Homeಅಂಕಣಗಳು`ಗಿರಿ' ನೋಡಲು ಹೋದಾಗ ಕಂಡದ್ದು...

`ಗಿರಿ’ ನೋಡಲು ಹೋದಾಗ ಕಂಡದ್ದು…

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್ 2003 (ಸಂಪಾದಕೀಯದಿಂದ)

ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ ತಡೆಯೋಣ ಬನ್ನಿ ಎಂದು ಕರೆ ನೀಡಿದ ಈ ಎರಡು ವಾರಗಳಲ್ಲಿ ಅದೆಂತಹ ಅದ್ಭುತ ಬೆಳವಣಿಗೆಗಳಾಗಿವೆ ಎಂದರೆ…. ಎಲ್ಲಿಂದ ಪ್ರಾರಂಭಿಸಲಿ ಎಂಬುದೇ ಗೊಂದಲವಾಗಿಬಿಟ್ಟಿದೆ.

ಭಾವೈಕ್ಯತೆಯ ಸಂಕೇತವಾಗಿರುವ ಬಾಬಾಬುಡನ್‍ಗಿರಿಯ ಸಾಮರಸ್ಯವನ್ನು ಕಾಪಾಡಲು ಈಗಾಗಲೇ ತಮ್ಮ ಬೆಂಬಲವನ್ನು ಸೂಚಿಸಿರುವ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್‍ರವರು ಬುಧವಾರ ಬೆಳಗ್ಗೆ ನನಗೆ ಫೋನ್ ಮಾಡಿ: “ಡಿಸೆಂಬರ್ 7 ಮತ್ತು 8ರಂದು ಅಲ್ಲಿ ಸೌಹಾರ್ದ ಸಮಾವೇಶ ನಡೆಸುವ ಮುನ್ನ ನಾವು ಹಲವರು ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವಸ್ಥಿತಿಯನ್ನು ಪರಿಶೀಲಿಸಿ ಬರೋಣವಾ? ಎಂದು ಕೇಳಿದರು.

“ಬ್ಯೂಟಿಫುಲ್ ಐಡಿಯಾ, ಹೋಗೋಣ” ಅಂದೆ. ಅದರಂತೆ ಗುರುವಾರ ಕಾರ್ನಾಡ್, ಡಾ.ಕೆ.ಮರುಳಸಿದ್ದಪ್ಪ, ಜಿ.ಕೆ.ಗೋವಿಂದರಾವ್, ಶೂದ್ರ ಶ್ರೀನಿವಾಸ್, ಪ್ರೊ.ವಿ.ಎಸ್.ಶ್ರೀಧರ್ ಮತ್ತು ನಾನು ಎಲ್ಲರೂ ಟಾಟಾ ಕ್ವಾಲಿಸ್ ಒಂದನ್ನು ಏರಿ ಚಿಕ್ಕಮಗಳೂರಿಗೆ ಹೊರಟೆವು.

ದಾರಿಯಲ್ಲಿ ಬಾಬಾಬುಡನ್‍ಗಿರಿಯ ವೈಶಿಷ್ಟ್ಯತೆ ಮತ್ತು ಈಗ ಕೇಸರಿ ಬಳಗ ಅದರ ಸುತ್ತಲೂ ಹರಡಿರುವ ವಿಷಮಯ ವಾತಾವರಣದ ಬಗ್ಗೆ ಚರ್ಚಿಸಿದೆವು.

ಈ ವರ್ಷ ಭಜರಂಗದಳದ ಮಂಗಗಳು ಬಾಬಾ ಬುಡನ್‍ಗಿರಿಯಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಲು ಅಣಿಯಾಗಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಇದಕ್ಕೆ ಹೋದ ವರ್ಷ ಭಜರಂಗದಳ ನೀಡಿದ್ದ ಕರೆಯೇ ಸಾಕ್ಷಿಯಂತಿದೆ. ಅಂದು ತೆಗೆದಿದ್ದ ಫೋಟೋಗಳನ್ನು ಶ್ರೀಧರ್ ತೋರಿಸಿದರು. ಅವುಗಳಲ್ಲಿ ಒಂದು ಬ್ಯಾನರ್‍ನ ಫೋಟೋ ಇದ್ದು ಅದರಲ್ಲಿ ಹೀಗೆ ಕರೆ ನೀಡಲಾಗಿತ್ತು: “ಸ್ನೇಹಕ್ಕೆ ಬದ್ಧ, ಸಂಹಾರಕ್ಕೆ ಸಿದ್ಧ.”

ಇದನ್ನು ಓದಿ ಕಾರ್ನಾಡ್ ಕುಪಿತರಾದರು. “ಯಾರ ಸಂಹಾರ ಮಾಡುತ್ತಾರಂತೆ ಇವರು? ಇದರಲ್ಲಿ ಬಳಸಿರುವ ಪದಗಳನ್ನು ನೋಡಿ ‘ಮಾಂಸ ಖಂಡ’, ‘ರಕ್ತದ ಕೋಡಿ’, ‘ಶತ್ರುಗಳ ಸಂಹಾರ’. ಇದು ಕನ್ನಡ ಭಾಷೆಯೇ?” ಎಂದು ಗುಡುಗಿದರು.

ಇಂತಹ ಸ್ಥಳದಲ್ಲಿ ಪುರೋಹಿತಶಾಹಿ ಪಕ್ಷವಾದ ಬಿಜೆಪಿ ಮತ್ತದರ ಅಂಗವಾಗಿರುವ ಭಜರಂಗದ ಮಂಗಗಳು ಇಲ್ಲಿ ಅರ್ಚಕ(ಆತ ಬ್ರಾಹ್ಮಣನೇ ಆಗಿರುತ್ತಾನೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ)ನ ನೇಮಕ, ಗೋರಿಗಳ ನಿರ್ಮೂಲನೆ, ‘ಹಿಂದೂ ಪುಣ್ಯಕ್ಷೇತ್ರ’ಗಳನ್ನು ಘೋಷಿಸಲು ಮುಂದಾಗಿರುವುದು ನಿಜವಾಗಲು ಕಿಡಿಗೇಡಿತನ……

ಕಾರ್ನಾಡ್‍ರವರು “ಈ ದತ್ತ ಜಯಂತಿ, ದತ್ತಮಾಲೆ, ಇವ್ಯಾವೂ ನಮ್ಮ ಸಂಸ್ಕೃತಿಯಲ್ಲಿಲ್ಲ, ಇವುಗಳ ಆಚರಣೆಯ ಹಿಂದೆ ಇರುವುದು ಧರ್ಮವಲ್ಲ, ಬದಲಾಗಿ ಧರ್ಮದ ಹೆಸರಿನಲ್ಲಿ ರಾಜಕಾರಣ. ನಾಥ ಪಂಕ್ತಿಗೆ ಸೇರಿದ್ದ ದತ್ತಾತ್ರೇಯ ಜಾತಿ ಪದ್ದತಿಯನ್ನು ತಿರಸ್ಕರಿಸಿದ್ದರೂ, ಆತನನ್ನು ಬ್ರಾಹ್ಮಣೀಕರಿಸುತ್ತಿರುವುದರಲ್ಲ ಹಿಂದಿನ ಸಂಚು ಅರ್ಥೈಸುವುದು ಸುಲಭ” ಎಂದು ಲೇವಡಿ ಮಾಡಿದರು.

ಈ ‘ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ’ಕ್ಕೆ ತನ್ನದೇ ಇತಿಹಾದವಿದೆ. ಅರೆಬಿಯಾದಿಂದ ಚಂದ್ರ ದ್ರೋಣ ಪರ್ವತಕ್ಕೆ ಬಂದ ದಾದಾ ಹೈಯತ್ ಇಲ್ಲಿನ ಪಾಳೆಗಾರರ ದಬ್ಬಾಳಿಕೆಯಡಿ ನರಳುತ್ತಿದ್ದ ಶೂದ್ರರಿಗೂ, ದೀನ ದಲಿತ ವರ್ಗಕ್ಕೂ ಸಹಾಯ ಮಾಡಿ ಅವರ ಮೆಚ್ಚುಗೆಯನ್ನು ಗಳಿಸಿದರು. ದಾದಾ ಹೈಯತ್‍ನ ಪ್ರೀತಿ, ದಯೆ ಮತ್ತು ಸೈರಣೆಯನ್ನು ಕಂಡು ಹಲವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ, ಇನ್ನು ಹಲವರು ತಮ್ಮ ಪುರಾತನ ಧರ್ಮವನ್ನು ತ್ಯಜಿಸದೇ, ದಾದಾ ಹೈರತ್‍ನನ್ನು ದತ್ತಾತ್ರೇಯನ ಅವತಾರವೆಂದೇ ಭಾವಿಸಿ ಆತನ ಭಕ್ತಾಧಿಗಳಾದರು. ಇದಕ್ಕೆ ಕಾರಣವೂ ಇತ್ತು. ಹಿಂದೂ ಪುರಾಣಗಳಲ್ಲಿ ವಿಷ್ಣು ದತ್ತಾತ್ರೇಯನ ಅವತಾರವನ್ನು ತಾಳಿ ಜನರನ್ನು ದಾಸ್ಯದಿಂದ ಪಾರು ಮಾಡುತ್ತಾನೆಂದು ಹೇಳಲಾಗಿದೆ. ಆದ್ದರಿಂದಲೇ ಹಿಂದೂ ಭಕ್ತಾದಿಗಳು ದಾದಾ ಹೈರತ್‍ನಲ್ಲಿ ದತ್ತಾತ್ರೇಯನನ್ನೇ ಕಂಡು ಆತನಿಗೆ ಹಿಂದೂ ಹೆಸರಿಟ್ಟು ಪುನರ್ ನಾಮಕರಣ ಮಾಡಿದರು. ಓರ್ವ ಮುಸ್ಲಿಂ ಸೂಫಿ ಸಂತನಿಗೆ ಆಗೆಲ್ಲ ಹಿಂದೂ ಹೆಸರನ್ನಿಡುವುದು ಸಾಮಾನ್ಯವಾಗಿತ್ತು. ಉದಾಹರಣೆಗೆ: ಬಿಜಾಪುರದ ಸೂಫಿ ಸಂತ ಖ್ವಾಜ ಅಮಿನುದ್ದೀನ್ ಅಲ್ಲಾನನ್ನು ಹಿಂದೂ ಭಕ್ತಾದಿಗಳು ಬ್ರಹ್ಮಾನಂದಯಿಕೆ ಸ್ವಾಮಿ ಎಂದೂ, ತಿಥಿನಿಯ ಮೊಯಿದ್ದೀನ್ ಅವರನ್ನು ಮುನಿಯಪ್ಪರೆಂದೂ ‘ಹಿಂದೂ’ಕರಿಸಲಾಗಿತ್ತು.

ಅಂತೂ ಚಿಕ್ಕಮಗಳೂರನ್ನು ತಲುಪಿದೆವು. ಅಲ್ಲಿ ನಮಗಾಗಿ ಹಲವರು ಕಾದಿದ್ದರು. ಅನೇಕ ಸಂಘಗಳಿಗೆ ಸೇರಿದ್ದ ಅವರೆಲ್ಲಾ ಎಂತಹ ಉತ್ಸಾಹಿ ತರುಣರೆಂದರೆ, ನಾಲ್ಕೈದು ವರ್ಷಗಳ ಕಾಲ ಅವರೆಲ್ಲಾ ಚಿಕ್ಕಮಗಳೂರಿನ ಆಸುಪಾಸಿನಲ್ಲಿ ಸಂಘ ಪರಿವಾರದ ಷಡ್ಯಂತ್ರದ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.

ಬಾಬಾಬುಡನ್‍ಗಿರಿಯಲ್ಲಿರುವ ಪೀಠಕ್ಕೆ ಭೇಟಿನೀಡಿ, ಅಲ್ಲಿನ ಶಾಖಾದ್ರಿಯವರನ್ನು ಮಾತನಾಡಿಸಿ, ಇತ್ತೀಚೆಗೆ ಗಿರಿಗೆ ಹೋಗಿದ್ದ ಮಂಗ ಪರಿವಾರದವರು ಅಲ್ಲಿ ನಾಶ ಮಾಡಿದ್ದ ಮುಸ್ಲಿಮರ ಹೋಟೆಲುಗಳನ್ನು, ಮುಸ್ಲಿಂ ಗುರುಗಳೊಬ್ಬರ ಗೋರಿಯ ಮೇಲಿರುವ ಹರಕೆಯ ಮರದ ಕೊಂಬೆಯನ್ನು ಕಡಿದು ಹಾಕಿರುವುದನ್ನೂ ಪರಿಶೀಲಿಸಿದೆವು.

ಚಿಕ್ಕಮಗಳೂರಿಗೆ ಹಿಂದಿರುಗಿದ ನಂತರ ಒಂದು ಪತ್ರಿಕಾಗೋಷ್ಠಿ. “ಕರ್ನಾಟಕವನ್ನು ಇನ್ನೊಂದು ಗುಜರಾತ್ ಮಾಡುವುದು ಎಂದರೇನು? ಗುಜರಾತ್, ಅಯೋಧ್ಯೆ ನಮಗೆ ಯಾಕೆ, ಯಾವಾಗ ಮಾದರಿಯಾದವು? ನಮಗೆ ನಮ್ಮದೇ ಮಾದರಿ, ಪರಂಪರೆಗಳಿಲ್ಲವೆ?” ಕಾರ್ನಾಡ್‍ರವರಿಂದ ಪ್ರಶ್ನೆ. “ನಮ್ಮ ಮಾರ್ಗದರ್ಶಕರು ಬಸವಣ್ಣ, ಕುವೆಂಪು ಅಂಥವರೇ ವಿನಃ ತೊಗಾಡಿಯಾ, ಮೋದಿ ಅಂಥವರಲ್ಲ,” ಮರುಳು ಸಿದ್ದಪ್ಪನವರಿಂದ ಸ್ಪಷ್ಟನೆ. “ನ್ಯಾಯಾಲಯದ ತೀರ್ಪಿನ ಪ್ರಕಾರ 1975ರ ಹಿಂದಿನ ಸ್ಥಿತಿಯನ್ನೇ ಗಿರಿಯ ಮೇಲೆ ಸ್ಥಾಪಿಸಬೇಕು” ಎಂಬುದು ನಮ್ಮೆಲ್ಲರ ಒತ್ತಾಯ.

ಪತ್ರಿಕಾಗೋಷ್ಠಿಯ ನಂತರ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್‍ರವರೊಂದಿಗೆ ಭೇಟಿ. “ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಗಿರಿಯ ಮೇಲ ಹೋಮ ನಡೆಸಲು ಯಾಕೆ ಅನುಮತಿ ನೀಡಿದಿರಿ?” ಎಂದು ಕಾರ್ನಾಡ್ ಕೇಳಿದರೆ ಆ ಅಧಿಕಾರಿಯಿಂದ ಬಂದ ಉತ್ತರ “75ರ ಹಿಂದೆಯೂ ಅಲ್ಲಿ ಹೋಮ ಮಾಡಲಾಗುತ್ತಿತ್ತು” ಇದಕ್ಕೆ ಯಾವ ದಾಖಲೆ ಇದೆ ತೋರಿಸಿ,” ಎಂದು ಮರುಪ್ರಶ್ನಿಸಿದರೆ ಆತನಲ್ಲಿ ಯಾವ ಉತ್ತರವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...