Homeಸಿನಿಮಾಸಿನಿ ಸುದ್ದಿಚೆಗುವೆರಾ ಛಾಯೆಯಲ್ಲಿ ಚೇತನ್!

ಚೆಗುವೆರಾ ಛಾಯೆಯಲ್ಲಿ ಚೇತನ್!

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

`ಆ ದಿನಗಳು’ ಖ್ಯಾತಿಯ ನಟ ಚೇತನ್ ಈ ದಿನಗಳಲ್ಲೂ ಸದ್ದು ಮಾಡುತ್ತಿರೋದು ಕರ್ನಾಟಕದ ಆ್ಯಕ್ಟಿವಿಸ್ಟ್ ವಲಯಕ್ಕೆ ಹೊಸ ವಿಚಾರವೇನೂ ಅಲ್ಲ. ಸಿಲ್ವರ್ ಸ್ಕ್ರೀನ್ ಮೇಲೆ ಉದ್ದುದ್ದ ಡೈಲಾಗ್ ಉದುರಿಸಿ, ಮೇಕಪ್ಪು ತೆಗೆಯುತ್ತಿದ್ದಂತೆಯೇ ತನಗೂ ಈ ಸಮಾಜಕ್ಕೂ ಸಂಬಂಧವೇ ಇಲ್ಲ; ಹಣ-ಖ್ಯಾತಿ ಬಂದರೆ ಸಾಕು ಅನ್ನೋ ನಟರುಗಳ ಪರಂಪರೆಯ ನಡುವೆ ಚೇತನ್ ಪ್ರಾಮಿಸಿಂಗ್ ಹೀರೊ ಅನ್ನಿಸೋದು ಅವರ ಜನಪರ ಹೋರಾಟಗಳು ಮತ್ತು ನಿರ್ಭೀತ ನಡವಳಿಕೆಯ ಮೂಲಕ. ಇದೀಗ ತಮ್ಮ ವ್ಯಕ್ತಿತ್ವಕ್ಕೆ ಹೆಚ್ಚು ಹೋಲಿಕೆಯಾಗುವಂತಹ ಪಾತ್ರದಲ್ಲೇ ಅವರು ನಟಿಸುತ್ತಿದ್ದಾರೆ ಅನ್ನೋದು ಲೇಟೆಸ್ಟ್ ಸುದ್ದಿ. ಅದು ಕನಕಪುರ ಶ್ರೀನಿವಾಸ್ ನಿರ್ಮಿಸುತ್ತಿರುವ ರಣಂ ಸಿನಿಮಾ. ಅದರಲ್ಲಿ ಚೇತನ್ ಮಾಡುತ್ತಿರುವ ಪಾತ್ರ, ಕ್ರಾಂತಿಕಾರಿ ಚೆಗುವೇರಾರನ್ನು ಹೋಲುತ್ತದಂತೆ. ಕ್ಯೂಬಾ ಅನ್ನೋ ಪುಟ್ಟ ದೇಶದ ಕ್ರಾಂತಿಗಾಥೆ ಗೊತ್ತಿರುವ ಎಂತವರಿಗೇ ಆದರೂ ಚೆಗುವೆರಾ ಹೆಸರು ಚಿರಪರಿಚಿತ. ಫಿಡೆಲ್ ಕ್ಯಾಸ್ಟ್ರೋ, ರೌಲ್‍ರಂತಹ ಲೀಡರುಗಳ ಜೊತೆಗೂಡಿ ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಅಮೆರಿಕಾದಂತ ಅಮೆರಿಕವನ್ನೇ ಬೆಚ್ಚಿಬೀಳಿಸಿದ್ದ ಚೆಗುವೆರಾ ಇವತ್ತಿಗೂ ಕ್ರಾಂತಿಯ ಇತಿಹಾಸದಲ್ಲಿ ನವತಾರೆಯಂತೆ ಮಿನುಗುತ್ತಿದ್ದಾರೆ. ಸ್ವತಃ ನಟ ಚೇತನ್, ಚೆಗುವೇರಾ ಅಭಿಮಾನಿಯಾಗಿರೋದ್ರಿಂದ ತುಂಬಾ ಇಷ್ಟಪಟ್ಟು ಈ ಸಿನಿಮಾವನ್ನು ಒಪ್ಪಿಕೊಂಡಿರೋದಾಗಿ ಚೇತನ್ ಹೇಳಿ ಕೊಂಡಿದ್ದಾರೆ. ರೈತರ ಪರವಾಗಿ ನಿಂತು, ಅನ್ಯಾಯ-ಅಕ್ರಮಗಳ ವಿರುದ್ಧ ಹೋರಾಡುವ ಕಥಾಹಂದರವಿರುವ ಈ ಸಿನಿಮಾಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ವಿ.ಸಮುದ್ರ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಏಕಕಾಲದಲ್ಲಿ ಕನ್ನಡ ಮತ್ತು ತೆಲುಗು ಎರಡು ಭಾಷೆಗಳಲ್ಲಿ ಇದು ತಯಾರಾಗಲಿದೆ. ಕನ್ನಡದಲ್ಲಿ ಚೇತನ್ ಮಾಡುತ್ತಿರುವ ಪಾತ್ರಕ್ಕೆ ತೆಲುಗಿನಲ್ಲಿ ಇನ್ನೂ ಯಾವ ನಟ ಅನ್ನೋದು ಫೈನಲ್ ಆಗಿಲ್ಲ. ಅಂದಹಾಗೆ, ಈ ಸಿನಿಮಾದ ಕನ್ನಡ ವರ್ಷನ್‍ನಲ್ಲಿ ದರ್ಶನ್ ಮತ್ತು ಉಪೇಂದ್ರ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಅದಿನ್ನೂ ನಿಕ್ಕಿಯಾಗಿಲ್ಲ. ರಾಯಲಸೀಮೆಯ ಅಬ್ಬರ, ಆರ್ಭಟಗಳಿಂದ ಹೊರಬಂದು ತೆಲುಗಿನ ನಿರ್ದೇಶಕ ಸಮುದ್ರ ಈ ಸಿನಿಮಾ ಮಾಡಿದರೆ ನಿಜಕ್ಕೂ ಒಂದು ಅದ್ಭುತ ಚಿತ್ರ ಇದಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...