Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....