Homeಅಂಕಣಗಳುಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

- Advertisement -
- Advertisement -

ಗೌರಿ ಲಂಕೇಶ್
25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)|

ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು. ಯಾರಿಗೂ ಬಾರದ ಸಂಸ್ಕøತ ಭಾಷೆಯಲ್ಲೇ ಬರೆಯಲಾಗಿದ್ದ ಆ ಕರಪತ್ರದಲ್ಲಿ ಒಂದೇ ಒಂದು ಸಾಲು ಕನ್ನಡದಲ್ಲಿದ್ದು, ಅದು ಹೀಗಿತ್ತು. “1949ರ ಸೆಪ್ಟೆಂಬರ್ 10ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಸಂಸ್ಕøತವೇ ರಾಷ್ಟ್ರಭಾಷೆ ಆಗಬೇಕೆಂದಿದ್ದರಲ್ಲದೆ, ತಮ್ಮ ಈ ಅಭಿಪ್ರಾಯವನ್ನು ಸಂಸ್ಕøತದಲ್ಲೇ ಮಂಡಿಸಿದ್ದರು.”
ಅಂಬೇಡ್ಕರ್ ಸಂಸ್ಕøತ ಭಾಷೆಯನ್ನು ಚೆನ್ನಾಗಿ ಕಲಿತಿದ್ದರು ಅನ್ನೋದು ಗೊತ್ತಿತ್ತು. ಅವರು ಅದನ್ನು ಕಲಿತದ್ದು ಸ್ವ-ಇಚ್ಛೆ ಮತ್ತು ಶ್ರದ್ಧೆಯಿಂದ. ಅಂಬೇಡ್ಕರ್ ದಲಿತರಾಗಿದ್ದರಿಂದ ಅವರಿಗೆ ಶಾಲೆಯಲ್ಲಿ ಸಂಸ್ಕøತ ಹೇಳಿಕೊಡುವುದಿಲ್ಲ ಎಂದು ಮಾಸ್ತರರು ಹೇಳಿದ್ದರು. ಜನರ ಶೋಷಣೆಯ ಭಾಷೆಯೇ ಆಗಿದ್ದ ಸಂಸ್ಕøತದಲ್ಲಿ ಮತ್ತು ಸಂಸ್ಕøತದಲ್ಲೇ ರಚಿಸಿದ್ದ ಪುಸ್ತಕಗಳಲ್ಲಿ ಏನಿರಬಹುದು ಎಂದು ಅರಿಯಲಿಕ್ಕೇ ಅವರು ಆ ಭಾಷೆಯನ್ನು ಕಲಿತಿದ್ದರು. ಅಂದಮಾತ್ರಕ್ಕೆ ಅವರು ಸಂಸ್ಕøತವೇ ರಾಷ್ಟ್ರಭಾಷೆಯಾಗಲಿ ಎಂದು ಸಂಸ್ಕøತದಲ್ಲೇ ವಾದ ಮಂಡಿಸಿದ್ದರೆ?
ಇಂಟರ್‍ನೆಟ್‍ನಲ್ಲಿ ಹುಡುಕಾಡಿದಾಗ 1949ರ ಸೆಪ್ಟೆಂಬರ್ 10ರಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯು “ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಈ ಪ್ರಸ್ತಾವನೆಯನ್ನು ಮಂಡಿಸಿದರು” ಎಂದು ತಳಬುಡವಿಲ್ಲದ ವರದಿ ಸಿಕ್ಕಿತೇ ವಿನಾಃ ನಿಖರ ಮಾಹಿತಿ ಸಿಗಲಿಲ್ಲ. ಅದನ್ನೇ ಆಧಾರವಾಗಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರೋದು ಖಾತ್ರಿಯಾಯ್ತು.
ಯಾವುದಕ್ಕೂ ಇರಲಿ ಎಂದು ನಮ್ಮ ಬಳಗದ, ತುಂಬಾ ಜಾಣೆ ರಾಜಲಕ್ಷ್ಮಿ ಅಂಕಲಗಿ ಎಂಬ ಯುವ ವಕೀಲೆಗೆ ಫೋನ್ ಮಾಡಿ ವಿಷಯ ತಿಳಿಸಿದೆ. “ಸಂವಿಧಾನ ರಚನಾ ಸಭೆಯ ಚರ್ಚೆಗಳನ್ನು ಕುರಿತ ಐದು ಪುಸ್ತಕಗಳೂ ನಮ್ಮ ಆಫೀಸಿನಲ್ಲಿವೆ. ಅವನ್ನು ನೋಡಿ ನಿಮಗೆ ತಿಳಿಸುತ್ತೇನೆ” ಎಂದಳು ಆಕೆ. ಅರ್ಧ ಗಂಟೆಯ ನಂತರ ಆಕೆ ನೀಡಿದ ಮಾಹಿತಿ ಹೀಗಿತ್ತು:
“1949ರ ಸೆಪ್ಟೆಂಬರ್ ಎಂಟನೇ ಮತ್ತು ಒಂಬತ್ತನೇ ತಾರೀಖು ನಡೆದ ಸಂವಿಧಾನ ರಚನಾ ಸಭೆಯಲ್ಲಿ ತೆರಿಗೆ ಕುರಿತ ಚರ್ಚೆಗಳು ಶುರುವಾಗಿ 10ನೇ ತಾರೀಖಿನವರೆಗೂ ಸಾಗಿದವು. 10ನೇ ತಾರೀಖು ಆಸ್ತಿ ಹೊಂದುವ ನೀತಿಗಳನ್ನು ಕುರಿತಂತೆ ಆರ್ಟಿಕಲ್ 24ರ ಬಗ್ಗೆ ಚರ್ಚೆಗಳಾದವು. ಅಂದು ಶನಿವಾರವಾದ್ದರಿಂದ ಸಭೆ ಮಧ್ಯಾಹ್ನ ನಿಂತಿತು. 11ನೇ ತಾರೀಖು ಭಾನುವಾರವಾದ್ದರಿಂದ ಸಭೆ ಮತ್ತೆ 12ನೇ ತಾರೀಖಿನಂದು ಸೇರುತ್ತದೆ. ಅವತ್ತೂ ಸಂಜೆ ನಾಲ್ಕು ಗಂಟೆಯ ತನಕ ಆಸ್ತಿ ಕುರಿತಂತೆ ಚರ್ಚೆ ನಡೆಯುತ್ತದೆ. ಆನಂತರ ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚೆ ಆರಂಭವಾಗಿ ಅದು 13 ಮತ್ತು 14ನೇ ತಾರೀಖಿನವರೆಗೂ ನಡೆಯುತ್ತದೆ. ಆಗಲೂ ಹೇಗೆ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಬೇಕು ಮತ್ತು ಹಿಂದಿಯನ್ನು ಯಾಕೆ ಹೇರಬಾರದು ಎಂಬುದರ ಬಗ್ಗೆಯೇ ಚರ್ಚೆ ನಡೆಯುತ್ತದೆ. 8ರಿಂದ 14ನೇ ತಾರೀಖಿನವರೆಗೂ ನಡೆದ ಚರ್ಚೆಗಳಲ್ಲಿ ಎರಡು ಮುಖ್ಯ ಅಂಶಗಳು ಇವೆ: ಮೊದಲನೆಯದಾಗಿ. ಸಂಸ್ಕøತ ಭಾಷೆಯಲ್ಲಿ ಮಾತನಾಡಿದವರು ಬಿಹಾರದ ಗುಪ್ತನಾಥ ಸಿಂಗ್ ಎಂಬುವವರು. ಆಸ್ತಿ ಹೊಂದುವ ವಿಚಾರ ಕುರಿತಂತೆ ಸಮಾಜವಾದಿ ಸಂವಿಧಾನವನ್ನು ನಿರೂಪಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿರುವಾಗ ಅವರು ಮನುಶಾಸ್ತ್ರದಲ್ಲಿ ಹೇಗೆ ಬಂಡವಾಳಶಾಹಿ ಪರ ಸಿದ್ಧಾಂತಗಳು ಅಡಗಿವೆ ಎಂದು ವಿವರಿಸುತ್ತಾರೆ. ಎರಡನೆಯದು: ಅಂಬೇಡ್ಕರ್‍ರವರು ಸಂಸ್ಕøತದ ಪರವಾಗಿ ಸಂಸ್ಕøತದಲ್ಲಿ ಮಾತನಾಡುವುದಿರಲಿ, ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚಾಸಭೆಗಳಲ್ಲಿ ಅವರು ಭಾಗವಹಿಸಿಯೇ ಇಲ್ಲ!!”
ಇದು ಅಧಿಕೃತವಾಗಿ ದಾಖಲಾಗಿರುವ ಸತ್ಯ! ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತೆನ್ನಲಾದ ತಲೆ-ಬುಡವಿಲ್ಲದ ಊಹಾಪೋಹವಲ್ಲ! ಆದರೆ ಚಡ್ಡಿಗಳು ಎಂತಹ ಕುತಂತ್ರಿಗಳು ನೋಡಿ. ಒಂದೆಡೆ ಮನುಸ್ಮøತಿಯೇ ನಮ್ಮ ಸಂವಿಧಾನವಾಗಬೇಕಿತ್ತು ಎಂದು ವಾದಿಸಿದ್ದ ಗೋಲ್ವಾಲ್ಕರ್ ಎಂಬ ದ್ವೇಷದ ಗುರುವಿನ ನೂರನೇ ಜನ್ಮೋತ್ಸವವನ್ನು ‘ಹಿಂದೂ ಸಮಾವೇಶ’ ಎಂದು ಆಚರಿಸುತ್ತಾರೆ. ಇನ್ನೊಂದೆಡೆ ದಲಿತರ ನಾಯಕ ಮತ್ತು ಆತ್ಮಪ್ರಜ್ಞೆಯಾಗಿದ್ದ ಅಂಬೇಡ್ಕರ್ ಅವರೇ ಸ್ವತಃ ಸಂಸ್ಕøತದ ಪರವಾಗಿದ್ದರು ಎಂದು ಕಲ್ಪಿಸಿಕೊಂಡು ಸಭೆ ಏರ್ಪಡಿಸುತ್ತಾರೆ. ಇದನ್ನೆಲ್ಲ ಶೂದ್ರರು, ದಲಿತರು ನಂಬುತ್ತಾರೆ. ಗೋಲ್ವಾಲ್ಕರ್‍ನ ಸಭೆಗಳಲ್ಲಿ ಶೂದ್ರರು ಭಾಗವಹಿಸಿದರೆ, ಚೆಡ್ಡಿಗಳ ಅಂಬೇಡ್ಕರ್ ಕಾರ್ಯಕ್ರಮಗಳಲ್ಲಿ ದಲಿತರು ಪಾಲ್ಗೊಳ್ಳುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...