Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...