Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...