Homeಸಿನಿಮಾಸಿನಿ ಸುದ್ದಿಛೇ.. ಛೇ.. ಇದೆಂಥಾ ಸೋಲು!

ಛೇ.. ಛೇ.. ಇದೆಂಥಾ ಸೋಲು!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಈ ಸಲದ ಚುನಾವಣಾ ಕಣದಲ್ಲಿ ಸಾಕಷ್ಟು ಮಂದಿ ಬಣ್ಣದ ಮಂದಿ ಅಗ್ನಿಪರೀಕ್ಷೆಯ ಅಖಾಡಕ್ಕೆ ಧುಮುಕಿದ್ದುಂಟು. ಕಾಂಗ್ರೆಸ್‍ನಿಂದ ಉಮಾಶ್ರೀ, ಬಿ.ಸಿ.ಪಾಟೀಲ್, ಜೆಡಿಎಸ್‍ನಿಂದ ನಟ ಶಶಿಕುಮಾರ್, ನಿರ್ಮಾಪಕ ಸಿ.ಆರ್.ಮನೋಹರ್, ಮಧು ಬಂಗಾರಿ ಹಾಗೂ ಬಿಜೆಪಿಯಿಂದ ನಟ ಕುಮಾರ್ ಬಂಗಾರು, ಸಿ.ಪಿ.ಯೋಗೀಶ್ವರ್, ಡೈಲಾಗ್ ಕಿಂಗ್ ಸಾಯಿ ಕುಮಾರ್, ಜಗ್ಗೇಶ್ ಹೀಗೆ ದೊಡ್ಡ ದಂಡೇ ಮತ ಬೇಟೆಗೆ ಇಳಿದಿತ್ತು. ಅದರಲ್ಲಿ ವಿಜಯಲಕ್ಷ್ಮಿ ಒಲಿದದ್ದು ಬೆರಳೆಣಿಕೆಯ ಮಂದಿಗಷ್ಟೇ. ಪೊಲಿಟಿಕಲ್ ಕಾಳಗದಲ್ಲಿ ಸೋಲು-ಗೆಲುವು ಕಾಮನ್ನು. ಆದ್ರೆ ಟಿಕೇಟ್ ಸಿಗಲಿಲ್ಲ ಅಂತ ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಕೊನೇ ಘಳಿಗೆಯಲ್ಲಿ ದೇವೇಗೌಡರ ತೆನೆ ಹೊತ್ತು ಹೊಸದುರ್ಗದ ಅಖಾಡಕ್ಕಿಳಿದಿದ್ದ ಮಾಜಿ ಮೋಹಕ ನಟ ಶಶಿಕುಮಾರ್ ಸೋತ ಪರಿಯಿದೆಯಲ್ಲ ಅದು ಶಶಿ ತನಗೆ ತಾನೇ ಮಾಡಿಕೊಂಡ ಅವಮಾನದಂತಿದೆ. ಯಾಕೆಂದರೆ ಹೊಸದುರ್ಗದಲ್ಲಿ ಚಲಾವಣೆಯಾಗಿದ್ದ ಅಜಮಾಸು ಒಂದೂವರೆ ಲಕ್ಷದಷ್ಟು ಮತಗಳಲ್ಲಿ ಶಶಿಕುಮಾರ್‍ಗೆ ಬಿದ್ದಿರೋದು ಕೇವಲ 1575 ಮತಗಳು ಮಾತ್ರ! ಒಂದು ಕಾಲಕ್ಕೆ ಇದೇ ಹೊಸದುರ್ಗವನ್ನೂ ಒಳಗೊಂಡಂತೆ ಇಡೀ ಚಿತ್ರದುರ್ಗ ಜಿಲ್ಲೆಯ ಸಂಸದನಾಗಿ ರಾಜಕಾರಣ ಮಾಡಿದಂತಹ ವ್ಯಕ್ತಿ ತನ್ನ ವ್ಯಾಪ್ತಿಯ ಒಂದು ಕ್ಷೇತ್ರದಲ್ಲಿ ಠೇವಣಿ ಉಳಿಸಿಕೊಳ್ಳಲಾಗದೆ ಸುಸ್ತಾಗಿ ಹೋಗುತ್ತಾನೆಂದರೆ ರಾಜಕಾರಣಿಯಾಗಿ ಆತನ ವರ್ಚಸ್ಸು ಅದಿನ್ನೆಂತದ್ದಿರಬೇಡ. ಅಸಲಿಗೆ ಹೊಸದುರ್ಗದಲ್ಲಿ ನಿಜವಾಗಿ ಕಾಳಗ ಇದ್ದದ್ದು ಬಿಜೆಪಿಯ ಗೂಳಿಹಟ್ಟಿ ಮತ್ತು ಕಾಂಗ್ರೆಸ್‍ನ ಗೋವಿಂದಪ್ಪನ ನಡುವೆ. ಶಶಿಯ ಎಂಟ್ರಿ ಅಲ್ಲೇನಿದ್ದರೂ ಸ್ವಜಾತಿಯ ನಾಯಕ ಮತ್ತು ಒಂದಷ್ಟು ಅಹಿಂದ ಮತಗಳನ್ನು ಕಾಂಗ್ರೆಸ್‍ನಿಂದ ಛಿದ್ರಗೊಳಿಸಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ ಮಾಜಿ ಸಂಸದರೊಬ್ಬರು ಈ ಮಟ್ಟದ ಹೀನಾಯ ಸೋಲು ಅನುಭವಿಸುತ್ತಾರೆಂದು ಯಾರೂ ಊಹಿಸಿರಲಿಲ್ಲ. ಛೇ, ಛೇ, ಶಶಿಯ ಪೊಲಿಟಿಕಲ್ ಲೈಫು ಹೀಗೆ ಕ್ಲ್ಯೆಮ್ಯಾಕ್ಸ್ ಕಾಣಬಾರದಿತ್ತು. ವೆರಿ ಸ್ಯಾಡ್…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...