Homeಅಂಕಣಗಳುಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

- Advertisement -
- Advertisement -

| ವಾಸು.ಎಚ್.ವಿ |

ಒಂದುವೇಳೆ ಅಂದು ಪತ್ರಿಕೆಯ ತಯಾರಿಯ ಕೆಲಸ ಇರದೇ ಇದ್ದಿದ್ದರೆ, ನೋಟು ರದ್ದತಿಯ ಒಂದು ವರ್ಷದ ಪರಿಣಾಮಗಳ ಕುರಿತಂತೆ ಕಾರ್ಯಕ್ರಮ ರೂಪಿಸಲು ನಾವು ಬಸವನಗುಡಿಯ ಕಚೇರಿಯಲ್ಲೇ ಸಭೆ ಸೇರಬೇಕಾಗಿತ್ತು. ಮೇಡಂ (ಗೌರಿ ಲಂಕೇಶ್) ಹಿಂದಿನ ದಿನವೇ ‘ಮರೀ, ನಾಳೆ ಆಫೀಸಿನಲ್ಲಿ ಆಗಲ್ಲ, ಗುರುವಾರದ ನಂತರವಾದರೆ ಇಲ್ಲೇ ಮಾಡಿಕೊಳ್ಳಬಹುದು’ ಎಂದಿದ್ದರು. ಅಂದಿನ ಸಭೆಯಲ್ಲಿ ದಕ್ಷಿಣ ಬೆಂಗಳೂರಿನ ಕೆಲವರು ಇರಲೇಬೇಕಿದ್ದುದರಿಂದ, ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ಸೇರಿಕೊಂಡಿದ್ದೆವು. ಸಭೆ ಮುಗಿಸಿ ಹೊರಡುವ ಹೊತ್ತಿಗೆ ಮೇಡಂ ಹತ್ಯೆಯ ಷಾಕಿಂಗ್ ಸುದ್ದಿ ಗೊತ್ತಾಯಿತು.

ಭಾರೀ ದುಃಖ ಹಾಗೂ ಆತಂಕದಿಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ ಮತ್ತು ನಾನು ಮೇಡಂ ಮನೆಯ ಕಡೆಗೆ ಹೊರಟೆವು. ನಮ್ಮ ಮುಂದಿನ ಸಾರ್ವಜನಿಕ ಕೆಲಸದ ಜವಾಬ್ದಾರಿಯ ಪ್ರಯಾಣವೂ ಇನ್ನು ಮುಂದೆ ಬೇರೆಯಾಗುತ್ತದೆಂಬ ಕಲ್ಪನೆ ಆಗ ನಮ್ಮಿಬ್ಬರಿಗೂ ಇರಲಿಲ್ಲ. ರಾಜರಾಜೇಶ್ವರಿ ನಗರದ ಮನೆಯ ಮುಂದೆ ಕಳೆದ ಕೆಲವು ಗಂಟೆಗಳಲ್ಲೇ ಮುಂದಿನ ಜವಾಬ್ದಾರಿ ಅರ್ಥವಾಗತೊಡಗಿತು. ಕಚೇರಿಯ ಸಿಬ್ಬಂದಿ ಅಲ್ಲಿಗೆ ಬಂದು ತಲುಪಿದಾಗ ಮರುದಿನ ಪತ್ರಿಕೆ ಮುದ್ರಣಕ್ಕೆ ಹೋಗಬೇಕೆಂಬುದು ನೆನಪಾಯಿತು.

ಅಲ್ಲಿಂದ ಆಚೆಗೆ ಹಲವು ಬೆಳವಣಿಗೆಗಳು ನಡೆದವು. ಅದುವರೆಗಿನ ನಮ್ಮ ಇತರ ಜವಾಬ್ದಾರಿಗಳಿಂದ ಸ್ವಲ್ಪ ಸ್ವಲ್ಪ ಬಿಡಿಸಿಕೊಂಡು, ಇದೀಗ ಪತ್ರಿಕೆಯ ನೊಗಕ್ಕೆ ಹೆಗಲು ಕೊಡುವ ಕೆಲಸವನ್ನು ಪತ್ರಿಕೆಯ ಹಿಂದಿನ ಸಿಬ್ಬಂದಿಯ ಜೊತೆಗೆ ನಾವೂ ಮಾಡುತ್ತಿದ್ದೇವೆ.

ಇದು ಹಿಂದಿನ ಗೌರಿ ಲಂಕೇಶ್ ಪತ್ರಿಕೆಯ ಯಥಾರೂಪವಲ್ಲ. ಸ್ವತಃ ಮೇಡಂ ಈಗ ಭೌತಿಕವಾಗಿ ಇಲ್ಲ. ಅವರ ಬದಲಿಗೆ ರಾಜ್ಯ ಮತ್ತು ದೇಶಗಳ ಗಡಿ ದಾಟಿ ಸತ್ಯ ನುಡಿಯುವ ದಿಟ್ಟತೆಗೆ ಪ್ರತೀಕವಾಗಿರುವ ಗೌರಿಯವರ ನೆನಪು ಹಾಗೂ ಬಲಿದಾನದ ಔನ್ನತ್ಯ ಇಲ್ಲೇ ನಮ್ಮೊಂದಿಗಿದೆ.

ಸೆಪ್ಟೆಂಬರ್ 12ರಂದು ನಡೆದ ಪ್ರತಿರೋಧ ಸಮಾವೇಶದ ಹೊತ್ತಿಗೇ ಅದು ಸ್ಪಷ್ಟವಾಗತೊಡಗಿತ್ತು. ಗೌರಿಯವರ ರೇಖಾಚಿತ್ರವೊಂದನ್ನು ಕಲಾವಿದ ವಿಜಯ್ ಮತ್ತು ಗೆಳೆಯರು ತಯಾರಿಸಿದ್ದರು. ಆ ಚಿತ್ರ ಎಲ್ಲೆಡೆ ಕಾಣತೊಡಗಿತ್ತು. ಬ್ಯಾನರ್, ಎದೆಬಿಲ್ಲೆ, ತಲೆಪಟ್ಟಿ ಹೀಗೆ. ಸಾವಿರಗಟ್ಟಲೇ ಸಂಖ್ಯೆಯಲ್ಲಿ ಬಂದವರೆಲ್ಲರ ಹೃದಯದಲ್ಲಿ, ಮನಸ್ಸಿನಲ್ಲಿ ಮಾತ್ರವಲ್ಲದೇ ಭೌತಿಕವಾಗಿಯೂ ಗೌರಿಯವರ ಫೋಟೋ ಎದ್ದು ಕಾಣುತ್ತಿತ್ತು. ಆ ದಿನದ ಮಟ್ಟಿಗಂತೂ ಎಲ್ಲೆಲ್ಲೂ ಕಾಣುವ ಚೆಗೆವಾರನ ಫೋಟೋದಂತೆ ಗೌರಿಯವರ ಚಿತ್ರ ಕಾಣುತ್ತಿತ್ತು. ಅಲ್ಲಿಂದಾಚೆಗೆ ದೇಶದ ಮತ್ತು ಪ್ರಪಂಚದ ನೂರಾರು ಕಡೆ ಗೌರಿಯವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ನಡೆದವು. ಎಲ್ಲೆಡೆ ಬೆಳೆಯುತ್ತಿದ್ದ ಬಲಪಂಥೀಯ ದಬ್ಬಾಳಿಕೆಯನ್ನು ವಿರೋಧಿಸುತ್ತಿದ್ದ ಪ್ರಜಾತಂತ್ರವಾದಿಗಳಿಗೆ ಗೌರಿ ತಮ್ಮ ಪ್ರತಿನಿಧಿ ಎನಿಸಿತು.

ಭಾರತವೆಂಬ ದೇಶದ ಕಲ್ಪನೆಗೇ ಅಪಾಯ ತಂದೊಡ್ಡಿದ್ದವರು ಸರ್ಕಾರ ಮತ್ತು ಸಮಾಜದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದ ಬದಲಾಗುತ್ತಿದ್ದ ಕಾಲಘಟ್ಟವದು. ಅಂತಹ ಹೊತ್ತಿನಲ್ಲಿ ಸಾಮಾನ್ಯ ಜನರನ್ನೆಲ್ಲಾ ತಲುಪಬಹುದಾದ ಮಾಧ್ಯಮ, ಕಥನ, ಭಾಷೆ ಹಾಗೂ ಭಾವ ಏನಿರಬೇಕು ಎಂದು ಯೋಚಿಸುವ ನಿಟ್ಟಿನಲ್ಲಿ ಗೌರಿಯವರ ಪ್ರಯತ್ನ ಇರಲಿಲ್ಲ. ಅವರಷ್ಟೇ ಅಲ್ಲದೇ, ದೇಶದ ಬಹುತೇಕ ಪ್ರಜಾತಂತ್ರವಾದಿಗಳು ಅಂತಹ ಹುಡುಕಾಟಕ್ಕೆ ತೊಡಗಿರಲಿಲ್ಲ. ಭಾರತದ ಪ್ರಜಾತಂತ್ರ ವಿಸ್ತಾರಗೊಂಡ 60, 70, 80ರ ದಶಕದ ಪರಿಭಾಷೆಯೇ ಚಾಲ್ತಿಯಲ್ಲಿತ್ತು. ಆದರೆ, ಎಷ್ಟೋ ‘ದೊಡ್ಡವರು’ ಪ್ರತಿರೋಧದ ಗಟ್ಟಿ ದನಿಯನ್ನೂ ಮೊಳಗಿಸದೇ ಇದ್ದಾಗ ಗೌರಿ ಲಂಕೇಶ್ ಒಂದಿನಿತೂ ಹಿಂಜರಿಯಲಿಲ್ಲ. ಅದಕ್ಕಾಗಿ ಅವರೆಂದಿಗೂ ನಮಗೆ ಮಾದರಿಯಾಗಿ ನಿಲ್ಲುತ್ತಾರೆ. ಎರಡು ವರ್ಷದ ನಂತರವೂ ನಮ್ಮೆದೆಯೊಳಗೆ ಪ್ರತಿರೋಧದ ಪ್ರತೀಕ ಗೌರಿಯವರು ಮಾಸದೇ ಉಳಿದಿರುವುದೇ ಅದಕ್ಕೆ ಸಾಕ್ಷಿ.

‘ನಿನ್ನನ್ನು ಕೊಲ್ಲಬೇಕು’ ಎಂದು ಫೇಸ್‍ಬುಕ್‍ನಲ್ಲಿ ಬರೆದ ಯುವಕನಿಗೆ, ‘ಮಗೂ, ನನ್ನನ್ನು ಕೊಲ್ಲುವ ಮಾತನಾಡುತ್ತಿರುವ ನೀನೂ ನನ್ನ ಮಗನೇ. ಆದರೆ, ನಿನಗೆ ನಿನ್ನ ಚಿಂತನೆ ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದು ಎಂಬ ವಾಸ್ತವದ ಅರಿವಿಲ್ಲ’ ಎಂದು ಪ್ರೀತಿಯಿಂದ ಬರೆದಿದ್ದ ಗೌರಿಯವರ ನಡೆ ಬಹುಶಃ ನಮಗೆ ದಾರಿ ತೋರಬಹುದು.
ಪತ್ರಿಕಾ ಸಂಸ್ಥೆಯ ಆರ್ಥಿಕ ಸ್ಥಿತಿ ಅತ್ಯಂತ ಸುಸ್ಥಿತಿಯಲ್ಲಿ ಎಂದೂ ಇಲ್ಲದಿದ್ದರೂ, ನಿರಂತರ ಶ್ರಮ ಹಾಗೂ ನೈತಿಕವಾದ ರೀತಿಯಲ್ಲಿಯೇ ಸಂಪನ್ಮೂಲ ಹೊಂದಿಸುವ ಒದ್ದಾಟದಲ್ಲೇ ಸಂಸ್ಥೆಯನ್ನು ನಡೆಸುತ್ತಾ ಬಂದ ಅವರ ನಿಲುವು ನಮ್ಮನ್ನು ಎಚ್ಚರಿಸುತ್ತಿರುತ್ತದೆ. ಜೂನ್ 2016ರಲ್ಲಿ ಮೇಡಂ ಇದ್ದಾಗಲೇ ತೀರ್ಮಾನಿಸಿದಂತೆ, ಪತ್ರಿಕೆಯೊಂದಿಗೆ ಇಂದಿನ ಅಗತ್ಯಕ್ಕೆ ತಕ್ಕಂತೆ ವೆಬ್ ಮತ್ತು ಇನ್ನಿತರ ಸಾಧ್ಯತೆಗಳಿಗೆ ಅಪ್‍ಡೇಟ್ ಆಗುವ ನಿಟ್ಟಿನಲ್ಲಿ ನಾವು ಸತತವಾಗಿ ಮುನ್ನಡೆಯುತ್ತಿರಬೇಕಿದೆ.

ನಿಂದಿಸುವ, ಅಪಪ್ರಚಾರಗಳನ್ನು ಮಾಡುವ, ದ್ವೇಷಿಸುವ ಜನರು, ಹಿತಶತ್ರುಗಳು ಅಂದೂ ಇದ್ದರು; ಮುಂದೆಯೂ ಇರುತ್ತಾರೆ. ಆದರೆ, ಅದು ಉನ್ನತ ಆಶಯದತ್ತ ಸಾಗಬೇಕಾದ ನಮ್ಮ ಸಂಕಲ್ಪವನ್ನು ಅಲುಗಾಡಿಸಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಬದಲಾದ ಕಾಲಘಟ್ಟದಲ್ಲಿ ಬದಲಾಗಬೇಕಾದ ಮಾಧ್ಯಮದ ಸ್ವರೂಪ, ಪರಿಭಾಷೆಗಳು ಮತ್ತು ಕಥನದ ಕುರಿತು ಗಂಭೀರವಾಗಿ ಆಲೋಚಿಸಿ ಆ ನಿಟ್ಟಿನಲ್ಲಿ ಮುಂದಡಿಯಿಡಬೇಕಿದೆ. ಆ ದಿಕ್ಕಿನಲ್ಲಿ ನಮ್ಮಲ್ಲಿರುವ ಆಲೋಚನೆಗಳನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾಲೋಚನಾ ಸಭೆಗಳು, ಚರ್ಚಾಗೋಷ್ಠಿಗಳನ್ನು ಆಯೋಜಿಸಲು ಗೆಳೆಯರು ಉತ್ಸುಕತೆ ತೋರಿದ್ದಾರೆ. ಖುದ್ದಾಗಿ ಇಲ್ಲವೇ ಪತ್ರದ ಮುಖಾಂತರ ನಿಮ್ಮೆಲ್ಲರ ಜೊತೆ ನಡೆಯುವ ಸಂವಾದದಲ್ಲಿ, ನಿಮ್ಮ ಆಲೋಚನೆಗಳನ್ನೂ ಒಳಗೊಂಡು ನಮ್ಮ ಕರ್ತವ್ಯವನ್ನು ನಿಭಾಯಿಸುತ್ತೇವೆಂಬ ಭರವಸೆ ನೀಡಬಯಸುತ್ತೇವೆ.

ಮೇಡಂ ಇಲ್ಲವಾದ ಎರಡು ವರ್ಷದ ಈ ದಿನದಂದು ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿರುವುದನ್ನು ಅರ್ಥ ಮಾಡಿಕೊಂಡಿದ್ದೇವೆಂದು ತಂಡದ ಪರವಾಗಿ ಹೇಳಬಯಸುತ್ತೇನೆ. ನಾವು ನೀವೆಲ್ಲರೂ ಜೊತೆಗೂಡಿ ಸಾಗಬೇಕಾದ ದಾರಿ ಇದು. ಜೊತೆಗೂಡಿದರೆ ಮಾತ್ರ ಸಾಗುವ ದಾರಿಯೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜವಾಗಿ ಆ ಕೆಲಸವನ್ನು ನಾವು ನಮ್ಮ ನೀವುಗಳು ಕೂಡಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಸಮಾನತೆಯ ಸಭೆ ಮಾಡಬೇಕಿರುವದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....