Homeಸಾಮಾಜಿಕಜನತೆಯ ಸಂಗಾತಿ ಲಕ್ಷ್ಮಣ್‌ಜಿ

ಜನತೆಯ ಸಂಗಾತಿ ಲಕ್ಷ್ಮಣ್‌ಜಿ

- Advertisement -
- Advertisement -

ಸಿರಿಮನೆ ನಾಗರಾಜ್ |

ಕನ್ನಡದ ಮಹತ್ವದ ಕವಿ-ಕತೆಗಾರ-ಬರಹಗಾರರಲ್ಲಿ ಒಬ್ಬರಾಗಿದ್ದ, ದಲಿತ ಮತ್ತು ಜನಪರ ಚಳವಳಿಗಳ ಸತತ ಒಡನಾಡಿಯಾಗಿದ್ದ ಲಕ್ಷ್ಮಣಜಿ ಅವರ ಆತ್ಮಕತೆ ‘ಸಂಬೋಳಿ’ಯ ಇಂಗ್ಲಿಷ್ ಅನುವಾದಿತ ಅದೇ ಹೆಸರಿನ ಕೃತಿ ಕಳೆದ ವಾರ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆದ ಚಿಕ್ಕ ಚೊಕ್ಕ ಕಾರ್ಯಕ್ರಮದಲ್ಲಿ ಬಿಡುಗಡೆಯಾಯಿತು. ಅದೇ ಸಮಯದಲ್ಲಿ ಲಕ್ಷ್ಮಣಜಿ ಅವರನ್ನು ಕುರಿತು ಅವರ ಸಮಕಾಲೀನ ಚಳವಳಿಗಾರರು, ಬರಹಗಾರರು ಮತ್ತಿತರ ಅವರ ಸಂಗಾತಿಗಳು ಬರೆದಿರುವ ಆಪ್ತ ಬರಹಗಳ ಸಂಕಲನ ‘ಜನತೆಯ ಸಂಗಾತಿ ಲಕ್ಷ್ಮಣಜಿ’ ಪುಸ್ತಕವೂ ಬಿಡುಗಡೆಯಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿಯವರು ಎರಡೂ ಕೃತಿಗಳನ್ನು ಬಿಡುಗಡೆ ಮಾಡಿದರು.

ಸಂಬೋಳಿ ಕೃತಿಯನ್ನು ಪ್ರೊ. ಸುಶೀಲಾ ಪುನೀತಾ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ, ದೇಶದ ಗಣ್ಯ ಪ್ರಕಾಶನ ಸಂಸ್ಥೆಗಳಲ್ಲಿ ಒಂದೆನ್ನಿಸಿರುವ ದೆಹಲಿಯ ನಿಯೋಗಿ ಪ್ರಕಾಶನ ಅದನ್ನು ಪ್ರಕಟಿಸಿದೆ. (ಅದನ್ನು ಆಕ್ಸ್‌ಫರ್ಡ್ ಯೂನಿವರ್ಸಿಟಿ ಪ್ರೆಸ್‌ನಿಂದ ಪ್ರಕಟಿಸಲು ಈ ಮೊದಲು ಮಾತುಕತೆಯಾಗಿದ್ದು, ಅಲ್ಲಿ ಇನ್ನೂ ಬಹಳ ತಡವಾಗುತ್ತೆ ಎನ್ನುವ ಕಾರಣಕ್ಕೆ ನಿಯೋಗಿ ಪ್ರಕಾಶನ ಅದನ್ನು ತೆಗೆದುಕೊಂಡು ಪ್ರಕಟಿಸಿದೆ.)

ಕನ್ನಡದಲ್ಲಿ ನಾಲ್ಕು ಮುದ್ರಣ ಕಂಡಿದ್ದು, ಈಗಾಗಲೇ ತಮಿಳಿಗೆ ಅನುವಾದವಾಗಿ ಎರಡು ಮರುಮುದ್ರಣ ಕಂಡು ಬಹಳ ಮೆಚ್ಚುಗೆ, ಸಂವೇದನೆ ಹುಟ್ಟುಹಾಕಿರುವ ಸಂಬೋಳಿಯು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಒಂದು ಪಠ್ಯದಲ್ಲೂ ಕಾಣಿಸಿಕೊಂಡಿದೆ. ‘LISTEN TO THE FLAMES’ – texts and readings from the margins ಎಂಬ ಪಠ್ಯದಲ್ಲಿ ಸಂಬೋಳಿಯ ಒಂದು ಭಾಗವು undying love ಎಂಬ ಹೆಸರಿನಲ್ಲಿ ಸೇರ್ಪಡೆಯಾಗಿದೆ.

ಕಡುದಾರಿದ್ರ್ಯದ, ಜೀತದ ದಲಿತ ಬದುಕಿನಿಂದ ಬಂದು, ಹೇಗೋ ಕಾಲೇಜು ಕಲಿತು ಕೆಎಲ್‌ಇ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿದ್ದ ಅತ್ಯಂತ ಸ್ನೇಹಜೀವಿ ಲಕ್ಷ್ಮಣಜಿ, ಎಷ್ಟು ಸ್ನೇಹಜೀವಿಯೋ ಅಷ್ಟೇ ಗಟ್ಟಿಯಾದ ಸಾಮಾಜಿಕ ಬದ್ಧತೆ ಹೊಂದಿದ್ದವರು. ಎಂಥ ಕಷ್ಟವೇ ಇದ್ದರೂ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವುದನ್ನು ತಪ್ಪಿಸುತ್ತಿರಲಿಲ್ಲ. ದಲಿತ ಸಂಘಟನೆಗಳು ಒಡೆದು ಚೂರಾಗುತ್ತ, ನಾಯಕರಲ್ಲಿ ಪ್ರಾಮಾಣಿಕತೆ-ಕಳಕಳಿ ಕಡಿಮೆಯಾಗಿ, ಚಳವಳಿಯೊಂದು ಬದುಕಿನ ದಾರಿಯಾಗತೊಡಗಿದ್ದುದು, ದೇಶದಲ್ಲಿ ಎಡಪಂಥೀಯ ಚಳವಳಿ ಹಿನ್ನಡೆಗೆ ಈಡಾಗಿ ಸಂಘಪರಿವಾರದ ಫ್ಯಾಸಿಸ್ಟ್ ಶಕ್ತಿಗಳು ವಿಜೃಂಭಿಸತೊಡಗಿದ್ದು ಇವೆಲ್ಲ ಅವರನ್ನು ಬಹಳವಾಗಿ ಕಾಡುತ್ತಿದ್ದವು. ಹಾಗಂತ ಯಾವುದೇ ಚಳವಳಿಯ ಯಾವ ನಾಯಕರ ಜೊತೆಗೂ ಮನಸ್ತಾಪ ಮಾಡಿಕೊಂಡವರಲ್ಲ. ಅವರವರು ಒಂದುವೇಳೆ ಪರಸ್ಪರ ಮುಖ ನೋಡದ, ಮಾತಾಡದ ಹಗೆತನ ಬೆಳೆಸಿಕೊಂಡಿದ್ದರೂ ಲಕ್ಷ್ಮಣಜಿ ಎಲ್ಲರಿಗೂ ಬೇಕಾದವರಾಗಿದ್ದರು. 1989ರಲ್ಲಿ ‘ಕರ್ನಾಟಕ ವಿಮೋಚನಾ ರಂಗ’ ಸ್ಥಾಪನೆಯಾದಾಗ ಅದರ ಜೊತೆಗೂಡಿದ ಲಕ್ಷ್ಮಣಜಿ, ಕವಿರಂ ಇದ್ದಷ್ಟು ಕಾಲವೂ ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಲಕ್ಷ್ಮಣಜಿ ಐವತ್ತರವತ್ತು ವರ್ಷ ಹಿಂದಿನ ಬೆಂಗಳೂರು ಸೀಮೆಯ ಜೀತದ ಬದುಕನ್ನು ಕಂಡುಂಡು ಬೆಳೆದುಬಂದವರು. ಅಂದಿನ ಜೀತಗಾರರ ಬದುಕಿನ ದಟ್ಟ ಚಿತ್ರಣ ಅವರ ಕವಿತೆ-ಕತೆ-ಬರಹಗಳಲ್ಲಿ ಅತ್ಯಂತ ಸಹಜವಾಗಿ ಬಿಂಬಿತವಾಗಿವೆ. ಅಂಬೇಡ್ಕರ್ ಬಗ್ಗೆ ಅಪಾರ ಅಭಿಮಾನ, ಆದರ. ಮಾರ್ಕ್ಸ್ ಮತ್ತು ಮಾರ್ಕ್ಸ್‌ವಾದದ ಬಗ್ಗೆಯೂ ಅಷ್ಟೇ ಆಸಕ್ತಿ, ಒಲವು. ದಲಿತ ಸಮುದಾಯದ ದುರ್ಭರ ಬದುಕಿನ ಬಗ್ಗೆ ಗಾಢವಾದ ಕ್ರಿಯಾಶೀಲ ಕಳಕಳಿ. ಹಾಗೆಯೇ ಎಲ್ಲ ದುಡಿವ ಜನರ, ಶೋಷಿತರ, ದಮನಿತರ ಬಗ್ಗೆಯೂ ಸಮಾನ ಅನುಕಂಪ, ತುಡಿತ. ಎಲ್ಲೋ ಯಲಹಂಕವೋ, ಪೀಣ್ಯವೋ, ಕಮಗೊಂಡನಹಳ್ಳಿಯೋ … ಎಲ್ಲೆಲ್ಲಿಯದೋ ಗುಡಿಸಲು ವಾಸಿಗಳ, ಬಡಜನರ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೇಗೋ ನಾಲ್ಕಾರು ಸ್ನೇಹಿತರನ್ನು ಒಟ್ಟುಗೂಡಿಸಿಕೊಂಡು ಹೋಗಿ, ಮನವರಿಕೆ ಮಾಡಿಯೋ, ಬೆದರಿಕೆ ಹಾಕಿಯೋ ಸಮಸ್ಯೆ ಬಗೆಹರಿಸದೆ ಬಿಡುತ್ತಿರಲಿಲ್ಲ.

ಲಕ್ಷ್ಮಣಜಿ ಇಂದು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ ಹೆಜ್ಜೆಹೆಜ್ಜೆಗೂ ಹೋದಲ್ಲಿ ಬಂದಲ್ಲಿ, ಮಾತಲ್ಲಿ ಕ್ರಿಯೆಯಲ್ಲಿ ಎಲ್ಲೆಲ್ಲೂ ಅವರು ಎಡೆಬಿಡದೆ ನೆನಪಾಗುತ್ತಾರೆಂದರೆ, ಯಾರೇ ಒಬ್ಬ ಕ್ರಿಯಾಶೀಲ ವ್ಯಕ್ತಿಯ ಸಾಮಾಜಿಕ ಬದುಕು ಸಾರ್ಥಕವೆನ್ನಿಸುವುದು ಹೀಗೇ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...