Homeಅಂಕಣಗಳು`ಗಿರಿ' ನೋಡಲು ಹೋದಾಗ ಕಂಡದ್ದು...

`ಗಿರಿ’ ನೋಡಲು ಹೋದಾಗ ಕಂಡದ್ದು…

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್ 2003 (ಸಂಪಾದಕೀಯದಿಂದ)

ಚಿಕ್ಕಮಗಳೂರು ಮತ್ತು ಬಾಬಾಬುಡನ್‍ಗಿರಿಯಲ್ಲಿ ಕೋಮುಸೌಹಾರ್ದ ಸಭೆ ನಡೆಸಿ, ಆ ಮೂಲಕ ಕೇಸರಿ ಬಳಗದವರು ಕರ್ನಾಟಕವನ್ನು ಮತ್ತೊಂದು ಗುಜರಾತ್ ಆಗಿ ಪರಿವರ್ತಿಸುವುದನ್ನೂ, ಬಾಬಾ ಬುಡನ್‍ಗಿರಿಯನ್ನು ಅಯೋಧ್ಯೆಯನ್ನಾಗಿಸುವುದನ್ನೂ ತಡೆಯೋಣ ಬನ್ನಿ ಎಂದು ಕರೆ ನೀಡಿದ ಈ ಎರಡು ವಾರಗಳಲ್ಲಿ ಅದೆಂತಹ ಅದ್ಭುತ ಬೆಳವಣಿಗೆಗಳಾಗಿವೆ ಎಂದರೆ…. ಎಲ್ಲಿಂದ ಪ್ರಾರಂಭಿಸಲಿ ಎಂಬುದೇ ಗೊಂದಲವಾಗಿಬಿಟ್ಟಿದೆ.

ಭಾವೈಕ್ಯತೆಯ ಸಂಕೇತವಾಗಿರುವ ಬಾಬಾಬುಡನ್‍ಗಿರಿಯ ಸಾಮರಸ್ಯವನ್ನು ಕಾಪಾಡಲು ಈಗಾಗಲೇ ತಮ್ಮ ಬೆಂಬಲವನ್ನು ಸೂಚಿಸಿರುವ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್‍ರವರು ಬುಧವಾರ ಬೆಳಗ್ಗೆ ನನಗೆ ಫೋನ್ ಮಾಡಿ: “ಡಿಸೆಂಬರ್ 7 ಮತ್ತು 8ರಂದು ಅಲ್ಲಿ ಸೌಹಾರ್ದ ಸಮಾವೇಶ ನಡೆಸುವ ಮುನ್ನ ನಾವು ಹಲವರು ಅಲ್ಲಿಗೆ ಭೇಟಿ ನೀಡಿ, ಅಲ್ಲಿನ ವಾಸ್ತವಸ್ಥಿತಿಯನ್ನು ಪರಿಶೀಲಿಸಿ ಬರೋಣವಾ? ಎಂದು ಕೇಳಿದರು.

“ಬ್ಯೂಟಿಫುಲ್ ಐಡಿಯಾ, ಹೋಗೋಣ” ಅಂದೆ. ಅದರಂತೆ ಗುರುವಾರ ಕಾರ್ನಾಡ್, ಡಾ.ಕೆ.ಮರುಳಸಿದ್ದಪ್ಪ, ಜಿ.ಕೆ.ಗೋವಿಂದರಾವ್, ಶೂದ್ರ ಶ್ರೀನಿವಾಸ್, ಪ್ರೊ.ವಿ.ಎಸ್.ಶ್ರೀಧರ್ ಮತ್ತು ನಾನು ಎಲ್ಲರೂ ಟಾಟಾ ಕ್ವಾಲಿಸ್ ಒಂದನ್ನು ಏರಿ ಚಿಕ್ಕಮಗಳೂರಿಗೆ ಹೊರಟೆವು.

ದಾರಿಯಲ್ಲಿ ಬಾಬಾಬುಡನ್‍ಗಿರಿಯ ವೈಶಿಷ್ಟ್ಯತೆ ಮತ್ತು ಈಗ ಕೇಸರಿ ಬಳಗ ಅದರ ಸುತ್ತಲೂ ಹರಡಿರುವ ವಿಷಮಯ ವಾತಾವರಣದ ಬಗ್ಗೆ ಚರ್ಚಿಸಿದೆವು.

ಈ ವರ್ಷ ಭಜರಂಗದಳದ ಮಂಗಗಳು ಬಾಬಾ ಬುಡನ್‍ಗಿರಿಯಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಲು ಅಣಿಯಾಗಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಇದಕ್ಕೆ ಹೋದ ವರ್ಷ ಭಜರಂಗದಳ ನೀಡಿದ್ದ ಕರೆಯೇ ಸಾಕ್ಷಿಯಂತಿದೆ. ಅಂದು ತೆಗೆದಿದ್ದ ಫೋಟೋಗಳನ್ನು ಶ್ರೀಧರ್ ತೋರಿಸಿದರು. ಅವುಗಳಲ್ಲಿ ಒಂದು ಬ್ಯಾನರ್‍ನ ಫೋಟೋ ಇದ್ದು ಅದರಲ್ಲಿ ಹೀಗೆ ಕರೆ ನೀಡಲಾಗಿತ್ತು: “ಸ್ನೇಹಕ್ಕೆ ಬದ್ಧ, ಸಂಹಾರಕ್ಕೆ ಸಿದ್ಧ.”

ಇದನ್ನು ಓದಿ ಕಾರ್ನಾಡ್ ಕುಪಿತರಾದರು. “ಯಾರ ಸಂಹಾರ ಮಾಡುತ್ತಾರಂತೆ ಇವರು? ಇದರಲ್ಲಿ ಬಳಸಿರುವ ಪದಗಳನ್ನು ನೋಡಿ ‘ಮಾಂಸ ಖಂಡ’, ‘ರಕ್ತದ ಕೋಡಿ’, ‘ಶತ್ರುಗಳ ಸಂಹಾರ’. ಇದು ಕನ್ನಡ ಭಾಷೆಯೇ?” ಎಂದು ಗುಡುಗಿದರು.

ಇಂತಹ ಸ್ಥಳದಲ್ಲಿ ಪುರೋಹಿತಶಾಹಿ ಪಕ್ಷವಾದ ಬಿಜೆಪಿ ಮತ್ತದರ ಅಂಗವಾಗಿರುವ ಭಜರಂಗದ ಮಂಗಗಳು ಇಲ್ಲಿ ಅರ್ಚಕ(ಆತ ಬ್ರಾಹ್ಮಣನೇ ಆಗಿರುತ್ತಾನೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ)ನ ನೇಮಕ, ಗೋರಿಗಳ ನಿರ್ಮೂಲನೆ, ‘ಹಿಂದೂ ಪುಣ್ಯಕ್ಷೇತ್ರ’ಗಳನ್ನು ಘೋಷಿಸಲು ಮುಂದಾಗಿರುವುದು ನಿಜವಾಗಲು ಕಿಡಿಗೇಡಿತನ……

ಕಾರ್ನಾಡ್‍ರವರು “ಈ ದತ್ತ ಜಯಂತಿ, ದತ್ತಮಾಲೆ, ಇವ್ಯಾವೂ ನಮ್ಮ ಸಂಸ್ಕೃತಿಯಲ್ಲಿಲ್ಲ, ಇವುಗಳ ಆಚರಣೆಯ ಹಿಂದೆ ಇರುವುದು ಧರ್ಮವಲ್ಲ, ಬದಲಾಗಿ ಧರ್ಮದ ಹೆಸರಿನಲ್ಲಿ ರಾಜಕಾರಣ. ನಾಥ ಪಂಕ್ತಿಗೆ ಸೇರಿದ್ದ ದತ್ತಾತ್ರೇಯ ಜಾತಿ ಪದ್ದತಿಯನ್ನು ತಿರಸ್ಕರಿಸಿದ್ದರೂ, ಆತನನ್ನು ಬ್ರಾಹ್ಮಣೀಕರಿಸುತ್ತಿರುವುದರಲ್ಲ ಹಿಂದಿನ ಸಂಚು ಅರ್ಥೈಸುವುದು ಸುಲಭ” ಎಂದು ಲೇವಡಿ ಮಾಡಿದರು.

ಈ ‘ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ’ಕ್ಕೆ ತನ್ನದೇ ಇತಿಹಾದವಿದೆ. ಅರೆಬಿಯಾದಿಂದ ಚಂದ್ರ ದ್ರೋಣ ಪರ್ವತಕ್ಕೆ ಬಂದ ದಾದಾ ಹೈಯತ್ ಇಲ್ಲಿನ ಪಾಳೆಗಾರರ ದಬ್ಬಾಳಿಕೆಯಡಿ ನರಳುತ್ತಿದ್ದ ಶೂದ್ರರಿಗೂ, ದೀನ ದಲಿತ ವರ್ಗಕ್ಕೂ ಸಹಾಯ ಮಾಡಿ ಅವರ ಮೆಚ್ಚುಗೆಯನ್ನು ಗಳಿಸಿದರು. ದಾದಾ ಹೈಯತ್‍ನ ಪ್ರೀತಿ, ದಯೆ ಮತ್ತು ಸೈರಣೆಯನ್ನು ಕಂಡು ಹಲವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರೆ, ಇನ್ನು ಹಲವರು ತಮ್ಮ ಪುರಾತನ ಧರ್ಮವನ್ನು ತ್ಯಜಿಸದೇ, ದಾದಾ ಹೈರತ್‍ನನ್ನು ದತ್ತಾತ್ರೇಯನ ಅವತಾರವೆಂದೇ ಭಾವಿಸಿ ಆತನ ಭಕ್ತಾಧಿಗಳಾದರು. ಇದಕ್ಕೆ ಕಾರಣವೂ ಇತ್ತು. ಹಿಂದೂ ಪುರಾಣಗಳಲ್ಲಿ ವಿಷ್ಣು ದತ್ತಾತ್ರೇಯನ ಅವತಾರವನ್ನು ತಾಳಿ ಜನರನ್ನು ದಾಸ್ಯದಿಂದ ಪಾರು ಮಾಡುತ್ತಾನೆಂದು ಹೇಳಲಾಗಿದೆ. ಆದ್ದರಿಂದಲೇ ಹಿಂದೂ ಭಕ್ತಾದಿಗಳು ದಾದಾ ಹೈರತ್‍ನಲ್ಲಿ ದತ್ತಾತ್ರೇಯನನ್ನೇ ಕಂಡು ಆತನಿಗೆ ಹಿಂದೂ ಹೆಸರಿಟ್ಟು ಪುನರ್ ನಾಮಕರಣ ಮಾಡಿದರು. ಓರ್ವ ಮುಸ್ಲಿಂ ಸೂಫಿ ಸಂತನಿಗೆ ಆಗೆಲ್ಲ ಹಿಂದೂ ಹೆಸರನ್ನಿಡುವುದು ಸಾಮಾನ್ಯವಾಗಿತ್ತು. ಉದಾಹರಣೆಗೆ: ಬಿಜಾಪುರದ ಸೂಫಿ ಸಂತ ಖ್ವಾಜ ಅಮಿನುದ್ದೀನ್ ಅಲ್ಲಾನನ್ನು ಹಿಂದೂ ಭಕ್ತಾದಿಗಳು ಬ್ರಹ್ಮಾನಂದಯಿಕೆ ಸ್ವಾಮಿ ಎಂದೂ, ತಿಥಿನಿಯ ಮೊಯಿದ್ದೀನ್ ಅವರನ್ನು ಮುನಿಯಪ್ಪರೆಂದೂ ‘ಹಿಂದೂ’ಕರಿಸಲಾಗಿತ್ತು.

ಅಂತೂ ಚಿಕ್ಕಮಗಳೂರನ್ನು ತಲುಪಿದೆವು. ಅಲ್ಲಿ ನಮಗಾಗಿ ಹಲವರು ಕಾದಿದ್ದರು. ಅನೇಕ ಸಂಘಗಳಿಗೆ ಸೇರಿದ್ದ ಅವರೆಲ್ಲಾ ಎಂತಹ ಉತ್ಸಾಹಿ ತರುಣರೆಂದರೆ, ನಾಲ್ಕೈದು ವರ್ಷಗಳ ಕಾಲ ಅವರೆಲ್ಲಾ ಚಿಕ್ಕಮಗಳೂರಿನ ಆಸುಪಾಸಿನಲ್ಲಿ ಸಂಘ ಪರಿವಾರದ ಷಡ್ಯಂತ್ರದ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.

ಬಾಬಾಬುಡನ್‍ಗಿರಿಯಲ್ಲಿರುವ ಪೀಠಕ್ಕೆ ಭೇಟಿನೀಡಿ, ಅಲ್ಲಿನ ಶಾಖಾದ್ರಿಯವರನ್ನು ಮಾತನಾಡಿಸಿ, ಇತ್ತೀಚೆಗೆ ಗಿರಿಗೆ ಹೋಗಿದ್ದ ಮಂಗ ಪರಿವಾರದವರು ಅಲ್ಲಿ ನಾಶ ಮಾಡಿದ್ದ ಮುಸ್ಲಿಮರ ಹೋಟೆಲುಗಳನ್ನು, ಮುಸ್ಲಿಂ ಗುರುಗಳೊಬ್ಬರ ಗೋರಿಯ ಮೇಲಿರುವ ಹರಕೆಯ ಮರದ ಕೊಂಬೆಯನ್ನು ಕಡಿದು ಹಾಕಿರುವುದನ್ನೂ ಪರಿಶೀಲಿಸಿದೆವು.

ಚಿಕ್ಕಮಗಳೂರಿಗೆ ಹಿಂದಿರುಗಿದ ನಂತರ ಒಂದು ಪತ್ರಿಕಾಗೋಷ್ಠಿ. “ಕರ್ನಾಟಕವನ್ನು ಇನ್ನೊಂದು ಗುಜರಾತ್ ಮಾಡುವುದು ಎಂದರೇನು? ಗುಜರಾತ್, ಅಯೋಧ್ಯೆ ನಮಗೆ ಯಾಕೆ, ಯಾವಾಗ ಮಾದರಿಯಾದವು? ನಮಗೆ ನಮ್ಮದೇ ಮಾದರಿ, ಪರಂಪರೆಗಳಿಲ್ಲವೆ?” ಕಾರ್ನಾಡ್‍ರವರಿಂದ ಪ್ರಶ್ನೆ. “ನಮ್ಮ ಮಾರ್ಗದರ್ಶಕರು ಬಸವಣ್ಣ, ಕುವೆಂಪು ಅಂಥವರೇ ವಿನಃ ತೊಗಾಡಿಯಾ, ಮೋದಿ ಅಂಥವರಲ್ಲ,” ಮರುಳು ಸಿದ್ದಪ್ಪನವರಿಂದ ಸ್ಪಷ್ಟನೆ. “ನ್ಯಾಯಾಲಯದ ತೀರ್ಪಿನ ಪ್ರಕಾರ 1975ರ ಹಿಂದಿನ ಸ್ಥಿತಿಯನ್ನೇ ಗಿರಿಯ ಮೇಲೆ ಸ್ಥಾಪಿಸಬೇಕು” ಎಂಬುದು ನಮ್ಮೆಲ್ಲರ ಒತ್ತಾಯ.

ಪತ್ರಿಕಾಗೋಷ್ಠಿಯ ನಂತರ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್‍ರವರೊಂದಿಗೆ ಭೇಟಿ. “ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಗಿರಿಯ ಮೇಲ ಹೋಮ ನಡೆಸಲು ಯಾಕೆ ಅನುಮತಿ ನೀಡಿದಿರಿ?” ಎಂದು ಕಾರ್ನಾಡ್ ಕೇಳಿದರೆ ಆ ಅಧಿಕಾರಿಯಿಂದ ಬಂದ ಉತ್ತರ “75ರ ಹಿಂದೆಯೂ ಅಲ್ಲಿ ಹೋಮ ಮಾಡಲಾಗುತ್ತಿತ್ತು” ಇದಕ್ಕೆ ಯಾವ ದಾಖಲೆ ಇದೆ ತೋರಿಸಿ,” ಎಂದು ಮರುಪ್ರಶ್ನಿಸಿದರೆ ಆತನಲ್ಲಿ ಯಾವ ಉತ್ತರವೂ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...