Homeಅಂಕಣಗಳುಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಬೇಕು..

- Advertisement -
- Advertisement -

ಗೌರಿ ಲಂಕೇಶ್
ವಾರ್ಷಿಕ ವಿಶೇಷಾಂಕ, 2007 (`ಕಂಡಹಾಗೆ’ ಸಂಪಾದಕೀಯದಿಂದ) |

ನಮ್ಮ ನೆಲದಲ್ಲಿ ಹಿಂದೂತ್ವ ವಿರೋಧಿಗಳನ್ನು ನಕ್ಸಲರು ಎಂದೂ, ಮುಸಲ್ಮಾನರನ್ನು ಭಯೋತ್ಪಾದಕರೆಂದೂ ಬಣ್ಣಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಬ್ರ್ಯಾಂಡ್ ಮಾಡುವುದರ ಹುನ್ನಾರವೇನಿರಬಹುದು? ಇವತ್ತು ನಮ್ಮನ್ನಾಳುವವರ ಮನಸ್ಥಿತಿ ಹೇಗಿದೆಯೆಂದರೆ, ರಾಜಕಾರಣವೆಂದರೆ ಅವರಿಗೆ ಅಧಿಕಾರ ಮಾತ್ರ. ಆ ಅಧಿಕಾರ ಪಡೆಯಲು ಅವರು ಅವಲಂಭಿಸಿರೋದು ಹಣವನ್ನು. ಆ ಹಣ ಹರಿದು ಬರೋದು ಬಂಡವಾಳಶಾಹಿಗಳಿಂದ. ಹಾಗಾಗಿ ದೇಶದ ಸಂಪತ್ತನ್ನು ವಿದೇಶಿ ಕಂಪನಿ ಮತ್ತು ಬಂಡವಾಳಶಾಹಿ ಲೂಟಿಕೋರರಿಗೆ ಧಾರೆಯೆರೆಯಲು ಯಾವ ಮುಲಾಜೂ ಇಲ್ಲದೆ ತಯಾರಾಗಿರುತ್ತಾರೆ. ಅಂತಹ ಅವರ ಹಾದಿಗೆ ಯಾರೆಲ್ಲ ಅಡ್ಡಿಯಾಗುತ್ತಾರೊ ಅಂತವರಿಗೆ ನಕ್ಸಲರ ಪಟ್ಟಿಯನ್ನೋ, ಭಯೋತ್ಪಾದಕ ಕಟ್ಟಿ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಕೇವಲ ಬಲಪಂಥೀಯರು ಮಾತ್ರವಲ್ಲ, ಅಧಿಕಾರಕ್ಕಂಟಿಕೂತ ಎಡಪಂಥೀಯರೂ ಇದನ್ನೇ ಶುರು ಮಾಡಿಕೊಂಡಿದ್ದಾರೆ. ನಂದಿಗ್ರಾಮದಲ್ಲಿ ರತನ್ ಟಾಟಾ ಒತ್ತುವರಿಯನ್ನು ವಿರೋಧಿಸಿದ ಮೂಲನಿವಾಸಿಗಳನ್ನು `ನಕ್ಸಲರು ಮತ್ತು ಮುಸ್ಲಿಂ ಭಯೋತ್ಪಾದಕರು ತಲೆಹರಟೆ ಮಾಡುತ್ತಿದ್ದಾರೆ’ ಎಂದ ಪಶ್ಚಿಮ ಬಂಗಾಳದ ಬುದ್ಧದೇವ ಭಟ್ಟಾಚಾರ್ಯ ಇದಕ್ಕೆ ಸಾಕ್ಷಿ.
ಇಂತಹ ಘನಕಾರ್ಯಕ್ಕೆ ಅದ್ಯಾಕೆ ಮಹಾತ್ಮಗಾಂಧಿ ಮತ್ತು ಸಾವಿರಾರು ಜನ ಬ್ರಿಟಿಷರ ವಿರುದ್ಧ ಹೋರಾಡಿ, ಜೀವ ತೆತ್ತು, ರಕ್ತ ಹರಿಸಿ, ಬಂಧನಕ್ಕೊಳಗಾಗಿ ಸ್ವಾತಂತ್ರ್ಯವನ್ನು ಪಡೆಯಬೇಕಿತ್ತು? ಬ್ರಿಟಿಷರು ನಮ್ಮನ್ನು ಲೂಟಿ ಮಾಡುತ್ತಿದ್ದಂತೆಯೇ ಇವತ್ತು ನಮ್ಮ ಈ ದೊಡ್ಡ ‘ಪ್ರಜಾಪ್ರಭುತ್ವ’ದಲ್ಲಿ ಜನಪ್ರತಿನಿಧಿಗಳೇ ದೇಶವನ್ನು ತುಂಡುತುಂಡಾಗಿ ವಿದೇಶಿ ಕಂಪನಿಗಳಿಗೆ ಮಾರುತ್ತಾರೆಂದರೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅರ್ಥ ಇದೆಯೇ? ನಿಜವಾಗಲೂ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆಯೇ? ನಂದಿಗ್ರಾಮದಲ್ಲಾದದ್ದನ್ನು ನೋಡಿದರೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದೇ ಹೇಳಬೇಕಾಗುತ್ತದೆಲ್ಲದೆ, ಇವತ್ತು ಹೊಸ ಸ್ವಾತಂತ್ರ್ಯ ಸಂಗ್ರಾಮವನ್ನು ಪ್ರಾರಂಭಿಸಬೇಕಿದೆ ಎಂದು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲಿಯತನಕ ಬುದ್ಧದೇವ ಭಟ್ಟಾಚಾರ್ಯರಂತಹ ಎಡಪಂಥೀಯರು, ಮೂಲಭೂತವಾದದ ಬಲಪಂಥೀಯರಿರುತ್ತಾರೊ ಅಲ್ಲಿಯತನಕ ನಮ್ಮ ನೆಲ, ಜಲದ ಮೇಲೆ ನಮಗೆ ಯಾವ ಹಕ್ಕು ಇರುವುದಿಲ್ಲ, ಪ್ರಜೆಗಳಾಗಿ ನಮ್ಮ ಹಕ್ಕುಗಳಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಅಷ್ಟೇ ಅಲ್ಲ, ಕುವೆಂಪು, ಗಾಂಧಿ, ಬಸವಣ್ಣ ಎಲ್ಲರೂ ಕೇವಲ ಫೊಟೋಗಳಲ್ಲಿ, ಪುಸ್ತಕದಲ್ಲಿ ಶವಗಳಾಗಿರುತ್ತಾರೆ…..
ನಮ್ಮಲ್ಲಿ ಅದೆಷ್ಟೋ ಬುದ್ದಿಜೀವಿಗಳು, ಬರಹಗಾರರು, ಹೋರಾಟಗಾರರು, 1975ರಲ್ಲಿ ಇಂದಿರಾಗಾಂಧಿ ಹೇರಿದ್ದ ತುರ್ತುಪರಿಸ್ಥಿತಿ ವಿರುದ್ಧ ಪ್ರತಿಭಟಿಸಿದ್ದರು. ಜನರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿದ್ದ, ತಮಗೆ ಇಷ್ಟವಿಲ್ಲದವರನ್ನು ಬಂಧಿಸಿದ್ದ, ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದ, ಅಮಾನುಷ ದೌರ್ಜನ್ಯಗಳನ್ನು ಎಸಗಿದ್ದ, ಲೈಸೆನ್ಸ್ ರಾಜ್ ಮುಲಕ ಅಂಧಾದರ್ಬಾರು ನಡೆಸಿದ್ದ ಇಂದಿರಾಗಾಂಧಿಯನ್ನು ಉಗ್ರವಾಗಿ ಖಂಡಿಸಿದ್ದರು.
ಅವತ್ತು ಅಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿತ್ತು. ಆದರೆ ಇವತ್ತು ಅನಧಿಕೃತವಾಗಿ ತುರ್ತುಪರಿಸ್ಥಿತಿಯನ್ನು ಜಾರಿಗೆ ತರಲಾಗಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲೇ ಜನಪ್ರತಿನಿಧಿಗಳು ಇದನ್ನು ಮಾಡಿದ್ದರೂ “ಈಗೇನು ತುರ್ತುಪರಿಸ್ಥಿತಿ ಇಲ್ಲ” ಎಂದೇ ನಂಬಿರುವವರೆಲ್ಲಾ ಫೂಲ್ಸ್ ಪ್ಯಾರಡೈಸ್‍ನಲ್ಲಿ ಬದುಕುತಿದ್ದಾರೆ.
ಏಕೆಂದರೆ, ಅಂದಿನ ಮಿಸ (ಎಮ್‍ಐಎಸ್‍ಎ) ಕಾಯಿದೆಗಿಂತಲೂ ಕಠೋರವಾದ ಟಾಡ (ಟಿಎಡಿಎ) ಬಂತು, ಅದನ್ನೂ ಮೀರಿಸುವಂತಹ ಪೊಟಾ (ಪಿಎಟಿಎ) ಈಗ ಜಾರಿಗೆ ಬಂದಿವೆ. ಅವತ್ತಿನ ಲೈಸೆನ್ಸ್ ರಾಜ್ ಜಾಗದಲ್ಲಿ ಜಾಗತೀಕರಣ-ಖಾಸಗೀಕರಣ-ಉದಾರೀಕರಣ ಎಂಬ ಮೂರು ಭೂತಗಳು ಬಂದಿವೆ. ಅಲ್ಲಿ ಪಶ್ಚಿಮ ಬಂಗಾಳದಲ್ಲಿ ಸರ್ಕಾರದ ತಿಜೋರಿಗೆ ನಷ್ಟವಾದರೂ ಪರವಾಗಿಲ್ಲ ಭೂಮಿಯನ್ನು ಬಂಡವಾಳಶಾಹಿಗಳಿಗೆ ನೀಡುತ್ತೇವೆ ಎಂದು ಸರ್ಕಾರ ಪಟ್ಟು ಹಿಡಿದಿದ್ದರೆ, ಇಲ್ಲಿ ಅಧಿಕಾರದಲ್ಲಿರುವವರು ಗಣಿ ಹಗರಣ, ಲ್ಯಾಂಡ್ ಹಗರಣದಲ್ಲಿ ಮುಳುಗಿ ರಾಜ್ಯವನ್ನೇ ಮನೆ ಆಸ್ತಿ ಮಾಡಿಕೊಳ್ಳತೊಡಗಿದ್ದಾರೆ.
ಹಣ-ಹೆಂಡ ಹರಿಸಿ ಚುನಾವಣೆ ಎಂಬ ಸರ್ಕಸ್‍ನಲ್ಲಿ ಗೆದ್ದವರನ್ನು ನಿಜವಾಗಲೂ ಜನಪ್ರತಿನಿಧಿಗಳು ಎಂದು ಕರೆಯಲಾಗುತ್ತದೆಯೇ. ನಮ್ಮದೂ ಒಂದು ಪ್ರಜಾಪ್ರಭುತ್ವ ಎಂದು ಹಮ್ಮೆ ಪಡಲಾಗುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...