Homeಮುಖಪುಟಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

ಚುನಾವಣಾ ನೀತಿಸಂಹಿತೆಯನ್ನೇ ಧಿಕ್ಕರಿಸಿದ ‘ಮೋದಿ’ ಸಿನಿಮಾ ತಂಡದ ಬೆನ್ನಿಗೆ ಯಾರಿದ್ದಾರೆ?

- Advertisement -
- Advertisement -

ಚುನಾವಣಾ ಆಯೋಗದ ಬಗ್ಗೆ ಬಿಜೆಪಿಗೆ ನಿಜಕ್ಕೂ ಗೌರವ ಇದೆಯಾ? ಮೋದಿಯವರ ಈ ಐದು ವರ್ಷದ ಆಳ್ವಿಕೆಯಲ್ಲಿ ಚುನಾವಣಾ ಆಯೋಗ ತನ್ನ ಸ್ವಾಯತ್ತೆಯನ್ನು ಉಳಿಸಿಕೊಂಡಿದೆಯಾ? ಮುಂಬರುವ ಲೋಕಸಭಾ ಚುನಾವಣೆಯನ್ನು ಆಯೋಗ ಪಾರದರ್ಶಕವಾಗಿ ನಡೆಸುತ್ತಾ?………

ಇಷ್ಟೆಲ್ಲ ಪ್ರಶ್ನೆಗಳು ಹುಟ್ಟಲು ಕಾರಣವಾಗಿರೋದು ಒಂದು ಸಿನಿಮಾ! ಅದು ಸಾಮಾನ್ಯ ಸಿನಿಮಾವಲ್ಲ ಪ್ರಧಾನಿ ಮೋದಿಯವರ ಜೀವನಚರಿತ್ರೆ ಆಧರಿಸಿದ ಸಿನಿಮಾ ‘ಪಿಎಂ ನರೇಂದ್ರ ಮೋದಿ’. ಈ ಸಿನಿಮಾವನ್ನು ಏಪ್ರಿಲ್ 12ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇತ್ತೀಚೆಗೆ ಘೋಷಿಸಿದ ನಂತರ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ.

ಯಾಕೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸದರಿ ಚುನಾವಣೆಯ ಪ್ರಮುಖ ರಾಜಕಾರಣಿಯೊಬ್ಬರ ಸಿನಿಮಾವನ್ನು ಬಿಡುಗಡೆ ಮಾಡುವುದು ಎಷ್ಟು ಸರಿ? ಇದಕ್ಕೆ ಆಯೋಗ ಸಮ್ಮತಿ ನೀಡುತ್ತದೆಯಾ? ಮೊದಲ ಹಂತದ ಮತದಾನ ಚುನಾವಣೆ ಮುಕ್ತಾಯಗೊಂಡ ಮಾರನೇ ದಿನವೆ, ಇನ್ನೂ ಆರು ಹಂತಗಳ ಮತದಾನ ಬಾಕಿ ಇರುವಾಗಲೇ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸುತ್ತದೆಯೆಂದರೆ, ಆಯೋಗದ ಭಯ ಆ ತಂಡಕ್ಕಿಲ್ಲವೇ? ಅಥವಾ ಆ ಭಯವನ್ನೂ ಮೀರುವ ಅಭಯ ಆ ತಂಡಕ್ಕೆ ಲಭಿಸಿದೆಯೇ? ಈ ಎಲ್ಲಾ ಪ್ರಶ್ನೆಗಳು ಈಗ ದೊಡ್ಡ ಚರ್ಚೆಯಾಗಿ ಬೆಳೆಯುತ್ತಿವೆ.

ಪ್ರಜಾತಂತ್ರವನ್ನು ಗೌರವಿಸುವವರ ವಾದ ಇದಾದರೆ, ವ್ಯಕ್ತಿ ಪೂಜೆಯ ಮೋಹಕ್ಕೆ ಸಿಕ್ಕಿರುವ ಕೆಲವರು ಆ ಸಿನಿಮಾಕ್ಕೂ ಬಿಜೆಪಿ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ, ಅಲ್ಲದೇ ಪ್ರಧಾನಿ ಮೋದಿಯವರೇನು ಅದರಲ್ಲಿ ನಟಿಸಿದ್ದಾರಾ? ಹಾಗಾಗಿ ಅದು ಬಿಡುಗಡೆಯಾಗುವುದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂಬ ವಾದ ಮುಂದಿಡುತ್ತಿದ್ದಾರೆ.

ನಿಜಕ್ಕೂ ಬಿಜೆಪಿ ಪಕ್ಷಕ್ಕೂ ಆ ಸಿನಿಮಾಗೂ ಯಾವ ನಂಟೂ ಇಲ್ಲವೇ? ಬನ್ನಿ ಒಂದೊಂದಾಗಿ ನೋಡೋಣ…..

ಮಹಾರಾಷ್ಟ್ರ ಸಿಎಂ ಫಡ್ನವೀಸ್ ಪೋಸ್ಟರ್ ಬಿಡುಗಡೆ ಮಾಡುತ್ತಿರುವುದು

ನಿರ್ಮಾಣದಿಂದಲೇ ಶುರು ಮಾಡೋಣ. ಆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾದದ್ದು ಇದೇ ವರ್ಷದ ಜನವರಿ 7 ರಂದು, ಮುಂಬೈನಲ್ಲಿ. ಬಿಡುಗಡೆ ಮಾಡಿದ್ದು ಮಹಾರಾಷ್ಟ್ರದ ಬಿಜೆಪಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್! ಬಿಜೆಪಿ ನಂಟೇ ಇರದಿದ್ದರೆ ಬಿಜೆಪಿ ರಾಜಕಾರಣಿ ಯಾಕೆ ಬಿಡುಗಡೆ ಮಾಡುತ್ತಿದ್ದರು?

ಇನ್ನು ಸಿನಿಮಾದ ಶೂಟಿಂಗ್ ಶುರುವಾದದ್ದು ಜನವರಿ 28ರಂದು. ಅದಾಗಿ ಸರಿಯಾಗಿ ನಲವತ್ತೆರಡು ದಿನಗಳಿಗೆ ಚಿತ್ರತಂಡ ರಿಲೀಸಿಂಗ್ ದಿನಾಂಕವನ್ನೇ ಪ್ರಕಟಿಸುತ್ತೆ. ಅದ್ಯಾವಾಗ ಏಪ್ರಿಲ್ 12ಕ್ಕೆ. ಅಂದರೆ ಶೂಟಿಂಗ್ ಶುರುವಾಗಿ ಕೇವಲ ಎರಡೂವರೆ ತಿಂಗಳಿಗೆ ಪ್ರಿ-ಪ್ರೊಡಕ್ಷನ್, ಪೋಸ್ಟ್-ಪ್ರೊಡಕ್ಷನ್ ಎಲ್ಲವನ್ನೂ ಮುಗಿಸಿ ಸಿನಿಮಾ ಸಿದ್ಧವಾಗಿಬಿಡುತ್ತೆ! ಬಿಜೆಪಿ ಎದುರಿಸ ಹೊರಟಿರುವ ಚುನಾವಣೆಯೇ ಈ ಸಿನಿಮಾದ ಆತುರದ ಪ್ರೊಡಕ್ಷನ್ ಕೆಲಸಕ್ಕೆ ಕಾರಣವಾ?

ಇನ್ನು ಸಿನಿಮಾ ರಿಲೀಸ್ ಆಗುತ್ತಿರೋದು ಹಿಂದಿ ಭಾಷೆಯಲ್ಲಿ ಮಾತ್ರ ಎಂದು ತಿಳಿದು ಬಂದಿದೆ. ಆದರೆ ಪೋಸ್ಟರ್ ರಿಲೀಸ್ ಆಗಿರೋದು 23 ಭಾರತೀಯ ಭಾಷೆಗಳಲ್ಲಿ. ಸಿನಿಮಾವೇ ತಯಾರಾಗದ ಭಾಷೆಯಲ್ಲೂ ಪೋಸ್ಟರ್‌ಗಳ ಅಗತ್ಯವೇನಿತ್ತು? ಇದು ಪ್ರಚಾರ ತಂತ್ರದ ಭಾಗ ಎನಿಸುವುದಿಲ್ಲವೇ, ಸಿನಿಮಾ ಪ್ರಚಾರವಲ್ಲ, ರಾಜಕೀಯ ಪ್ರಚಾರ!

ಇನ್ನು ಈ ಸಿನಿಮಾ ತಯಾರಕರ ವಿಚಾರಕ್ಕೆ ಬರೋಣ. ಮೊದಲು ನಟನಿಂದಲೇ ಶುರು ಮಾಡೋಣ. ಇದರಲ್ಲಿ ಮೋದಿಯವರ ಪಾತ್ರ ಮಾಡುತ್ತಿರೋದು ಬಾಲಿವುಡ್ ನಟ ವಿವೇಕ್ ಒಬೆರಾಯ್. ಈತ ಬಿಜೆಪಿಯ ಅಧಿಕೃತ ಸದಸ್ಯನಲ್ಲದೇ ಹೋದರು, ಬಿಜೆಪಿಯ ರೆಗ್ಯುಲರ್ ಸ್ಟಾರ್ ಪ್ರಚಾರಕ. 2014ರಲ್ಲಿ ಈತ ಮೋದಿಯವರ ಬಿಜೆಪಿ ಪರವಾಗಿ ಮಹಾರಾಷ್ಟ್ರದ ನಕ್ಸಲ್‌ಪೀಡಿತ ಜಿಲ್ಲೆಯಾದ ಗಡ್ಚರೋಲಿಯಲ್ಲಿ ಮತ್ತು ಉತ್ತರಪ್ರದೇಶದ ಘಜಿಯಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಮತ ಯಾಚಿಸಿದ್ದರು.

ಬಿಜೆಪಿ ಕಮಲ ಲಾಂಛನದೊಂದಿಗೆ ಪ್ರಮಾಣವಚನದಲ್ಲಿ

ಇನ್ನು ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೂ ಈತನಿಗೆ ಆತ್ಮೀಯ ಆಹ್ವಾನವಿತ್ತು. ಅವತ್ತಿನ ಸಮಾರಂಭದಲ್ಲಿ ವಿವೇಕ್ ಒಬೆರಾಯ್ ಅಲ್ಲದೆ ಬೇರೆ ಸಾಕಷ್ಟು ಸಿನಿಮಾ ನಟರು ಭಾಗವಹಿಸಿದ್ದರು ಎಂದು ತಳ್ಳಿಹಾಕಲಿಕ್ಕಾಗುವುದಿಲ್ಲ. ಯಾಕೆಂದರೆ ವಿವೇಕ್ ಅವತ್ತು ತನ್ನ ಎದೆಯ ಮೇಲೆ ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಧರಿಸಿ ಬಿಜೆಪಿ ಜೊತೆಗಿನ ತನ್ನ ನಿಕಟತೆಯನ್ನು ಪ್ರದರ್ಶಿಸಿದ್ದರು. ಅಂದಹಾಗೆ ವಿವೇಕ್ ಒಬೆರಾಯ್ 2013ರಲ್ಲೇ (ಅಂದರೆ ಮೋದಿಯವರು 2014ರ ಚುನಾವಣಾ ತಯಾರಿಯಲ್ಲಿದ್ದಾಗಲೇ) ಮೋದಿ ಕುರಿತ ಸಿನಿಮಾದಲ್ಲಿ ಮೋದಿ ಪಾತ್ರ ಮಾಡುತ್ತಿರುವುದಾಗಿ ಹೇಳಿದ್ದಾಗಿ ಔಟ್‌ಲುಕ್ ವರದಿ ಮಾಡಿತ್ತು. ಅಂದರೆ ವಿವೇಕ್‌ನ ಪ್ರಕಾರ ಮೋದಿ ಸಿನಿಮಾ ಚುನಾವಣಾ ಸಂದರ್ಭದಲ್ಲೇ ಕದಲಿಕೆ ಕಾಣುತ್ತದೆ ಎಂಬುದು ಇದರಿಂದ ಅರ್ಥವಾಗುತ್ತೆ.

ಈಗ ನಿರ್ಮಾಪಕರ ವಿಚಾರಕ್ಕೆ ಬಂದರೆ, ಈ ಸಿನಿಮಾದ ಇಬ್ಬರು ನಿರ್ಮಾಪಕರಲ್ಲಿ ಒಬ್ಬರು ಈ ವಿವೇಕ್‌ನ ತಂದೆ ಸುರೇಶ್ ಒಬೆರಾಯ್! ಈತ 2004ರಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿಂದ ಇಲ್ಲಿವರೆಗೂ ಸುರೇಶ್, ಬಿಜೆಪಿ ಸಕ್ರಿಯ ಸದಸ್ಯ ಮತ್ತು ಮಗನಂತೆ  ತಾನೂ ಬಿಜೆಪಿಯ ಸ್ಟಾರ್ ಪ್ರಚಾರಕ!

ಸುರೇಶ್ ಒಬೆರಾಯ್ 2004ರಲ್ಲಿ ಬಿಜೆಪಿ ಸೇರ್ಪಡೆ

ಇನ್ನು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರೋದು ಓಮಂಗ್ ಕುಮಾರ್ ಎಂಬ ಪ್ರತಿಭಾವಂತ ನಿರ್ದೇಶಕ. ಜೀವನಚರಿತ್ರೆಗಳನ್ನು ಚಿತ್ರವಾಗಿಸುವುದರಲ್ಲಿ ನಿಸ್ಸೀಮ. ಈ ಹಿಂದೆ ‘ಸರಬ್ಜಿತ್’ ಮತ್ತು ‘ಮೇರಿ ಕೋಮ್’ ಚಿತ್ರಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದವರು. ಇವರು ನಟ, ನಿರ್ಮಾಪಕನಷ್ಟು ಬಿಜೆಪಿ ಸಖ್ಯ ಹೊಂದಿಲ್ಲವಾದರು ಇವರ ‘ಸರಬ್ಜಿತ್’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದು ಬಿಜೆಪಿಯ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ. ಅಷ್ಟಕ್ಕೇ ಆತನಿಗೆ ಬಿಜೆಪಿ ನಂಟು ಥಳುಕು ಹಾಕಲಾಗದು. ಆದರೂ ಮೋದಿಯವರ ಬಯೋಪಿಕ್ ತಯಾರಾದ ಸಂದರ್ಭ, ಧಾವಂತ, ರಾಜಕೀಯ ಲಿಂಕ್‌ಗಳನ್ನು ಗಮನಿಸಿದರೆ ಒಮಂಗ್‌ನ ಈ ಸಣ್ಣ ನಂಟನ್ನೂ ಅನುಮಾನದಿಂದಲೇ ನೋಡಬೇಕಾಗುತ್ತೆ. ಅಂದಹಾಗೆ, 2015ರಲ್ಲಿ ಈತನ ‘ಮೇರಿ ಕೋಮ್’ ಸಿನಿಮಾಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. ಇವೆಲ್ಲವೂ ಕಾಕತಾಳೀಯ ಎನ್ನುವಂತೆ ಕಂಡರೂ, ನಂಬಲು ಹರಸಾಹಸ ಪಡುವಂಥ ವಾತಾವರಣ ಈಗ ದೇಶದಲ್ಲಿ ನಿರ್ಮಾಣವಾಗಿದೆ.

ಒಮಂಗ್ ಕುಮಾರ್ ಅಮಿತ ಶಾ, ಗಡ್ಕರಿ ಜೊತೆ

ಆದರ್ಶ ರಾಜಕಾರಣ ಮಾಡುವುದೇ ನಿಜವಾದರೆ ಮೋದಿಯವರ ಮೇಲೆ ಈಗ ದೊಡ್ಡ ಹೊರೆ ಇದೆ. ಅದು ಅವರದೇ ಸಿನಿಮಾ ಆಗಿರೋದ್ರಿಂದ ಅವರ ಅನುಮತಿ ಅತ್ಯಮೂಲ್ಯ, ಕಥೆಗೂ ಮತ್ತು ಬಿಡುಗಡೆಗೂ. ಅವರು ಈ ಕೂಡಲೇ ಸಿನಿಮಾ ತಂಡಕ್ಕೆ ‘ಚುನಾವಣಾ ನೀತಿ ಸಂಹಿತೆ ಮುಗಿಯವವರೆಗೆ ರಿಲೀಸ್ ಮಾಡಬೇಡಿ’ ಎಂದು ಹೇಳಬೇಕಿದೆ. ಅದನ್ನು ಬಿಟ್ಟು, ಇದು ಸಿನಿಮಾ ತಂಡಕ್ಕೂ ಚುನಾವಣಾ ಆಯೋಗಕ್ಕು ಸಂಬಂಧಿಸಿದ ವಿಷಯ ನಾನೇಗೆ ಮಧ್ಯಪ್ರವೇಶಿಸಲಿ ಎಂಬ ಕುಂಟು ನೆಪ ಹೇಳಿದರೆ, ಆ ಸಿನಿಮಾದಿಂದ ಲಾಭ ಪಡೆಯಲು ಅವರು ಯೋಚಿಸಿದ್ದಾರೆ ಎಂದು ಸಂಶಯಕ್ಕೆ ಆಸ್ಪದವಿಲ್ಲದಂತೆ ಸಾಬೀತಾಗುತ್ತೆ.

ಯಾಕೆಂದರೆ, ಮಧ್ಯಪ್ರದೇಶ, ರಾಜಸ್ಥಾನ್ ಮತ್ತು ಉತ್ತರಾಖಂಡ್ ರಾಜ್ಯಗಳ ಚುನಾವಣಾ ಸೋಲುಗಳ ನಂತರ ತನ್ನ ವರ್ಚಸ್ಸು ವೃದ್ದಿಸಿಕೊಳ್ಳುವ ಯಾವ ಅವಕಾಶವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿ ಬಿಜೆಪಿ ಇಲ್ಲ……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...