Homeಅಂಕಣಗಳುಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

- Advertisement -
- Advertisement -

| ವಾಸು.ಎಚ್.ವಿ |

ಒಂದುವೇಳೆ ಅಂದು ಪತ್ರಿಕೆಯ ತಯಾರಿಯ ಕೆಲಸ ಇರದೇ ಇದ್ದಿದ್ದರೆ, ನೋಟು ರದ್ದತಿಯ ಒಂದು ವರ್ಷದ ಪರಿಣಾಮಗಳ ಕುರಿತಂತೆ ಕಾರ್ಯಕ್ರಮ ರೂಪಿಸಲು ನಾವು ಬಸವನಗುಡಿಯ ಕಚೇರಿಯಲ್ಲೇ ಸಭೆ ಸೇರಬೇಕಾಗಿತ್ತು. ಮೇಡಂ (ಗೌರಿ ಲಂಕೇಶ್) ಹಿಂದಿನ ದಿನವೇ ‘ಮರೀ, ನಾಳೆ ಆಫೀಸಿನಲ್ಲಿ ಆಗಲ್ಲ, ಗುರುವಾರದ ನಂತರವಾದರೆ ಇಲ್ಲೇ ಮಾಡಿಕೊಳ್ಳಬಹುದು’ ಎಂದಿದ್ದರು. ಅಂದಿನ ಸಭೆಯಲ್ಲಿ ದಕ್ಷಿಣ ಬೆಂಗಳೂರಿನ ಕೆಲವರು ಇರಲೇಬೇಕಿದ್ದುದರಿಂದ, ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ಸೇರಿಕೊಂಡಿದ್ದೆವು. ಸಭೆ ಮುಗಿಸಿ ಹೊರಡುವ ಹೊತ್ತಿಗೆ ಮೇಡಂ ಹತ್ಯೆಯ ಷಾಕಿಂಗ್ ಸುದ್ದಿ ಗೊತ್ತಾಯಿತು.

ಭಾರೀ ದುಃಖ ಹಾಗೂ ಆತಂಕದಿಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತು ನಾನು ಮೇಡಂ ಮನೆಯ ಕಡೆಗೆ ಹೊರಟೆವು. ನಮ್ಮ ಮುಂದಿನ ಸಾರ್ವಜನಿಕ ಕೆಲಸದ ಜವಾಬ್ದಾರಿಯ ಪ್ರಯಾಣವೂ ಇನ್ನು ಮುಂದೆ ಬೇರೆಯಾಗುತ್ತದೆಂಬ ಕಲ್ಪನೆ ಆಗ ನಮ್ಮಿಬ್ಬರಿಗೂ ಇರಲಿಲ್ಲ. ರಾಜರಾಜೇಶ್ವರಿ ನಗರದ ಮನೆಯ ಮುಂದೆ ಕಳೆದ ಕೆಲವು ಗಂಟೆಗಳಲ್ಲೇ ಮುಂದಿನ ಜವಾಬ್ದಾರಿ ಅರ್ಥವಾಗತೊಡಗಿತು. ಕಚೇರಿಯ ಸಿಬ್ಬಂದಿ ಅಲ್ಲಿಗೆ ಬಂದು ತಲುಪಿದಾಗ ಮರುದಿನ ಪತ್ರಿಕೆ ಮುದ್ರಣಕ್ಕೆ ಹೋಗಬೇಕೆಂಬುದು ನೆನಪಾಯಿತು.

ಅಲ್ಲಿಂದ ಆಚೆಗೆ ಹಲವು ಬೆಳವಣಿಗೆಗಳು ನಡೆದವು. ಅದುವರೆಗಿನ ನಮ್ಮ ಇತರ ಜವಾಬ್ದಾರಿಗಳಿಂದ ಸ್ವಲ್ಪ ಸ್ವಲ್ಪ ಬಿಡಿಸಿಕೊಂಡು, ಇದೀಗ ಪತ್ರಿಕೆಯ ನೊಗಕ್ಕೆ ಹೆಗಲು ಕೊಡುವ ಕೆಲಸವನ್ನು ಪತ್ರಿಕೆಯ ಹಿಂದಿನ ಸಿಬ್ಬಂದಿಯ ಜೊತೆಗೆ ನಾವೂ ಮಾಡುತ್ತಿದ್ದೇವೆ.

ಇದು ಹಿಂದಿನ ಗೌರಿ ಲಂಕೇಶ್ ಪತ್ರಿಕೆಯ ಯಥಾರೂಪವಲ್ಲ. ಸ್ವತಃ ಮೇಡಂ ಈಗ ಭೌತಿಕವಾಗಿ ಇಲ್ಲ. ಅವರ ಬದಲಿಗೆ ರಾಜ್ಯ ಮತ್ತು ದೇಶಗಳ ಗಡಿ ದಾಟಿ ಸತ್ಯ ನುಡಿಯುವ ದಿಟ್ಟತೆಗೆ ಪ್ರತೀಕವಾಗಿರುವ ಗೌರಿಯವರ ನೆನಪು ಹಾಗೂ ಬಲಿದಾನದ ಔನ್ನತ್ಯ ಇಲ್ಲೇ ನಮ್ಮೊಂದಿಗಿದೆ.

ಸೆಪ್ಟೆಂಬರ್ 12ರಂದು ನಡೆದ ಪ್ರತಿರೋಧ ಸಮಾವೇಶದ ಹೊತ್ತಿಗೇ ಅದು ಸ್ಪಷ್ಟವಾಗತೊಡಗಿತ್ತು. ಗೌರಿಯವರ ರೇಖಾಚಿತ್ರವೊಂದನ್ನು ಕಲಾವಿದ ವಿಜಯ್ ಮತ್ತು ಗೆಳೆಯರು ತಯಾರಿಸಿದ್ದರು. ಆ ಚಿತ್ರ ಎಲ್ಲೆಡೆ ಕಾಣತೊಡಗಿತ್ತು. ಬ್ಯಾನರ್, ಎದೆಬಿಲ್ಲೆ, ತಲೆಪಟ್ಟಿ ಹೀಗೆ. ಸಾವಿರಗಟ್ಟಲೇ ಸಂಖ್ಯೆಯಲ್ಲಿ ಬಂದವರೆಲ್ಲರ ಹೃದಯದಲ್ಲಿ, ಮನಸ್ಸಿನಲ್ಲಿ ಮಾತ್ರವಲ್ಲದೇ ಭೌತಿಕವಾಗಿಯೂ ಗೌರಿಯವರ ಫೋಟೋ ಎದ್ದು ಕಾಣುತ್ತಿತ್ತು. ಆ ದಿನದ ಮಟ್ಟಿಗಂತೂ ಎಲ್ಲೆಲ್ಲೂ ಕಾಣುವ ಚೆಗೆವಾರನ ಫೋಟೋದಂತೆ ಗೌರಿಯವರ ಚಿತ್ರ ಕಾಣುತ್ತಿತ್ತು. ಅಲ್ಲಿಂದಾಚೆಗೆ ದೇಶದ ಮತ್ತು ಪ್ರಪಂಚದ ನೂರಾರು ಕಡೆ ಗೌರಿಯವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆದವು. ಎಲ್ಲೆಡೆ ಬೆಳೆಯುತ್ತಿದ್ದ ಬಲಪಂಥೀಯ ದಬ್ಬಾಳಿಕೆಯನ್ನು ವಿರೋಧಿಸುತ್ತಿದ್ದ ಪ್ರಜಾತಂತ್ರವಾದಿಗಳಿಗೆ ಗೌರಿ ತಮ್ಮ ಪ್ರತಿನಿಧಿ ಎನಿಸಿತು.

ಭಾರತವೆಂಬ ದೇಶದ ಕಲ್ಪನೆಗೇ ಅಪಾಯ ತಂದೊಡ್ಡಿದ್ದವರು ಸರ್ಕಾರ ಮತ್ತು ಸಮಾಜದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದ ಬದಲಾಗುತ್ತಿದ್ದ ಕಾಲಘಟ್ಟವದು. ಅಂತಹ ಹೊತ್ತಿನಲ್ಲಿ ಸಾಮಾನ್ಯ ಜನರನ್ನೆಲ್ಲಾ ತಲುಪಬಹುದಾದ ಮಾಧ್ಯಮ, ಕಥನ, ಭಾಷೆ ಹಾಗೂ ಭಾವ ಏನಿರಬೇಕು ಎಂದು ಯೋಚಿಸುವ ನಿಟ್ಟಿನಲ್ಲಿ ಗೌರಿಯವರ ಪ್ರಯತ್ನ ಇರಲಿಲ್ಲ. ಅವರಷ್ಟೇ ಅಲ್ಲದೇ, ದೇಶದ ಬಹುತೇಕ ಪ್ರಜಾತಂತ್ರವಾದಿಗಳು ಅಂತಹ ಹುಡುಕಾಟಕ್ಕೆ ತೊಡಗಿರಲಿಲ್ಲ. ಭಾರತದ ಪ್ರಜಾತಂತ್ರ ವಿಸ್ತಾರಗೊಂಡ 60, 70, 80ರ ದಶಕದ ಪರಿಭಾಷೆಯೇ ಚಾಲ್ತಿಯಲ್ಲಿತ್ತು. ಆದರೆ, ಎಷ್ಟೋ ‘ದೊಡ್ಡವರು’ ಪ್ರತಿರೋಧದ ಗಟ್ಟಿ ದನಿಯನ್ನೂ ಮೊಳಗಿಸದೇ ಇದ್ದಾಗ ಗೌರಿ ಲಂಕೇಶ್ ಒಂದಿನಿತೂ ಹಿಂಜರಿಯಲಿಲ್ಲ. ಅದಕ್ಕಾಗಿ ಅವರೆಂದಿಗೂ ನಮಗೆ ಮಾದರಿಯಾಗಿ ನಿಲ್ಲುತ್ತಾರೆ. ಎರಡು ವರ್ಷದ ನಂತರವೂ ನಮ್ಮೆದೆಯೊಳಗೆ ಪ್ರತಿರೋಧದ ಪ್ರತೀಕ ಗೌರಿಯವರು ಮಾಸದೇ ಉಳಿದಿರುವುದೇ ಅದಕ್ಕೆ ಸಾಕ್ಷಿ.

‘ನಿನ್ನನ್ನು ಕೊಲ್ಲಬೇಕು’ ಎಂದು ಫೇಸ್‍ಬುಕ್‍ನಲ್ಲಿ ಬರೆದ ಯುವಕನಿಗೆ, ‘ಮಗೂ, ನನ್ನನ್ನು ಕೊಲ್ಲುವ ಮಾತನಾಡುತ್ತಿರುವ ನೀನೂ ನನ್ನ ಮಗನೇ. ಆದರೆ, ನಿನಗೆ ನಿನ್ನ ಚಿಂತನೆ ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದು ಎಂಬ ವಾಸ್ತವದ ಅರಿವಿಲ್ಲ’ ಎಂದು ಪ್ರೀತಿಯಿಂದ ಬರೆದಿದ್ದ ಗೌರಿಯವರ ನಡೆ ಬಹುಶಃ ನಮಗೆ ದಾರಿ ತೋರಬಹುದು.
ಪತ್ರಿಕಾ ಸಂಸ್ಥೆಯ ಆರ್ಥಿಕ ಸ್ಥಿತಿ ಅತ್ಯಂತ ಸುಸ್ಥಿತಿಯಲ್ಲಿ ಎಂದೂ ಇಲ್ಲದಿದ್ದರೂ, ನಿರಂತರ ಶ್ರಮ ಹಾಗೂ ನೈತಿಕವಾದ ರೀತಿಯಲ್ಲಿಯೇ ಸಂಪನ್ಮೂಲ ಹೊಂದಿಸುವ ಒದ್ದಾಟದಲ್ಲೇ ಸಂಸ್ಥೆಯನ್ನು ನಡೆಸುತ್ತಾ ಬಂದ ಅವರ ನಿಲುವು ನಮ್ಮನ್ನು ಎಚ್ಚರಿಸುತ್ತಿರುತ್ತದೆ. ಜೂನ್ 2016ರಲ್ಲಿ ಮೇಡಂ ಇದ್ದಾಗಲೇ ತೀರ್ಮಾನಿಸಿದಂತೆ, ಪತ್ರಿಕೆಯೊಂದಿಗೆ ಇಂದಿನ ಅಗತ್ಯಕ್ಕೆ ತಕ್ಕಂತೆ ವೆಬ್ ಮತ್ತು ಇನ್ನಿತರ ಸಾಧ್ಯತೆಗಳಿಗೆ ಅಪ್‍ಡೇಟ್ ಆಗುವ ನಿಟ್ಟಿನಲ್ಲಿ ನಾವು ಸತತವಾಗಿ ಮುನ್ನಡೆಯುತ್ತಿರಬೇಕಿದೆ.

ನಿಂದಿಸುವ, ಅಪಪ್ರಚಾರಗಳನ್ನು ಮಾಡುವ, ದ್ವೇಷಿಸುವ ಜನರು, ಹಿತಶತ್ರುಗಳು ಅಂದೂ ಇದ್ದರು; ಮುಂದೆಯೂ ಇರುತ್ತಾರೆ. ಆದರೆ, ಅದು ಉನ್ನತ ಆಶಯದತ್ತ ಸಾಗಬೇಕಾದ ನಮ್ಮ ಸಂಕಲ್ಪವನ್ನು ಅಲುಗಾಡಿಸಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಬದಲಾದ ಕಾಲಘಟ್ಟದಲ್ಲಿ ಬದಲಾಗಬೇಕಾದ ಮಾಧ್ಯಮದ ಸ್ವರೂಪ, ಪರಿಭಾಷೆಗಳು ಮತ್ತು ಕಥನದ ಕುರಿತು ಗಂಭೀರವಾಗಿ ಆಲೋಚಿಸಿ ಆ ನಿಟ್ಟಿನಲ್ಲಿ ಮುಂದಡಿಯಿಡಬೇಕಿದೆ. ಆ ದಿಕ್ಕಿನಲ್ಲಿ ನಮ್ಮಲ್ಲಿರುವ ಆಲೋಚನೆಗಳನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾಲೋಚನಾ ಸಭೆಗಳು, ಚರ್ಚಾಗೋಷ್ಠಿಗಳನ್ನು ಆಯೋಜಿಸಲು ಗೆಳೆಯರು ಉತ್ಸುಕತೆ ತೋರಿದ್ದಾರೆ. ಖುದ್ದಾಗಿ ಇಲ್ಲವೇ ಪತ್ರದ ಮುಖಾಂತರ ನಿಮ್ಮೆಲ್ಲರ ಜೊತೆ ನಡೆಯುವ ಸಂವಾದದಲ್ಲಿ, ನಿಮ್ಮ ಆಲೋಚನೆಗಳನ್ನೂ ಒಳಗೊಂಡು ನಮ್ಮ ಕರ್ತವ್ಯವನ್ನು ನಿಭಾಯಿಸುತ್ತೇವೆಂಬ ಭರವಸೆ ನೀಡಬಯಸುತ್ತೇವೆ.

ಮೇಡಂ ಇಲ್ಲವಾದ ಎರಡು ವರ್ಷದ ಈ ದಿನದಂದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿರುವುದನ್ನು ಅರ್ಥ ಮಾಡಿಕೊಂಡಿದ್ದೇವೆಂದು ತಂಡದ ಪರವಾಗಿ ಹೇಳಬಯಸುತ್ತೇನೆ. ನಾವು ನೀವೆಲ್ಲರೂ ಜೊತೆಗೂಡಿ ಸಾಗಬೇಕಾದ ದಾರಿ ಇದು. ಜೊತೆಗೂಡಿದರೆ ಮಾತ್ರ ಸಾಗುವ ದಾರಿಯೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜವಾಗಿ ಆ ಕೆಲಸವನ್ನು ನಾವು ನಮ್ಮ ನೀವುಗಳು ಕೂಡಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಸಮಾನತೆಯ ಸಭೆ ಮಾಡಬೇಕಿರುವದು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...