Homeಸಿನಿಮಾಸಿನಿ ಸುದ್ದಿಛೇ.. ಛೇ.. ಇದೆಂಥಾ ಸೋಲು!

ಛೇ.. ಛೇ.. ಇದೆಂಥಾ ಸೋಲು!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಈ ಸಲದ ಚುನಾವಣಾ ಕಣದಲ್ಲಿ ಸಾಕಷ್ಟು ಮಂದಿ ಬಣ್ಣದ ಮಂದಿ ಅಗ್ನಿಪರೀಕ್ಷೆಯ ಅಖಾಡಕ್ಕೆ ಧುಮುಕಿದ್ದುಂಟು. ಕಾಂಗ್ರೆಸ್‍ನಿಂದ ಉಮಾಶ್ರೀ, ಬಿ.ಸಿ.ಪಾಟೀಲ್, ಜೆಡಿಎಸ್‍ನಿಂದ ನಟ ಶಶಿಕುಮಾರ್, ನಿರ್ಮಾಪಕ ಸಿ.ಆರ್.ಮನೋಹರ್, ಮಧು ಬಂಗಾರಿ ಹಾಗೂ ಬಿಜೆಪಿಯಿಂದ ನಟ ಕುಮಾರ್ ಬಂಗಾರು, ಸಿ.ಪಿ.ಯೋಗೀಶ್ವರ್, ಡೈಲಾಗ್ ಕಿಂಗ್ ಸಾಯಿ ಕುಮಾರ್, ಜಗ್ಗೇಶ್ ಹೀಗೆ ದೊಡ್ಡ ದಂಡೇ ಮತ ಬೇಟೆಗೆ ಇಳಿದಿತ್ತು. ಅದರಲ್ಲಿ ವಿಜಯಲಕ್ಷ್ಮಿ ಒಲಿದದ್ದು ಬೆರಳೆಣಿಕೆಯ ಮಂದಿಗಷ್ಟೇ. ಪೊಲಿಟಿಕಲ್ ಕಾಳಗದಲ್ಲಿ ಸೋಲು-ಗೆಲುವು ಕಾಮನ್ನು. ಆದ್ರೆ ಟಿಕೇಟ್ ಸಿಗಲಿಲ್ಲ ಅಂತ ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಕೊನೇ ಘಳಿಗೆಯಲ್ಲಿ ದೇವೇಗೌಡರ ತೆನೆ ಹೊತ್ತು ಹೊಸದುರ್ಗದ ಅಖಾಡಕ್ಕಿಳಿದಿದ್ದ ಮಾಜಿ ಮೋಹಕ ನಟ ಶಶಿಕುಮಾರ್ ಸೋತ ಪರಿಯಿದೆಯಲ್ಲ ಅದು ಶಶಿ ತನಗೆ ತಾನೇ ಮಾಡಿಕೊಂಡ ಅವಮಾನದಂತಿದೆ. ಯಾಕೆಂದರೆ ಹೊಸದುರ್ಗದಲ್ಲಿ ಚಲಾವಣೆಯಾಗಿದ್ದ ಅಜಮಾಸು ಒಂದೂವರೆ ಲಕ್ಷದಷ್ಟು ಮತಗಳಲ್ಲಿ ಶಶಿಕುಮಾರ್‍ಗೆ ಬಿದ್ದಿರೋದು ಕೇವಲ 1575 ಮತಗಳು ಮಾತ್ರ! ಒಂದು ಕಾಲಕ್ಕೆ ಇದೇ ಹೊಸದುರ್ಗವನ್ನೂ ಒಳಗೊಂಡಂತೆ ಇಡೀ ಚಿತ್ರದುರ್ಗ ಜಿಲ್ಲೆಯ ಸಂಸದನಾಗಿ ರಾಜಕಾರಣ ಮಾಡಿದಂತಹ ವ್ಯಕ್ತಿ ತನ್ನ ವ್ಯಾಪ್ತಿಯ ಒಂದು ಕ್ಷೇತ್ರದಲ್ಲಿ ಠೇವಣಿ ಉಳಿಸಿಕೊಳ್ಳಲಾಗದೆ ಸುಸ್ತಾಗಿ ಹೋಗುತ್ತಾನೆಂದರೆ ರಾಜಕಾರಣಿಯಾಗಿ ಆತನ ವರ್ಚಸ್ಸು ಅದಿನ್ನೆಂತದ್ದಿರಬೇಡ. ಅಸಲಿಗೆ ಹೊಸದುರ್ಗದಲ್ಲಿ ನಿಜವಾಗಿ ಕಾಳಗ ಇದ್ದದ್ದು ಬಿಜೆಪಿಯ ಗೂಳಿಹಟ್ಟಿ ಮತ್ತು ಕಾಂಗ್ರೆಸ್‍ನ ಗೋವಿಂದಪ್ಪನ ನಡುವೆ. ಶಶಿಯ ಎಂಟ್ರಿ ಅಲ್ಲೇನಿದ್ದರೂ ಸ್ವಜಾತಿಯ ನಾಯಕ ಮತ್ತು ಒಂದಷ್ಟು ಅಹಿಂದ ಮತಗಳನ್ನು ಕಾಂಗ್ರೆಸ್‍ನಿಂದ ಛಿದ್ರಗೊಳಿಸಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ ಮಾಜಿ ಸಂಸದರೊಬ್ಬರು ಈ ಮಟ್ಟದ ಹೀನಾಯ ಸೋಲು ಅನುಭವಿಸುತ್ತಾರೆಂದು ಯಾರೂ ಊಹಿಸಿರಲಿಲ್ಲ. ಛೇ, ಛೇ, ಶಶಿಯ ಪೊಲಿಟಿಕಲ್ ಲೈಫು ಹೀಗೆ ಕ್ಲ್ಯೆಮ್ಯಾಕ್ಸ್ ಕಾಣಬಾರದಿತ್ತು. ವೆರಿ ಸ್ಯಾಡ್…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...