Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...