Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣದ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...