Homeಅಂಕಣಗಳುಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

ಚುಕುಬುಕು ಚುಕುಬುಕು ರೈಲು; ರೈಲ್ವೆ ಸಚಿವ ಸುತ್ತಿದರು ರೀಲು!

- Advertisement -
- Advertisement -

ಮಿಥ್ಯ: ‘ಅದು ಹಕ್ಕಿ…ಅದು ವಿಮಾನ…ವೀಕ್ಷಿಸಿ, ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ನಿರ್ಮಿಸಿರುವ ಭಾರತದ ಮೊದಲ ಅರೆ-ವೇಗವಾಹಿನಿ (ಸೆಮಿ-ಸ್ಪೀಡ್) ರೈಲು ವಂದೇ ಮಾತರಂ ಎಕ್ಸಪ್ರೆಸ್ ಅನ್ನು. ಇದು ಬೆಳಕಿನ ವೇಗದಲ್ಲಿ ಓಡುತ್ತದೆ…’

ರೈಲ್ವೆ ಸಚಿವ ಗೋಯಲ್ ಪೋಸ್ಟ್.

ಫೆಬ್ರುವರಿ 9ರಂದು ಈ ಮೇಲಿನ ಪೋಸ್ಟ್ ಹಾಕಿರುವ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್, ಇದರ ಜೊತೆಗೆ ಒಂದು ಚಲಿಸುವ ರೈಲಿನ ವಿಡಿಯೋವನ್ನೂ ಹಾಕಿದ್ದಾರೆ. ಗೋಯಲ್ ಅವರ ಅಧಿಕೃತ ಟ್ವಿಟರ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲೂ ಇದನ್ನು ಹಾಕಲಾಗಿದೆ. ಇದನ್ನೇ ನಂಬಿದ ‘ಭಕ್ತರು’ ಈ ವಿಷಯವನ್ನು ಜಾಲತಾಣದಲ್ಲಿ ಹರಡಿದ್ದೇ ಹರಡಿದ್ದು.
ಸಚಿವರು ಹಾಕಿದ ವಿಡಿಯೋ ಲಿಂಕ್: https://twitter.com/PiyushGoyal/status/1094496373410615296
ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಕೂಡ ಇದೇ ವಿಡಿಯೋವನ್ನು ರಿಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇಂತಹ ವಿಷಯಗಳನ್ನು ಬೆಳಕಿನ ವೇಗದಲ್ಲಿ ಕ್ಯಾಚ್ ಮಾಡುವ ‘ರಿಪಬ್ಲಿಕ್’ ಟಿವಿಯವರು ತಮ್ಮ ವೆಬ್‌ಸೈಟಿನಲ್ಲಿ ಈ ವಿಡಿಯೋ ಒಗೆದು, ‘ವಾವ್, ಮೇಕ್ ಇನ್ ಇಂಡಿಯಾ’ ಎಂದಿದ್ದಾರೆ!

ಸತ್ಯ: ರೈಲು ಸಚಿವ ರೀಲು ಬಿಟ್ಟಿದ್ದು ಅವರು ಪೋಸ್ಟ್ ಹಾಕಿದ ಸ್ವಲ್ಪ ಹೊತ್ತಿನಲ್ಲೇ ಬಯಲಾಗಿತ್ತು. ಅವರ ಫೇಸ್‌ಬುಕ್ ಪೇಜ್‌ನಲ್ಲಿ ಕಮೆಂಟ್ ಮಾಡಿದ ಹಲವರು ಇದು ಒರಿಜಿನಲ್ ವಿಡಿಯೋ ಅಲ್ಲ ಎಂದು ಟೀಕಿಸಿದ್ದರು. ‘ಆರ್‌ಎಫ್ ಎಜೆ’ ಹೆಸರಿನ ಒಬ್ಬರು, ಇದು ನನ್ನ ವಿಡಿಯೋ. ಗೋಯಲ್ ಇದರ ವೇಗವನ್ನು (ವಿಡಿಯೋದಲ್ಲಿ) ದುಪ್ಪಟ್ಟು ಮಾಡಿ ಸುಳ್ಳು ಹರಡುತ್ತಿದ್ದಾರೆ ಎಂದು ಕಮೇಂಟ್ ಮಾಡಿದ್ದಲ್ಲದೇ, ಒರಿಜಿನಲ್ ವಿಡಿಯೊದ ಯು-ಟ್ಯೂಬ್ ವಿಳಾಸವನ್ನೂ ನೀಡಿದ್ದರು.

ಓರಿಜಿನಿಲ್ ವಿಡಿಯೋ ಮಾಡಿದವರ ಕಮೆಂಟ್

ಯು-ಟ್ಯೂಬ್ ಪರೀಕ್ಷಿಸಿದಾಗ ‘ರೈಲ್ ಮೇಲ್’ ಎಂಬ ಚಾನೆಲ್ ಒಂದಿದ್ದು, ಇದರ ಸದಸ್ಯರು ರೈಲು, ರೈಲು ಪ್ರಯಾಣ ಕುರಿತು ಆಸಕ್ತಿ ಇರುವ ಜನರಾಗಿದ್ದಾರೆ. ‘ಆರ್‌ಎಫ್ ಎಜೆ’ ಅವರೇ ಅಡ್ಮಿನ್ ಆಗಿರುವ ‘ರೈಲ್‌ಮೇಲ್’ ಹೆಸರಿನ ಫೇಸ್‌ಬುಕ್ ಪೇಜ್ ಕೂಡ ಇದೆ.
ಮೂಲ ವಿಡಿಯೋದಲ್ಲಿನ ರೈಲಿನ ವೇಗವನ್ನು ವಿಡಿಯೋದಲ್ಲಿ ಡಬಲ್ ಮಾಡಿರುವ (ಮಾಡಿಸಿರುವ!) ರೈಲು ಸಚಿವರು, ಮೇಕ್ ಇನ್ ಇಂಡಿಯಾ ಅಂತೆಲ್ಲ ರೈಲು ಬಿಟ್ಟಿದ್ದು, ರೀಲು ಸುತ್ತಿದ್ದು ಪಕ್ಕಾ ಆಗಿತು. ಇವೆರಡೂ ವಿಡಿಯೋಗಳನ್ನು ಪಕ್ಕಕ್ಕಿಟ್ಟು ಪರೀಕ್ಷಿಸಿದಾಗ ಸತ್ಯ ಇನ್ನಷ್ಟು ನಿಚ್ಚಳವಾಯಿತು. ಮೂಲ ವಿಡಿಯೋವನ್ನು ಹರಿಯಾಣದ ಅಸೌಟಿ ರೈಲು ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದ್ದು, ಆ ವಿಡಿಯೋ ಮೇಲೆ ವಾಟರ್ ಟ್ರೇಡ್‌ಮಾರ್ಕ್ ಕೂಡ ಇದೆ.

ಪಿಯುಷ್ ಗೋಯಲ್

ಎರಡೂ ವಿಡಿಯೋ ಪರೀಕ್ಷಿಸಿದ ಲಿಂಕ್:
https://vimeo.com/316395038
ಇದೇನೂ ಮೊದಲ ಬಾರಿ ಅಲ್ಲ, ಹಲವಾರು ಸಲ ರೈಲ್ವೆ ಸಚಿವ ಕೇಂದ್ರ ಸರ್ಕಾರವನ್ನು ಹೊಗಳಿಕೊಳ್ಳಲು ಸುಳ್ಳು ಟ್ವೀಟ್, ಸುಳ್ಳು ಪೋಸ್ಟ್ಗಳನ್ನು ಹಾಕುತ್ತಲೇ ಬಂದಿದ್ದಾರೆ.
ರೈಲು ಬಿಡೋ ಮಾರಾಯ ಅಂದರೆ ರೀಲು ಸುತ್ತುತ್ತ ಕುಳಿತಿದ್ದಾರೆ ಪಿಯುಷ್ ಗೋಯಲ್.

( ಕೃಪೆ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...