Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...