ಇದು ಹಿಂದಿನ ಗೌರಿ ಲಂಕೇಶ್ ಪತ್ರಿಕೆಯ ಯಥಾರೂಪವಲ್ಲ. ಸ್ವತಃ ಮೇಡಂ ಈಗ ಭೌತಿಕವಾಗಿ ಇಲ್ಲ. ಅವರ ಬದಲಿಗೆ ರಾಜ್ಯ ಮತ್ತು ದೇಶಗಳ ಗಡಿ ದಾಟಿ ಸತ್ಯ ನುಡಿಯುವ ದಿಟ್ಟತೆಗೆ ಪ್ರತೀಕವಾಗಿರುವ ಗೌರಿಯವರ ನೆನಪು ಹಾಗೂ ಬಲಿದಾನದ ಔನ್ನತ್ಯ ಇಲ್ಲೇ ನಮ್ಮೊಂದಿಗಿದೆ.

ಸೆಪ್ಟೆಂಬರ್ 12ರಂದು ನಡೆದ ಪ್ರತಿರೋಧ ಸಮಾವೇಶದ ಹೊತ್ತಿಗೇ ಅದು ಸ್ಪಷ್ಟವಾಗತೊಡಗಿತ್ತು. ಗೌರಿಯವರ ರೇಖಾಚಿತ್ರವೊಂದನ್ನು ಕಲಾವಿದ ವಿಜಯ್ ಮತ್ತು ಗೆಳೆಯರು ತಯಾರಿಸಿದ್ದರು. ಆ ಚಿತ್ರ ಎಲ್ಲೆಡೆ ಕಾಣತೊಡಗಿತ್ತು. ಬ್ಯಾನರ್, ಎದೆಬಿಲ್ಲೆ, ತಲೆಪಟ್ಟಿ ಹೀಗೆ. ಸಾವಿರಗಟ್ಟಲೇ ಸಂಖ್ಯೆಯಲ್ಲಿ ಬಂದವರೆಲ್ಲರ ಹೃದಯದಲ್ಲಿ, ಮನಸ್ಸಿನಲ್ಲಿ ಮಾತ್ರವಲ್ಲದೇ ಭೌತಿಕವಾಗಿಯೂ ಗೌರಿಯವರ ಫೋಟೋ ಎದ್ದು ಕಾಣುತ್ತಿತ್ತು. ಆ ದಿನದ ಮಟ್ಟಿಗಂತೂ ಎಲ್ಲೆಲ್ಲೂ ಕಾಣುವ ಚೆಗೆವಾರನ ಫೋಟೋದಂತೆ ಗೌರಿಯವರ ಚಿತ್ರ ಕಾಣುತ್ತಿತ್ತು. ಅಲ್ಲಿಂದಾಚೆಗೆ ದೇಶದ ಮತ್ತು ಪ್ರಪಂಚದ ನೂರಾರು ಕಡೆ ಗೌರಿಯವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆದವು. ಎಲ್ಲೆಡೆ ಬೆಳೆಯುತ್ತಿದ್ದ ಬಲಪಂಥೀಯ ದಬ್ಬಾಳಿಕೆಯನ್ನು ವಿರೋಧಿಸುತ್ತಿದ್ದ ಪ್ರಜಾತಂತ್ರವಾದಿಗಳಿಗೆ ಗೌರಿ ತಮ್ಮ ಪ್ರತಿನಿಧಿ ಎನಿಸಿತು.

ಭಾರತವೆಂಬ ದೇಶದ ಕಲ್ಪನೆಗೇ ಅಪಾಯ ತಂದೊಡ್ಡಿದ್ದವರು ಸರ್ಕಾರ ಮತ್ತು ಸಮಾಜದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದ ಬದಲಾಗುತ್ತಿದ್ದ ಕಾಲಘಟ್ಟವದು. ಅಂತಹ ಹೊತ್ತಿನಲ್ಲಿ ಸಾಮಾನ್ಯ ಜನರನ್ನೆಲ್ಲಾ ತಲುಪಬಹುದಾದ ಮಾಧ್ಯಮ, ಕಥನ, ಭಾಷೆ ಹಾಗೂ ಭಾವ ಏನಿರಬೇಕು ಎಂದು ಯೋಚಿಸುವ ನಿಟ್ಟಿನಲ್ಲಿ ಗೌರಿಯವರ ಪ್ರಯತ್ನ ಇರಲಿಲ್ಲ. ಅವರಷ್ಟೇ ಅಲ್ಲದೇ, ದೇಶದ ಬಹುತೇಕ ಪ್ರಜಾತಂತ್ರವಾದಿಗಳು ಅಂತಹ ಹುಡುಕಾಟಕ್ಕೆ ತೊಡಗಿರಲಿಲ್ಲ. ಭಾರತದ ಪ್ರಜಾತಂತ್ರ ವಿಸ್ತಾರಗೊಂಡ 60, 70, 80ರ ದಶಕದ ಪರಿಭಾಷೆಯೇ ಚಾಲ್ತಿಯಲ್ಲಿತ್ತು. ಆದರೆ, ಎಷ್ಟೋ ‘ದೊಡ್ಡವರು’ ಪ್ರತಿರೋಧದ ಗಟ್ಟಿ ದನಿಯನ್ನೂ ಮೊಳಗಿಸದೇ ಇದ್ದಾಗ ಗೌರಿ ಲಂಕೇಶ್ ಒಂದಿನಿತೂ ಹಿಂಜರಿಯಲಿಲ್ಲ. ಅದಕ್ಕಾಗಿ ಅವರೆಂದಿಗೂ ನಮಗೆ ಮಾದರಿಯಾಗಿ ನಿಲ್ಲುತ್ತಾರೆ. ಎರಡು ವರ್ಷದ ನಂತರವೂ ನಮ್ಮೆದೆಯೊಳಗೆ ಪ್ರತಿರೋಧದ ಪ್ರತೀಕ ಗೌರಿಯವರು ಮಾಸದೇ ಉಳಿದಿರುವುದೇ ಅದಕ್ಕೆ ಸಾಕ್ಷಿ.

‘ನಿನ್ನನ್ನು ಕೊಲ್ಲಬೇಕು’ ಎಂದು ಫೇಸ್‍ಬುಕ್‍ನಲ್ಲಿ ಬರೆದ ಯುವಕನಿಗೆ, ‘ಮಗೂ, ನನ್ನನ್ನು ಕೊಲ್ಲುವ ಮಾತನಾಡುತ್ತಿರುವ ನೀನೂ ನನ್ನ ಮಗನೇ. ಆದರೆ, ನಿನಗೆ ನಿನ್ನ ಚಿಂತನೆ ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದು ಎಂಬ ವಾಸ್ತವದ ಅರಿವಿಲ್ಲ’ ಎಂದು ಪ್ರೀತಿಯಿಂದ ಬರೆದಿದ್ದ ಗೌರಿಯವರ ನಡೆ ಬಹುಶಃ ನಮಗೆ ದಾರಿ ತೋರಬಹುದು.
ಪತ್ರಿಕಾ ಸಂಸ್ಥೆಯ ಆರ್ಥಿಕ ಸ್ಥಿತಿ ಅತ್ಯಂತ ಸುಸ್ಥಿತಿಯಲ್ಲಿ ಎಂದೂ ಇಲ್ಲದಿದ್ದರೂ, ನಿರಂತರ ಶ್ರಮ ಹಾಗೂ ನೈತಿಕವಾದ ರೀತಿಯಲ್ಲಿಯೇ ಸಂಪನ್ಮೂಲ ಹೊಂದಿಸುವ ಒದ್ದಾಟದಲ್ಲೇ ಸಂಸ್ಥೆಯನ್ನು ನಡೆಸುತ್ತಾ ಬಂದ ಅವರ ನಿಲುವು ನಮ್ಮನ್ನು ಎಚ್ಚರಿಸುತ್ತಿರುತ್ತದೆ. ಜೂನ್ 2016ರಲ್ಲಿ ಮೇಡಂ ಇದ್ದಾಗಲೇ ತೀರ್ಮಾನಿಸಿದಂತೆ, ಪತ್ರಿಕೆಯೊಂದಿಗೆ ಇಂದಿನ ಅಗತ್ಯಕ್ಕೆ ತಕ್ಕಂತೆ ವೆಬ್ ಮತ್ತು ಇನ್ನಿತರ ಸಾಧ್ಯತೆಗಳಿಗೆ ಅಪ್‍ಡೇಟ್ ಆಗುವ ನಿಟ್ಟಿನಲ್ಲಿ ನಾವು ಸತತವಾಗಿ ಮುನ್ನಡೆಯುತ್ತಿರಬೇಕಿದೆ.

ನಿಂದಿಸುವ, ಅಪಪ್ರಚಾರಗಳನ್ನು ಮಾಡುವ, ದ್ವೇಷಿಸುವ ಜನರು, ಹಿತಶತ್ರುಗಳು ಅಂದೂ ಇದ್ದರು; ಮುಂದೆಯೂ ಇರುತ್ತಾರೆ. ಆದರೆ, ಅದು ಉನ್ನತ ಆಶಯದತ್ತ ಸಾಗಬೇಕಾದ ನಮ್ಮ ಸಂಕಲ್ಪವನ್ನು ಅಲುಗಾಡಿಸಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಬದಲಾದ ಕಾಲಘಟ್ಟದಲ್ಲಿ ಬದಲಾಗಬೇಕಾದ ಮಾಧ್ಯಮದ ಸ್ವರೂಪ, ಪರಿಭಾಷೆಗಳು ಮತ್ತು ಕಥನದ ಕುರಿತು ಗಂಭೀರವಾಗಿ ಆಲೋಚಿಸಿ ಆ ನಿಟ್ಟಿನಲ್ಲಿ ಮುಂದಡಿಯಿಡಬೇಕಿದೆ. ಆ ದಿಕ್ಕಿನಲ್ಲಿ ನಮ್ಮಲ್ಲಿರುವ ಆಲೋಚನೆಗಳನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾಲೋಚನಾ ಸಭೆಗಳು, ಚರ್ಚಾಗೋಷ್ಠಿಗಳನ್ನು ಆಯೋಜಿಸಲು ಗೆಳೆಯರು ಉತ್ಸುಕತೆ ತೋರಿದ್ದಾರೆ. ಖುದ್ದಾಗಿ ಇಲ್ಲವೇ ಪತ್ರದ ಮುಖಾಂತರ ನಿಮ್ಮೆಲ್ಲರ ಜೊತೆ ನಡೆಯುವ ಸಂವಾದದಲ್ಲಿ, ನಿಮ್ಮ ಆಲೋಚನೆಗಳನ್ನೂ ಒಳಗೊಂಡು ನಮ್ಮ ಕರ್ತವ್ಯವನ್ನು ನಿಭಾಯಿಸುತ್ತೇವೆಂಬ ಭರವಸೆ ನೀಡಬಯಸುತ್ತೇವೆ.

ಮೇಡಂ ಇಲ್ಲವಾದ ಎರಡು ವರ್ಷದ ಈ ದಿನದಂದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿರುವುದನ್ನು ಅರ್ಥ ಮಾಡಿಕೊಂಡಿದ್ದೇವೆಂದು ತಂಡದ ಪರವಾಗಿ ಹೇಳಬಯಸುತ್ತೇನೆ. ನಾವು ನೀವೆಲ್ಲರೂ ಜೊತೆಗೂಡಿ ಸಾಗಬೇಕಾದ ದಾರಿ ಇದು. ಜೊತೆಗೂಡಿದರೆ ಮಾತ್ರ ಸಾಗುವ ದಾರಿಯೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜವಾಗಿ ಆ ಕೆಲಸವನ್ನು ನಾವು ನಮ್ಮ ನೀವುಗಳು ಕೂಡಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಸಮಾನತೆಯ ಸಭೆ ಮಾಡಬೇಕಿರುವದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...