Homeಅಂಕಣಗಳುಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

- Advertisement -
- Advertisement -

ಗೌರಿ ಲಂಕೇಶ್
25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)|

ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು. ಯಾರಿಗೂ ಬಾರದ ಸಂಸ್ಕøತ ಭಾಷೆಯಲ್ಲೇ ಬರೆಯಲಾಗಿದ್ದ ಆ ಕರಪತ್ರದಲ್ಲಿ ಒಂದೇ ಒಂದು ಸಾಲು ಕನ್ನಡದಲ್ಲಿದ್ದು, ಅದು ಹೀಗಿತ್ತು. “1949ರ ಸೆಪ್ಟೆಂಬರ್ 10ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಸಂಸ್ಕøತವೇ ರಾಷ್ಟ್ರಭಾಷೆ ಆಗಬೇಕೆಂದಿದ್ದರಲ್ಲದೆ, ತಮ್ಮ ಈ ಅಭಿಪ್ರಾಯವನ್ನು ಸಂಸ್ಕøತದಲ್ಲೇ ಮಂಡಿಸಿದ್ದರು.”
ಅಂಬೇಡ್ಕರ್ ಸಂಸ್ಕøತ ಭಾಷೆಯನ್ನು ಚೆನ್ನಾಗಿ ಕಲಿತಿದ್ದರು ಅನ್ನೋದು ಗೊತ್ತಿತ್ತು. ಅವರು ಅದನ್ನು ಕಲಿತದ್ದು ಸ್ವ-ಇಚ್ಛೆ ಮತ್ತು ಶ್ರದ್ಧೆಯಿಂದ. ಅಂಬೇಡ್ಕರ್ ದಲಿತರಾಗಿದ್ದರಿಂದ ಅವರಿಗೆ ಶಾಲೆಯಲ್ಲಿ ಸಂಸ್ಕøತ ಹೇಳಿಕೊಡುವುದಿಲ್ಲ ಎಂದು ಮಾಸ್ತರರು ಹೇಳಿದ್ದರು. ಜನರ ಶೋಷಣೆಯ ಭಾಷೆಯೇ ಆಗಿದ್ದ ಸಂಸ್ಕøತದಲ್ಲಿ ಮತ್ತು ಸಂಸ್ಕøತದಲ್ಲೇ ರಚಿಸಿದ್ದ ಪುಸ್ತಕಗಳಲ್ಲಿ ಏನಿರಬಹುದು ಎಂದು ಅರಿಯಲಿಕ್ಕೇ ಅವರು ಆ ಭಾಷೆಯನ್ನು ಕಲಿತಿದ್ದರು. ಅಂದಮಾತ್ರಕ್ಕೆ ಅವರು ಸಂಸ್ಕøತವೇ ರಾಷ್ಟ್ರಭಾಷೆಯಾಗಲಿ ಎಂದು ಸಂಸ್ಕøತದಲ್ಲೇ ವಾದ ಮಂಡಿಸಿದ್ದರೆ?
ಇಂಟರ್‍ನೆಟ್‍ನಲ್ಲಿ ಹುಡುಕಾಡಿದಾಗ 1949ರ ಸೆಪ್ಟೆಂಬರ್ 10ರಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯು “ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಈ ಪ್ರಸ್ತಾವನೆಯನ್ನು ಮಂಡಿಸಿದರು” ಎಂದು ತಳಬುಡವಿಲ್ಲದ ವರದಿ ಸಿಕ್ಕಿತೇ ವಿನಾಃ ನಿಖರ ಮಾಹಿತಿ ಸಿಗಲಿಲ್ಲ. ಅದನ್ನೇ ಆಧಾರವಾಗಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರೋದು ಖಾತ್ರಿಯಾಯ್ತು.
ಯಾವುದಕ್ಕೂ ಇರಲಿ ಎಂದು ನಮ್ಮ ಬಳಗದ, ತುಂಬಾ ಜಾಣೆ ರಾಜಲಕ್ಷ್ಮಿ ಅಂಕಲಗಿ ಎಂಬ ಯುವ ವಕೀಲೆಗೆ ಫೋನ್ ಮಾಡಿ ವಿಷಯ ತಿಳಿಸಿದೆ. “ಸಂವಿಧಾನ ರಚನಾ ಸಭೆಯ ಚರ್ಚೆಗಳನ್ನು ಕುರಿತ ಐದು ಪುಸ್ತಕಗಳೂ ನಮ್ಮ ಆಫೀಸಿನಲ್ಲಿವೆ. ಅವನ್ನು ನೋಡಿ ನಿಮಗೆ ತಿಳಿಸುತ್ತೇನೆ” ಎಂದಳು ಆಕೆ. ಅರ್ಧ ಗಂಟೆಯ ನಂತರ ಆಕೆ ನೀಡಿದ ಮಾಹಿತಿ ಹೀಗಿತ್ತು:
“1949ರ ಸೆಪ್ಟೆಂಬರ್ ಎಂಟನೇ ಮತ್ತು ಒಂಬತ್ತನೇ ತಾರೀಖು ನಡೆದ ಸಂವಿಧಾನ ರಚನಾ ಸಭೆಯಲ್ಲಿ ತೆರಿಗೆ ಕುರಿತ ಚರ್ಚೆಗಳು ಶುರುವಾಗಿ 10ನೇ ತಾರೀಖಿನವರೆಗೂ ಸಾಗಿದವು. 10ನೇ ತಾರೀಖು ಆಸ್ತಿ ಹೊಂದುವ ನೀತಿಗಳನ್ನು ಕುರಿತಂತೆ ಆರ್ಟಿಕಲ್ 24ರ ಬಗ್ಗೆ ಚರ್ಚೆಗಳಾದವು. ಅಂದು ಶನಿವಾರವಾದ್ದರಿಂದ ಸಭೆ ಮಧ್ಯಾಹ್ನ ನಿಂತಿತು. 11ನೇ ತಾರೀಖು ಭಾನುವಾರವಾದ್ದರಿಂದ ಸಭೆ ಮತ್ತೆ 12ನೇ ತಾರೀಖಿನಂದು ಸೇರುತ್ತದೆ. ಅವತ್ತೂ ಸಂಜೆ ನಾಲ್ಕು ಗಂಟೆಯ ತನಕ ಆಸ್ತಿ ಕುರಿತಂತೆ ಚರ್ಚೆ ನಡೆಯುತ್ತದೆ. ಆನಂತರ ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚೆ ಆರಂಭವಾಗಿ ಅದು 13 ಮತ್ತು 14ನೇ ತಾರೀಖಿನವರೆಗೂ ನಡೆಯುತ್ತದೆ. ಆಗಲೂ ಹೇಗೆ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಬೇಕು ಮತ್ತು ಹಿಂದಿಯನ್ನು ಯಾಕೆ ಹೇರಬಾರದು ಎಂಬುದರ ಬಗ್ಗೆಯೇ ಚರ್ಚೆ ನಡೆಯುತ್ತದೆ. 8ರಿಂದ 14ನೇ ತಾರೀಖಿನವರೆಗೂ ನಡೆದ ಚರ್ಚೆಗಳಲ್ಲಿ ಎರಡು ಮುಖ್ಯ ಅಂಶಗಳು ಇವೆ: ಮೊದಲನೆಯದಾಗಿ. ಸಂಸ್ಕøತ ಭಾಷೆಯಲ್ಲಿ ಮಾತನಾಡಿದವರು ಬಿಹಾರದ ಗುಪ್ತನಾಥ ಸಿಂಗ್ ಎಂಬುವವರು. ಆಸ್ತಿ ಹೊಂದುವ ವಿಚಾರ ಕುರಿತಂತೆ ಸಮಾಜವಾದಿ ಸಂವಿಧಾನವನ್ನು ನಿರೂಪಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿರುವಾಗ ಅವರು ಮನುಶಾಸ್ತ್ರದಲ್ಲಿ ಹೇಗೆ ಬಂಡವಾಳಶಾಹಿ ಪರ ಸಿದ್ಧಾಂತಗಳು ಅಡಗಿವೆ ಎಂದು ವಿವರಿಸುತ್ತಾರೆ. ಎರಡನೆಯದು: ಅಂಬೇಡ್ಕರ್‍ರವರು ಸಂಸ್ಕøತದ ಪರವಾಗಿ ಸಂಸ್ಕøತದಲ್ಲಿ ಮಾತನಾಡುವುದಿರಲಿ, ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚಾಸಭೆಗಳಲ್ಲಿ ಅವರು ಭಾಗವಹಿಸಿಯೇ ಇಲ್ಲ!!”
ಇದು ಅಧಿಕೃತವಾಗಿ ದಾಖಲಾಗಿರುವ ಸತ್ಯ! ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತೆನ್ನಲಾದ ತಲೆ-ಬುಡವಿಲ್ಲದ ಊಹಾಪೋಹವಲ್ಲ! ಆದರೆ ಚಡ್ಡಿಗಳು ಎಂತಹ ಕುತಂತ್ರಿಗಳು ನೋಡಿ. ಒಂದೆಡೆ ಮನುಸ್ಮøತಿಯೇ ನಮ್ಮ ಸಂವಿಧಾನವಾಗಬೇಕಿತ್ತು ಎಂದು ವಾದಿಸಿದ್ದ ಗೋಲ್ವಾಲ್ಕರ್ ಎಂಬ ದ್ವೇಷದ ಗುರುವಿನ ನೂರನೇ ಜನ್ಮೋತ್ಸವವನ್ನು ‘ಹಿಂದೂ ಸಮಾವೇಶ’ ಎಂದು ಆಚರಿಸುತ್ತಾರೆ. ಇನ್ನೊಂದೆಡೆ ದಲಿತರ ನಾಯಕ ಮತ್ತು ಆತ್ಮಪ್ರಜ್ಞೆಯಾಗಿದ್ದ ಅಂಬೇಡ್ಕರ್ ಅವರೇ ಸ್ವತಃ ಸಂಸ್ಕøತದ ಪರವಾಗಿದ್ದರು ಎಂದು ಕಲ್ಪಿಸಿಕೊಂಡು ಸಭೆ ಏರ್ಪಡಿಸುತ್ತಾರೆ. ಇದನ್ನೆಲ್ಲ ಶೂದ್ರರು, ದಲಿತರು ನಂಬುತ್ತಾರೆ. ಗೋಲ್ವಾಲ್ಕರ್‍ನ ಸಭೆಗಳಲ್ಲಿ ಶೂದ್ರರು ಭಾಗವಹಿಸಿದರೆ, ಚೆಡ್ಡಿಗಳ ಅಂಬೇಡ್ಕರ್ ಕಾರ್ಯಕ್ರಮಗಳಲ್ಲಿ ದಲಿತರು ಪಾಲ್ಗೊಳ್ಳುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...