Homeಸಿನಿಮಾಸಿನಿ ಸುದ್ದಿಛೇ.. ಛೇ.. ಇದೆಂಥಾ ಸೋಲು!

ಛೇ.. ಛೇ.. ಇದೆಂಥಾ ಸೋಲು!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಈ ಸಲದ ಚುನಾವಣಾ ಕಣದಲ್ಲಿ ಸಾಕಷ್ಟು ಮಂದಿ ಬಣ್ಣದ ಮಂದಿ ಅಗ್ನಿಪರೀಕ್ಷೆಯ ಅಖಾಡಕ್ಕೆ ಧುಮುಕಿದ್ದುಂಟು. ಕಾಂಗ್ರೆಸ್‍ನಿಂದ ಉಮಾಶ್ರೀ, ಬಿ.ಸಿ.ಪಾಟೀಲ್, ಜೆಡಿಎಸ್‍ನಿಂದ ನಟ ಶಶಿಕುಮಾರ್, ನಿರ್ಮಾಪಕ ಸಿ.ಆರ್.ಮನೋಹರ್, ಮಧು ಬಂಗಾರಿ ಹಾಗೂ ಬಿಜೆಪಿಯಿಂದ ನಟ ಕುಮಾರ್ ಬಂಗಾರು, ಸಿ.ಪಿ.ಯೋಗೀಶ್ವರ್, ಡೈಲಾಗ್ ಕಿಂಗ್ ಸಾಯಿ ಕುಮಾರ್, ಜಗ್ಗೇಶ್ ಹೀಗೆ ದೊಡ್ಡ ದಂಡೇ ಮತ ಬೇಟೆಗೆ ಇಳಿದಿತ್ತು. ಅದರಲ್ಲಿ ವಿಜಯಲಕ್ಷ್ಮಿ ಒಲಿದದ್ದು ಬೆರಳೆಣಿಕೆಯ ಮಂದಿಗಷ್ಟೇ. ಪೊಲಿಟಿಕಲ್ ಕಾಳಗದಲ್ಲಿ ಸೋಲು-ಗೆಲುವು ಕಾಮನ್ನು. ಆದ್ರೆ ಟಿಕೇಟ್ ಸಿಗಲಿಲ್ಲ ಅಂತ ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಕೊನೇ ಘಳಿಗೆಯಲ್ಲಿ ದೇವೇಗೌಡರ ತೆನೆ ಹೊತ್ತು ಹೊಸದುರ್ಗದ ಅಖಾಡಕ್ಕಿಳಿದಿದ್ದ ಮಾಜಿ ಮೋಹಕ ನಟ ಶಶಿಕುಮಾರ್ ಸೋತ ಪರಿಯಿದೆಯಲ್ಲ ಅದು ಶಶಿ ತನಗೆ ತಾನೇ ಮಾಡಿಕೊಂಡ ಅವಮಾನದಂತಿದೆ. ಯಾಕೆಂದರೆ ಹೊಸದುರ್ಗದಲ್ಲಿ ಚಲಾವಣೆಯಾಗಿದ್ದ ಅಜಮಾಸು ಒಂದೂವರೆ ಲಕ್ಷದಷ್ಟು ಮತಗಳಲ್ಲಿ ಶಶಿಕುಮಾರ್‍ಗೆ ಬಿದ್ದಿರೋದು ಕೇವಲ 1575 ಮತಗಳು ಮಾತ್ರ! ಒಂದು ಕಾಲಕ್ಕೆ ಇದೇ ಹೊಸದುರ್ಗವನ್ನೂ ಒಳಗೊಂಡಂತೆ ಇಡೀ ಚಿತ್ರದುರ್ಗ ಜಿಲ್ಲೆಯ ಸಂಸದನಾಗಿ ರಾಜಕಾರಣ ಮಾಡಿದಂತಹ ವ್ಯಕ್ತಿ ತನ್ನ ವ್ಯಾಪ್ತಿಯ ಒಂದು ಕ್ಷೇತ್ರದಲ್ಲಿ ಠೇವಣಿ ಉಳಿಸಿಕೊಳ್ಳಲಾಗದೆ ಸುಸ್ತಾಗಿ ಹೋಗುತ್ತಾನೆಂದರೆ ರಾಜಕಾರಣಿಯಾಗಿ ಆತನ ವರ್ಚಸ್ಸು ಅದಿನ್ನೆಂತದ್ದಿರಬೇಡ. ಅಸಲಿಗೆ ಹೊಸದುರ್ಗದಲ್ಲಿ ನಿಜವಾಗಿ ಕಾಳಗ ಇದ್ದದ್ದು ಬಿಜೆಪಿಯ ಗೂಳಿಹಟ್ಟಿ ಮತ್ತು ಕಾಂಗ್ರೆಸ್‍ನ ಗೋವಿಂದಪ್ಪನ ನಡುವೆ. ಶಶಿಯ ಎಂಟ್ರಿ ಅಲ್ಲೇನಿದ್ದರೂ ಸ್ವಜಾತಿಯ ನಾಯಕ ಮತ್ತು ಒಂದಷ್ಟು ಅಹಿಂದ ಮತಗಳನ್ನು ಕಾಂಗ್ರೆಸ್‍ನಿಂದ ಛಿದ್ರಗೊಳಿಸಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ ಮಾಜಿ ಸಂಸದರೊಬ್ಬರು ಈ ಮಟ್ಟದ ಹೀನಾಯ ಸೋಲು ಅನುಭವಿಸುತ್ತಾರೆಂದು ಯಾರೂ ಊಹಿಸಿರಲಿಲ್ಲ. ಛೇ, ಛೇ, ಶಶಿಯ ಪೊಲಿಟಿಕಲ್ ಲೈಫು ಹೀಗೆ ಕ್ಲ್ಯೆಮ್ಯಾಕ್ಸ್ ಕಾಣಬಾರದಿತ್ತು. ವೆರಿ ಸ್ಯಾಡ್…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...