Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...