Homeಅಂಕಣಗಳುಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

ಚಾನೆಲ್‌ಗಳನ್ನು ಹೊಕ್ಕ ಕಾಗೆಗಳು ಕಾವ್ ಕಾವ್ ಎನ್ನುವ ಆ್ಯಂಕರ್ಸ್‌ಗಳು

- Advertisement -
- Advertisement -

ಮಲ್ಲಿ |
ಕನ್ನಡದ ಬಹುಪಾಲು ನ್ಯೂಸ್ ಚಾನೆಲ್‌ಗಳಿಗೆ ಕಾಗೆ ಎಂದರೆ ಬಲುಪ್ರೀತಿ. ಅದರಲ್ಲೂ ಬಿಜೆಪಿಗೆ ಅನುಕೂಲ ಆಗುವುದಾದರೆ ಅವು ಇಡೀ ದಿನ ಕಾಗೆಯ ಸುತ್ತವೇ ಸುದ್ದಿ ಮಾಡಲು ರೆಡಿ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಂತೆ ಎಷ್ಟೇ ಮೂದಲಿಕೆ, ವ್ಯಂಗ್ಯ ಬಂದರೂ ಅವು ಕಾಗೆಯ ಪರೀತಿಯಿಂದ ದೂರ ಉಳಿಯುತ್ತಲೇ ಆಗುತ್ತಿಲ್ಲ.

ಫೆಬ್ರುವರಿ ಎಂಟರಂದು ಬಜೆಟ್ ಮಂಡನೆ ಇತ್ತಲ್ಲ? ಅವತ್ತು ಬಜೆಟ್ ಮಂಡನೆಯೇ ಆಗುವುದಿಲ್ಲ, ಸರ್ಕಾರ ಬೀಳುತ್ತದೆ ಎಂದು ಬಹುಪಾಲು ನ್ಯೂಸ್ ಚಾನೆಲ್‌ಗಳು ಮುಂಜಾನೆಯಿಂದಲೇ ಅರಚುತ್ತಿದ್ದವು. ಆಗ ಬಿಟಿವಿ ಒಂದು ಬಿಗ್ ಬ್ರೇಕಿಂಗ್ ಕೊಡ್ತಾನೇ ಇತ್ತು. ಅದು ಕೂಡ ಸರ್ಕಾರ ಬೀಳುವುದರ ಕುರಿತೇ ಆಗಿತ್ತು! ಆದರೆ ಅದಕ್ಕೆ ಅವರು ನೀಡುತ್ತಿದ್ದ, ತೋರಿಸುತ್ತಿದ್ದ ಎಕ್ಸಕ್ಲೂಸಿವ್ ಕಾರಣವೇ ಬೇರೆ ಇತ್ತು!
ಅದು ಕಾಗೆ! ವಿಧಾನಸೌಧದದ ಪಶ್ಚಿಮ ದ್ವಾರದಲ್ಲಿ ಕಾಗೆ ಬಂದು ಸುಮಾರು ಹೊತ್ತಿನಿಂದ ಕೂತಿದೆ, ಇದು ಅಪಶಕುನ, ಸರ್ಕಾರ ಬಿದ್ದೇ ಹೋಯ್ತು ಎಂದೆಲ್ಲ ಬ್ರೇಕಿಂಗ್ ನ್ಯೂಸ್ ಕೊಡಲಾಗುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ‘ಬಿಗ್ ಬ್ರೇಕಿಂಗ್’ ಸದ್ಯದಲ್ಲೇ ಎಂಬ ಸುದ್ದಿ ಬಿಟ್ಟರು. ಆನ ಇದೇನಪ್ಪಾ ಅಂತಾ ಕಾಯ್ದರು. ಬಂದೇ ಬಿಟ್ಟಿತು ಬಿಗ್ ಬ್ರೇಕಿಂಗ್, “ಕಾಗೆ ಈಗ ವಿಧಾನಸೌಧ ಪ್ರವೇಶಿಸಲಿದೆ”….. ಛೇ, ಛೇ ರಿಯಲಿ ಬಿಗ್ ಬ್ರೇಕಿಂಗ್, ಆ ಕಾಗೆಗೆ!

ಆ ಕಾಗೆ ಹಿಂದ ಬಿದ್ದ ಕ್ಯಾಮೆರಾಮನ್ ಮತ್ತು ವರದಿಗಾರ ಬಜೆಟ್ ಬಗ್ಗೆ ತಲೆಕೆಡಿಸಿಕೊಂಡಿರಲೇ ಇಲ್ಲ. ದನ ಕಾಯುವವರಂತೆ ವಿಧಾನಸೌಧದ ಅಂಗಳದಲ್ಲೆಲ್ಲ ಓಡೋಡಿ ಶೂಟ್ ಮಾಡುತ್ತಿದ್ದ ಈ ಮನೆಹಾಳರನ್ನು ನೋಡಿ ಸೆಕ್ಯುರಿಟಿಯವರು, ಕುದುರೆ ವ್ಯಾಪಾರದ ಬಗ್ಗೆ ವರದಿ ಮಾಡ್ರೋ ಅಂದರೆ ಈ ಕತ್ತೆಗಳು ಕಾಗೆ ಹಿಂದೆ ಬಿದ್ದಿವೆಯಲ್ಲ ಎಂದು ನಗಾಡುತ್ತಿದ್ದರು. ಬಜೆಟ್ ಸುಸೂತ್ರವಾಗಿ ಮಂಡನೆಯಾಗಿತು. ಬಜೆಟ್‌ಗೂ ಮೊದಲು ಕುಮಾರಸ್ವಾಮಿ ಬಿಟ್ಟ ಆಡಿಯೋ ಬಾಂಬಿಗೆ ಬಿಜೆಪಿಯೂ ಥಂಡಾ ಹೊಡೆಯಿತು. ಪಾಪ, ಆಮೇಲೆ ಕಾಗೆಯೂ ಇಲ್ಲ, ಕಾಗೆ ಹಿಂದೆ ಬಿದ್ದಿದ್ದ ಕತ್ತೆಗಳೂ ಇಲ್ಲ!

ಪಬ್ಲಿಕ್‌ನ ಸೆಲ್ ವೀಕ್!

ಕಾಗೆ ಅಪಶಕುನ ಎಂಬ ಮೂಢನಂಬಿಕೆ ಇರುವಂತೆ, ನಿಂತ ಅಂದರೆ ಓಡದ ಗಡಿಯಾರವೂ ಮನೆಯಲ್ಲಿ ಇದ್ದರೆ ಡೇಂಜರ್ ಎಂಬ ಮುಠ್ಠಾಳ ನಂಬಿಕೆಯನ್ನೂ ವೈದಿಕರು ನಮ್ಮ ಜನರ ತಲೆಯಲ್ಲಿ ತುಂಬಿದ್ದಾರೆ. ಇದನ್ನೇ ಎನ್‌ಕ್ಯಾಷ್ ಮಾಡಿಕೊಂಡ ಪಬ್ಲಿಕ್ ಟಿವಿಯವರು ಮತ್ತೊಂದು ಬ್ರೇಕಿಂಗ್ ಹೊಡೆದೇ ಬಿಟ್ಟರು. ಕುಮಾರಸ್ವಾಮಿ ಮನೆಯ ಗಡಿಯಾರ ಕೆಟ್ಟು ಹೋಗಿದೆ ಅಂತಾ ಒಂದು ಬ್ರೇಕಿಂಗು, ಕೆಲಸದವರು ಹೊಸ ಸೆಲ್ ಹಾಕಿ ಸರಿಪಡಿಸಿದರು ಅಂತಾ ಇನ್ನೊಂದು ಬ್ರೇಕಿಂಗು.
ಕಾಗೆ ಕೂತಿದ್ದು, ಗಡಿಯಾರ ನಿಂತಿದ್ದು-ಇಂತದ್ದನ್ನೆಲ್ಲ ನೋಡಿ ಯಡಿಯೂರಪ್ಪ ಖೂಷಿ ಪಡುವ ಹೊತ್ತಿನಲ್ಲೇ ದೇವದುರ್ಗದ ಐಬಿಯಲ್ಲಿ ನಡೆಸಲು ಯತ್ನಿಸಿದ ಆಪರೇಷನ್ನಿನ ಆಡಿಯೋ ಹೊರಬಿದ್ದಿತ್ತು!

ಕಾರ್ ಕಾರ್, ಕಾರ್ ಮೇಲೆ ಕಾಗೆ ದರ್ಬಾರ್!

ಹಿಂದೆಯೂ ನಮ್ಮ ಕನ್ನಡ ಚಾನೆಲ್‌ಗಳು ಕಾಗೆಯ ಹಿಂದೆ ಬಿದ್ದು ಸರ್ಕಾರ ಬೀಳುತ್ತದೆ, ಸಿಎಂ ಬದಲಾಗುತ್ತಾರೆ ಎಂದೆಲ್ಲ ‘ವಿಶಲ್ಲೇಷಣೆ’ ಮಾಡುವ ಮಟ್ಟಕ್ಕೆ ಇಳಿದಿದ್ದವು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ ಮೇಲೆ ಕಾಗೆ ಕೂತಿದ್ದ ‘ಎಕ್ಸ್ಕ್ಲೂಸಿವ್’ ವಿಜುವಲ್ ಕ್ಯಾಚ್ ಮಾಡಿದ್ದ ಚಾನೆಲ್‌ಗಳು, ಸಿದ್ದರಾಮಯ್ಯ ಕಾರು ಬದಲಿಸಿದಾಗ, ಕಾಗೆಗೆ ಹೆದರಿ ಕಾರು ಬದಲಿಸಿದ ಸಮಾಜವಾದಿ ಎಂದೆಲ್ಲ ಲೇವಡಿ ಮಾಡಿದ್ದವು. ಮೂಢ ನಂಬಿಕೆಗಳನ್ನು ಪುಟ್ಟಾಪೂರಾ ವಿರೋಧಿಸುವ ಸಿದ್ದರಾಮಯ್ಯ ಆಡಳಿತಾತ್ಮಕ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣದಿಂದ ಕಾರು ಬದಲಾಯಿಸಿದ್ದರು. ಆದರೆ ಗೂಬೆಗಳಿಗೆ ಕಣ್ಣಿಗೆ ಕಾಗೆ ಮಾತ್ರ ಕಂಡಿತ್ತು.
ನಂತರವೂ ಶಕ್ತಿಸೌಧದಲ್ಲಿ ಕಾಗೆ, ಸಿದ್ದರಾಮಯ್ಯ ಕುರ್ಚಿಗೆ ಆಪತ್ತು ಎಂದೆಲ್ಲ ಕಾವ್ ಕಾವ್ ಮಾಡಲಾಗಿತ್ತು. ಪುಣ್ಯಕ್ಕೆ, ಸಿದ್ದರಾಮಯ್ಯ ಕಾರ್ ಮೇಲೆ ಕೂತಿದ್ದ ಕಾಗೆಯೇ ಮೊನ್ನೆ ಬಜೆಟ್ ದಿನ ವಿಧಾನಸೌಧದಲ್ಲಿ ಅಲೆದಾಡುತ್ತಿತ್ತು ಎಂಬ ಬ್ರೇಕಿಂಗನ್ನು ಹೊಡೆದಿಲ್ಲ. ಈಗ ಅದನ್ನು ಮಾಡುತ್ತಾರೆ, ನೋಡ್ತಾ ಇರಿ!

ರಾಧಿಕಮ್ಮನ ಕಾಗೆಗೆ ಒಂದು ಬಲಿ

4 ವರ್ಷಗಳ ಕೆಳಗೆ ಟಿವಿ ಒಂಭತ್ತರಲ್ಲಿ ರಾಧಿಕಾ ಭಾರದ್ವಾಜರು ಮಟಮಟ ಮಧ್ಯಾಹ್ನ ಕಾಗೆಯ ಸುತ್ತಲೇ ಅರ್ಧ ತಾಸಿನ ಎಪಿಸೋಡು ಮಾಡಿ ಧನ್ಯರಾಗಿದ್ದರು. ಮೂವರು ಜ್ಯೋತಿಷಿಗಳನ್ನು ಕೂಡಿಸಿಕೊಂಡಿದ್ದ ರಾಧಿಕಮ್ಮ ಕಾಗೆ ಮುಟ್ಟಿದರೆ ಮನುಷ್ಯ ಸತ್ತಂತೆ, ಮನೆ ಹಾಳಾದಂತೆ ಎಂದೆಲ್ಲ ಭೋಂಗು ಬಿಟ್ಟರು. ಯಾವುದೇ ವ್ಯಕ್ತಿಯ ಮೇಲೆ ಕಾಗೆ ಕುಳಿತರೆ ಆತನ/ಆಕೆಯ ತಾಯಿಗೆ ಮರಣ ಇಲ್ಲವೇ ಆತ/ಆಕೆಯೇ ಸಾವಿಗೆ ಈಡಾಗುತ್ತಾರೆ ಎಂದೆಲ್ಲ ಕಾವ್ ಕಾವ್ ಎಂದು ಅರಚಲಾಗಿತ್ತು.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ಮಾಡುತ್ತಿದ್ದ ಲಕ್ಷ್ಮೇಶ್ವರದ ಯುವಕ ತನ್ನ ತಲೆ ಮೇಲೆ ಕಾಗೆ ಕೂತಿದ್ದಕ್ಕೆ ಚಿಂತಕ್ರಾಂತನಾಗಿ, ತನ್ನ ತಾಯಿಗೆ ಏನೂ ಆಗಬಾರದೆಂದು ಆತ್ಮಹತ್ಯೆ ಮಾಡಿಕೊಡಿದ್ದ. ಪೊಲೀಸರು ಸರಿಯಾದ ತನಿಖೆ ಮಾಡಿದ್ದರೆ ರಾಧಿಕಮ್ಮ ಮತ್ತು ಜೊತೆಗಿದ್ದ ಜ್ಯೋತಿಷಿ ಕಾಗೆಗಳೆಲ್ಲ ಜೈಲೂಟ ತನ್ನಬೇಕಾಗುತ್ತಿತ್ತೇನೋ?

ಆನರಲ್ಲಿ ವೈಜ್ಞಾನಿಕ ಮನೋಭಾವ ತುಂಬ ಬೇಕಾದ ಚಾನೆಲ್‌ಗಳು ಮುಂಜಾನೆ ಎದ್ದ ಕೂಡಲೇ ಜ್ಯೋತಿಷಿಗಳಿಗೆ ಚಾನೆಲ್ ಅನ್ನೇ ಮಾರಿಕೊಳ್ಳುವುದು ಅಸಹ್ಯಕರ. ಇದರ ಜೊತೆಗೆ ಕಾಗೆ, ಗಡಿಯಾರದ ಬ್ರೇಕಿಂಗುಗಳು ಬೇರೆ. ಟಿಆರ್‌ಪಿಗಾಗಿ ಕಾಗೆಯನ್ನೇ ಸಾಕಿ, ಅದನ್ನು ಎಲ್ಲಿ ಬೇಕಲ್ಲಿ ಕೂಡಿಸಿ ಬ್ರೇಕಿಂಗು ಕೊಡಲೂ ಹೇಸಲಾರವು ಈ ನ್ಯೂಸ್ ಚಾನೆಲ್‌ಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...