Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...